ಜ್ಞಾನವ್ಯಾಪಿ ಮಸೀದಿಯೊಳಗೆ ಹಿಂದುಗಳಿಗೆ ಪೂಜೆ ಮಾಡಲು ಅವಕಾಶ ಕೋರಿ ಐವರು ಹಿಂದೂ ಮಹಿಳೆಯರು ಸಲ್ಲಿಸಿದ್ದ ಅರ್ಜಿಯನ್ನು ವಾರಣಾಸಿ ನ್ಯಾಯಾಲಯ ಅಂಗೀಕರಿಸಿದೆ.
ಪ್ರಸಿದ್ಧ ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿರುವ ನಗರದ ಜ್ಞಾನವಾಪಿ ಮಸೀದಿಯೊಳಗೆ ಶೃಂಗಾರ ಗೌರಿ ಹಾಗೂ ಶಿವಲಿಂಗದ ದರ್ಶನ ಮತ್ತು ಪ್ರತಿನಿತ್ಯ ಪೂಜೆ ಸಲ್ಲಿಸಲು ಅವಕಾಶ ಕೋರಿ ರಾಖಿಸಿಂಗ್ ಸೇರಿ ನಾಲ್ವರು ಮಹಿಳೆಯರು ಸಲ್ಲಿಸಿರುವ ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳಲು ವಾರಣಾಸಿ ನ್ಯಾಯಾಲಯ ಒಪ್ಪಿಗೆ ಸೂಚಿಸಿದೆ.
ವಾರಣಾಸಿಯ ಹಿರಿಯ ನ್ಯಾಯಾಧೀಶ ಎ.ಕೆ.ವಿಶ್ವೇಶ ಇದೊಂದು ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ವಿಚಾರಣೆ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಜ್ಞಾನವಾಪಿ ಮಸೀದಿಯ ಒಳಗೆ ಸಮೀಕ್ಷೆಗೆ ಕಾರಣವಾದ ಮಹಿಳೆಯರ ಪ್ರಕರಣವು ವಿಚಾರಣೆ ಮುಂದುವರಿಯುತ್ತದೆಯೇ ಅಥವಾ ಅದು ಯಾವುದೇ ಕಾನೂನು ಸ್ಥಾನಮಾನವನ್ನು ಹೊಂದುವುದಿಲ್ಲವೇ ಎಂಬ ಬಗ್ಗೆ ದೇಶದಲ್ಲಿ ಕೂತುಹಲಕ್ಕೆ ಕಾರಣವಾಗಿತ್ತು.
ಈ ನಡುವೆ ಜ್ಞಾನ್ವಾಪಿ ಮಸೀದಿಗೆ ಸಂಬಂಧಿಸಿದಂತೆ ಲಕ್ನೋದಲ್ಲಿ ಎಚ್ಚರಿಕೆ ನೀಡಲಾಗಿದೆ. ಪೊಲೀಸ್ ಆಯುಕ್ತರು ಲಕ್ನೋ ಚೌಕ್ ಛೇದಕದಿಂದ ನಖಾಸ್ ಗೆ ಕಾಲ್ನಡಿಗೆಯಲ್ಲಿ ಮೆರವಣಿಗೆ ನಡೆಸಿದರು. ಭದ್ರತೆಯ ದೃಷ್ಟಿಯಿಂದ, ಆಯುಕ್ತರು ಕಾಲ್ನಡಿಗೆಯಲ್ಲಿ ಮೆರವಣಿಗೆ ನಡೆಸಿದ್ದಾರೆ. ಇಡೀ ಪ್ರದೇಶವನ್ನು ಡ್ರೋನ್ ಗಳ ಮೂಲಕ ಮೇಲ್ವಿಚಾರಣೆ ಮಾಡಲಾಗುತ್ತಿದೆ.