• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ ಅಭಿಮತ

ಬ್ರಿಟನ್: ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಹಿಂದುತ್ವವಾದಿಗಳ ಏಕಾಏಕಿ ರ್ಯಾಲಿ – ಕೋಮು ಹಿಂಸಾಚಾರದ ಕರಿನೆರಳು

ಫೈಝ್ by ಫೈಝ್
September 27, 2022
in ಅಭಿಮತ, ದೇಶ
0
ಬ್ರಿಟನ್: ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಹಿಂದುತ್ವವಾದಿಗಳ ಏಕಾಏಕಿ ರ್ಯಾಲಿ – ಕೋಮು ಹಿಂಸಾಚಾರದ ಕರಿನೆರಳು
Share on WhatsAppShare on FacebookShare on Telegram

ಬ್ರಿಟನ್‌ ನ ಲೀಸ್ಟರ್ ಶೈರ್ ಪಟ್ಟಣದಲ್ಲಿ ರವಿವಾರ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದೆ. ಮುಸ್ಲಿಂ ಬಾಹುಳ್ಯದ ಬೀದಿಯಲ್ಲಿ ಹಿಂದುತ್ವವಾದಿಗಳಿಂದ ದಿಢೀರ್ ರ್ಯಾಲಿ, ಜೈ ಶ್ರೀರಾಮ್ ಘೋಷಣೆಯು ಪ್ರದೇಶದ ಶಾಂತಿಯನ್ನು ಹಾಳುಗೆಡವಿದೆ. ಪ್ರಚೋದನಕಾರಿ ಘೋಷಣೆ ಬಳಿಕ ಅಲ್ಲಲ್ಲಿ ಹಿಂಸಾಚಾರ ವರದಿಯಾಗಿದ್ದು, ಪೊಲೀಸರ ಕೈ ಮೀರಿದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವರದಿಯಾಗಿದೆ.

ADVERTISEMENT

https://twitter.com/ashoswai/status/1571279794012311552

ಆಗಸ್ಟ್ 28 ರ ಭಾರತ-ಪಾಕಿಸ್ತಾನ ಕ್ರಿಕೆಟ್ ಮ್ಯಾಚ್ ಬಳಿಕ ಸಂಘರ್ಷ
ಆಗಸ್ಟ್ 28 ರಂದು ಏಷ್ಯಾ ಕಪ್ ಪಂದ್ಯಾವಳಿಯಲ್ಲಿ ಭಾರತ-ಪಾಕಿಸ್ತಾನ ಪಂದ್ಯದ ನಂತರ ಎರಡು ಸಮುದಾಯಗಳ ನಡುವೆ ಉದ್ವಿಗ್ನತೆ ಪ್ರಾರಂಭವಾಗಿದೆ ಎಂದು ವರದಿಗಳು ಹೇಳಿವೆ. ಘಟನೆಯ ನಂತರದ ಬೆಳವಣಿಗೆಗಳನ್ನು ʼಗೊಂದಲಗಳ ಸರಣಿʼ ಎಂದು ಸ್ಥಳೀಯ ಪೊಲೀಸರು ಕರೆದಿದ್ದಾರೆ. ಇದುವರೆಗೂ 27 ಜನರನ್ನು ಬಂಧಿಸಲಾಗಿದೆ. ಶನಿವಾರ ಪೂರ್ವ ಲೀಸೆಸ್ಟರ್ ಪ್ರದೇಶದ ಕೆಲವು ಭಾಗಗಳಲ್ಲಿ ಏಕಾಏಕಿ ಅರಾಜಕತೆ ಕಂಡುಬಂದಿದೆ. ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾದ ವೀಡಿಯೊಗಳಲ್ಲಿ ಹಿಂಸಾತ್ಮಕ ಘಟನೆಗಳು ಸೆರೆಯಾಗಿವೆ.

ಕಳೆದೊಂದು ವಾರದಿಂದ ಪ್ರದೇಶದಲ್ಲಿ ಶಾಂತಿ ನೆಲೆಸಿತ್ತು. ಆದರೆ ಶನಿವಾರ ರಾತ್ರಿಯಿಂದ ಮತ್ತೆ ಉದ್ವಿಗ್ನತೆ ಸೃಷ್ಟಿಯಾಗಿದೆ, ಏಕಾಏಕಿ ಯುವಕರ ಗುಂಪೊಂದು ಮೆರವಣಿಗೆ ನಡೆಸಿದ್ದೇ ಪರಿಸ್ಥಿತಿ ಕೈ ಮೀರಲು ಕಾರಣ ಎಂದು ಪಟ್ಟಣ ಪೊಲೀಸರು ತಿಳಿಸಿದ್ದಾರೆ. ಸ್ಥಳೀಯ ಪೊಲೀಸರು ಶಾಂತಿಯನ್ನು ಕಾಪಾಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Our response to disorder in East Leicester pic.twitter.com/1alu5Q95er

— Leicestershire Police (@leicspolice) September 18, 2022

ಲೀಸೆಸ್ಟರ್ ಸಂಸದೆ ಕ್ಲೌಡಿಯಾ ವೆಬ್ ಅವರು ಪೊಲೀಸ್ ಸಲಹೆಯನ್ನು ಸ್ವೀಕರಿಸಲು ಮತ್ತು ಶಾಂತಿಯನ್ನು ಕಾಪಾಡಿಕೊಳ್ಳಲು ಜನರನ್ನು ಒತ್ತಾಯಿಸಿದ್ದಾರೆ.
“ಆತ್ಮೀಯ ಲೀಸೆಸ್ಟರ್, ಇದು ಶಾಂತಚಿತ್ತ ಪಡೆಯಬೇಕಾದ ಸಮಯ. ಎಲ್ಲರೂ ಮನೆಗೆ ಹೋಗಬೇಕೆಂದು ನಾನು ಒತ್ತಾಯಿಸುತ್ತೇನೆ. ಸಮುದಾಯ ಸಂಬಂಧಗಳನ್ನು ಸುಧಾರಿಸಲು ನಾವು ನಮ್ಮ ಸಂವಾದವನ್ನು ಬಲಪಡಿಸಬಹುದು. ನಿಮ್ಮ ಕುಟುಂಬವು ನಿಮ್ಮ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸುತ್ತದೆ, ದಯವಿಟ್ಟು ಪೋಲೀಸ್ ಸಲಹೆಯನ್ನು ಸ್ವೀಕರಿಸಿ. ಶಾಂತಗೊಳಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಟ್ವೀಟ್‌ ಮಾಡಿದ್ದಾರೆ.

In Leicester we remain vigilant to incitement to hate, whilst working hard to bring our communities together and end race and religious violence

Leicester is one of the most diverse cities in the UK. Our unity is our strength

My letter to the Chief Constable of Leicestershire👇🏾 pic.twitter.com/L2DPOAkZSX

— Claudia Webbe (@ClaudiaWebbe) September 17, 2022


ಜಗಳಗಳ ಹಿನ್ನೆಲೆಯಲ್ಲಿ ಸ್ಥಳೀಯ ಪೊಲೀಸ್‌ ಅಧಿಕಾರಿಗೆ ಪತ್ರ ಬರೆದಿರುವ ಸಂಸದೆ, “ಲೀಸೆಸ್ಟರ್‌ನಲ್ಲಿ ನಾವು ದ್ವೇಷವನ್ನು ಪ್ರಚೋದಿಸದಂತೆ ಜಾಗರೂಕರಾಗಿರುತ್ತೇವೆ, ನಮ್ಮ ಸಮುದಾಯಗಳನ್ನು ಒಟ್ಟುಗೂಡಿಸಲು ಮತ್ತು ಜನಾಂಗ ಮತ್ತು ಧಾರ್ಮಿಕ ಹಿಂಸಾಚಾರವನ್ನು ಕೊನೆಗೊಳಿಸಲು ಶ್ರಮಿಸುತ್ತಿದ್ದೇವೆ. ಲೀಸೆಸ್ಟರ್ ಯುಕೆಯಲ್ಲಿನ ಅತ್ಯಂತ ವೈವಿಧ್ಯಮಯ ನಗರಗಳಲ್ಲಿ ಒಂದಾಗಿದೆ. ನಮ್ಮ ಏಕತೆಯೇ ನಮ್ಮ ಶಕ್ತಿ” ಎಂದು ಟ್ವೀಟ್‌ ಮಾಡಿ ಪತ್ರದ ಪ್ರತಿಯನ್ನು ಹಂಚಿಕೊಂಡಿದ್ದಾರೆ.

18 ಸೆಪ್ಟೆಂಬರ್ ವರೆಗೆ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಒಟ್ಟು 27 ಜನರನ್ನು ಬಂಧಿಸಲಾಗಿದೆ ಎಂದು ಸ್ಥಳೀಯ ಸುದ್ದಿ ಔಟ್ಲೆಟ್ ಲೀಸೆಸ್ಟರ್ ಲೈವ್ ವರದಿ ಮಾಡಿದೆ, ಇದರ ಬಳಿಕ ಆ ಪ್ರದೇಶದಲ್ಲಿ ಪೊಲೀಸರು ಮತ್ತು ಸಮುದಾಯದ ಮುಖಂಡರ ನಡುವೆ ತುರ್ತು ಸಭೆ ನಡೆಸಲಾಗಿದ್ದು, ಉಭಯ ಸಮುದಾಯದ ಮುಖಂಡರು ಶಾಂತವಾಗಿರಲು ಹಾಗೂ ನೆರೆದಿದ್ದ ಜನರು ಮನೆಗೆ ಹೋಗಲು ಕರೆ ನೀಡಿದ್ದಾರೆ.

Tags: Britain
Previous Post

ಕೊನೆಗೂ ನನಸಾಗುವತ್ತ ರಾಜ್ಯದ ಚೊಚ್ಚಲ ICC ಸೆಂಟರ್ : ಅಷ್ಟಕ್ಕೂ ಏನಿದು ICC?

Next Post

‘ಶುಭಮಂಗಳ’ ಸಿನಿಮಾದ ಟ್ರೇಲರ್ ಔಟ್..ಅಕ್ಟೋಬರ್ 14ಕ್ಕೆ ಚಿತ್ರ ರಿಲೀಸ್

Related Posts

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ
ದೇಶ

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

by ಪ್ರತಿಧ್ವನಿ
January 28, 2026
0

ನವದೆಹಲಿ: ವಿಶ್ವದ ಎರಡನೆಯ ಅತಿದೊಡ್ಡ ಆರ್ಥಿಕತೆಯಾಗಿರುವ ಐರೋಪ್ಯ ಒಕ್ಕೂಟದೊಂದಿಗೆ, ವಿಶ್ವದ ನಾಲ್ಕನೆಯ ಅತಿ ದೊಡ್ಡ ಆರ್ಥಿಕ ಶಕ್ತಿಯಾದ ಭಾರತ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದೆ. ಈ...

Read moreDetails
ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

January 27, 2026
U-19 World Cup : ಜಿಂಬಾಬ್ವೆ ವಿರುದ್ಧ ಅಬ್ಬರಿಸಿದ ವೈಭವ್‌ ಸೂರ್ಯವಂಶಿ : ಅರ್ಧ ಶತಕ ಪೊರೈಸಿದ 14ರ ಹರೆಯದ ಪೋರ..!

U-19 World Cup : ಜಿಂಬಾಬ್ವೆ ವಿರುದ್ಧ ಅಬ್ಬರಿಸಿದ ವೈಭವ್‌ ಸೂರ್ಯವಂಶಿ : ಅರ್ಧ ಶತಕ ಪೊರೈಸಿದ 14ರ ಹರೆಯದ ಪೋರ..!

January 27, 2026
ಕೋರ್ಟ್‌ಗೆ ಹಾಜರಾದ ರಾಜೀವ್‌ ಗೌಡ : ಕೈ ಮುಖಂಡನಿಗೆ ಜೈಲಾ? ಬೇಲಾ..?

ಕೋರ್ಟ್‌ಗೆ ಹಾಜರಾದ ರಾಜೀವ್‌ ಗೌಡ : ಕೈ ಮುಖಂಡನಿಗೆ ಜೈಲಾ? ಬೇಲಾ..?

January 27, 2026
400 ಕೋಟಿ ರೂ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ಮಹಾರಾಷ್ಟ್ರದಲ್ಲಿ ಚಾಲಕರ ಬಂಧನ..?

400 ಕೋಟಿ ರೂ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ಮಹಾರಾಷ್ಟ್ರದಲ್ಲಿ ಚಾಲಕರ ಬಂಧನ..?

January 27, 2026
Next Post

‘ಶುಭಮಂಗಳ’ ಸಿನಿಮಾದ ಟ್ರೇಲರ್ ಔಟ್..ಅಕ್ಟೋಬರ್ 14ಕ್ಕೆ ಚಿತ್ರ ರಿಲೀಸ್

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada