ಬೆಂಗಳೂರು:ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಕಾರು ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಡರಾತ್ರಿ ನಡೆದಿದೆ.
ರವಿಕುಮಾರ್ ಎಸ್. ಕಾಳೆ ಮೃತಪಟ್ಟ ದುರ್ದೈವಿ.ನಿನ್ನೆ ಮಧ್ಯ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾಜ್ಯಪಾಲರನ್ನು ಕರೆದೊಯ್ಯಲು ಚಾಲಕ ರವಿಕುಮಾರ್ ಬಂದಿದ್ದರು.
ರಾಜ್ಯಪಾಲರಿಗಾಗಿ ಕಾಯುತ್ತಿದ್ದ ರವಿಕುಮಾರ್ ಅವರಿಗೆ ಎದೆ ನೋವು ಕಾಣಿಸಿಕೊಂಡು ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಆಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನಗಳು ನಡೆಸಲಾಗಿತ್ತು. ಆದರೆ ಈ ವೇಳೆ ಅವರು ಮೃತಪಟ್ಟಿದ್ದರು.ತಪ್ಪಿದ ಅನಾಹುತ;ರಾಜ್ಯಪಾಲರು ನಿಗದಿತ ಸಮಯಕ್ಕಿಂತ ಬೇಗ ಆಗಮಿಸಿ, ರವಿಕುಮಾರ್ ಅವರ ಕಾರು ಏರಿದ್ದರೆ ದೊಡ್ಡ ಅನಾಹುತವಾಗುತ್ತಿತ್ತು.ಘಟನೆಯ ಬಳಿಕ ರಾಜ್ಯಪಾಲರು ಹೆಚ್ಚುವರಿ ವಾಹನ ಬಳಸಿಕೊಂಡು ರಾಜ್ಯಭವನಕ್ಕೆ ತೆರಳಿದ್ದಾರೆ.