• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿದೇಶ

ಭೀಕರ ದಾಳಿಯ ಬಳಿಕ ಒಂದು ಕಣ್ಣು, ಒಂದು ಕೈ ಸ್ವಾಧೀನವನ್ನು ಸಂಪೂರ್ಣ ಕಳಕೊಂಡ ಸಲ್ಮಾನ್‌ ರಶ್ದಿ

ಫೈಝ್ by ಫೈಝ್
October 25, 2022
in ವಿದೇಶ
0
ಭೀಕರ ದಾಳಿಯ ಬಳಿಕ ಒಂದು ಕಣ್ಣು, ಒಂದು ಕೈ ಸ್ವಾಧೀನವನ್ನು ಸಂಪೂರ್ಣ ಕಳಕೊಂಡ ಸಲ್ಮಾನ್‌ ರಶ್ದಿ
Share on WhatsAppShare on FacebookShare on Telegram

ಆಗಸ್ಟ್‌ನಲ್ಲಿ ಪಶ್ಚಿಮ ನ್ಯೂಯಾರ್ಕ್‌ನಲ್ಲಿ ನಡೆದ ಸಾಹಿತ್ಯಿಕ ಸಮಾರಂಭದಲ್ಲಿ ವೇದಿಕೆಯ ಮೇಲೆ ನಡೆದ ದಾಳಿಯ ನಂತರ ಸಲ್ಮಾನ್ ರಶ್ದಿ ಒಂದು ಕಣ್ಣಿನ ದೃಷ್ಠಿ ಮತ್ತು ಒಂದು ಕೈಯ ಸ್ವಾಧೀನವನ್ನು ಸಂಪೂರ್ಣ ಕಳೆದುಕೊಂಡಿದ್ದಾರೆ ಎಂದು ಅವರ ಏಜೆಂಟ್ ಆಂಡ್ರ್ಯೂ ವೈಲಿಹೇಳಿದರು.

ADVERTISEMENT

ಸ್ಪ್ಯಾನಿಷ್ ಪತ್ರಿಕೆ ಎಲ್ ಪೈಸ್‌ಗೆ ನೀಡಿದ ಸಂದರ್ಶನದಲ್ಲಿ “ಕ್ರೂರ” ದಾಳಿಯಲ್ಲಿ ರಶ್ದಿ ಅನುಭವಿಸಿದ ಗಾಯಗಳ ಗಂಭೀರತೆಯ ಬಗ್ಗೆ ಆಂಡ್ರ್ಯೂ ವೈಲಿ ವಿವರಿಸಿದ್ದಾರೆ.

“ರಶ್ದಿ ಕುತ್ತಿಗೆಯಲ್ಲಿ ಮೂರು ಗಂಭೀರವಾದ ಗಾಯಗಳಿದ್ದವು. ಅವರ ತೋಳಿನ ನರಗಳು ಕತ್ತರಿಸಿದ ಕಾರಣ ಒಂದು ಕೈ ನಿಷ್ಕ್ರಿಯವಾಗಿದೆ. ಮತ್ತು ಅವರ ಎದೆ ಮತ್ತು ಮುಂಡದಲ್ಲಿ ಸುಮಾರು 15 ಗಾಯಗಳಿವೆ.” ಎಂದು ಪತ್ರಿಕೆ ವರದಿಯಲ್ಲಿ ಹೇಳಿದೆ.

“ದಿ ಸೈಟಾನಿಕ್ ವರ್ಸಸ್” ಖ್ಯಾತಿಯ ಲೇಖಕರಾದ ರಶ್ದಿ ಇನ್ನೂ ಎರಡು ತಿಂಗಳಿಗಿಂತ ಹೆಚ್ಚು ಆಸ್ಪತ್ರೆಯಲ್ಲಿದ್ದಾರೆಯೇ ಎಂದು ಹೇಳಲು ವೈಲಿ ನಿರಾಕರಿಸಿದ್ದಾರೆ.

ಚೌಟಕ್ವಾ ಸಂಸ್ಥೆಯಲ್ಲಿ ಉಪನ್ಯಾಸ ನೀಡುತ್ತಿರುವ ಸಂದರ್ಭದಲ್ಲಿ 24 ವರ್ಷದ ನ್ಯೂಜೆರ್ಸಿಯ ವ್ಯಕ್ತಿಯೊಬ್ಬ ರಶ್ದಿ ಅವರ ಕುತ್ತಿಗೆ ಮತ್ತು ಮುಂಡಕ್ಕೆ ಭೀಕರವಾಗಿ ಇರಿದಿದ್ದ. ದಾಳಿಯಲ್ಲಿ ತೀವ್ರವಾದ ಗಾಯಗಳ ನಂತರ ರಶ್ದಿಯನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಅವರ ತೋಳಿನಲ್ಲಿ ನರ ಹಾನಿ, ಯಕೃತ್ತಿಗೆ ಗಾಯಗಳು ಮತ್ತು ಕಣ್ಣಿನ ನಷ್ಟದ ಸಾಧ್ಯತೆಯಿದೆ ಎಂದು ವೈಲಿ ಆ ಸಮಯದಲ್ಲಿ ಹೇಳಿದ್ದರು.

ಇರಾನ್‌ನ ನಾಯಕರಾಗಿದ್ದ ಅಯತೊಲ್ಲಾ ರುಹೊಲ್ಲಾ ಖೊಮೇನಿ ಅವರು ಫತ್ವಾ ಹೊರಡಿಸಿದ್ದ 33 ವರ್ಷಗಳ ನಂತರ ಈ ದಾಳಿ ನಡೆದಿರುವುದು ಸಾಹಿತ್ಯಕ ಜಗತ್ತನ್ನು ಬೆಚ್ಚಿ ಬೀಳಿಸಿತ್ತು. ಖೊಮೇನಿ “ದಿ ಸೈಟಾನಿಕ್ ವರ್ಸಸ್” ಪ್ರಕಟವಾದ ಕೆಲವು ತಿಂಗಳ ನಂತರ ರಶ್ದಿಯನ್ನು ಹತ್ಯೆ ಮಾಡುವಂತೆ ಮುಸ್ಲಿಮರಿಗೆ ಕರೆ ನೀಡಿದರು. ಪ್ರವಾದಿ ಮುಹಮ್ಮದ್ ಬಗ್ಗೆ ಕಾದಂಬರಿಯಲ್ಲಿ ಅವಹೇಳನಕಾರಿಯಾಗಿ ಚಿತ್ರಿಸಲಾಗಿದೆ ಎಂದು ಕೆಲವರು ಆರೋಪಿಸಿದ್ದರು.

ಭಾರತದಲ್ಲಿ ಮುಸ್ಲಿಂ ಕಾಶ್ಮೀರಿ ಕುಟುಂಬದಲ್ಲಿ ಜನಿಸಿದ ರಶ್ದಿ ಬ್ರಿಟಿಷ್ ಪೋಲೀಸ್ ರಕ್ಷಣೆಯಲ್ಲಿ ಒಂಬತ್ತು ವರ್ಷಗಳ ಕಾಲ ತಲೆಮರೆಸಿಕೊಂಡು ಬದುಕಿದ್ದರು.

1990 ರ ದಶಕದ ಉತ್ತರಾರ್ಧದಲ್ಲಿ ಇರಾನ್‌ನ ಅಧ್ಯಕ್ಷ ಮೊಹಮ್ಮದ್ ಖತಾಮಿ ಅವರ ಸುಧಾರಣಾ ಪರ ಸರ್ಕಾರವು ಫತ್ವಾದಿಂದ ದೂರವಿದ್ದರೂ, ರಶ್ದಿಯ ತಲೆಯ ಮೇಲೆ ನೇತಾಡುತ್ತಿದ್ದ ಬಹು ಮಿಲಿಯನ್ ಡಾಲರ್ ಬಹುಮಾನವು ಹಾಗೆಯೇ ಇತ್ತು. ಹಾಗೂ ಫತ್ವಾವನ್ನು ಎಂದಿಗೂ ತೆಗೆದುಹಾಕಿರಲಿಲ್ಲ.

ರಶ್ದಿ ವಿರುದ್ಧದ ಫತ್ವಾವನ್ನು “ಹಿಂತೆಗೆದುಕೊಳ್ಳಲಾಗುವುದಿಲ್ಲ” ಎಂದು ಹೇಳಿದ್ದ, ಖೊಮೇನಿಯ ಉತ್ತರಾಧಿಕಾರಿ, ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿ ಅವರನ್ನು 2019 ರಲ್ಲಿ ಟ್ವಿಟರ್‌ನಿಂದ ಅಮಾನತುಗೊಳಿಸಲಾಗಿತ್ತು.

‌

Tags: Covid 19ಕರೋನಾಕೋವಿಡ್-19
Previous Post

ರಾಮಮಂದಿರಕ್ಕೆ ಭೇಟಿ ನೀಡುವುದೆ ನನ್ನ ಗುರಿ : ಪಾಕ್‌ ಮಾಜಿ ಕ್ರಿಕೆಟಿಗ

Next Post

ಸರಳವಾಗಿ ಮೂಹೂರ್ತ ನೆರವೇರಿಸಿಕೊಂಡ ಸಂಜು ಮತ್ತು ಗೀತಾ

Related Posts

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
0

-----ನಾ ದಿವಾಕರ---- ಕಾರ್ಪೋರೇಟ್‌ ಕೇಂದ್ರಿತ ನಗರೀಕರಣ ಪ್ರಕ್ರಿಯೆಯ ಒಂದು ಬಂಡವಾಳಶಾಹಿ ಸ್ವರೂಪ ಆಂಗ್ಲ ಭಾಷೆಯಲ್ಲಿ ಸ್ಮಾರ್ಟ್‌ (Smart) ಎಂಬ ಪದವನ್ನು ನಾಮಪದವಾಗಿಯೂ, ಲಿಂಗತಟಸ್ಥ ಪದವಾಗಿಯೂ ಬಳಸಲಾಗುತ್ತದೆ. ಕನ್ನಡದಲ್ಲಿ...

Read moreDetails
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025

Bangalore Stampede: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣ

July 1, 2025
ಕಾಶ್ಮೀರದಲ್ಲಿ ನಡೆಯುತ್ತಿರುವುದು ಭಯೋತ್ಪಾದನೆ ಅಲ್ಲ..ಸ್ವತಂತ್ರ ಹೋರಾಟ : ಪಾಕ್ ಸೇನಾ ಮುಖ್ಯಸ್ಥ ಆಸಿಮ್ ಮುನಿರ್ 

ಕಾಶ್ಮೀರದಲ್ಲಿ ನಡೆಯುತ್ತಿರುವುದು ಭಯೋತ್ಪಾದನೆ ಅಲ್ಲ..ಸ್ವತಂತ್ರ ಹೋರಾಟ : ಪಾಕ್ ಸೇನಾ ಮುಖ್ಯಸ್ಥ ಆಸಿಮ್ ಮುನಿರ್ 

July 1, 2025

Gym Ravi: ಅಪ್ಪನ ಆಸೆ ಈಡೇರಿಸಲು 101 ಜನರಿಗೆ ಕಾಶಿಯಾತ್ರೆ ಮಾಡಿಸುತ್ತಿರುವ ಜಿಮ್ ರವಿ.

June 28, 2025
Next Post
ಸರಳವಾಗಿ ಮೂಹೂರ್ತ ನೆರವೇರಿಸಿಕೊಂಡ ಸಂಜು ಮತ್ತು ಗೀತಾ

ಸರಳವಾಗಿ ಮೂಹೂರ್ತ ನೆರವೇರಿಸಿಕೊಂಡ ಸಂಜು ಮತ್ತು ಗೀತಾ

Please login to join discussion

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Top Story

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada