ವಿದ್ಯಾರ್ಥಿ ಪಾಸ್ ಹೊಂದಿರುವವರನ್ನು ಸಾರಿಗೆ ಸಿಬ್ಬಂದಿ ಬಸ್ಗೆ ಹತ್ತಿಸುತ್ತಿಲ್ಲ ಮತ್ತು ವಿದ್ಯಾರ್ಥಿಗಳನ್ನು ಖಂಡರೆ ಬಸ್ ನಿಲ್ಲಿಸದೆ ಹೋಗುತ್ತಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳ ಗುಂಪು ಪ್ರತಿಭಟನೆ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕು ಬಸ್ ನಿಲ್ದಾಣದಲ್ಲಿ ನಡೆದಿದೆ.
ಪ್ರತಿನಿತ್ಯ ನೂರಾರು ವಿದ್ಯಾರ್ಥಿಗಳು ಹನೂರಿನಿಂದ ಕೊಳ್ಳೇಗಾಲದ ಕಡೆಗೆ ವ್ಯಾಸಂಗಕ್ಕೆಂದು ತೆರಳುತ್ತಾರೆ ಬೆಳ್ಳಗ್ಗೆ ಹಾಗು ಸಂಜೆ ಎಷ್ಟು ಹೊತ್ತು ಕಾದರೂ ಸಹ ಸಾರಿಗೆ ಸಿಬ್ಬಂದಿ ಬಸ್ ನಿಲ್ಲಿಸದೆ ಹೋಗುತ್ತಾರೆ ಈ ಬಗ್ಗೆ ನಿರ್ವಾಹಕರನ್ನು ಕೇಳಿದರೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಕಿಡಿಕಾರಿದ್ದಾರೆ.
ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಬಸ್ಗಳನ್ನ ಒದಗಿಸಬೇಕು ಮತ್ತು ಪಾಸ್ ಇರುವ ವಿದ್ಯಾರ್ಥಿಗಳಿಗೆ ಅವಕಾಶ ನೀಡಬೇಕು ಎಂದು ಪಟ್ಟು ಹಿಡಿದು ಘೋಷಣೆಗಳನ್ನ ಕೂಗಿ ಸಾರಿಗೆ ಸಿಬ್ಬಂದಿ ವಿರುದ್ದ ತಮ್ಮ ಆಕ್ರೋಶವನ್ನ ಹೊರಹಾಕಿದ್ದರು.

ಇದೇ ವೇಳೆ ವಿದ್ಯಾರ್ಥಿಗಳು ರಾಮಪುರ-ಎಲ್ಲೇಮಾಳ ಮಾರ್ಗವಾಗಿ ಹೆಚ್ಚವರಿ ಬಸ್ಗಳನ್ನು ಬಿಡುವಂತೆ ಆಗ್ರಹಿಸಿದ್ದಾರೆ. ಸಮಯಕ್ಕೆ ಸರಿಯಾಗಿ ಬಸ್ಗಳು ಬರುತ್ತಿಲ್ಲ ಈ ಬಗ್ಗೆ ಅಧಿಕಾರಿಗಳನ್ನ ಪ್ರಶ್ನಿಸಿದ್ದರೆ ರಸ್ತೆ ಸರಿಯಿಲ್ಲದ ಕಾರಣ ಎಂಬ ಕಾರಣವನ್ನ ನೀಡುತ್ತಾರೆ ಎಂದು ಆರೋಪಿಸಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಸಾರಿಗೆ ಸಿಬ್ಬಂದಿ ವಿದ್ಯಾರ್ಥಿಗಳ ಅಳಲನ್ನು ಆಲಿಸಿದರು ಮತ್ತು ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆಯನ್ನ ನೀಡಿ ವಿದ್ಯಾರ್ಥಿಗಳಿಂದ ಮನವಿ ಪತ್ರವನ್ನ ಸ್ವೀಕರಿಸಿದ್ದರು.
ಈ ಕುರಿತು ಮಾತನಾಡಿದ ಸಾರಿಗೆ ವ್ಯವಸ್ಥಾಪಕ ಮುತ್ತುರಾಜ್ ವಿದ್ಯಾರ್ಥಿಗಳ ಸಮಸ್ಯೆ ಆಳಿಸಲಾಗಿದೆ. ಲಿಖಿತ ರೂಪದಲ್ಲಿ ಮನವಿ ಸಲ್ಲಿಸಿದ್ದಾರೆ. ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸಮರ್ಪಕವಾದ ಬಸ್ ವ್ಯವಸ್ಥೆ ಮಾಡಲಾಗುವುದು. ಪಾಸ್ ಹೊಂದಿರುವ ವಿದ್ಯಾರ್ಥಿಗಳಿಗೆ ಅಡಚಣೆ ಆಗದಂತೆ ಕ್ರಮವಹಿಸಲು ಹಿರಿಯರು ಅಧಿಕಾರ ಜೊತೆಗೆ ಚರ್ಚಿಸಿ ಸಮಸ್ಯೆ ಇತ್ಯಾರ್ಥ ಪಡಿಸಲಾಗುವುದು ಎಂದು ತಿಳಿಸಿದ್ದಾರೆ.

ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆಯಿಂದಾಗಿ ಬಸ್ಸುಗಳ ಕೆಲಕಾಲ ಸಾಲುಗಟ್ಟಿನಿಂತವು ಮತ್ತು ತೀವ್ರ ಸಂಚಾರ ದಟ್ಟಣೆ ಉಂಟಾಯಿತ್ತು ಸ್ತಳಕ್ಕಾಗಮಿಸಿದ ಪೊಲೀಸರು ಸಂಚಾರ ನಿಯಂತ್ರಣ ಮಾಡಿದ್ದರು.





