• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಕಡಲೇಕಾಯಿ ಪರಿಷೆಯಲ್ಲಿ ಭರ್ಜರಿ ಪ್ರಮೋಷನ್‌ ಮಾಡಿದ ಮೇಡ್ ಇನ್ ಬೆಂಗಳೂರು

Any Mind by Any Mind
December 8, 2022
in ಸಿನಿಮಾ
0
ಕಡಲೇಕಾಯಿ ಪರಿಷೆಯಲ್ಲಿ ಭರ್ಜರಿ ಪ್ರಮೋಷನ್‌ ಮಾಡಿದ ಮೇಡ್ ಇನ್ ಬೆಂಗಳೂರು
Share on WhatsAppShare on FacebookShare on Telegram

ಬೆಂಗಳೂರಿನ ಜನಪ್ರಿಯ ಉತ್ಸವ ಮತ್ತು ಜಾತ್ರೆಗಳಲ್ಲಿ ಬಸವನಗುಡಿಯ ಜನಪ್ರಿಯ ಕಡಲೆಕಾಯಿ ಪರಿಷೆಯೂ ಒಂದು. ಮೂರು ದಿನಗಳ ಕಾಲ ನಡೆಯುವ ಈ ಪರಿಷೆಯಲ್ಲಿ ಇದಕ್ಕೂ ಮುನ್ನ ಕೆಲವು ಚಿತ್ರತಂಡಗಳು ತಮ್ಮ ಚಿತ್ರದ ಚಿತ್ರೀಕರಣ ಮಾಡಿದ್ದಾರೆ. ಇದೇ ಮೊದಲು ಬಾರಿಗೆ ‘ಮೇಡ್ ಇನ್ ಬೆಂಗಳೂರು’ ಚಿತ್ರತಂಡವು ಈ ಪರಿಷೆಯಲ್ಲಿ ತಮ್ಮ ಚಿತ್ರದ ಪ್ರಚಾರ ಮಾಡಿದೆ.

ADVERTISEMENT

ಕಳೆದ ತಿಂಗಳ ಅಂತ್ಯದಲ್ಲಿ ನಡೆದ ಈ ಪರಿಷೆಯಲ್ಲಿ ಸೋನು ನಿಗಮ್ ಹಾಡಿರುವ ‘ಒಲವು’ ಎಂಬ ಸುಮಧುರ ಹಾಡನ್ನು ಸಾವಿರಾರು ಜನರ ನಡುವೆ ಬಿಡುಗಡೆ ಮಾಡಲಾಗಿದೆ. ಕಾರ್ತಿಕ ಸೋಮವಾರದಂದು ಬಿಡುಗಡೆಯಾದ ಈ ಹಾಡು ಇದೀಗ ಕೆಲವೇ ದಿನಗಳ ಅಂತರದಲ್ಲಿ ಎರಡು ಮಿಲಿಯನ್ ವೀಕ್ಷಣೆ ಕಂಡಿದೆ.

ಬರೀ ಹಾಡಷ್ಟೇ ಅಲ್ಲ, ಚಿತ್ರತಂಡದವರು ಇದೇ ಸಂದರ್ಭದಲ್ಲಿ ‘ಲವ್ಲೆಟರ್ ಟು ಬೆಂಗಳೂರು’ ಎಂಬ ಹೊಸ ಅಭಿಯಾನ ಶುರು ಮಾಡಿದ್ದು, ಇದರಲ್ಲಿ ಬೆಂಗಳೂರಿನ ಕುರಿತು ಯಾರು ಬೇಕಾದರೂ ಪ್ರೇಮಪತ್ರಗಳನ್ನು ಬರೆಯಬಹುದಾಗಿದೆ. ಮೂರು ದಿನಗಳ ಪರಿಷೆಯಲ್ಲಿ 800ಕ್ಕೂ ಹೆಚ್ಚು ಜನ ಬೆಂಗಳೂರಿನ ಕುರಿತ ತಮ್ಮ ಪ್ರೀತಿಯನ್ನು ಪತ್ರಗಳ ಮೂಲಕ ಹಿಡಿದಿಟ್ಟಿದ್ದಾರೆ. ಚಿತ್ರದಲ್ಲಿ ‘ದೊಡ್ಡ ತಾಯಿ ಬೆಂಗಳೂರು’ ಎಂಬ ಹಾಡಿದ್ದು, ಅದನ್ನು ಸದ್ಯದಲ್ಲೇ ಬಿಡುಗಡೆ ಮಾಡಲಾಗುತ್ತದೆ. ಈ ಸಮಾರಂಭದಲ್ಲಿ ಮುಖ್ಯಅತಿಥಿಗಳಾಗಿ ಭಾಗವಹಿಸುವ ಗಣ್ಯರಿಂದಲೂ ಪ್ರೇಮಪತ್ರಗಳನ್ನು ಬರೆಯಿಸಿ ಬಿಡುಗಡೆ ಮಾಡಲಾಗುತ್ತದೆ.

ಇದೆಲ್ಲದರ ಜತೆಗೆ, ಪರಿಷೆಯಲ್ಲಿ ಚಿತ್ರದ ಲೋಗೋ ಇರುವ 300 ಶರ್ಟ್ಗಳು ಮತ್ತು 200 ಮಗ್ಗಳನ್ನು ಮಾರಾಟ ಮಾಡಲಾಗಿದೆ. ಈ ಕುರಿತು ಮಾತನಾಡುವ ನಿರ್ದೇಶಕ ಪ್ರದೀಪ್ ಶಾಸ್ತ್ರಿ, ‘ಪರಿಷೆಯಲ್ಲಿ ನಾನು, ನಮ್ಮ ಸಂಗೀತ ನಿರ್ದೇಶಕರು. ನಿರ್ಮಾಪಕರು, ಕಲಾವಿದರು ಎಲ್ಲರೂ ರಸ್ತೆಯಲ್ಲಿ ಟ್ಯಾಬ್ಲೋ ಇಟ್ಟುಕೊಂಡು ನಮ್ಮ ಸಿನಿಮಾದ ಲೋಗೋ ಇರುವ ಶರ್ಟ್ ಮತ್ತು ಮಗ್ಗಳನ್ನು ಮಾರಾಟ ಮಾಡಿದ್ದೇವೆ.

ಈ ಮೂಲಕ ಜನಸಾಮಾನ್ಯರ ಹತ್ತಿರ ಹೋಗಿ ಚಿತ್ರದ ಪ್ರಚಾರ ಮಾಡುತ್ತಿದ್ದೇವೆ. ಸಿನಿಮಾ ನೋಡಿ ಪ್ರೋತ್ಸಾಹಿಸಿ ಎಂದು ಅಪೀಲ್ ಮಾಡಿದ್ದೇವೆ. ಸಾಕಷ್ಟು ಜನರ ಎದುರು ಚಿತ್ರವನ್ನು ಪ್ರಚಾರ ಮಾಡಿದ್ದೇವೆ. ಕಡಲೆಕಾಯಿ ಪರಿಷೆಯಲ್ಲಿ ಇದುವರೆಗೂ ಯಾರೂ ಹಾಡು ಬಿಡುಗಡೆ ಮಾಡಿ, ಚಿತ್ರದ ಪ್ರಚಾರ ಮಾಡಿದ ಉದಾಹರಣೆ ಇರಲಿಲ್ಲ. ನಾವು ಮೊದಲ ಬಾರಿಗೆ ಬಿಡುಗಡೆ ಮಾಡಿದ್ದೇವೆ’ ಎನ್ನುತ್ತಾರೆ.

ರಜನಿ ಥರ್ಸ್ಡೇ ಸ್ಟೋರೀಸ್ ಲಾಂಛನದಲ್ಲಿ ಬಾಲಕೃಷ್ಣ ಬಿ.ಎಸ್ ನಿರ್ಮಿಸಿರುವ ‘ಮೇಡ್ ಇನ್ ಬೆಂಗಳೂರು’ ಚಿತ್ರವನ್ನು ಪ್ರದೀಪ್ ಶಾಸ್ತ್ರಿ ಬರೆದು ನಿರ್ದೇಶಿಸಿದ್ದಾರೆ. ಅನಂತ್ ನಾಗ್, ಸಾಯಿಕುಮಾರ್, ಪ್ರಕಾಶ್ ಬೆಳವಾಡಿ, ಮಧುಸೂದನ್ ಗೋವಿಂದ್, ಪುನೀತ್ ಮಂಜುನಾಥ್, ವಂಶಿಧರ್, ಹಿಮಾನ್ಶಿ ವರ್ಮ, ಸುಧಾ ಬೆಳವಾಡಿ, ಅರ್ಚನಾ ಕೊಟ್ಟಿಗೆ ಮುಂತಾದವರು ಅಭಿನಯಿಸಿರುವ ಈ ಚಿತ್ರಕ್ಕೆ ಅಶ್ವಿನ್ ಪಿ. ಕುಮಾರ್ ಅವರ ಸಂಗೀತ ಮತ್ತು ಬಜರಂಗ್ ಕೊಂಥಂ ಅವರ ಛಾಯಾಗ್ರಹಣವಿದೆ.

‘ಮೇಡ್ ಇನ್ ಬೆಂಗಳೂರು’ ಚಿತ್ರದ ಟ್ರೇಲರ್ ಸೋಮವಾರ ಯೂಟ್ಯೂಬ್ನ ರಜನಿ ಥರ್ಸ್ಡೇ ಸ್ಟೋರೀಸ್ ಚಾನಲ್ನಲ್ಲಿ ಬಿಡುಗಡೆಯಾಗಿದ್ದು, ಚಿತ್ರವು ಡಿ. 30ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

Tags: Covid 19ಕರೋನಾಕೋವಿಡ್-19
Previous Post

ಜನಾರ್ದನ ರೆಡ್ಡಿ ಹೊಸ ಪಕ್ಷದ ವಿಚಾರದಲ್ಲಿ ಬಾಯಿ ಮುಚ್ಚಿಸಿದ ಬಿಜೆಪಿ !

Next Post

ವಿಧಾನಸಭೆ ಚುನಾವಣೆ ಫಲಿತಾಂಶ; ಗುಜರಾತ್‌-ಹಿಮಾಚಲಪ್ರದೇಶದಲ್ಲಿ ಮುನ್ನಡೆ ಕಾಯ್ದುಕೊಂಡ ಬಿಜೆಪಿ

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails
ಸಿನಿ ಪ್ರಿಯರಿಗಾಗಿ ʼಫುಲ್ ಮೀಲ್ಸ್ʼ ರೆಡಿ ಎಂದ ಲಿಖಿತ್ ಶೆಟ್ಟಿ: ಮತ್ತೆ ವಿಭಿನ್ನ ಪಾತ್ರದಲ್ಲಿ ಖುಷಿ ರವಿ

ಸಿನಿ ಪ್ರಿಯರಿಗಾಗಿ ʼಫುಲ್ ಮೀಲ್ಸ್ʼ ರೆಡಿ ಎಂದ ಲಿಖಿತ್ ಶೆಟ್ಟಿ: ಮತ್ತೆ ವಿಭಿನ್ನ ಪಾತ್ರದಲ್ಲಿ ಖುಷಿ ರವಿ

November 3, 2025
ದರ್ಶನ್‌ ಕೇಸ್‌ :‌ ವಿಚಾರಣೆ ಮುಂದೂಡಿದ ನ್ಯಾಯಾಲಯ

ದರ್ಶನ್‌ ಕೇಸ್‌ :‌ ವಿಚಾರಣೆ ಮುಂದೂಡಿದ ನ್ಯಾಯಾಲಯ

November 3, 2025
ಕಿಚ್ಚ ಸುದೀಪ್‌ ಫ್ಯಾನ್ಸ್‌ಗೆ ʼಮಾರ್ಕ್ʼ ವೀಕೆಂಡ್‌ ಕಿಕ್‌..!

ಕಿಚ್ಚ ಸುದೀಪ್‌ ಫ್ಯಾನ್ಸ್‌ಗೆ ʼಮಾರ್ಕ್ʼ ವೀಕೆಂಡ್‌ ಕಿಕ್‌..!

November 3, 2025
Darshan Case: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ ಗ್ಯಾಂಗ್‌ಗೆ ಇಂದು ಬಿಗ್‌ ಡೇ..

Darshan Case: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ ಗ್ಯಾಂಗ್‌ಗೆ ಇಂದು ಬಿಗ್‌ ಡೇ..

November 3, 2025
Next Post
ವಿಧಾನಸಭೆ ಚುನಾವಣೆ ಫಲಿತಾಂಶ; ಗುಜರಾತ್‌-ಹಿಮಾಚಲಪ್ರದೇಶದಲ್ಲಿ ಮುನ್ನಡೆ ಕಾಯ್ದುಕೊಂಡ ಬಿಜೆಪಿ

ವಿಧಾನಸಭೆ ಚುನಾವಣೆ ಫಲಿತಾಂಶ; ಗುಜರಾತ್‌-ಹಿಮಾಚಲಪ್ರದೇಶದಲ್ಲಿ ಮುನ್ನಡೆ ಕಾಯ್ದುಕೊಂಡ ಬಿಜೆಪಿ

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada