• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಸುತ್ತಿಗೆಯಿಂದ ಹೊಡೆದು ಆರು ಸೆಕ್ಯುರಿಟಿ ಗಾರ್ಡ್‌ಗಳನ್ನು ಕೊಂದ ಸೈಕೊ ಕಿಲ್ಲರ್‌ ಗೆ ಕೆಜಿಎಫ್‌ ಸ್ಪೂರ್ತಿ !

ಫೈಝ್ by ಫೈಝ್
September 3, 2022
in ದೇಶ
0
ಸುತ್ತಿಗೆಯಿಂದ ಹೊಡೆದು ಆರು ಸೆಕ್ಯುರಿಟಿ ಗಾರ್ಡ್‌ಗಳನ್ನು ಕೊಂದ ಸೈಕೊ ಕಿಲ್ಲರ್‌ ಗೆ ಕೆಜಿಎಫ್‌ ಸ್ಪೂರ್ತಿ !
Share on WhatsAppShare on FacebookShare on Telegram

ಕನ್ನಡ ಚಿತ್ರರಂಗವನ್ನು ಎಲ್ಲರೂ ತಿರುಗಿ ನೋಡುವಂತೆ ಮಾಡಿದ, ಸಾವಿರಾರು ಕೋಟಿ ಗಳಿಸಿದ ಪ್ಯಾನ್‌ ಇಂಡಿಯಾ ಚಿತ್ರ ಕೆಜಿಎಫ್‌ ಗೆ ಕಳಂಕವೊಂದು ಮೆತ್ತಿಕೊಂಡಿದೆ. ಕಲ್ಲು ಮತ್ತು ಸುತ್ತಿಗೆಗಳಿಂದ ಸೆಕ್ಯುರಿಟಿ ಗಾರ್ಡ್‌ ಗಳ ಸರಣಿ ಕೊಲೆ ಮಾಡಿದ ಸೈಕೋ ಕಿಲ್ಲರ್‌ ಆರೋಪಿಗೆ ಕೆಜಿಎಫ್‌ ಚಿತ್ರ ಸ್ಪೂರ್ತಿ ಎಂದು ಮಧ್ಯಪ್ರದೇಶ ಪೊಲೀಸರು ಹೇಳಿದ್ದಾರೆ.

ADVERTISEMENT

ಮಧ್ಯಪ್ರದೇಶ ಪೊಲೀಸರು ಶುಕ್ರವಾರ ಶಂಕಿತ ಸರಣಿ ಹಂತಕನನ್ನು ಬಂಧಿಸಿದ್ದು, ಬಂಧಿತ ವ್ಯಕ್ತಿ ಮೇ ತಿಂಗಳಿನಿಂದ ಕನಿಷ್ಠ ಆರು ಭದ್ರತಾ ಸಿಬ್ಬಂದಿಗಳನ್ನು ಕೊಂದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಗುರುವಾರ ತಡರಾತ್ರಿ ರಾಜ್ಯ ರಾಜಧಾನಿ ಭೋಪಾಲ್‌ ನಲ್ಲಿ ಆತನ ಕೊನೆಯ ಬಾರಿ ದಾಳಿ ಮಾಡಿದ್ದು, ನಂತರ ಪೊಲೀಸರ ಬಲೆಗೆ ಬಿದ್ದಿದ್ದ.

ಒಂದು ವಾರದ ಅವಧಿಯಲ್ಲಿಯೇ ಆತ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಾಲ್ವರು ಭದ್ರತಾ ಸಿಬ್ಬಂದಿಗಳ ಮೇಲೆ ದಾಳಿ ನಡೆಸಿದ್ದ, ಅದರಲ್ಲಿ ಒಬ್ಬರು ಮಾತ್ರ ಬದುಕುಳಿದಿದ್ದು, ಭೋಪಾಲ್ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ ಎಂದು ವರದಿಯಾಗಿದೆ.

ಶಂಕಿತ ಆರೋಪಿ ಶಿವ ಗೊಂಡನನ್ನು ಗುರುವಾರ ತಡರಾತ್ರಿ ಭೋಪಾಲ್‌ನಿಂದ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಗುರುವಾರ ತಡರಾತ್ರಿ ಬೈರಾಗರ್ ಪ್ರದೇಶದಲ್ಲಿ ಸೋನು ವರ್ಮಾ ಎಂಬ 23 ವರ್ಷದ ಸೆಕ್ಯುರಿಟಿ ಗಾರ್ಡ್‌ ನನ್ನು ಹತ್ಯೆ ಮಾಡಿದ ನಂತರ ಬಂಧನ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

#BREAKING | Madhya Pradesh: Bhopal serial killer caught on tape killing a watchman. The serial killer 'Shiv Prasad' is accused of killing 4 security guards and has been arrested

Watch – https://t.co/fyBXoahycc pic.twitter.com/G8Le052oKW

— Republic (@republic) September 2, 2022

“ಸ್ಥಳದ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ, ನಾವು ಆರೋಪಿಯನ್ನು ಭೋಪಾಲ್‌ನಿಂದ ಮುಂಜಾನೆ ವಶಕ್ಕೆ ಪಡೆದಿದ್ದೇವೆ. ಪ್ರಾಥಮಿಕ ತನಿಖೆಯ ವೇಳೆ ಪುಣೆಯಲ್ಲಿ ಓರ್ವ ಸೆಕ್ಯುರಿಟಿ ಗಾರ್ಡ್‌ ನನ್ನು ಸೇರಿದಂತೆ ಒಟ್ಟು ಆರು ಮಂದಿ ಸೆಕ್ಯುರಿಟಿ ಗಾರ್ಡ್‌ ಗಳನ್ನು ಕೊಂದಿದ್ದಾನೆ ಎಂದು ಆತ ಒಪ್ಪಿಕೊಂಡಿದ್ದಾನೆ. ಹೆಚ್ಚಿನ ವಿಚಾರಣೆ ನಡೆಯುತ್ತಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

19 ವರ್ಷದ ಆರೋಪಿ ಸಾಗರ್ ಜಿಲ್ಲೆಯ ಕೆಸ್ಲಿ ಪ್ರದೇಶದ ನಿವಾಸಿಯಾಗಿದ್ದು, ಕೆಜಿಎಫ್ ಸಿನಿಮಾದಿಂದ ಆತ ಸ್ಫೂರ್ತಿ ಪಡೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕರ್ತವ್ಯದ ವೇಳೆ ನಿದ್ರಿಸುತ್ತಿದ್ದ ಭದ್ರತಾ ಸಿಬ್ಬಂದಿಯನ್ನೇ ಟಾರ್ಗೆಟ್ ಮಾಡುತ್ತಿದ್ದ ಆತ ಸುತ್ತಿಗೆ, ಕಲ್ಲುಗಳು ಮತ್ತು ಗುದ್ದಲಿಯಿಂದ ಹೊಡೆದು ಸಾಯಿಸುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಬಂಧಿತ ಆರೋಪಿ ನಿರರ್ಗಳವಾಗಿ ಇಂಗ್ಲಿಷ್ ಮಾತನಾಡುವವನಾಗಿದ್ದು, ಈ ಮೊದಲು ಗೋವಾದ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಕೇವಲ ಒಂದು ವಾರದೊಳಗೆ ಮೂರು ಸೆಕ್ಯುರಿಟಿಗಳ ಹತ್ಯೆ ನಡೆದಿರುವುದು ಸಾಗರ ಜಿಲ್ಲೆಯಾದ್ಯಂತ ಭದ್ರತಾ ಸಿಬ್ಬಂದಿಗಳಲ್ಲಿ ಭೀತಿಯನ್ನು ಸೃಷ್ಟಿಸಿತ್ತು.

ಮಧ್ಯಪ್ರದೇಶದ ಪೊಲೀಸ್ ಮಹಾನಿರ್ದೇಶಕ (ಡಿಐಜಿ) ಸುಧೀರ್ ಸಕ್ಸೇನಾ ಪ್ರಕರಣವನ್ನು ಸ್ವತಃ ಮೇಲ್ವಿಚಾರಣೆ ಮಾಡುತ್ತಿದ್ದು, ಪ್ರಕರಣವನ್ನು ಬೇಧಿಸಲು 250 ಪೊಲೀಸರನ್ನು ಹೊಂದಿರುವ ಹಲವಾರು ತಂಡಗಳನ್ನು ರಚಿಸಲಾಗಿತ್ತು. ಶಂಕಿತ ಸರಣಿ ಹಂತಕ ನಡೆಸಿದ ದಾಳಿಗಳು ಒಂದೇ ಮಾದರಿಯದ್ದಾಗಿದ್ದು, ಸುತ್ತಿಗೆ, ಕಲ್ಲುಗಳು ಮತ್ತು ಗುದ್ದಲಿಯಿಂದ ಭದ್ರತಾ ಸಿಬ್ಬಂದಿಗಳ ತಲೆಗಳನ್ನು ಒಡೆದುಹಾಕುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಮೊದಲ ಪ್ರಕರಣವು ಮೇ ತಿಂಗಳಲ್ಲಿ ವರದಿಯಾಗಿದ್ದರೆ, ಎರಡನೆಯದು ಸೋಮವಾರ ಮತ್ತು ಮೂರನೇ ಮತ್ತು ನಾಲ್ಕನೆಯ ಪ್ರಕರಣ ಮಂಗಳವಾರ ಸಾಗರ್ ಜಿಲ್ಲೆಯಲ್ಲಿ ಮತ್ತು ಐದನೇ ಪ್ರಕರಣ ಗುರುವಾರ ಭೋಪಾಲ್‌ನಲ್ಲಿ ವರದಿಯಾಗಿತ್ತು.

Tags: Covid 19ಕರೋನಾಕೋವಿಡ್-19
Previous Post

ಹಿಂದೂ ಸಮಾಜ ನನಗೆ ಅರ್ಹವಾದ ಪ್ರೀತಿಯನ್ನು ನೀಡಲಿಲ್ಲ: ಘರ್‌ ವಾಪಸಿಯಾದ ವಸೀಂ ರಿಜ್ವಿ\ ಜಿತೇಂದ್ರ ತ್ಯಾಗಿ ಬೇಸರ

Next Post

ಮಂಗಳೂರಿನ ಜನತೆಯ ಕುರಿತು ಕನ್ನಡದಲ್ಲಿ ಟ್ವೀಟ್ ಮಾಡಿದ ಪ್ರಧಾನಿ ಮೋದಿ

Related Posts

ಸಂಜಯ್ ಗಾಂಧಿಯಿಂದ ಇಲ್ಲಿಯವರೆಗೆ ಆಕಾಶಯಾನದಿಂದ ಮೃತ್ಯು ಕಂಡ ಭಾರತದ ಗಣ್ಯರು
ಇದೀಗ

ಸಂಜಯ್ ಗಾಂಧಿಯಿಂದ ಇಲ್ಲಿಯವರೆಗೆ ಆಕಾಶಯಾನದಿಂದ ಮೃತ್ಯು ಕಂಡ ಭಾರತದ ಗಣ್ಯರು

by ಪ್ರತಿಧ್ವನಿ
January 28, 2026
0

ಬೆಂಗಳೂರು: ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಬಲಿಯಾಗುವ ಮೂಲಕ ಗಣ್ಯಾತಿಗಣ್ಯರು ವಿಮಾನ, ಹೆಲಿಕ್ಯಾಪ್ಟರ್ ನಲ್ಲಿ ಸಾವನ್ನಪ್ಪುವ ಪಟ್ಟಿಗೆ ಮತ್ತೊಂದು ಘಟನೆ ಸೇರಿದಂತಾಗಿದೆ. https://youtu.be/nIvdcILxCrU?si=go48864_fjwJp8HK ಇಂದು...

Read moreDetails
Ajit Pawar: ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ

Ajit Pawar: ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ

January 28, 2026
BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

January 28, 2026
ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

January 28, 2026
ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

January 27, 2026
Next Post
ಮಂಗಳೂರಿನ ಜನತೆಯ ಕುರಿತು ಕನ್ನಡದಲ್ಲಿ ಟ್ವೀಟ್ ಮಾಡಿದ ಪ್ರಧಾನಿ ಮೋದಿ

ಮಂಗಳೂರಿನ ಜನತೆಯ ಕುರಿತು ಕನ್ನಡದಲ್ಲಿ ಟ್ವೀಟ್ ಮಾಡಿದ ಪ್ರಧಾನಿ ಮೋದಿ

Please login to join discussion

Recent News

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?
Top Story

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

by ಪ್ರತಿಧ್ವನಿ
January 28, 2026
ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್
Top Story

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 28, 2026
BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?
Top Story

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

by ಪ್ರತಿಧ್ವನಿ
January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

January 28, 2026
ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada