• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮತದಾರರ ಮಾಹಿತಿ ಕಳ್ಳತನ: ʼಚಿಲುಮೆಯಿಂದ ಪಡೆದ ಸೇವೆʼಗಾಗಿ 17.5 ಲಕ್ಷ ಪಾವತಿಸಿರುವ ಬಿಜೆಪಿ ಮಾಜಿ ಶಾಸಕ ನಂದೀಶ್‌ ರೆಡ್ಡಿ.!

Shivakumar A by Shivakumar A
November 19, 2022
in ಕರ್ನಾಟಕ
0
ಮತದಾರರ ಮಾಹಿತಿ ಕಳ್ಳತನ: ʼಚಿಲುಮೆಯಿಂದ ಪಡೆದ ಸೇವೆʼಗಾಗಿ 17.5 ಲಕ್ಷ ಪಾವತಿಸಿರುವ ಬಿಜೆಪಿ ಮಾಜಿ ಶಾಸಕ ನಂದೀಶ್‌ ರೆಡ್ಡಿ.!
Share on WhatsAppShare on FacebookShare on Telegram

ತಮ್ಮನ್ನು ಕೃಷಿಕ ಮತ್ತು ಉದ್ಯಮಿ ಎಂದು ಬಣ್ಣಿಸಿರುವ ಬಿಜೆಪಿಯ ಮಾಜಿ ಶಾಸಕ ನಂದೀಶ ರೆಡ್ಡಿ ಅವರು 2018 ರಲ್ಲಿ ಕೆಆರ್ ಪುರಂ ಶಾಸಕರ ಚುನಾವಣೆಯಲ್ಲಿ ಸ್ಪರ್ಧಿಸಿ, ಸೋತಿದ್ದಾರೆ. ಕುತೂಹಲಕಾರಿ ಅಂಶವೇನೆಂದರೆ, ಚುನಾವಣೆಗೆ ಅವರು ಸಲ್ಲಿಸಿರುವ ಅಫಿಡವಿಟ್ ನಲ್ಲಿ ಚಿಲುಮೆ ಎನ್‌ಜಿಒಗೆ 17.5 ಲಕ್ಷ ಡೊನೇಷನ್‌ ನೀಡಿರುವುದಾಗಿ ಅಫಿಡವಿಟ್‌ ನಲ್ಲಿ ತಿಳಿಸಿದ್ದಾರೆ. ಮತದಾರರ ಮಾಹಿತಿ ಅಕ್ರಮವಾಗಿ ಸಂಗ್ರಹಿಸಿರುವ ಆರೋಪ ಇರುವ ವಿವಾದಿತ ಚಿಲುಮೆ ಟ್ರಸ್ಟ್‌ಗೆ ಮಾಜಿ ಶಾಸಕ ಅನುದಾನ ನೀಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ADVERTISEMENT

ಮತದಾರರ ಡೇಟಾವನ್ನು ಅಕ್ರಮವಾಗಿ ಸಂಗ್ರಹಿಸಿರುವ ಪ್ರಕರಣವನ್ನು theNewsminute ಹಾಗೂ ಪ್ರತಿಧ್ವನಿ ಜಂಟಿ ತನಿಖಾ ವರದಿ ಬಯಲಿಗೆಳೆದಿತ್ತು. ಚಿಲುಮೆ ಅಡಿಯಲ್ಲೇ ʼಚುನಾವಣಾ ನಿರ್ವಹಣೆ’ ಸೇವೆಗಳನ್ನು ಒದಗಿಸುವ ಖಾಸಗಿ ಕಂಪನಿ ನಡೆಸುತ್ತಿರುವ ಆ್ಯಪ್‌ಗೆ ಮತದಾರರ ವಿವರಗಳನ್ನು ಅಪ್‌ಲೋಡ್ ಮಾಡಲಾಗಿದೆ ಎಂದು ತನಿಖೆಯಲ್ಲಿ ಬಹಿರಂಗಗೊಂಡಿತ್ತು. ಚಿಲುಮೆಯ ಸಂಸ್ಥಾಪಕ ಕೃಷ್ಣಪ್ಪ ರವಿಕುಮಾರ್ ಅವರು 2014 ರಿಂದ ಇಂತಹ ಸಮೀಕ್ಷೆಗಳನ್ನು ನಡೆಸುತ್ತಿದ್ದಾರೆ ಎಂದು ನಮ್ಮ ತನಿಖಾ ತಂಡಕ್ಕೆ ತಿಳಿಸಿದ್ದರು.

ಹಾಗಾದರೆ ಈ ಮಾಜಿ ಬಿಜೆಪಿ ಶಾಸಕ ಚಿಲುಮೆಗೆ 18 ಲಕ್ಷ ರೂಪಾಯಿಗಳನ್ನು ಮುಂಗಡವಾಗಿ ಏಕೆ ಪಾವತಿಸಿದ್ದಾರೆ ಮತ್ತು ಚಿಲುಮೆ ಟ್ರಸ್ಟ್ ಅವರಿಗೆ ಯಾವ ಸೇವೆಗಳನ್ನು ಒದಗಿಸಿದೆ? ಎನ್ನುವ ಪ್ರಶ್ನೆ ಉದ್ಭವಿಸಿದೆ.

ಈ ಕುರಿತು ಟಿಎನ್‌ಎಂ ಜತೆ ಮಾತನಾಡಿದ ನಂದೀಶ ರೆಡ್ಡಿ, ಕೆಆರ್ ಪುರಂ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿ ಸಮೀಕ್ಷೆಗೆ ಹಣ ನೀಡಿದ್ದೇನೆ. ನನ್ನ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲಿ ಅವ್ಯವಹಾರ ನಡೆದಿದೆ ಎಂದು 2017-2018ರಲ್ಲಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೆ. ಚಿಲುಮೆ ಸಮೀಕ್ಷೆ ನಡೆಸಿ ಮಾಹಿತಿ ನೀಡುವಂತೆ ಹೇಳಿದ್ದೆ. ಇತರರು ಇಂದು ಅವುಗಳನ್ನು ಇತರ ಉದ್ದೇಶಗಳಿಗಾಗಿ ಬಳಸಿರಬಹುದು, ಅದರ ಬಗ್ಗೆ ನನಗೆ ಏನೂ ತಿಳಿದಿಲ್ಲ. ಆದರೆ ಆಗ, ಮತದಾರರ ಪಟ್ಟಿ ಸರಿಯಾಗಿದೆ ಮತ್ತು ಯಾವುದೇ ದೋಷಗಳಿಲ್ಲ ಎಂದು ಖಚಿತಪಡಿಸಿಕೊಳ್ಳಲು ನಾನು ನನ್ನ ಖಾತೆಯಿಂದ ಮೊತ್ತವನ್ನು ಪಾವತಿಸಿದ್ದೇನೆ ಎಂದು ತಿಳಿಸಿದ್ದಾರೆ.

ಚಿಲುಮೆಯ ಕೃಷ್ಣಪ್ಪ ರವಿಕುಮಾರ್ ಅವರು ನೇರವಾಗಿ ನನ್ನ ಬಳಿಗೆ ಬಂದರು. ತನ್ನ ಕಛೇರಿ ಮಲ್ಲೇಶ್ವರಂನಲ್ಲಿದೆ ಎಂದು ತನ್ನನ್ನು ಪರಿಚಯಿಸಿಕೊಂಡರು. ಮತ್ತು ಅವರು ಇದೇ ರೀತಿಯಲ್ಲಿ ಹಲವಾರು ಜನರೊಂದಿಗೆ ಕೆಲಸ ಮಾಡುತ್ತಿರುವುದಾಗಿ ತಿಳಿಸಿದರು. ಹೆಚ್ಚಿನ ಮಾಹಿತಿಗಾಗಿ ನಾನು ಕೂಡ ಅವರನ್ನು ನೇಮಿಸಿಕೊಂಡೆ. ನಾನು ಮರೆಮಾಡಲು ಬಯಸಿದ್ದರೆ ನಾನು ಅವರಿಗೆ ನಗದು ನೀಡಬಹುದಿತ್ತು. ಆದರೆ ನಾನು ಅವರಿಗೆ ಚೆಕ್ ಮೂಲಕ ಪಾವತಿಸಿ ಅಫಿಡವಿಟ್‌ನಲ್ಲಿ ತೋರಿಸಿದ್ದೇನೆ ಎಂದು ನಂದೀಶ ರೆಡ್ಡಿ ಟಿಎನ್‌ಎಂಗೆ ತಿಳಿಸಿದ್ದಾರೆ.

ಆದಾಗ್ಯೂ, 2018 ರಲ್ಲಿ, ಅಸೆಂಬ್ಲಿ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗೆ ಚುನಾವಣಾ ಆಯೋಗವು ನಿಗದಿಪಡಿಸಿದ ವೆಚ್ಚದ ಮಿತಿ 28 ಲಕ್ಷ ರೂಪಾಯಿಗಳಾಗಿತ್ತು. ಆದರೆ, ನಂದೀಶ ರೆಡ್ಡಿ ಅವರು ಚಿಲುಮೆಯ ಸೇವೆಗೆ ಕನಿಷ್ಠ 18 ಲಕ್ಷ ರೂಪಾಯಿಗಳನ್ನು ಖರ್ಚು ಮಾಡಿದ್ದಾರೆ ಎಂಬುದು ಗಮನಿಸಬೇಕಾದ ಸಂಗತಿ.

ಈ ವರ್ಷದ ಆರಂಭದಲ್ಲಿ ಚಿಲುಮೆ ಟ್ರಸ್ಟ್‌ಗೆ ಸರ್ಕಾರಿ ಆದೇಶದ ಮೂಲಕ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಗರದ ಪುರಸಭೆಯಿಂದ ಮತದಾರರ ಜಾಗೃತಿ ನಡೆಸಲು ಅವಕಾಶ ನೀಡಲಾಯಿತು. ಗುತ್ತಿಗೆ ನೀಡಿರುವ ಸಂಸ್ಥೆಯು ಯಾವುದೇ ರಾಜಕಾರಣಿ ಅಥವಾ ರಾಜಕೀಯ ಪಕ್ಷ ಅಥವಾ ಗುಂಪಿನೊಂದಿಗೆ ಸಂಬಂಧ ಹೊಂದಿರಬಾರದು ಎಂದು ಆದೇಶದಲ್ಲಿ ಷರತ್ತು ವಿಧಿಸಲಾಗಿತ್ತು. ಮತದಾರರ ಪಟ್ಟಿಗೆ ಸಂಬಂಧಿಸಿದ ಕೆಲಸಕ್ಕಾಗಿ ಚಿಲುಮೆಗೆ ಹಣ ಪಾವತಿಸಿರುವುದಾಗಿ ನಂದೀಶ ರೆಡ್ಡಿ ಬಹಿರಂಗಪಡಿಸಿರುವುದು ಸರ್ಕಾರಿ ಆದೇಶವನ್ನು ಬಿಡುಗಡೆ ಮಾಡುವ ಮೊದಲು ಬಿಬಿಎಂಪಿಯು ಸಂಸ್ಥೆಯ ಹಿನ್ನೆಲೆ ಪರಿಶೀಲನೆ ನಡೆಸಿದೆಯೇ ಎಂಬ ಬಗ್ಗೆ ಮತ್ತಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಚಿಲುಮೆ ಯಾವುದೇ ರಾಜಕೀಯ ಸಂಘಟನೆಯೊಂದಿಗೆ ಸಂಪರ್ಕ ಹೊಂದುವಂತಿಲ್ಲ ಎಂದು ಸರಕಾರಿ ಆದೇಶದಲ್ಲಿ ಸ್ಪಷ್ಟವಾಗಿ ಹೇಳಲಾಗಿದ್ದರೂ ರಾಜಕಾರಣಿಯಿಂದ ದುಡ್ಡು ಪಡೆದುಕೊಂಡ ಸಂಸ್ಥೆಗೆ ಹೇಗೆ ಇಂತಹ ಮಹತ್ವದ ಜವಾಬ್ದಾರಿ ಹೊರಿಸಲಾಯಿತು ಎನ್ನುವುದು ಪ್ರಶ್ನಾರ್ಹ.

ಚಿಲುಮೆ ತಾನೇ ಸರ್ಕಾರವನ್ನು ಸಂಪರ್ಕಿಸಿ ಸ್ವಯಂಪ್ರೇರಿತ ಸೇವೆಗಳನ್ನು ಒದಗಿಸಲು ಆಮಿಷ ನೀಡಿದ ನಂತರ ಈ ಆದೇಶವನ್ನು ನೀಡಲಾಗಿದೆ ಎಂದು ತನಿಖಾ ವರದಿ ವೇಳೆ ಕಂಡುಹಿಡಿಯಲಾಗಿದೆ. ಆದಾಗ್ಯೂ, ಈ ಸ್ವಯಂಪ್ರೇರಿತ ಕೆಲಸಕ್ಕಾಗಿ ರಾಜ್ಯಾದ್ಯಂತ ನೂರಾರು ಯುವಕರನ್ನು ನೇಮಿಸಿಕೊಂಡು ಅವರನ್ನು ಸರ್ಕಾರಿ ಅಧಿಕಾರಿಗಳಂತೆ ಬಿಂಬಿಸಿ ಅವರಿಗೆ 15 ರಿಂದ 25 ಸಾವಿರದವರೆಗೆ ವೇತನ ನೀಡಿದೆ.   

ಇದಲ್ಲದೆ, ಉಪ-ಗುತ್ತಿಗೆದಾರರೊಂದಿಗಿನ ಅವರ ಒಪ್ಪಂದವು ಪ್ರತಿ ಮತದಾರರ ಪರಿಶೀಲನೆಗೆ ರೂ 20, ಪ್ರತಿ ಹೊಸ ಮತದಾರರನ್ನು ಗುರುತಿಸಲು ರೂ 13 ಮತ್ತು ಉಪ-ಗುತ್ತಿಗೆದಾರರಿಂದ ಭರ್ತಿ ಮಾಡಿದ ಪ್ರತಿ ಪರಿಶೀಲಿಸಿದ ಫಾರ್ಮ್ 7 ಗೆ ರೂ 13 ಪಾವತಿಸುತ್ತದೆ ಎಂದು ಹೇಳುತ್ತದೆ.  

ಬಿಬಿಎಂಪಿ ಈ ಕಾರ್ಯಕ್ಕೆ ಹಣ ನೀಡದಿದ್ದರೆ, ಚಿಲುಮೆ ತಮ್ಮ ಉಪ ಗುತ್ತಿಗೆದಾರರಿಗೆ ಮತ್ತು ನೂರಾರು ಕಾರ್ಮಿಕರನ್ನು ಈ ಕೆಲಸ ಮಾಡಲು ಕೂಲಿ ಮಾಡಲು ಹಣವನ್ನು ಎಲ್ಲಿಂದ ಪಡೆದರು? ನಂದೀಶ್‌ ರೆಡ್ಡಿಯಂತೆ ಎಷ್ಟು ಮಂದಿ ರಾಜಕಾರಣಿಗಳಿಗಾಗಿ ಚಿಲುಮೆ ಕೆಲಸ ನಿರ್ವಹಿಸಿದೆ ಅನ್ನುವುದು ತನಿಖೆಯಿಂದಷ್ಟೇ ಹೊರಬರಬೇಕಿದೆ.

Previous Post

ಪ್ರತಾಪ್ ಸಿಂಹ ಬರೀ ಸುಳ್ಳು ಹೇಳಿಕೊಂಡೆ ಜೀವನ ಮಾಡ್ತಿದ್ದಾರೆ, ಅವರ ಸಾಧನೆ ಶೂನ್ಯ: ಎಂ ಲಕ್ಷ್ಮಣ್

Next Post

ವಿವೇಕ ಯೋಜನೆ – ಬೇಕಿರುವುದು ಬಾಹ್ಯ ಸಮಾಜಕ್ಕಲ್ಲವೇ ?

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ವಿವೇಕ ಯೋಜನೆ – ಬೇಕಿರುವುದು ಬಾಹ್ಯ ಸಮಾಜಕ್ಕಲ್ಲವೇ ?

ವಿವೇಕ ಯೋಜನೆ – ಬೇಕಿರುವುದು ಬಾಹ್ಯ ಸಮಾಜಕ್ಕಲ್ಲವೇ ?

Please login to join discussion

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada