• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಲೇಖಕ, ಚಿಂತಕ ಪ್ರೊ ಬಿ ಗಂಗಾಧರಮೂರ್ತಿ ಇನ್ನಿಲ್ಲ

ಪ್ರತಿಧ್ವನಿ by ಪ್ರತಿಧ್ವನಿ
October 1, 2022
in ಕರ್ನಾಟಕ
0
ಲೇಖಕ, ಚಿಂತಕ ಪ್ರೊ ಬಿ ಗಂಗಾಧರಮೂರ್ತಿ ಇನ್ನಿಲ್ಲ
Share on WhatsAppShare on FacebookShare on Telegram

ಖ್ಯಾತ ಲೇಖಕ, ಚಿಂತಕ ಪ್ರೊ.ಬಿ.ಗಂಗಾಧರಮೂರ್ತಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 77 ವರ್ಷ ವಯಸ್ಸಾಗಿತ್ತು.
ಹಾಸನ ಜಿಲ್ಲೆಯ ಹೊಳೆನರಸೀಪುರ ಮೂಲದ ಗಂಗಾಧರಮೂರ್ತಿಯವರು ಗೌರಿಬಿದನೂರಿನ ನ್ಯಾಷನಲ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರೊಫೆಸರ್ ಆಗಿ ನಿವೃತ್ತರಾಗಿದ್ದರು. ಅವರು ಕಳೆದ ನಾಲ್ಕು ದಶಕಗಳಿಂದ ಬಂಡಾಯ ಸಾಹಿತ್ಯ, ದಲಿತ ಚಳವಳಿ, ಜನವಿಜ್ಞಾನ ಚಳವಳಿ, ವಿಚಾರವಾದಿ ಚಳವಳಿಯಂಥ ನಾಡಿನ ಬಹುತೇಕ ಪ್ರಗತಿಪರ ಚಳವಳಿಗಳ ಭಾಗವಾಗಿದ್ದರು. ಸಂಸ್ಕೃತಿ ಚಿಂತಕರಾಗಿ, ಬರಹಗಾರರಾಗಿ, ಅನುವಾದಕರಾಗಿ ಕನ್ನಡ ಸಾಹಿತ್ಯಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ. ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಟೀಚರ್ ಮಾಸಪತ್ರಿಕೆಗೆ ದಶಕಕ್ಕೂ ಹೆಚ್ಚು ಕಾಲದಿಂದ ಪ್ರಧಾನ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ADVERTISEMENT

ಪ್ರೊ.ಬಿ.ಗಂಗಾಧರ ಮೂರ್ತಿಯವರ ಮಹತ್ವದ ಕೆಲಸವೆಂದರೆ,ವಿದುರಾಶ್ವತ್ಥದ ಸ್ವಾತಂತ್ರ್ಯ ಸ್ಮಾರಕವನ್ನು ರೂಪಿಸಿದ್ದು. 1938ರ ಧ್ವಜ ಸತ್ಯಾಗ್ರಹದ ಹತ್ಯಾಕಾಂಡದ ನಂತರ ಕರ್ನಾಟಕದ ಜಲಿಯನ್ ವಾಲಾಬಾಗ್ ಎಂದು ಕರೆಯಲ್ಪಡುವ ವಿದುರಾಶ್ವತ್ಥದಲ್ಲಿ ಸ್ವಾತಂತ್ರ್ಯ ಸ್ಮಾರಕ ಸಂಕೀರ್ಣವನ್ನು ಅಪಾರ ಶ್ರಮ ಹಾಗೂ ಬದ್ಧತೆಯಿಂದ ವಿಶಿಷ್ಟವಾಗಿ ರೂಪಿಸಿ, ವಿನ್ಯಾಸಗೊಳಿಸಿದರು. ಭಾರತದ ಸ್ವಾತಂತ್ರ್ಯ ಹೋರಾಟವನ್ನು ಬಿಂಬಿಸುವ ಚಿತ್ರಪಟ ಗ್ಯಾಲರಿ ಮತ್ತು ಥೀಮ್ ಗ್ರಂಥಾಲಯ ರೂಪಿಸಿದ್ದರು. ಭಾರತ ಸ್ವಾತಂತ್ರ್ಯ ಸಂಗ್ರಾಮದ ಹಲವು ಮುಖಗಳನ್ನು ಅನಾವರಣಗೊಳಿಸುವ ಆ ಸ್ಮಾರಕ ದೇಶದಲ್ಲೇ ಅಪರೂಪದ ಸ್ಮಾರಕವಾಗಿ ಖ್ಯಾತಿ ಪಡೆದಿದೆ. ಗೌರಿಬಿದನೂರಿನ ಹೊಸ ತಹಶೀಲ್ದಾರ್ ಕಚೇರಿಯ ಪಕ್ಕದಲ್ಲಿ ಅಂಬೇಡ್ಕರ್ ನೆನಪಿನಲ್ಲಿ ‘ಸಮಾನತಾ ಸೌಧ’ವನ್ನು ರೂಪಿಸಿದ್ದು ಅವರ ಮತ್ತೊಂದು ಅವಿಸ್ಮರಣೀಯ ಕೆಲಸವಾಗಿದೆ. ಸಾಮಾಜಿಕ ಸಮಾನತೆಗಾಗಿ ದುಡಿಯುವ, ಮಿಡಿಯುವ ಪ್ರತಿಯೊಬ್ಬರೂ ಒಮ್ಮೆಯಾದರೂ ಭೇಟಿ ಕೊಡಲೇಬೇಕಾದ ಸ್ಥಳ ಅದು. ವಿದ್ಯಾರ್ಥಿಗಳಿಗೆ ಪ್ರೀತಿಯ ಮೇಷ್ಟ್ರಾಗಿದ್ದ ಅವರು ಅತ್ಯಂತ ಜನಪ್ರಿಯ ಅಧ್ಯಾಪಕರಾಗಿದ್ದರು.

ಲೇಖಕರಾಗಿಯೂ ಗಂಗಾಧರಮೂರ್ತಿಯವರು ಮಹತ್ವದ ಕೆಲಸ ಮಾಡಿದ್ದಾರೆ. ಹೂ ಅರಳುವಂಥ ಮಣ್ಣು (ಕವನ ಸಂಕಲನ), ನಾಗಸಂದ್ರ ಭೂ ಆಕ್ರಮಣ ಚಳವಳಿ, ಭಾರತದ ಬೌದ್ಧಿಕ ದಾರಿದ್ರ್ಯ(ಅನುವಾದ), ಭಾರತೀಯ ಸಮಾಜದ ಜಾತಿ ಲಕ್ಷಣ (ಅನುವಾದ), ಅಂಬೇಡ್ಕರ್ ಮತ್ತು ಮುಸ್ಲಿಮರು (ಅನುವಾದ), ವಸಾಹತುಪೂರ್ವ ಕಾಲದ ಜಾತಿಹೋರಾಟಗಳು, ಹಿಂದುತ್ವ ಮತ್ತು ದಲಿತರು, ಸೂಫಿ ಕಥಾಲೋಕ, ಭಾರತದ ಸ್ವಾತಂತ್ರ್ಯ ಚಳವಳಿಯ ಪ್ರಧಾನೇತರ ಹೋರಾಟಗಳು ಮುಂತಾದ ಹಲವು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಮೃತರು ಪತ್ನಿ, ಇಬ್ಬರು ಮಕ್ಕಳು ಮತ್ತು ಅಸಂಖ್ಯಾತ ಶಿಷ್ಯರನ್ನು ಅಗಲಿದ್ದಾರೆ.

Tags: Covid 19ಕರೋನಾಕೋವಿಡ್-19
Previous Post

ಗುಜರಾತಿನಲ್ಲಿ ಹೆಜ್ಜೆ ಊರುತ್ತಿರುವ ಎಎಪಿ; ಮೇಧಾ ಪಾಟ್ಕರ್‌ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ

Next Post

ಜನಪ್ರತಿನಿಧಿಗಳು ಮತ್ತು ಅವರ ಸಂಬಳ-ಭತ್ಯೆಗಳು

Related Posts

Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
0

https://youtube.com/live/Sh2S-y9CYsE

Read moreDetails

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

July 2, 2025

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025
Next Post
ಜನಪ್ರತಿನಿಧಿಗಳು ಮತ್ತು ಅವರ ಸಂಬಳ-ಭತ್ಯೆಗಳು

ಜನಪ್ರತಿನಿಧಿಗಳು ಮತ್ತು ಅವರ ಸಂಬಳ-ಭತ್ಯೆಗಳು

Please login to join discussion

Recent News

Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
Top Story

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

by ಪ್ರತಿಧ್ವನಿ
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

July 2, 2025

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada