• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕರ್ನಾಟಕದ ಅಳಿಯನಿಗೆ ಸೋಲು, ರಾಜ್ಯದಲ್ಲಿ ಬಿಜೆಪಿ – ಕಾಂಗ್ರೆಸ್​​ಗೆ ಢವಢವ..!

Any Mind by Any Mind
December 9, 2022
in ಕರ್ನಾಟಕ, ದೇಶ, ರಾಜಕೀಯ
0
ಕರ್ನಾಟಕದ ಅಳಿಯನಿಗೆ ಸೋಲು, ರಾಜ್ಯದಲ್ಲಿ ಬಿಜೆಪಿ – ಕಾಂಗ್ರೆಸ್​​ಗೆ ಢವಢವ..!
Share on WhatsAppShare on FacebookShare on Telegram

ಹಿಮಾಚಲ ಪ್ರದೇಶವನ್ನು ದೇವರ ನಾಡು ಎಂದು ಕರೆಯಲಾಹಗುತ್ತದೆ. ಕಳೆದ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದಿತ್ತು. ಜೈರಾಮ್​ ಠಾಕೂರ್​ ಮುಖ್ಯಮಂತ್ರಿ ಆಗಿ ಅಧಿಕಾರ ನಡೆಸಿದ್ದರು. 68 ಕ್ಷೇತ್ರಗಳ ಪೈಕಿ ಬಿಜೆಪಿ ಗೆಲ್ಲಲು ಸಾಧ್ಯವಾಗಿದ್ದು, ಕೇವಲ 25 ಸ್ಥಾನಗಳಲ್ಲಿ ಮಾತ್ರ. ಪಕ್ಷೇತರ ಅಭ್ಯರ್ಥಿಗಳು 3 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ ಇನ್ನುಳಿದ 40 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಗೆದ್ದು ಅಧಿಕಾರದ ಗದ್ದುಗೆ ಹಿಡಿಯಲು ಮುಂದಾಗಿದೆ. ಆದರೆ ಆ 40 ಶಾಸಕರನ್ನು ಬಿಜೆಪಿ ಖರೀದಿ ಮಾಡುವ ಭಯ ಶುರುವಾಗಿದ್ದು, ಎಲ್ಲಾ ಶಾಸಕರನ್ನು ರೆಸಾರ್ಟ್​ಗೆ ಶಿಫ್ಟ್​ ಮಾಡುವ ಪರಿಸ್ಥಿತಿ ಎದುರಾಗಿದೆ. ಇದು ನಿಜವಾಗಲೂ ಪ್ರಜಾಪ್ರಭುತ್ವವನ್ನು ಅಣಕಿಸುವಂತಾಗಿದೆ ಎನ್ನುವುದು ದೇಶವೇ ತಲೆತಗ್ಗಿಸುವ ವಿಚಾರ. ಕಾಂಗ್ರೆಸ್​ ಬಹುಮತದ ಗೆರೆ ದಾಟುತ್ತಿದ್ದ ಹಾಗೆ ಹಿಮಾಚಲ ಪ್ರದೇಶಕ್ಕೆ ಹಿರಿಯ ನಾಯಕರನ್ನು ಕಳುಹಿಸಿದ ಕಾಂಗ್ರೆಸ್​​ ಹೈಕಮಾಂಡ್​ ಎಲ್ಲಾ ಶಾಸಕರನ್ನು ರಾಜಸ್ಥಾನಕ್ಕೆ ಶಿಫ್ಟ್​ ಮಾಡುವುದಕ್ಕೆ ಸೂಚನೆ ನೀಡಿದೆ. ಚಂಡಿಗಡ ಮೂಲಕ ಎಲ್ಲಾ ಕಾಂಗ್ರೆಸ್​ ಶಾಸಕರು ರಾಜಸ್ಥಾನ ತಲುಪಿದ್ದಾರೆ. ಅರ್ಧಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೂ ಅಧಿಕಾರ ಮಾಡಲು ಬಿಡುವುದಿಲ್ಲ ಅನ್ನೋ ಭಯ ಇಡೀ ದೇಶದಲ್ಲೇ ಸೃಷ್ಟಿಯಾಗಿದೆ.

ADVERTISEMENT

ಹಿಮಾಚಲ ಪ್ರದೇಶದಲ್ಲಿ ಸೋತಿದ್ದು ಕರ್ನಾಟಕದ ಅಳಿಯ..!

ಹಿಮಾಚಲ ಪ್ರದೇಶದ ಸಿಎಂ ಜೈರಾಮ್ ಠಾಕೂರ್ ಬಿಜೆಪಿ ಹೀನಾಯವಾಗಿ ಸೋಲುಂಡ ಜನತೆ ತೀರ್ಮಾನ ಒಪ್ಪಿಕೊಳ್ತೇವೆ. ನನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದಿದ್ದಾರೆ. ಜೈರಾಮ್​ ಠಾಕೂರ್​ ​ ಕರ್ನಾಟಕದ ಅಳಿಯ ಅನ್ನೋದು ವಿಶೇಷ. ಶಿವಮೊಗ್ಗ ಮೂಲದ ಸಾಧನಾ ರಾವ್​ ಎಂಬುವರನ್ನು ವಿವಾಹ ಆಗಿದ್ದಾರೆ. ಸಾಧನಾ ರಾವ್​ ಅವರ ತಂದೆ ಆರ್​ಎಸ್​ಎಸ್​ನಲ್ಲಿದ್ದು, ಬಾಲ್ಯದಲ್ಲಿಯೇ ಜೈಪುರಕ್ಕೆ ಶಿಫ್ಟ್​ ಆಗಿದ್ದರು. ಎಂಬಿಬಿಎಸ್​ ಓದಿರುವ ಸಾಧನಾ ರಾವ್​, ಪೂರ್ಣ ಪ್ರಮಾಣದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್​ ಕಾರ್ಯಕರ್ತರಾಗಿ ಗುರ್ತಿಸಿಕೊಂಡಿದ್ದರು. ಜಮ್ಮು ಕಾಶ್ಮೀರದಲ್ಲಿ ಎಬಿವಿಪಿ ಕಾರ್ಯಕರ್ತೆಯಾಗಿ ಜೈರಾಮ್​ ಠಾಕೂರ್​ ಅವರನ್ನು ಭೇಟಿಯಾದ ಬಳಿಕ ಸ್ನೇಹ ಪ್ರೇಮಕ್ಕೆ ತಿರುವು ಪಡೆದು ಕುಟುಂಬದ ಅನುಮತಿ ಪಡೆದು ವಿವಾಹ ಆಗಿದ್ದರು. ಇದೀಗ ಇಬ್ಬರು ಹೆಣ್ಣು ಮಕ್ಕಳಿದ್ದು, ಚಂದ್ರಿಕಾ ಠಾಕೂರ್​, ಪ್ರಿಯಾಂಕಾ ಠಾಕೂರ್​. ಇಬ್ಬರೂ ಎಂಬಿಬಿಎಸ್​ ಮಾಡುತ್ತಿದ್ದಾರೆ. ಹಿರಿಯ ಪುತ್ರಿ ಡಾ ರಾಜೇಂದ್ರ ಪ್ರಸಾದ್​ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಕಿರಿಯ ಪುತ್ರಿ ಲಾಲ್​ ಬಹದ್ದೂರ್​ ಶಾಸ್ತ್ರಿ ವೈದ್ಯಕೀಯ ಕಾಲೇಜಿನಲ್ಲಿ ಓದುತ್ತಿದ್ದಾರೆ.

ಹಿಮಾಚಲ ಪ್ರದೇಶದ ಸ್ಥಿತಿಯಲ್ಲೇ ಇದೆ ರಾಜ್ಯ ಬಿಜೆಪಿ..!

ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಸೋಲುವುದಕ್ಕೆ ಬಹುಮುಖ್ಯ ಕಾರಣ ಅಂದರೆ ಬಿಜೆಪಿಯಲ್ಲೇ ಸೃಷ್ಟಿಯಾಗಿದ್ದ ಮೂರ್ನಾಲ್ಕು ಪಂಗಡಗಳು ಎನ್ನಲಾಗ್ತಿದೆ. ಇದೇ ಕಾರಣದಿಂದ ಬಿಜೆಪಿ ಹಿಮಾಚಲ ಪ್ರದೇಶದಲ್ಲಿ ಗೆಲ್ಲುವುದಕ್ಕೆ ಸಾಧ್ಯ ಆಗಲಿಲ್ಲ ಎನ್ನುವುದು ಬಿಜೆಪಿ ಮೂಲಗಳ ಮಾಹಿತಿ. ಸದ್ಯದ ಪರಿಸ್ಥಿತಿಯನ್ನು ನೋಡಿದಾಗ ರಾಜ್ಯದಲ್ಲೂ ಇದೇ ಪರಿಸ್ಥಿತಿ ಇದೆ. ರಾಜ್ಯದಲ್ಲಿ ನಾಲ್ಕಾರು ಗುಂಪುಗಳು ಇದ್ದರೂ ಮೇಲ್ನೋಟಕ್ಕೆ ಎಲ್ಲವೂ ಸರಿಯಿದೆ ಎನ್ನುವ ಹಾಗೆ ಬಿಂಬಿಸಿಕೊಂಡು ಓಡಾಡುತ್ತಿದ್ದಾರೆ. ಒಂದು ವೇಳೆ ಟಿಕೆಟ್​ ಹಂಚಿಕೆ ವೇಳೆ ಏನಾದರೂ ಹೆಚ್ಚು ಕಡಿಮೆ ಆದರೆ ಅಸಮಾಧಾನ ಸ್ಫೋಟ ಆಗುವ ಸಾಧ್ಯತೆ ಇದೆ. ಆ ರೀತಿ ಅಸಮಾಧಾನ ಭುಗಿಲೆದ್ದರೆ ಹಿಮಾಚಲ ಪ್ರದೇಶದಂತೆ ರಾಜ್ಯದಲ್ಲೂ ಹೀನಾಯ ಸೋಲು ಕಾಣಬೇಕಾಗುತ್ತದೆ ಎನ್ನುವ ಭೀತಿ ಸೃಷ್ಟಿಯಾಗಿದೆ. ಯಾರೆಲ್ಲಾ ಗೆಲ್ಲುತ್ತಾರೆ ಅವರಿಗೆ ಟಿಕೆಟ್​ ಕೊಟ್ಟು ಮತ್ತೆ ಅಧಿಕಾರ ಹಿಡಿಯಬೇಕು ಎನ್ನುವ ಹಂಬದಲ್ಲಿ ಇರುವ ರಾಜ್ಯ ಬಿಜೆಪಿಗೆ ಹಿಮಾಚಲದ ಸ್ಥಿತಿ ಪಾಠದಂತಿದೆ. ಕಾಂಗ್ರೆಸ್​ ಸ್ಥಿತಿಯೂ ಬಿಜೆಪಿಗಿಂತಾ ಭಿನ್ನವಾಗಿ ಏನಿಲ್ಲ. ಕಾಂಗ್ರೆಸ್​ನಲ್ಲೂ ಒಳ ಏಟಿನ ಲೆಕ್ಕಾಚಾರಗಳು ನಡೆಯುತ್ತಿವೆ.

ಕ್ಷಣ ಕಾಲ ಮೈಮರೆತರೂ ಕಾಂಗ್ರೆಸ್​ಗೆ ಕಾದಿದೆ ಅಪಾಯ..!

ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್​ ಗೆಲ್ಲುವ ಮೂಲಕ ಮರ್ಯಾದೆ ಕಾಪಾಡಿಕೊಳ್ಳುವ ಕೆಲಸ ಮಾಡಿದೆ. ಆದರೆ ಇದೀಗ ಬಿಜೆಪಿ ಹೈಕಮಾಂಡ್​ ರಾಜ್ಯದ ಕಡೆಗೆ ಕಣ್ಣು ಹೊರಳಿಸಿದ್ದು, ರಾಜ್ಯ ಕಾಂಗ್ರೆಸ್​ ಕಾಂಗ್ರೆಸ್​ ನಾಯಕರು ಕ್ಷಣ ಕಾಲ ಮೈಮರೆತರೂ ಬಿಜೆಪಿ ಅಲೆ ರಾಜ್ಯದಲ್ಲೂ ಶುರುವಾಗುವ ಸಾಧ್ಯತೆ ಇದೆ. ನಾವು ಯಾವುದೇ ತಂತ್ರಗಾರಿಕೆ ಮಾಡದಿದ್ದರೂ ರಾಜ್ಯದಲ್ಲಿ ನಾವೇ ಗೆಲ್ಲೋದು ಎಂದು ಸಿದ್ದರಾಮಯ್ಯ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆದರೆ ಆತ್ಮವಿಶ್ವಾಸ ಕೂಡ ಅತಿಯಾದರೆ ಸೋಲು ಕಟ್ಟಿಟ್ಟ ಬುತ್ತಿ ಎನ್ನಬಹುದು. ಇನ್ನು ಬಿಜೆಪಿ ಒಳ ಪಂಗಡಗಳ ಗಲಾಟೆಗಿಂತಲೂ ಕಾಂಗ್ರೆಸ್​ನಲ್ಲಿ ಸಿದ್ದರಾಮಯ್ಯ ಹಾಗು ಡಿ.ಕೆ ಶಿವಕುಮಾರ್​ ಪಂಗಡಗಳ ನಡುವೆ ಫೈಟಿಂಗ್​ ಶುರುವಾದರೆ ಕಾಂಗ್ರೆಸ್​ ತನ್ನಷ್ಟಕ್ಕೆ ತಾನೇ ಅಧಿಕಾರಕ್ಕೆ ಬರುವುದು ಅಸಾಧ್ಯ. ಆದರೆ ತನ್ನಷ್ಟಕ್ಕೆ ತಾನೇ ಧೂಳಿಪಟ ಆಗುತ್ತದೆ. ಬಿಜೆಪಿ ಹಾಗೂ ಕಾಂಗ್ರಸ್​ ಪಂಗಡಗಳ ಕಿತ್ತಾಟದಲ್ಲಿ ಜೆಡಿಎಸ್​ ಮೇಲುಗೈ ಸಾಧಿಸಿದರೂ ಅಚ್ಚರಿಯೇನಿಲ್ಲ. ಈಗಾಗಲೇ ಪಂಚರತ್ನ ಯಾತ್ರೆಯಲ್ಲಿ ಜನಸಾಗರೇ ಹರಿದು ಬರುತ್ತಿರುವುದು ನೋಡಿದರೆ ರಾಜ್ಯದ ಜನರ ತೀರ್ಮಾನ ಜೆಡಿಎಸ್​ ಕಡೆಗೆ ಹೊರಳುಯತ್ತಿದೆಯಾ..? ಅನ್ನೋ ಶಂಕೆ ಶುರುವಾಗುತ್ತದೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

yash and radhika pandit anniversary : ವೈವಾಹಿಕ ಜೀವನಕ್ಕೆ ಕಾಲಿಟ್ಟು 6 ವರ್ಷ ಕಂಪ್ಲೀಟ್ ಮಾಡಿದ್ದ Mr. and Mrs

Next Post

ಮಂಡ್ಯ; ರಂಗೇರಿದ ಧರ್ಮಯಾತ್ರೆ ಪಾಲಿಟಿಕ್ಸ್‌

Related Posts

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್
Top Story

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

by ಪ್ರತಿಧ್ವನಿ
June 20, 2025
0

ಭಾರತೀಯ ಚಿತ್ರರಂಗವನ್ನು ಕನ್ನಡದತ್ತ ತಿರುಗಿ ನೋಡುವಂತೆ ಮಾಡಿರುವವರ ಪೈಕಿ ನಟ ರಾಕಿಂಗ್‌ ಸ್ಟಾರ್‌ ಯಶ್‌ ಕೂಡ ಒಬ್ಬರು. ಅವರ ತಾಯಿ ಪುಷ್ಪ ಅರುಣ್ ಕುಮಾರ್ ತಮ್ಮದೇ ಪಿಎ...

Read moreDetails
ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

June 20, 2025

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

June 20, 2025
Next Post
ಮಂಡ್ಯ; ರಂಗೇರಿದ ಧರ್ಮಯಾತ್ರೆ ಪಾಲಿಟಿಕ್ಸ್‌

ಮಂಡ್ಯ; ರಂಗೇರಿದ ಧರ್ಮಯಾತ್ರೆ ಪಾಲಿಟಿಕ್ಸ್‌

Please login to join discussion

Recent News

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್
Top Story

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

by ಪ್ರತಿಧ್ವನಿ
June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 
Top Story

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

by Chetan
June 20, 2025
Top Story

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

by ಪ್ರತಿಧ್ವನಿ
June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 
Top Story

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

by Chetan
June 20, 2025
ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 
Top Story

ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 

by Chetan
June 20, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

June 20, 2025
ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

June 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada