• Home
  • About Us
  • ಕರ್ನಾಟಕ
Thursday, December 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಸಾಮಾಜಿಕ ಪರಿಣಾಮಗಳ ಬಗ್ಗೆ ಆತಂಕ; ಅಗ್ನಿಪಥ್ ಯೋಜನೆಗೆ ನೇಪಾಳಿಗರ ನೇಮಕಾತಿಯನ್ನು ಮುಂದೂಡುವಂತೆ ಮನವಿ

ಫಾತಿಮಾ by ಫಾತಿಮಾ
August 28, 2022
in ದೇಶ, ವಿದೇಶ
0
ಸಾಮಾಜಿಕ ಪರಿಣಾಮಗಳ ಬಗ್ಗೆ ಆತಂಕ; ಅಗ್ನಿಪಥ್ ಯೋಜನೆಗೆ ನೇಪಾಳಿಗರ ನೇಮಕಾತಿಯನ್ನು ಮುಂದೂಡುವಂತೆ ಮನವಿ
Share on WhatsAppShare on FacebookShare on Telegram

ಭಾರತದಲ್ಲಿ ಅಗ್ನಿಪಥ್ ಯೋಜನೆ ಘೋಷಣೆಯಾಗುತ್ತಿದ್ದಂತೆ ದೇಶಾದ್ಯಂತ ಅದರ ವಿರುದ್ಧ ಪ್ರತಿಭಟನೆಗಳು ನಡೆದವು, ಕೆಲವು ಕಡೆ ಈ ಪ್ರತಿಭಟನೆಗಳು ಹಿಂಸಾತ್ಮಕವೂ ಆದವು. ಅಗ್ನಿಪಥ್ ಯೋಜನೆಯಂತೆ ನಾಲ್ಕು ವರ್ಷಗಳ ನಂತರ  ಅಗ್ನಿವೀರರಾಗಿ ನೇಮಕ ಮಾಡಿಕೊಂಡವರನ್ನು ಸೇವೆಯಿಂದ ಬಿಡುಗಡೆಗೊಳಿಸಲಾಗುವುದು. ಅವರಿಗೆ ಯಾವುದೇ ರೀತಿಯ ಪಿಂಚಣಿ ನೀಡಲಾಗುವುದಿಲ್ಲ. ಹಾಗಾಗಿಯೇ ಅಗ್ನಿಪಥ್ ವಿರುದ್ಧ ದೊಡ್ಡ ಮಟ್ಡದ ಪ್ರತಿರೋಧವೆದ್ದದ್ದು. ಇದೀಗ ಭಾರತ ಮಾತ್ರವಲ್ಲದೆ ನೇಪಾಳದಲ್ಲಿ ಸಹ ಭಾರತದ ಈ ಯೋಜನೆಗೆ ವಿರೋಧ ಕಂಡು ಬಂದಿದೆ.  ಅಗ್ನಿಪಥ್ ಯೋಜನೆಯ ಬಗ್ಗೆ ಹೆಚ್ಚಿನ ಸ್ಪಷ್ಟತೆ ಬರುವವರೆಗೆ ನೇಪಾಳಿಗಳ ನೇಮಕಾತಿಯನ್ನು ಮುಂದೂಡುವಂತೆ ನೇಪಾಳವು ಭಾರತೀಯ ಸೇನೆಗೆ ಮನವಿ ಮಾಡಿದೆ .

ADVERTISEMENT

ನೇಪಾಳಿ ಪತ್ರಿಕೆ ‘ಮೈ ರಿಪಬ್ಲಿಕಾ’ ಪ್ರಕಾರ, ವಿದೇಶಾಂಗ ಸಚಿವ ನಾರಾಯಣ್ ಖಡ್ಕಾ ಅವರು ಬುಧವಾರ ಭಾರತೀಯ ರಾಯಭಾರಿ ನವೀನ್ ಶ್ರೀವಾಸ್ತವ ಅವರನ್ನು ಸಚಿವಾಲಯಕ್ಕೆ ಕರೆದು  ಅಗ್ನಿಪಥ್ ಯೋಜನೆಯಡಿಯಲ್ಲಿ ಭಾರತೀಯ ಸೇನೆಯ ಗೂರ್ಖಾ ರೆಜಿಮೆಂಟ್‌ಗೆ ಸೇರ್ಪಡೆಗೊಂಡ ನೇಪಾಳಿ ಯುವಕರನ್ನು ನೇಮಿಸಿಕೊಳ್ಳುವ ಯೋಜನೆಯನ್ನು ಮುಂದೂಡುವಂತೆ ಹೇಳಿಕೊಂಡಿದ್ದಾರೆ.

ಭಾರತೀಯ ಸೇನೆಯು  ಪಶ್ಚಿಮ ನಗರವಾದ ಬುಟ್ವಾಲ್‌ನಲ್ಲಿ ಗುರುವಾರ ಮತ್ತು ಸೆಪ್ಟೆಂಬರ್ 1 ರಂದು ಪೂರ್ವ ನಗರವಾದ ಧರಣ್‌ನಲ್ಲಿ ನೇಪಾಳಿಗರನ್ನು ನೇಮಕ ಮಾಡಿಕೊಳ್ಳಲು ಯೋಜಿಸಿತ್ತು. ಮೈ ರಿಪಬ್ಲಿಕಾ ಪ್ರಕಾರ, ನೇಪಾಳದ ವಿದೇಶಾಂಗ ಸಚಿವ ಖಡ್ಕಾ ಅವರು ಭಾರತೀಯ ರಾಯಭಾರಿಗೆ “ನೇಪಾಳದ ಎಲ್ಲಾ ರಾಜಕೀಯ ಪಕ್ಷಗಳು ಅಗ್ನಿಪಥ್ ಯೋಜನೆಯ ಬಗ್ಗೆ ಅವಿರೋಧವನ್ನು ಹೊಂದುವುದು ಅನಿವಾರ್ಯ” ಎಂದು ಹೇಳಿದ್ದಾರೆ. ಹಾಗಾಗಿ ಅಗ್ನಿಪಥ್ ಯೋಜನೆಯನ್ನು ಸರಿಯಾಗಿ ಪರಿಶೀಲಿಸಿ ಒಮ್ಮತದ ನಿರ್ಧಾರಕ್ಕೆ ತಲುಪುವವರೆಗೆ ನೇಮಕಾತಿಯನ್ನು ನಿಲ್ಲಿಸುವಂತೆ ಭಾರತವನ್ನು ನೇಪಾಳ ವಿನಂತಿಸಿಕೊಂಡಿದೆ.

1947 ರಲ್ಲಿ ಸಹಿ ಮಾಡಿದ ತ್ರಿಪಕ್ಷೀಯ ಒಪ್ಪಂದದ ಪ್ರಕಾರ ನೇಪಾಳಿ ಪ್ರಜೆಗಳನ್ನು ಭಾರತ ಮತ್ತು ಯುನೈಟೆಡ್ ಕಿಂಗ್‌ಡಮ್‌ನಲ್ಲಿ ಮಿಲಿಟರಿ ಸೇವೆಗಳಿಗೆ ನೇಮಕ ಮಾಡಿಕೊಳ್ಳಬಹುದು. ಕಠ್ಮಂಡು ಪೋಸ್ಟ್ ಪ್ರಕಾರ, ಈ ವರ್ಷ ಸುಮಾರು 1,300 ನೇಪಾಳಿಗಳನ್ನು ಅಗ್ನಿಪಥ್ ಯೋಜನೆಯಡಿ ನೇಮಕ ಮಾಡಿಕೊಳ್ಳಲಾಗಿದೆ, ಹಿಂದಿನ  ವರ್ಷಗಳಿಗೆ ಹೋಲಿಸಿದರೆ ಇದು ತೀರಾ ಕಡಿಮೆ.  ಒಟ್ಟಾರೆಯಾಗಿ, ಈ ವರ್ಷ ಮೂರೂ ಭಾರತೀಯ ಸೇವಾ ಶಾಖೆಗಳಿಗೆ ಸುಮಾರು 40,000 ‘ಅಗ್ನಿವೀರ್’ಗಳನ್ನು ನೇಮಕ ಮಾಡಿಕೊಳ್ಳುವ ನಿರೀಕ್ಷೆಯಿದೆ.

ಸುದ್ದಿ ಸಂಸ್ಥೆ IANS ಪ್ರಕಾರ, ಜೂನ್ 14 ರಂದು ಅಗ್ನಿಪಥ್ ಘೋಷಿಸಿದ ನಂತರ, ಭಾರತೀಯ ಸೇನೆಯು ಕಠ್ಮಂಡುವಿನಲ್ಲಿ ಭಾರತೀಯ ರಾಯಭಾರ ಕಚೇರಿಯ ಮೂಲಕ ನೇಪಾಳದ ವಿದೇಶಾಂಗ ಸಚಿವಾಲಯಕ್ಕೆ ಪತ್ರ ಬರೆದು ನೇಮಕಾತಿ ಮತ್ತು ಭದ್ರತಾ ಬೆಂಬಲಕ್ಕಾಗಿ ಅನುಮೋದನೆಯನ್ನು ಕೋರಿತ್ತು.  ಆದರೆ ನೇಪಾಳ ಸರ್ಕಾರವು ಭಾರತೀಯ ಸೇನೆಗೆ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಅವಕಾಶ ನೀಡುತ್ತದೆಯೇ ಎಂಬುವುದರ ಬಗ್ಗೆ  ಭಾರತದ ಬಳಿ ಚರ್ಚೆ ನಡೆಸಲು ವಿಫಲವಾಗಿತ್ತು.  ಬುಧವಾರ, ಬುಟ್ವಾಲ್‌ನಲ್ಲಿ ಯೋಜಿತ ನೇಮಕಾತಿಗೆ ಒಂದು ದಿನದ ಮೊದಲು, ನೇಪಾಳ ವಿದೇಶಾಂಗ ಸಚಿವರು ನೇಪಾಳಿ ಯುವಕರ ನೇಮಕಾತಿಯನ್ನು ವಿಳಂಬಗೊಳಿಸುವಂತೆ ಭಾರತವನ್ನು ಕೇಳಿಕೊಂಡಿದೆ.

ನೇಪಾಳದ ಮೇಲೆ ಅಗ್ನಿಪಥ್ ಯೋಜನೆಯ ಸಾಮಾಜಿಕ ಪರಿಣಾಮದ ಬಗ್ಗೆ ರಕ್ಷಣಾ ವಿಶ್ಲೇಷಕರು ಚಿಂತಿತರಾಗಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ.  “ಭಾರತೀಯ ಗೂರ್ಖಾಗಳಲ್ಲಿ ಪೂರ್ಣ ವೃತ್ತಿಜೀವನವನ್ನು ಕಳೆಯುವುದಕ್ಕಿಂತ ಹೆಚ್ಚಾಗಿ ಯುದ್ಧ ಮತ್ತು ಶಸ್ತ್ರಾಸ್ತ್ರಗಳಲ್ಲಿ ತರಬೇತಿ ಪಡೆದ ಯುವಕರನ್ನು ನೇಪಾಳಕ್ಕೆ ಮರಳಿ ಕಳುಹಿಸಿದ‌ ಮೇಲೆ ನೇಪಾಳಿ ಸಮಾಜದ ಮೇಲೆ ಅವರು ಬೀರಬಹುದಾದ  ಸಾಮಾಜಿಕ ಪ್ರಭಾವವನ್ನು ಪರಿಗಣಿಸಬೇಕು. ಅಂತಹ ಪರಿಸ್ಥಿತಿಯು ಸಮಾಜದಲ್ಲಿ ಬಂದೂಕು-ಹಿಂಸಾಚಾರ ಮತ್ತು ಇತರ ರೀತಿಯ ಹಿಂಸಾಚಾರದ ಮಟ್ಟವನ್ನು ಹೆಚ್ಚಿಸುವ ಸಾಧ್ಯತೆಯಿದೆ ಎಂಬುದಕ್ಕೆ ಸಾಮಾಜಿಕ ಪುರಾವೆಗಳಿವೆ. ಈ ಸಂಬಂಧ   ಭಾರತೀಯರು ಸಹ ಕಳವಳ ವ್ಯಕ್ತಪಡಿಸಿದ್ದಾರೆ ”ಎಂದು  ನೇಪಾಳದ ಮಾಜಿ ಸೇನಾ ಜನರಲ್ ಹೇಳಿರುವುದಾಗಿ ‘ಮೈ ರಿಪಬ್ಲಿಕಾ’ ವರದಿ ಮಾಡಿದೆ.

ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ, “ನಾವು ಬಹಳ ಸಮಯದಿಂದ ಭಾರತೀಯ ಸೇನೆಗೆ ಗೂರ್ಖಾ ಸೈನಿಕರನ್ನು ನೇಮಕ ಮಾಡುತ್ತಿದ್ದೇವೆ.  ಅಗ್ನಿಪಥ್ ಯೋಜನೆಯಡಿಯಲ್ಲಿ ಭಾರತೀಯ ಸೇನೆಗೆ ಗೂರ್ಖಾ ಸೈನಿಕರ ನೇಮಕಾತಿಯನ್ನು ಮುಂದುವರಿಸುವುದನ್ನು ನಾವು ಎದುರು ನೋಡುತ್ತಿದ್ದೇವೆ” ಎಂದು ಹೇಳಿದ್ದಾರೆ.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ಜಾರ್ಖಂಡ್‌ ಸರ್ಕಾರ ಉರುಳಿಸಲು ಬಿಜೆಪಿ ದಾಳ: ಸಚಿವ, ಶಾಸಕರೊಂದಿಗೆ ರೆಸಾರ್ಟ್‌ ಸೇರಿಕೊಂಡ ಸಿಎಂ

Next Post

ಮುರುಘಾ ಮಠ ಸ್ವಾಮಿಗಳ ಮೇಲೆ ಪ್ರಕರಣ ದಾಖಲಿಸಿರುವುದು ಸರಿಯಲ್ಲ : ಸಿಎಂ ಇಬ್ರಾಹಿಂ

Related Posts

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ
Top Story

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

by ಪ್ರತಿಧ್ವನಿ
December 18, 2025
0

ನವದೆಹಲಿ: ಶಾಲಾ ಹಂತದಿಂದಲೇ ಭಗವದ್ಗೀತೆಯನ್ನು( Bhagavad Gita) ಮಕ್ಕಳಿಗೆ ಬೋಧಿಸಬೇಕು. ಇದು ಅತ್ಯಂತ ಉತ್ತಮ ಶೈಕ್ಷಣಿಕ ಸುಧಾರಣಾ ಕ್ರಮವಾಗುತ್ತದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು...

Read moreDetails
ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

December 17, 2025

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

December 17, 2025

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

December 17, 2025

ದ್ವೇಷ ರಾಜಕಾರಣ ಬಿಜೆಪಿ ಆಸ್ತಿ, ಅವರ ಸುಳ್ಳು ಕೇಸ್ ಗಳಿಗೆ ಆಯುಷ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್..

December 17, 2025
Next Post
ಕಾಂಗ್ರೆಸ್ಸಿಗೂ ನನಗೂ ಇಂದಿಗೆ ಸಂಬಂಧ ಮುಗಿಯಿತು : ಸಿಎಂ ಇಬ್ರಾಹಿಂ

ಮುರುಘಾ ಮಠ ಸ್ವಾಮಿಗಳ ಮೇಲೆ ಪ್ರಕರಣ ದಾಖಲಿಸಿರುವುದು ಸರಿಯಲ್ಲ : ಸಿಎಂ ಇಬ್ರಾಹಿಂ

Please login to join discussion

Recent News

BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!
Top Story

BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!

by ಪ್ರತಿಧ್ವನಿ
December 18, 2025
ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ
Top Story

ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ

by ಪ್ರತಿಧ್ವನಿ
December 18, 2025
ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ
Top Story

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

by ಪ್ರತಿಧ್ವನಿ
December 18, 2025
Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!
Top Story

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

by ಪ್ರತಿಧ್ವನಿ
December 18, 2025
ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?
Top Story

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

by ಪ್ರತಿಧ್ವನಿ
December 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಹ** ಕೇಸ್: ಮುಚ್ಚಿದ ಕೊಠಡಿಯಲ್ಲಿ ಇಂದು ಮತ್ತೆ ಸಾಕ್ಷ್ಯ ವಿಚಾರಣೆ

ರೇಣುಕಾಸ್ವಾಮಿ ಹ** ಕೇಸ್: ಮುಚ್ಚಿದ ಕೊಠಡಿಯಲ್ಲಿ ಇಂದು ಮತ್ತೆ ಸಾಕ್ಷ್ಯ ವಿಚಾರಣೆ

December 18, 2025
BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!

BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!

December 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada