ಪಂಜಾಬ್ನಲ್ಲಿ ಎಎಪಿ ಸರ್ಕಾರ ಜಾರಿಗೆ ತಂದಿರುವ ನೂತನ ಅಬಕಾರಿ ನೀತಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ವಿಪಕ್ಷಗಳು ಆರೋಪಿಸಿವೆ.
ದೆಹಲಿಯಲ್ಲಿ ನಡೆದಂತೆ ಪಂಜಾಬ್ ಸರ್ಕಾರ ಜಾರಿಗೆ ತಂದಿರುವ ನೂತನ ಅಬಕಾರಿ ನೀತಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದ್ದು ಕೂಡಲ್ಲೇ ಸರ್ಕಾರ ಸಿಬಿಐ ತನಿಖೆಗೆ ಆದೇಶಿಸಬೇಕು ಮತ್ತು ನೀತಿಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿವೆ.
ಈ ಕುರಿತು ಶಿರೋಮಣಿ ಅಕಾಲಿದಳದ ಮುಖ್ಯಸ್ಥ ಸುಖ್ಬೀರ್ ಸಿಂಗ್ ಬಾದಲ್ ನೇತೃತ್ವದ ನಿಯೋಗ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ರನ್ನು ಬೇಟಿ ಮಾಡಿ ಸಿಬಿಐ ತನಿಖೆಗೆ ಶಿಫಾರಸ್ಸು ಮಾಡುವಂತೆ ಮನವಿ ಪತ್ರ ನೀಡಿದೆ.






