ಬಿಜೆಪಿ ಶಾಸಕ ಬಸನ್ಗೌಡ ಪಾಟೀಲ್ ಯತ್ನಾಳ್ ಹಾಗೊಮ್ಮೆ ಹೀಗೊಮ್ಮೆ ತಮ್ಮ ಹೇಳಿಕೆಗಳ ಮೂಲಕ ಸುದ್ದಿಯಲ್ಲಿರುತ್ತಾರೆ. ಈಗ ಹಾವು ಬಿಡುವ ಹೇಳಿಕೆ ಮೂಲಕ ಮತ್ತೊಮ್ಮೆ ಸದ್ದು ಮಾಡಿದ್ದಾರೆ.
ಯತ್ನಾಳ ಹೇಳಿಕೆ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್ ಅದು ಭ್ರಷ್ಟಾಚಾರದ ಹಾವೇ ಅಥವಾ ಸಿಡಿ ಹಾವೇ ಎಂದು ಪ್ರಶ್ನಿಸಿದೆ.
ಕಾಂಗ್ರೆಸ್ ಕಿಟಿಕಿ ಇಣುಕುವುದರಲ್ಲೇ ನಿರತರಾಗಿದ್ದ ಬಿಜೆಪಿಗೆ ತಮ್ಮಲ್ಲಿನ #BJPvsBJP ಕದನದಲ್ಲಿ ಬಿಜೆಪಿಗರೆ ಲ್ಲ ಈಗ ಹಾವಾಡಿಗರಾಗಿದ್ದಾರೆ, ಅವರ ಹಾವುಗಳು ಎಲ್ಲೆಲ್ಲಿರುತ್ತವೆ, ಎಲ್ಲೆಲ್ಲಿ ಹೆಡೆ ಎತ್ತುತ್ತವೆ ಎಂಬುದು ಸ್ವತಃ ಬಿಜೆಪಿಗೇ ತಿಳಿಯುತ್ತಿಲ್ಲ ಎಂದು ಟೀಕಿಸಿದೆ.
ಶಿಸ್ತಿನ ಪಕ್ಷ ಎಂದುಕೊಳ್ಳುವ ಬಿಜೆಪಿಗೆ ನಿಷ್ಠ ಪಕ್ಷ ಒಬ್ಬ ಯತ್ನಳರಿಗೆ ಶಿಸ್ತು ಕ್ರಮ ಜರುಗಿಸಲು ಸಾಧ್ಯವಾಗಿಲ್ಲ ಎಂದಾದರೆ ಬಿಜೆಪಿಯ ಶಿಸ್ತು ಖಾಕಿ ಚಡ್ಡಿ ಹಾಕಿಕೊಳ್ಳುವುದಕ್ಕೆ ಮಾತ್ರ ಮೀಸಲು ಎಂಬುದು ಸ್ಪಷ್ಟವಾಗಿದೆ ಎಂದು ಟ್ವೀಟ್ ಮಾಡುವ ಮೂಲಕ ಕುಟುಕಿದೆ.






