ಬಿಬಿಎಂಪಿಯಲ್ಲಿನ ಅನೇಕ ಕಡತಗಳು ನಾಪತ್ತೆಯಾಗಿವೆ ಮತ್ತು ಈ ಬಗ್ಗೆ ತನಿಖೆ ನಡೆಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ ಬೆನ್ನಲ್ಲೇ ರಾಜ್ಯ ಬಿಜೆಪಿ ಟ್ವೀಟ್ ಮಾಡಿ ಚಾಟಿ ಬೀಸಿದೆ.
ಬಿಬಿಎಂಪಿ ಜಾಹೀರಾತು ನೀತಿಗೆ ಸಂಬಂಧಿಸಿದ ಕಡತಗಳು ನಾಪತ್ತೆಯಾಗಿವೆ ಎಂಬ ಸಿದ್ದರಾಮಯ್ಯ ಮಾಡಿರುವ ಆರೋಪ ನಿರಾಧಾರ ಮತ್ತು ಸುಳ್ಳು ಎಂದು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತಿಳಿಸಿದ್ದಾರೆ.
ಜಟ್ಟಿ ನೆಲಕ್ಕೆ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎಂಬ ಗಾದೆಯಂತೆ ಸಿದ್ದರಾಮಯ್ಯ ವರ್ತಿಸುತ್ತಿರುವುದು ನಾಚಿಗೆಗೇಡಿನ ಸಂಗತಿ ಎಂದು ಟ್ವೀಟ್ ಮಾಡಿ ಕಿಡಿಕಾರಿದೆ.
ಬಿಬಿಎಂಪಿ ಜಾಹೀರಾತು ನೀತಿಗೆ ಸಂಬಂಧಿಸಿದ ಎಲ್ಲ ಕಡತಗಳು (ಮುಖ್ಯ ಕಡತ, ಭಾಗ 1, 3 ಮತ್ತು 4) ನಗರಾಭಿವೃದ್ಧಿ ಇಲಾಖೆಯಲ್ಲಿವೆ. ಕಡತಗಳು ಯಾವುದೇ ಸಚಿವರ ಕಚೇರಿ ಅಥವಾ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಕಾಣೆಯಾಗಿಲ್ಲ ಅಥವಾ ತಪ್ಪಿಹೋಗಿಲ್ಲ. ಕಾಂಗ್ರೆಸ್ ಜನತೆಯ ಹಾದಿ ತಪ್ಪಿಸಲು ಪ್ರಯತ್ನಿಸಿರುವುದಕ್ಕೆ ರಾಜ್ಯದ ಜನತೆಯ ಕ್ಷಮೆ ಕೇಳಬೇಕು.