• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

‘ಬಾಂಡ್ ರವಿ’ ಟ್ರೇಲರ್ ರಿಲೀಸ್-ಡಿ.9ಕ್ಕೆ ಚಿತ್ರಮಂದಿರಕ್ಕೆ ಮಾಸ್ ಆಗಿ ಎಂಟ್ರಿ ಕೊಡಲಿದ್ದಾನೆ ‘ಬಾಂಡ್ ರವಿ’

Any Mind by Any Mind
December 3, 2022
in ಸಿನಿಮಾ
0
‘ಬಾಂಡ್ ರವಿ’ ಟ್ರೇಲರ್ ರಿಲೀಸ್-ಡಿ.9ಕ್ಕೆ ಚಿತ್ರಮಂದಿರಕ್ಕೆ ಮಾಸ್ ಆಗಿ ಎಂಟ್ರಿ ಕೊಡಲಿದ್ದಾನೆ ‘ಬಾಂಡ್ ರವಿ’
Share on WhatsAppShare on FacebookShare on Telegram

ADVERTISEMENT

‘ರತ್ನನ್ ಪ್ರಪಂಚ’ ಖ್ಯಾತಿಯ ಪ್ರಮೋದ್ ನಾಯಕ ನಟನಾಗಿ ನಟಿಸಿರುವ ‘ಬಾಂಡ್ ರವಿ’ ಸಿನಿಮಾ ಡಿಸೆಂಬರ್ 9ಕ್ಕೆ ಬಿಡುಗಡೆಯಾಗುತ್ತಿದೆ. ಪ್ರಜ್ವಲ್ ಎಸ್.ಪಿ ನಿರ್ದೇಶನದ ಚೊಚ್ಚಲ ಸಿನಿಮಾ ಇದಾಗಿದೆ. ಮಾಸ್ ಆಕ್ಷನ್ ಲವ್ ಸ್ಟೋರಿ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಟ್ರೇಲರ್ ಬಿಡುಗಡೆಯ ಜೊತೆಗೆ ಸಿನಿಮಾ ಬಗ್ಗೆ ಚಿತ್ರತಂಡ ಒಂದಷ್ಟು ಮಾಹಿತಿ ಹಂಚಿಕೊಂಡಿದೆ.

ಬಾಂಡ್ ರವಿ ಚಿತ್ರದ ನಾಯಕ-ನಾಯಕಿ

ನಮ್ಮ ಬಾಂಡ್ ರವಿ ದೊಡ್ಡ ಬ್ರ್ಯಾಂಡ್ ಆಗಿ ಎಲ್ಲರ ಮನಸ್ಸಲ್ಲೂ ಹತ್ತಾರು ವರ್ಷ ಉಳಿದುಕೊಳ್ಳುತ್ತಾನೆ. ಇಷ್ಟು ಕಾನ್ಫಿಡೆಂಟ್ ಆಗಿ ಹೇಳ್ತಿದ್ದೀನಿ ಅಂದ್ರೆ ಸಿನಿಮಾದಲ್ಲೇನೋ ವಿಷಯ ಇದೆ ಎಂದರ್ಥ. ರತ್ನನ್ ಪ್ರಪಂಚ ಆದ ಮೇಲೆ ಒಂದು ಒಳ್ಳೆ ಕಥೆ ಹುಡುಕುತ್ತಿದ್ದೆ. ಸುಮ್ನೆ ಮಾಸ್ ಸಿನಿಮಾ ಮಾಡೋಕಾಗಲ್ಲ, ಮಾಸ್ ಡೈಲಾಗ್ ಹೇಳೋಕಾಗಲ್ಲ ಒಳ್ಳೆ ಕಥೆ ಇರಬೇಕು ಆ ರೀತಿ ಹುಡುಕಾಟದಲ್ಲಿದ್ದಾಗ ಸಿಕ್ಕ ಕಥೆ ಬಾಂಡ್ ರವಿ. ಕಥೆ ಕೇಳಿದಾಗಿಂದ ಬಾಂಡ್ ರವಿ ಪಾತ್ರ ನನ್ನನ್ನು ಕಾಡಿತ್ತು. ಅಷ್ಟು ಇಷ್ಟವಾಗಿತ್ತು ಕಥೆ. ಈ ಸಿನಿಮಾ ನನ್ನ ಲೈಫ್ ಟೈಂ ಮೆಮೋರಿ ಆಗಿ ಉಳಿಯಲಿದೆ. ಒಳ್ಳೆ ಕಂಟೆಂಟ್, ಒಳ್ಳೆ ಪಾತ್ರ ಎರಡೂ ನನಗೆ ಈ ಸಿನಿಮಾ ಮೂಲಕ ಸಿಕ್ಕಿದೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ ಎಂದು ಪ್ರಮೋದ್ ಸಿನಿಮಾ ಬಗ್ಗೆ ಸಂತಸ ಹಂಚಿಕೊಂಡ್ರು.

ನಾಯಕಿ ಕಾಜಲ್ ಕುಂದರ್ ಮಾತನಾಡಿ ಮಾರ್ಚ್ ನಲ್ಲಿ ನಿರ್ದೇಶಕರಾದ ಪ್ರಜ್ವಲ್ ಸರ್ ಭೇಟಿ ಮಾಡಿದೆ. ಅವರು ಸ್ಟೋರಿ ಹೇಳುವಾಗ ಎಷ್ಟು ಎಕ್ಸೈಟ್ ಮೆಂಟ್ ಇತ್ತೋ ಈಗಲೂ ಅಷ್ಟೇ ಎಕ್ಸೈಟ್ ಮೆಂಟ್ ಇದೆ. ಈ ಸಿನಿಮಾದಲ್ಲಿ ಮಾಸ್, ಕ್ಲಾಸ್ ಎಲ್ಲವೂ ಇದೆ. ಚಿತ್ರಮಂದಿರದ ಒಳಗೆ ಹೋದ್ರೆ ಒಂದು ಸೆಕೆಂಡ್ ಕೂಡ ಬೋರ್ ಆಗೋದಿಲ್ಲ. ಅಷ್ಟು ಚೆನ್ನಾಗಿ ಸಿನಿಮಾ ಚಿತ್ರಕಥೆ ಹೆಣೆದಿದ್ದಾರೆ. ಟೀಸರ್, ಹಾಡುಗಳಿಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಡಿಸೆಂಬರ್ 9ಕ್ಕೆ ಸಿನಿಮಾ ಬಿಡುಗಡೆಯಾಗುತ್ತಿದೆ ಎಲ್ಲರೂ ಸಿನಿಮಾ ನೋಡಿ ಆಶೀರ್ವಾದಿಸಿ ಎಂದ್ರು.

ನಿರ್ಮಾಪಕರಾದ ನರಸಿಂಹಮೂರ್ತಿ.ವಿ ಮಾತನಾಡಿ ಚಿತ್ರದಲ್ಲಿ ತುಂಬಾ ವಿಶ್ಯುವಲ್ ವೇರಿಯೇಷನ್ ಇದೆ. ಓವರ್ ಆಲ್ ಸಿನಿಮಾ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಪ್ರಮೋದ್ ಅದ್ಭುತ ನಟ ಖಂಡಿತ ಯಶ್ ರೀತಿಯಲ್ಲೇ ದೊಡ್ಡ ಮಟ್ಟದಲ್ಲಿ ಬೆಳೆಯುತ್ತಾರೆ. ನಿರ್ದೇಶಕರ ಮೊದಲ ಸಿನಿಮಾವಿದು ಅವರಿಗೂ ಈ ಸಿನಿಮಾ ಸಕ್ಸಸ್ ತಂದು ಕೊಡಲಿ ಎಂದು ತಿಳಿಸಿದ್ರು.

ನಿರ್ದೇಶಕ ಪ್ರಜ್ವಲ್ ಎಸ್.ಪಿ ಮಾತನಾಡಿ ‘ಬಾಂಡ್ ರವಿ’ ಕಥೆ ಇಂದು ನನ್ನನ್ನು ಪ್ರಜ್ವಲ್ ಆಗಿ ಮಾಡಿದೆ. ಎಲ್ಲರೂ ನನಗಿಂತ ನಂಬಿಕೆ ಇಟ್ಟಿದ್ದೇ ಕಥೆ ಮೇಲೆ. ಅಷ್ಟು ಡಿಫ್ರೆಂಟ್ ಆಗಿದೆ ಈ ಚಿತ್ರದ ಕಥೆ. ಪ್ರಮೋದ್ ಸರ್ ಮೊದಲು ಕಥೆ ಕೇಳಿ ತುಂಬಾ ಇಷ್ಟ ಪಟ್ಟಿದ್ರು. ಒಂದೊಳ್ಳೆ ಪ್ರಯತ್ನ ಮಾಡಿದ್ದೇವೆ. ತುಂಬಾ ಡಿಫ್ರೆಂಟ್ ಆಗಿ ಸಿನಿಮಾ ಮಾಡಿದ್ದೇವೆ. ನನ್ನ ಕನಸಿಗೆ ಇಡೀ ತಂಡ ಸಪೋರ್ಟಿವ್ ಆಗಿ ನಿಂತ್ಕೊಂಡ್ರು. ಖಂಡಿತಾ ನಾವೆಲ್ಲರೂ ಸಕ್ಸಸ್ ಮೀಟ್ ನಲ್ಲಿ ಸಿಕ್ತೀವಿ ಅನ್ನೋ ನಂಬಿಕೆ ಇದೆ ಎಂದು ತಿಳಿಸಿದ್ರು.

ನರಸಿಂಹಮೂರ್ತಿ.ವಿ ಲೈಫ್ ಲೈನ್ ಫಿಲಂ ಬ್ಯಾನರ್ ನಡಿ ಸಿನಿಮಾಗೆ ಬಂಡವಾಳ ಹೂಡಿದ್ದು, ಮಲ್ಲಿಕಾರ್ಜುನ್ ಕಾಶಿ ಹಾಗೂ ಝೇವಿಯರ್ ಫರ್ನಾಂಡಿಸ್ ಸಹ ನಿರ್ಮಾಣವಿದೆ. ರವಿಕಾಳೆ, ಧರ್ಮ, ವಿಜಯ್ ಚೆಂಡೂರ್, ಶೋಭರಾಜ್ ಚಿತ್ರದ ತಾರಾ ಬಳಗದಲ್ಲಿದ್ದಾರೆ. ಕೆ.ಎಸ್. ಚಂದ್ರಶೇಖರ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಸುನೀಲ್ ಮತ್ತು ದೇವ್ ಎನ್, ರಾಜ್ ಸಂಭಾಷಣೆ, ಮನೋಮೂರ್ತಿ ಸಂಗೀತ ಚಿತ್ರಕ್ಕಿದೆ.

Tags: karnataka news filmಬಾಂಡ್ ರವಿಲೈಫ್ ಲೈನ್ ಫಿಲಂ ಬ್ಯಾನರ್ಸ್ಯಾಂಡಲ್ ವುಡ್
Previous Post

ಸರ್ಕಾರ ನಡೆಸುವವರಿಗೆ ಭಯ, ಭಕ್ತಿ ಇರಬೇಕು : ಮಾಜಿ ಸಿಎಂ ಹೆಚ್‌.ಡಿ.ಕೆ

Next Post

ಗಣಿ-ಧಣಿ ಜರ್ನಾಧನ ರೆಡ್ಡಿ ಮೊಮ್ಮಗಳ ನಾಮಕರಣ; ಗಣ್ಯರು ಭಾಗಿ

Related Posts

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ
ಸಿನಿಮಾ

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

by ಪ್ರತಿಧ್ವನಿ
April 24, 2026
0

ಬೆಂಗಳೂರು: ಕನ್ನಡದ ಹಿರಿಯ ನಟ ಡಾ. ರಾಜ್ ಕುಮಾರ್  ಅವರ ಜಯಂತಿಯನ್ನು ರಾಜ್ಯಾದ್ಯಂತ ಭಕ್ತಿಭಾವದಿಂದ ಆಚರಿಸಲಾಗುತ್ತಿದೆ. ಸಾವಿರಾರು ಅಭಿಮಾನಿಗಳು ಕಂಠೀರವ ಸ್ಟುಡಿಯೋದಲ್ಲಿರುವ ಅವರ ಸಮಾಧಿಗೆ ಭೇಟಿ ನೀಡಿ...

Read moreDetails
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
Next Post
ಗಣಿ-ಧಣಿ ಜರ್ನಾಧನ ರೆಡ್ಡಿ ಮೊಮ್ಮಗಳ ನಾಮಕರಣ; ಗಣ್ಯರು ಭಾಗಿ

ಗಣಿ-ಧಣಿ ಜರ್ನಾಧನ ರೆಡ್ಡಿ ಮೊಮ್ಮಗಳ ನಾಮಕರಣ; ಗಣ್ಯರು ಭಾಗಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada