ಡಿಸೆಂಬರ್ 6ರಂದು ಮಹಾರಾಷ್ಟ್ರದ ಸಚಿವರು ಬೆಳಗಾವಿಗೆ ಭೇಟಿ ನೀಡುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಕಂದಾಯ ಸಚಿವ ಆರ್.ಅಶೋಕ್ ಯಾವುದೇ ಕಾರಣಕ್ಕೂ ಮಹಾರಾಷ್ಟ್ರ ಸಚಿವರನ್ನ ಬರಲು ಬಿಡವುದಿಲ್ಲ ಎಂದು ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಎಂಇಎಸ್ ವರ್ಚಸ್ಸು ಕಡಿಮೆ ಆಗ್ತಿದ್ದಂತೆ ಈ ರೀತಿ ಮಾಡುತ್ತಿದ್ದಾರೆ ಅವರಿಗೆ ಅಸ್ತಿತ್ವ ಇಲ್ಲದಾಗ ಖ್ಯಾತೆ ತಗೀತಾರೆ ಸಿಎಂ ಈಗಾಗಲೇ ಹೇಳಿದ್ದಾರೆ ಮಹಾಜನ್ ವರದಿಯೇ ಅಂತಿಮ ಅಂತ ಸುಪ್ರೀಂ ಕೋರ್ಟ್ ನಲ್ಲಿ ದಾಖಲೆ, ಜನಾಭಿಪ್ರಾಯ ಎಲ್ಲವೂ ನಮ್ಮ ಪರವಾಗಿ ಇದೆ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಈ ರೀತಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ನೆಲ, ಜಲ ವಿಚಾರ ಬಂದಾಗ ನಮ್ಮ ಸರ್ಕಾರ ನಿಲುವು ಸ್ಪಷ್ಟವಾಗಿದೆ ನಾವು ಅದನ್ನ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ ಸುಪ್ರೀಂ ಕೋರ್ಟ್ನಲ್ಲಿ ಕೇಸ್ ಇರುವಾಗ ಈ ರೀತಿ ಮಾಡಬಾರದು ಸಚಿವರನ್ನ ಕಳಿಸಿರೋದಕ್ಕೆ ಪ್ರತಿಯಾಗಿ ನಾವು ಸ್ಟ್ರಾಟರ್ಜಿ ಮಾಡ್ತೀವಿ ಎಂದು ತಿಳಿಸಿದ್ದಾರೆ.

ಸಿಎಂ ಬಳಿ ನಾನು ಕೂಡ ಮಾತಾಡುತ್ತೇನೆ ಕೆಲಸ ಇಲ್ಲದೇ ಇರುವುದರಿಂದ ಅವರು ಮತ್ತೆ ಮತ್ತೆ ಖ್ಯಾತೆ ತೆಗೆಯೋದು ಕಾಮನ್ ಆಗಿದೆ ಬೆಳಗಾವಿ ಜಿಲ್ಲಾಧಿಕಾರಿ ಜೊತೆ ಮಾತಾಡಿದ್ದೀವಿ. ಯಾವುದೇ ರೀತಿಯ ಕಾನೂನು ಸುವ್ಯವಸ್ಥೆ ಹಾಳಾಗದಂತೆ ನೋಡಿಕೊಳ್ಳಲು ಸೂಚಿಸಿರುವುದಾಗಿ ಹೇಳಿದ್ದಾರೆ.
ಬಹಳ ವರ್ಷದಿಂದ ಇದೆ ರೀತಿ ಖ್ಯಾತೆ ತೆಗೆಯುತ್ತಿದ್ದಾರೆ ಇದೆಲ್ಲಾ ಎಲೆಕ್ಷನ್ ಸ್ಟಂಟ್, ಅದಕ್ಕೆ ಯಾರೂ ಬೆಲೆ ಕೊಡಲ್ಲ ನಮ್ಮ ಸರ್ಕಾರ ನೆಲ, ಜಲ ವಿಷಯದಲ್ಲಿ ಯಾರಿಗೂ ಮಣಿಯುವುದಿಲ್ಲ. ಕರ್ನಾಟಕದ ಭಾಗದ ರಕ್ಷಣೆಗೆ ನಾವು ಯಾವತ್ತೂ ಹಿಂದಡಿ ಇಡುವ ಪ್ರಶ್ನೆಯೇ ಇಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಪ್ರತಿಪಾದಿಸಿದ್ದಾರೆ