ವೀರಶೈವ-ಲಿಂಗಾಯತ ಸಮಾಜದವರಿಗೆ ಬಿಜೆಪಿ ತಮ್ಮ ಪಕ್ಷವಾಗಿ ಉಳಿದಿಲ್ಲ ಇದು ಮೋದಿ-ಶಾ ಪಕ್ಷ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಶುಕ್ರವಾರ ಮುಳಬಾಗಿಲಿನಲ್ಲಿ ಪಂಚರತ್ನ ಯಾತ್ರೆ ಹಾಗೂ ಜೆಡಿಎಸ್ ಸಮಾವೇಶವನ್ನ ಉದ್ದೇಶಿಸಿ ಮಾತನಾಡಿದ ಹೆಚ್ಡಿಕೆ ಬಿಜೆಪಿ ಆಡಲಿತ ನಡೆಸುತ್ತಿರುವುದು ರಾಜ್ಯದಲ್ಲಿ ಅಲ್ಲ ದೆಹಲಿಯಿಂದ ಬರುವ ಲಕೋಟೆ ಮೇಲೆ ಎಂದು ಆರೋಪಿಸಿದ್ದಾರೆ.

ನಿಮ್ಮಗೆ ರಾಜ್ಯದ ಸಂಪತ್ತನ್ನು ಲೂಟಿ ಮಾಡಿ ಅಹಂಕಾರದಿಂದ ಮೆರೆಯುತ್ತಿರುವ ರಾಷ್ಟ್ರೀಯ ಪಕ್ಷಗಳು ಬೇಕೋ ಅಥವಾ ಜನರ ಭಾವನೆಗಳಿಗೆ ಸ್ಪಂದಿಸುವ ಪ್ರಾದೇಶಿಕ ಪಕ್ಷಗಳು ಬೇಕೋ ಎಂದು ನೀವೇ ತೀರ್ಮಾನಿಸಿ ಎಂದಿದ್ದಾರೆ.
ಬಿಜೆಪಿಯವರು ಯಡಿಯೂರಪ್ಪರನ್ನು ಅರ್ಧದಲ್ಲೇ ಕೈ ಬಿಟ್ಟರು ಈಗ ಬಸವರಾಜ್ ಬೊಮ್ಮಾಯಿ ಇದ್ದಾರೆ ಅವರು ಮುಖ್ಯಮಂತ್ರಿ ಎಂಬುದು ಹಲವರಿಗೆ ಗೊತ್ತಿಲ್ಲಾ ಎಂದು ಟೀಕಿಸಿದ್ದಾರೆ.






