• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ನವರಾತ್ರಿ ಉಪವಾಸ ಬದಲು ಮಹಿಳೆಯರು ಸಂವಿಧಾನ ಓದಬೇಕು ಎಂದ ದಲಿತ ಉಪನ್ಯಾಸಕನನ್ನು ವಜಾ ಮಾಡಿದ ಕಾಶಿ ವಿವಿ

ಫೈಝ್ by ಫೈಝ್
October 2, 2022
in ದೇಶ
0
ನವರಾತ್ರಿ ಉಪವಾಸ ಬದಲು ಮಹಿಳೆಯರು ಸಂವಿಧಾನ ಓದಬೇಕು ಎಂದ ದಲಿತ ಉಪನ್ಯಾಸಕನನ್ನು ವಜಾ ಮಾಡಿದ ಕಾಶಿ ವಿವಿ
Share on WhatsAppShare on FacebookShare on Telegram

ನವರಾತ್ರಿಯಲ್ಲಿ ಮಹಿಳೆಯರು ಉಪವಾಸ ಮಾಡುವ ಬದಲು ಸಂವಿಧಾನವನ್ನು ಓದಿದರೆ ಉತ್ತಮ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಹಾಕಿದ್ದ ದಲಿತ ಉಪನ್ಯಾಸಕರೊಬ್ಬರನ್ನು ಜಾಗೊಳಿಸಲಾಗಿದೆ ಎಂದು ವರದಿಯಾಗಿದೆ.

ADVERTISEMENT

ಉತ್ತರ ಪ್ರದೇಶದ ವಾರಣಾಸಿ ಜಿಲ್ಲೆಯ ಮಹಾತ್ಮ ಗಾಂಧಿ ಕಾಶಿ ವಿದ್ಯಾಪೀಠದ ಅತಿಥಿ ಉಪನ್ಯಾಸಕ ಮಿಥಿಲೇಶ್ ಗೌತಮ್ ಅವರನ್ನು ವಿಶ್ವವಿದ್ಯಾಲಯದ ಕ್ಯಾಂಪಸ್‌ಗೆ ಪ್ರವೇಶಿಸುವುದನ್ನು ಆಡಳಿತ ಮಂಡಳಿಯು ನಿಷೇಧಿಸಿದೆ.

ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಗೌತಮ್, “ಮಹಿಳೆಯರು ನವರಾತ್ರಿಯಲ್ಲಿ ಒಂಬತ್ತು ದಿನಗಳ ಕಾಲ ಉಪವಾಸ ಮಾಡುವ ಬದಲು ಭಾರತದ ಸಂವಿಧಾನ ಮತ್ತು ಹಿಂದೂ ಕೋಡ್ ಬಿಲ್ ಅನ್ನು ಓದುವುದು ಉತ್ತಮ. ಹಾಗೆ ಮಾಡುವುದರಿಂದ ಅವರ ಜೀವನವು ಗುಲಾಮಗಿರಿ ಮತ್ತು ಭಯದಿಂದ ಮುಕ್ತವಾಗಿರುತ್ತದೆ, ಜೈ ಭೀಮ್” ಎಂದು ಹೇಳಿದ್ದರು.

ಈ ಪೋಸ್ಟ್‌ ಇರುದ್ಧ ಹಿಂದುತ್ವ ಬಲಪಂಥೀಯರು ಆಕ್ಷೇಪ ವ್ಯಕ್ತ ಪಡಿಸಿದ ಬಳಿಕ, ಮಹಾತ್ಮ ಗಾಂಧಿ ಕಾಶಿ ವಿದ್ಯಾಪೀಠದ ರಿಜಿಸ್ಟ್ರಾರ್ ಡಾ.ಸುನೀತಾ ಪಾಂಡೆ ಅವರು ಗೌತಮ್ ವಿರುದ್ಧ ಕ್ರಮ ಕೈಗೊಂಡಿದ್ದಾರೆ.

ಕಚೇರಿ ಆದೇಶ ಹೊರಡಿಸಿದ ಅವರು, ‘ಸೆ.29ರಂದು ರಾಜ್ಯಶಾಸ್ತ್ರ ವಿಭಾಗದ ಅತಿಥಿ ಉಪನ್ಯಾಸಕ ಡಾ.ಮಿಥಿಲೇಶ್‌ ಕುಮಾರ್‌ ಗೌತಮ್‌ ಎಂಬುವರು ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಕ್ಕೆ ವಿರುದ್ಧವಾದ ಕೆಲ ವಿಷಯಗಳನ್ನು ಪೋಸ್ಟ್‌ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ಪತ್ರದ ಮೂಲಕ ದೂರಿದ್ದರುʼ ಎಂದು ತಿಳಿಸಿದ್ದಾರೆ.

‘‘ಡಾ. ಗೌತಮ್ ಕೃತ್ಯಕ್ಕೆ ವಿದ್ಯಾರ್ಥಿಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ವಿಶ್ವವಿದ್ಯಾನಿಲಯದ ವಾತಾವರಣ ಹದಗೆಡುವ ಮತ್ತು ಪರೀಕ್ಷೆಯ ಮೇಲೆ ಪರಿಣಾಮ ಬೀರುವ ಆತಂಕದ ಹಿನ್ನೆಲೆಯಲ್ಲಿ, ಭದ್ರತಾ ಕಾರಣಗಳಿಗಾಗಿ ಡಾ.ಮಿಥಿಲೇಶ್ ಕುಮಾರ್ ಗೌತಮ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹುದ್ದೆಯಿಂದ ತೆಗೆದುಹಾಕಲು ಮತ್ತು ವಿಶ್ವವಿದ್ಯಾಲಯದ ಕ್ಯಾಂಪಸ್‌ಗೆ ಅವರ ಪ್ರವೇಶವನ್ನು ನಿಷೇಧಿಸಲು ನನಗೆ ನಿರ್ದೇಶನ ನೀಡಲಾಗಿದೆ.” ಎಂದು ಆದೇಶದಲ್ಲಿ ಹೇಳಲಾಗಿದೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ವಿದ್ಯಾರ್ಥಿ ವಿಭಾಗವಾದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರಿಂದ ದೂರನ್ನು ಸ್ವೀಕರಿಸಿದ ನಂತರ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ತೆಗೆದುಹಾಕುವ ಆದೇಶವನ್ನು ಹೊರಡಿಸಿದ್ದಾರೆ.

ಗುರುವಾರವೂ ಬಲಪಂಥೀಯ ವಿದ್ಯಾರ್ಥಿಗಳು ಅಧ್ಯಾಪಕರ ವಿರುದ್ಧ ಪ್ರತಿಭಟನೆ ನಡೆಸಿ ವಿಶ್ವವಿದ್ಯಾಲಯದ ಆವರಣದಲ್ಲಿ ಘೋಷಣೆಗಳನ್ನು ಕೂಗಿದರು.

ಎಬಿವಿಪಿಯ ಕಷಿ ಘಟಕದೊಂದಿಗೆ ಸಂಬಂಧ ಹೊಂದಿರುವ ಜ್ಞಾನೇಂದ್ರ, “ಸಾಮಾನ್ಯ ವಿದ್ಯಾರ್ಥಿಗಳು ತಮ್ಮ ಸೈದ್ಧಾಂತಿಕ ಒಲವನ್ನು ಬದಿಗಿಟ್ಟು ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು. ಹಿಂದಿನಿಂದಲೂ ಅಧ್ಯಾಪಕರ ಹೇಳಿಕೆಗಳು ಧರ್ಮ ಮತ್ತು ನಂಬಿಕೆಗೆ ವಿರುದ್ಧವಾಗಿವೆ.” ಎಂದಿದ್ದಾರೆ.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ದೆಹಲಿ; 6 ವರ್ಷದ ಬಾಲಕನ ಕೊಲೆ, ನರಬಲಿ ಶಂಕೆ

Next Post

ಮಿಲ್ಲರ್ ಶತಕ ವ್ಯರ್ಥ: ಭಾರತಕ್ಕೆ 16 ರನ್ ರೋಚಕ ಜಯ

Related Posts

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ
ದೇಶ

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

by ಪ್ರತಿಧ್ವನಿ
January 28, 2026
0

ನವದೆಹಲಿ: ವಿಶ್ವದ ಎರಡನೆಯ ಅತಿದೊಡ್ಡ ಆರ್ಥಿಕತೆಯಾಗಿರುವ ಐರೋಪ್ಯ ಒಕ್ಕೂಟದೊಂದಿಗೆ, ವಿಶ್ವದ ನಾಲ್ಕನೆಯ ಅತಿ ದೊಡ್ಡ ಆರ್ಥಿಕ ಶಕ್ತಿಯಾದ ಭಾರತ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದೆ. ಈ...

Read moreDetails
ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

January 27, 2026
U-19 World Cup : ಜಿಂಬಾಬ್ವೆ ವಿರುದ್ಧ ಅಬ್ಬರಿಸಿದ ವೈಭವ್‌ ಸೂರ್ಯವಂಶಿ : ಅರ್ಧ ಶತಕ ಪೊರೈಸಿದ 14ರ ಹರೆಯದ ಪೋರ..!

U-19 World Cup : ಜಿಂಬಾಬ್ವೆ ವಿರುದ್ಧ ಅಬ್ಬರಿಸಿದ ವೈಭವ್‌ ಸೂರ್ಯವಂಶಿ : ಅರ್ಧ ಶತಕ ಪೊರೈಸಿದ 14ರ ಹರೆಯದ ಪೋರ..!

January 27, 2026
ಕೋರ್ಟ್‌ಗೆ ಹಾಜರಾದ ರಾಜೀವ್‌ ಗೌಡ : ಕೈ ಮುಖಂಡನಿಗೆ ಜೈಲಾ? ಬೇಲಾ..?

ಕೋರ್ಟ್‌ಗೆ ಹಾಜರಾದ ರಾಜೀವ್‌ ಗೌಡ : ಕೈ ಮುಖಂಡನಿಗೆ ಜೈಲಾ? ಬೇಲಾ..?

January 27, 2026
400 ಕೋಟಿ ರೂ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ಮಹಾರಾಷ್ಟ್ರದಲ್ಲಿ ಚಾಲಕರ ಬಂಧನ..?

400 ಕೋಟಿ ರೂ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ಮಹಾರಾಷ್ಟ್ರದಲ್ಲಿ ಚಾಲಕರ ಬಂಧನ..?

January 27, 2026
Next Post
ಮಿಲ್ಲರ್ ಶತಕ ವ್ಯರ್ಥ: ಭಾರತಕ್ಕೆ 16 ರನ್ ರೋಚಕ ಜಯ

ಮಿಲ್ಲರ್ ಶತಕ ವ್ಯರ್ಥ: ಭಾರತಕ್ಕೆ 16 ರನ್ ರೋಚಕ ಜಯ

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada