ಚಿಕ್ಕಮಗಳೂರು: ವ್ಯಕ್ತಿಯೋರ್ವ ತನಗೆ ಕಚ್ಚಿದ ಹಾವನ್ನೇ ಹಿಡಿದು ಆಸ್ಪತ್ರೆಗೆ ಬಂದ ಘಟನೆ ನಡೆದಿದೆ.
ಚಿಕ್ಕಮಗಳೂರಿನಲ್ಲಿ ಈ ಘಟನೆ ನಡೆದಿದ್ದು, ಊರಿಗೆ ಹೋಗಲು ರೈಲ್ವೆ ನಿಲ್ದಾಣದ ಬಳಿ ಬಂದ ವ್ಯಕ್ತಿಗೆ ಹಾವು ಕಚ್ಚಿದೆ. ಆದರೆ ಇದರಿಂದ ಆತಂಕಗೊಳ್ಳದ ಕೊಲ್ಕತ್ತಾ ಮೂಲದ ವ್ಯಕ್ತಿ ತನಗೆ ಕಚ್ವಿದ ಕೊಳಕು ಮಂಡಲ ಹಾವನ್ನ ಹಿಡಿದುಕೊಂಡೇ ಆಸ್ಪತ್ರೆಗೆ ಬಂದಿದ್ದಾನೆ.
ಕೊಲ್ಕತ್ತಾ ಮೂಲದ ಆಸೀಫ್ ಎಂಬಾತನೆ ತನಗೆ ಕಚ್ಚಿದ ಹಾವಿನ ಸಮೇತ ಆಸ್ಪತ್ರೆಗೆ ಬಂದ ವ್ಯಕ್ತಿಯಾಗಿದ್ದು, ಆಸೀಫ್ ತರೀಕೆರೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕೆಲಸಕ್ಕೆ ಬಂದಿದ್ದ. ಸದ್ಯ ಈತನಿಗೆ ತರೀಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.