• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಯಾವ ವ್ಯವಸ್ಥೆಗೆ ಚಲನೆ ಇರುವುದಿಲ್ಲ ಅಲ್ಲಿ ಬದಲಾವಣೆ ಅಸಾಧ್ಯ : ಸಿದ್ದರಾಮಯ್ಯ

Any Mind by Any Mind
November 30, 2022
in ಕರ್ನಾಟಕ, ರಾಜಕೀಯ
0
ಯಾವ ವ್ಯವಸ್ಥೆಗೆ ಚಲನೆ ಇರುವುದಿಲ್ಲ ಅಲ್ಲಿ ಬದಲಾವಣೆ ಅಸಾಧ್ಯ : ಸಿದ್ದರಾಮಯ್ಯ
Share on WhatsAppShare on FacebookShare on Telegram

ನಾನು ಸಾರಿಗೆ ಸಚಿವನಾಗಿದ್ದ ಸಂದರ್ಭದಲ್ಲಿ 1988ರಲ್ಲಿ ಕನಕದಾಸರ 500ನೇ ಜಯಂತ್ಯುತ್ಸವ ಬರುತ್ತಿದ್ದು, ಇದನ್ನು ಸರ್ಕಾರದಿಂದ ಒಂದು ವರ್ಷ ಕಾಲ ಆಚರಣೆ ಮಾಡಬೇಕು ಎಂದು ಅಂದಿನ ಮುಖ್ಯಮಂತ್ರಿ ಎಸ್.ಆರ್‌ ಬೊಮ್ಮಾಯಿ ಅವರಿಗೆ ಹೇಳಿದ್ದೆ, ಅವರು ಅದಕ್ಕೆ ಒಪ್ಪಿಗೆ ನೀಡಿದ್ದರು. ಕನಕ ಜಯಂತಿ ಆಚರಣೆ ಸಮಿತಿಯ ಅಧ್ಯಕ್ಷನಾಗಿ ನಾನು ಕಾರ್ಯನಿರ್ವಹಿಸಿದ್ದೆ. ಆದರೆ ಮಧ್ಯದಲ್ಲಿ ಸರ್ಕಾರ ಹೊರಟು ಹೋಗಿ ಬೇರೆ ಸರ್ಕಾರ ಬಂತು. ವರ್ಷ ಪೂರ್ತಿ ಆಚರಣೆ ಮಾಡಿ ಕೊನೆಗೆ 1989ರ ನವೆಂಬರ್‌ ತಿಂಗಳಿನಲ್ಲಿ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನೇ ಹೊಸ ಸರ್ಕಾರ ಆಚರಣೆ ಮಾಡಿಲ್ಲ. ಇದನ್ನು ನೀವೆಲ್ಲ ನೆನಪಿನಲ್ಲಿ ಇಟ್ಟುಕೊಳ್ಳಬೇಕು.

ADVERTISEMENT

ಕನಕದಾಸರ ಸಾಹಿತ್ಯ ಕೃತಿಗಳಾದ ರಾಮಧಾನ್ಯ ಚರಿತೆ, ಹರಿಭಕ್ತ ಸಾರ, ಮೋಹನ ತರಂಗಿಣಿ, ನಳ ಚರಿತೆ ಇವುಗಳು ಕಡಿಮೆ ದರದಲ್ಲಿ ಕರ್ನಾಟಕದ ಜನರಿಗೆ ಸಿಗಬೇಕು ಎಂದು ಮುಂದೆ ನಿಂತು ಪ್ರಿಂಟ್‌ ಮಾಡಿಸಿ ರಾಜ್ಯಾದ್ಯಂತ ಹಂಚಿದ್ದೆ. ನಮ್ಮ ಸರ್ಕಾರ ಇದನ್ನು ಆಚರಣೆ ಮಾಡುವ ವರೆಗೆ ಕನಕ ಜಯಂತಿಯನ್ನು ಇಷ್ಟು ವ್ಯಾಪಕವಾಗಿ ಆಚರಣೆ ಮಾಡುತ್ತಿರಲಿಲ್ಲ. ನಂತರದ ಚುನಾವಣೆಯಲ್ಲಿ ನಾನು ಸೋತ ಕಾರಣ ಐದು ವರ್ಷಗಳ ಕಾಲ ರಾಜ್ಯಾದ್ಯಂತ ಸುತ್ತಾಡಿ ಎಲ್ಲಾ ತಾಲೂಕು, ಜಿಲ್ಲೆಗಳಲ್ಲಿ ಕನಕ ಜಯಂತಿ ಆಚರಣೆ ಮಾಡಿಸಿದೆ. ಇದರಿಂದ ನಮ್ಮ ಕುರುಬ ಸಮಾಜದಲ್ಲಿ ಜಾಗೃತಿ ಮೂಡಲು ಆರಂಭವಾಯಿತು. ಇದಕ್ಕೂ ಮೊದಲು ತಾವು ಕುರುಬ ಎಂದು ಹೇಳಿಕೊಳ್ಳಲಿ ಕೂಡ ನಾಚಿಕೆ ಪಟ್ಟುಕೊಳ್ಳುತ್ತಿದ್ದರು. ನಾನು ವಿದ್ಯಾರ್ಥಿಯಾಗಿದ್ದಾಗ ಕೆಲವು ಹುಡುಗರು ತಮ್ಮನ್ನು ಗೌಡರು ಎಂದು ಹೇಳಿಕೊಳ್ಳುತ್ತಿದ್ದರು. ಯಾವ ಗೌಡ ಎಂದು ಹೇಳುತ್ತಿರಲಿಲ್ಲ, ಕುರುಬರಲ್ಲೂ ಗೌಡ ಎಂಬ ಉಪನಾಮ ಇದೆ. ನನ್ನ ತಂದೆ, ತಮ್ಮ, ಅಣ್ಣ ಎಲ್ಲರ ಹೆಸರಲ್ಲೂ ಗೌಡ ಇದೆ ಆದರೆ ನನ್ನ ಹೆಸರಿನ ಮುಂದೆ ಇದ್ದ ಗೌಡ ಎಂಬುದನ್ನು ನಮ್ಮ ಶಾಲೆಯ ಶಿಕ್ಷಕರು ತೆಗೆದು ಹಾಕಿದ್ದರು. ನಾನು ಮತ್ತು ವಿಶ್ವನಾಥ ಅವರು ಮೈಸೂರಿನ ಎಲ್ಲಾ ಕಾಲೇಜುಗಳನ್ನು ಸುತ್ತಿ, ವಿದ್ಯಾರ್ಥಿಗಳನ್ನು ಸಂಘಟಿಸಿ ಕಾಳಿದಾಸ ವಿದ್ಯಾರ್ಥಿ ಬಳಗವನ್ನು ಉದ್ಘಾಟನೆ ಮಾಡಿದೆವು. ನಂತರ ನಾನು ಲಾಯರ್‌ ವೃತ್ತಿ ಆರಂಭ ಮಾಡಿದೆ. ಹೀಗೆ ವಿದ್ಯಾರ್ಥಿ ಸಂಘಟನೆ ಆರಂಭ ಮಾಡಿದ ಮೇಲೆ ವಿದ್ಯಾರ್ಥಿಗಳಿಗೆ ತಮ್ಮನ್ನು ತಾವು ಕುರುಬ ಎಂದು ಹೇಳಿಕೊಳ್ಳುವ ಧೈರ್ಯ ಬಂದಿತು.

1991ರಲ್ಲಿ ಸಂಸತ್‌ ಚುನಾವಣೆಗೆ ಕೊಪ್ಪಳದಿಂದ ಸ್ಪರ್ಧೆ ಮಾಡಿದ್ದಾಗ ಅನೇಕ ಹಳ್ಳಿಗಳ ಜನ ನೀವು ನಮ್ಮ ಊರಿಗೆ ಬರುವುದು ಬೇಡ, ನಿಮಗೇ ಮತ ಹಾಕುತ್ತೇವೆ ಎಂದು ಹೇಳುತ್ತಿದ್ದರು. ಕನಕ ಜಯಂತಿ ಆಚರಣೆ ಆರಂಭ ಆದ ಮೇಲೆ ಈ ಭಯ ಜನರಿಂದ ದೂರವಾಗಿದೆ. ನಂತರ ಕನಕ ಗುರುಪೀಠ ಸ್ಥಾಪನೆ ಆಯಿತು. ಈಗ ಜನ ಖುಷಿಯಿಂದ ಸಮುದಾಯದ ಸಮಾರಂಭದಲ್ಲಿ ಭಾಗವಹಿಸುತ್ತಿದ್ದಾರೆ. ಇದು ಇತಿಹಾಸ. ಈ ಇತಿಹಾಸವನ್ನು ಎಲ್ಲರೂ ತಿಳಿದುಕೊಳ್ಳಬೇಕು.

ಕನಕದಾಸರ ವ್ಯಾಸಕೂಟದಲ್ಲಿ ಸೇರಿಕೊಂಡಿರುವಾಗ ಅಲ್ಲಿ ಎಲ್ಲ ಮೇಲ್ಜಾತಿಯ ಜನರಿದ್ದರು. ಕನಕ ದಾಸರು ಮಾತ್ರ ಶೂದ್ರ ಸಮುದಾಯಕ್ಕೆ ಸೇರಿದವರು. ಅಂತಹ ಪರಿಸ್ಥಿತಿಯನ್ನು ಕನಕದಾಸರು ನಿಭಾಯಿಸಿದ ರೀತಿಯನ್ನು ನಾವು ಮೆಚ್ಚಬೇಕಾಗುತ್ತದೆ. ಅವರನ್ನು ಪ್ರತೀ ಹೆಜ್ಜೆಗೆ ಅವಮಾನ ಮಾಡಲಾಗುತ್ತದೆ. ಕನಕದಾಸರು ವ್ಯಾಸ ರಾಯರ ಬಳಿ ತಾವು ಮಂತ್ರ ಕಲಿಯಬೇಕು ಎಂದಾಗ “ನೀನು ಕುರುಬ, ನಿನಗೆಂತ ಮಂತ್ರವಯ್ಯ?” ಎಂದು ಕೇಳಿದ್ದರು. ಈ ಹಿಂದೆ ಶೂದ್ರ ವರ್ಗದ ಜನರಿಗೆ ಮಂತ್ರ ಕಲಿಯುವುದು ಇರಲಿ, ವಿಧ್ಯೆ ಕಲಿಯಲು ಕೂಡ ಅವಕಾಶ ಇರಲಿಲ್ಲ. ಇಂದು ನಾವು ನೀವೆಲ್ಲ ಶಿಕ್ಷಿತರಾಗಬೇಕಾದರೆ, ನಾನು ಮುಖ್ಯಮಂತ್ರಿಯಾಗಬೇಕಾದರೆ ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ನೀಡಿರುವ ಸಂವಿಧಾನ ಕಾರಣ. ಜಾತಿ ವ್ಯವಸ್ಥೆ, ಅಸಮಾನತೆಯ ವಿರುದ್ಧ ಧ್ವನಿ ಎತ್ತಿದವರು ಕನಕ ದಾಸರು, ಬುದ್ಧ, ಬಸವಣ್ಣ, ಅಂಬೇಡ್ಕರ್‌, ಗಾಂಧೀಜಿ ಅವರು.

ನಮ್ಮ ದೇಶದ ಜಾತಿ ವ್ಯವಸ್ಥೆ ನಿಂತ ನೀರಾಗಿದೆ. ಯಾವ ವ್ಯವಸ್ಥೆಗೆ ಚಲನೆ ಇರುವುದಿಲ್ಲ ಅಲ್ಲಿ ಬದಲಾವಣೆ ಅಸಾಧ್ಯ. ಚಲನೆ ಸಿಗಬೇಕಾದರೆ ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಶಕ್ತಿ ಬರಬೇಕು. ನಾನು ಊರಿಗೆ ಹೋದಾಗ ನಮ್ಮಪ್ಪ ನನಗೆ ದನ ಕರುಗಳಿಗೆ ನೀರು ಕುಡಿಸುವ ಕೆಲಸ ನೀಡುತ್ತಿದ್ದರು. ಹಕ್ಕಿ ಗೂಡು, ಗಾಳಿ ಮಳೆಗೆ ಬಾವಿ ತುಂಬಾ ಕಸ ತುಂಬಿರುತ್ತಿತ್ತು, ಬಿಂದಿಗೆಯನ್ನು ನೀರಿಗೆ ಬಿಟ್ಟು ಸ್ವಲ್ಪ ಮೇಲೆ ಕೆಳಗೆ ಮಾಡಿದಾಗ ಕಸ ಪಕ್ಕ ಸರಿದು ಶುದ್ಧ ನೀರು ಸಿಗುತ್ತಿತ್ತು, ಸ್ವಲ್ಪ ಹೊತ್ತಿನ ನಂತರ ಮತ್ತೆ ಕಸ ಒಂದಾಗಿ ಬಾವಿ ಮಧ್ಯದಲ್ಲಿ ಬಂದು ನಿಲ್ಲುತ್ತಿತ್ತು. ನಮ್ಮ ಜಾತಿ ವ್ಯವಸ್ಥೆಯ ಕತೆಯೂ ಹೀಗೆ, ಅನೇಕ ಜನ ಸಮಾಜ ಸುಧಾರಕರು ಹೋರಾಟ ಮಾಡಿದಾಗ ಸ್ವಲ್ಪ ಬದಲಾದಂತೆ ಕಂಡು ಕೆಲವು ಸಮಯದ ನಂತರ ಮತ್ತೆ ಹಿಂದಿನಂತಾಗುತ್ತದೆ.

ಆರ್‌,ಎಸ್‌,ಎಸ್‌ ಸಂಘ ಪರಿವಾರ ಜಾತಿ ವ್ಯವಸ್ಥೆಯಲ್ಲಿ ಬದಲಾವಣೆಯನ್ನು ಬಯಸದವರು. ಜನರನ್ನು ಶೋಷಣೆ ಮಾಡಬೇಕು ಎಂದರೆ ಸಮಾಜದಲ್ಲಿ ಅಸಮಾನತೆ ಇರಬೇಕು. ಅಸಮಾನತೆಯನ್ನು ಜಾತಿ ವ್ಯವಸ್ಥೆ ಮೂಲಕ ಕಾಪಾಡಿಕೊಂಡು ಹೋಗಬಹುದು ಎಂಬುದು ಅವರ ಚಿಂತನೆ. ಮುಸ್ಲಿಂಮರನ್ನು ಬೆದರು ಗೊಂಬೆಗಳಂತೆ ಮುಂದಿಟ್ಟುಕೊಂಡು ಧರ್ಮದ ಹೆಸರಿನಲ್ಲಿ ದೇಶ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಇಂಥವರ ಬಗ್ಗೆ ಜಾಗರೂಕರಾಗಿರಬೇಕು.

ವಿಧಾನಸೌಧದ ಮುಂಭಾಗ ವಾಲ್ಮೀಕಿ ಪ್ರತಿಮೆ ನಿರ್ಮಾಣ ಮಾಡಿದವರು ನಾವು. ಕನಕದಾಸರ ಪ್ರತಿಮೆಯನ್ನು ನಾವೇ ನಿರ್ಮಾಣ ಮಾಡಿದ್ದು. ಆದರೆ ಇದರ ಲಾಭ ಪಡೆಯುತ್ತಿರುವುದು ಬೇರೆಯವರು. ಅಸಮಾನತೆ, ಜಾತಿ ವ್ಯವಸ್ಥೆ ನಿರ್ಮಾಣ ಮಾಡಿದವರ ಜೊತೆ ನಾವು ಹೋಗಬೇಕೇ? ಬೇಡವೇ? ಎಂದು ಜನ ಯೋಚನೆ ಮಾಡಬೇಕು. ಬುದ್ಧ, ಬಸವ, ಅಂಬೇಡ್ಕರರ ಕೊಡುಗೆಗಳನ್ನು ಜನ ಅರ್ಥ ಮಾಡಿಕೊಳ್ಳಬೇಕು.

ನಾವು ದೇಶಭಕ್ತರು ಎಂದು ಆರ್‌,ಎಸ್‌,ಎಸ್‌ ನವರು ಬಹಳ ನಾಜೂಕಾಗಿ ಮಾತನಾಡುತ್ತಾರೆ, 1925ರಲ್ಲಿ ಆರ್‌,ಎಸ್‌,ಎಸ್‌ ಹುಟ್ಟಿದರೂ ದೇಶದ ಸ್ವಾತಂತ್ರ್ಯಕ್ಕಾಗಿ ಅವರಲ್ಲಿ ಎಷ್ಟು ಜನ ಪ್ರಾಣಾರ್ಪಣೆ ಮಾಡಿದ್ದಾರೆ? ಯಾರೊಬ್ಬರೂ ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿಲ್ಲ. ಗಾಂಧಿಜಿ, ನೆಹರು, ಅಂಬೇಡ್ಕರ್‌, ಮೌಲಾನಾ ಆಜಾದ್‌ ಮುಂತಾದವರು ನಿಜವಾದ ದೇಶಭಕ್ತರು. ಸಂಗೊಳ್ಳಿ ರಾಯಣ್ಣ ದೇಶಭಕ್ತ, ಈ ಆರ್‌,ಎಸ್‌,ಎಸ್‌ ನವರು ದೇಶಭಕ್ತರಲ್ಲ.

ಕನಕದಾಸರು ಕುಲ ಕುಲ ಕುಲವೆಂದು ಹೊಡೆದಾಡದಿರಿ, ಕುಲದ ನೆಲೆಯನೇನಾದರೂ ಬಲ್ಲಿರಾ? ಬಲ್ಲಿರಾ? ಎಂದು ಹೇಳಿದ್ದರು. ಒಬ್ಬ ಕನಕದಾಸರು ಸಾಮಾಜಿಕ ಅಸಮಾನತೆಯ ವಿರುದ್ಧ ಹೋರಾಟ ಮಾಡಿದಂತೆ ನಿಮ್ಮಲ್ಲಿ ಪ್ರತಿಯೊಬ್ಬರು ಧ್ವನಿ ಎತ್ತುವ ಕೆಲಸ ಮಾಡಬೇಕು, ಈ ಕಾರಣಕ್ಕಾಗಿಯೇ ನಾವಿಂದು ಕನಕದಾಸ ಜಯಂತಿ ಆಚರಣೆ ಮಾಡುತ್ತಿರುವುದು. ಕನಕದಾಸರ ಆಶಯಗಳಂತೆ ಬದುಕುವುದು ನಾವು ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂಬುದನ್ನು ಮರೆಯಬಾರದು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬೈಕ್‌ನಲ್ಲಿ ಶಾಸಕ ಯತೀಂದ್ರ ಸಿದ್ದರಾಮಯ್ಯ ರೌಂಡ್ಸ್‌

Next Post

ಬಿಜೆಪಿ ಶಾಲು ಹಾಕೊಂಡ್ರೆ ಎಲ್ಲವೂ ಪರಿಹಾರ ಆಗುತ್ತದೆ : ಪ್ರಿಯಾಂಕ ಖರ್ಗೆ ಟೀಕೆ

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಬಿಜೆಪಿ ಶಾಲು ಹಾಕೊಂಡ್ರೆ ಎಲ್ಲವೂ ಪರಿಹಾರ ಆಗುತ್ತದೆ : ಪ್ರಿಯಾಂಕ ಖರ್ಗೆ ಟೀಕೆ

ಬಿಜೆಪಿ ಶಾಲು ಹಾಕೊಂಡ್ರೆ ಎಲ್ಲವೂ ಪರಿಹಾರ ಆಗುತ್ತದೆ : ಪ್ರಿಯಾಂಕ ಖರ್ಗೆ ಟೀಕೆ

Please login to join discussion

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada