ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಗಳು ಗುಜರಾತ್ ಫಲಿತಾಂಶಕ್ಕೆ ಸಾಕ್ಷಿಯಾಗಿದೆ. ಗುಜರಾತ್ ಫಲಿತಾಂಶದಿಂದ ನಮಗೆ ಹಾಗೂ ನಮ್ಮ ಕಾರ್ಯಕರ್ತರಿಗೆ ಹೆಚ್ಚಿನ ಶಕ್ತಿಸಿಕ್ಕಂತಾಗಿದೆ
ಗುಜರಾತ್ ಫಲಿತಾಂಶದಿಂದ ನಮಗೆ ಹಾಗೂ ನಮ್ಮ ಕಾರ್ಯಕರ್ತರಿಗೆ ಹೆಚ್ಚಿನ ಶಕ್ತಿ ಸಿಕ್ಕಿದ್ದು, ಕರ್ನಾಟಕದಲ್ಲೂ ಸಹ 140ಕ್ಕೂ ಹೆಚ್ಚು ಸೀಟ್ಗಳನ್ನು ಗೆಲ್ಲುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಗುಜರಾತ್ ಫಲಿತಾಂಶದ ಕುರಿತು ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಗಳು ಗುಜರಾತ್ ಫಲಿತಾಂಶಕ್ಕೆ ಸಾಕ್ಷಿಯಾಗಿದೆ. ಗುಜರಾತ್ ಫಲಿತಾಂಶದಿಂದ ನಮಗೆ ಹಾಗೂ ನಮ್ಮ ಕಾರ್ಯಕರ್ತರಿಗೆ ಹೆಚ್ಚಿನ ಶಕ್ತಿಸಿಕ್ಕಂತಾಗಿದೆ. ಗುಜರಾತ್ನಲ್ಲಿ ದೊರೆತ ದಾಖಲೆ ಗೆಲುವಿನಿಂದ ಮೋದಿ ಅವರ ಜನಪ್ರಿಯತೆ ಎದ್ದು ಕಾಣುತ್ತಿದೆ ಎಂದ ಅವರು, ಹಿಮಾಚಲ ಪ್ರದೇಶದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸರ್ಕಾರ ಬದಲಾಗುತ್ತಿದ್ದು, ಅಧಿಕೃತ ಫಲಿತಾಂಶ ಬಂದಿಲ್ಲ ಎಂದರು.

ಇದೇ ವೇಳೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಹಾಲಿ ಶಾಸಕರಿಗೆ ಟಿಕೆಟ್ ಕೈ ತಪ್ಪುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಈಗಲೇ ಟಿಕೆಟ್ ವಿಚಾರ ಮಾತನಾಡುವುದು ಬಹಳ ಬೇಗ ಎನಿಸುತ್ತದೆ. ಯಾರಿಗೆ ಟಿಕೆಟ್ ಕೊಡಬೇಕ, ಕೊಡಬಾರದು ಎಂಬುದನ್ನ ಅಮೀತ್ ಶಾ ಹಾಗೂ ನರೇಂದ್ರ ಮೋದಿ ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು.
ಯಡಿಯೂರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲ್ಲ ಎಂಬ ವಿಚಾರದ ಬಗ್ಗೆ ಮಾತನಾಡಿದ ಅವರು, ಯಡಿಯೂರಪ್ಪ ಎಲ್ಲಿಯೂ ಹೋಗಿಲ್ಲ, ಇಲ್ಲೆ ಇದ್ದೇನೆ. ಈಗಾಗಲೇ ರಾಜ್ಯದ ಪ್ರವಾಸ ಮಾಡುತ್ತಿದ್ದು, ಶಕ್ತಿಮೀರಿ ಪಕ್ಷ ಸಂಘಟನೆ ಮಾಡುತ್ತಿದ್ದೇವೆ. ಹಗಲು ರಾತ್ರಿ ಎನ್ನದೆ ರಾಜ್ಯದ ಪ್ರವಾಸ ಮಾಡುತ್ತಿದ್ದೇವೆ. ಆ ಮೂಲಕ ಮತ್ತೆ ಬಿಜೆಪಿ ಅಧಿಕಾರಕ್ಕೆ ತರುವ ಪ್ರಯತ್ನ ನಡೆಸಿದ್ದೇವೆ. ಕರ್ನಾಟಕದಲ್ಲಿ ನಮ್ಮದೇ ಆದಂತ ಶಕ್ತಿಯಿದೆ, ಕಾರ್ಯಕರ್ತರು ಇದ್ದಾರೆ, ಅವರನ್ನು ಬೆಳಸಿದ್ದೇವೆ. ನಿಶ್ಚಿತವಾಗಿ 140 ಸ್ಥಾನ ಗೆಲ್ಲುತ್ತೇವೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.