ನಮ್ಮ ಸ್ಯಾಂಡಲ್ವುಡ್ನಲ್ಲಿ ವಿಭಿನ್ನ ಕಥಾಹಂದರದ ಸಿನಿಮಾಗಳು ಸದ್ದಿಲ್ಲದೆ ಸೆಟ್ಟೇರುತ್ತವೆ ಇದೀಗ ಈ ಸಾಲಿಗೆ ಹೊಸ ಸೇರ್ಪಡೆ ಸೂರ್ಯ ಚಿತ್ರ.
ಈಗಾಗಲೇ ಟೈಟಲ್ ಮೂಲಕ ಗಮನ ಸೆಳೆದಿರುವ ಸೂರ್ಯ ಚಿತ್ರತಂಡವು ನಗರದ ಮಹಾಲಕ್ಷ್ಮೀಲೇಔಟ್ ನ ಶ್ರೀ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಸರಳವಾಗಿ ಮುಹೂರ್ತವನ್ನ ಆಚರಿಸಿಕೊಂಡಿದೆ.
ಚಿತ್ರದ ಕುರಿತು ಮಾತನಾಡಿದ ನಿರ್ದೇಶಕ ಸಾಗರ್ ನಾಯಕ ಪ್ರೀತಿಗೋಸ್ಕರ ಯುದ್ದವನ್ನೇ ಮಾಡಿ ಹೇಗೆ ತನ್ನ ಪ್ರೀತಿಯನ್ನು ಉಳಿಸಿಕೊಳ್ಳುತ್ತಾನೆ ಎನ್ನುವುದೇ ಸೂರ್ಯ ಚಿತ್ರದ ಕಾನ್ಸೆಪ್ಟ್. ಬೆಂಗಳೂರು ಸುತ್ತಮುತ್ತ ಮಾತಿನ ಭಾಗದ ಚಿತ್ರೀಕರಣ ನಡೆಸಿ ಹಾಡುಗಳಿಗೆ ಮಡಿಕೇರಿ, ಮೈಸೂರು, ಪೂನಾಗೆ ಹೋಗುವ ಯೋಜನೆಯಿದೆ ಎಂದು ತಿಳಿಸಿದ್ದಾರೆ.
![](https://pratidhvani.com/wp-content/uploads/2022/11/WhatsApp-Image-2022-11-23-at-2.14.22-PM-1024x683.jpeg)
ಚಿತ್ರದಲ್ಲಿ ನಾಯಕನಾಗಿ ಹೊಸ ಪ್ರತಿಭೆ ಪ್ರಶಾಂತ್ ಕಾಣಿಸಿಕೊಳ್ಳುತ್ತಿದ್ದು ನಾಯಕಿಯಾಗಿ ಹರ್ಷಿತಾ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನುಳಿದಂತೆ ಆರ್ಮುಗ ರವಿಶಂಕರ್, ಶೃತಿ, ಪ್ರಮೋದ್ ಶೆಟ್ಟಿ ತಾರಾಗಣದಲ್ಲಿದ್ದಾರೆ.
ಚಿತ್ರಕ್ಕೆ ಬಸವರಾಜ್ ಬೆಣ್ಣೆ ಹಾಗೂ ರವಿ ಬೆಣ್ಣೆ ಸಹೋದರರು ಜಂಟಿಯಾಗಿ ಬಂಡವಾಳ ಹೂಡುತ್ತಿದ್ದು ಶ್ರೀಶಾಸ್ತ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಮನುರಾಜ್ ಈ ಚಿತ್ರದ ಛಾಯಾಗ್ರಾಹಕರಾಗಿ ಕೆಲಸ ಮಾಡುತ್ತಿದ್ದು, ಬಹದ್ದೂರ್ ಚೇತನ್, ಯೋಗರಾಜ್ ಭಟ್ ಹಾಗೂ ನಿರ್ಧೇಶಕ ಸಾಗರ್ ಸಾಹಿತ್ಯ ಈ ಚಿತ್ರಕ್ಕಿದೆ.