2023ರಲ್ಲಿ ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ರಾಜಕೀಯ ಪಕ್ಷಗಳಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು ಮುಂದಿನ ಸಿಎಂ ಯಾರಾಗಬೇಕೆಂಬ ಚರ್ಚೆಯೂ ಜೋರಾಗಿ ನಡೆಯುತ್ತಿದೆ.
ಇನ್ನು ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕೆಂಬ ಬಸಪ್ರಭು ಸ್ವಾಮೀಜಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಈಶ್ವರಪ್ಪ ಆಗಲೀ ಯಾರು ಬೇಡ ಅಂತಾರೇ ಅವರೇ ತೆಗೆದುಕೊಂಡು ಹೋಗಿ ಸಿಎಂ ಸ್ಥಾನದಲ್ಲಿ ಕೂರಿಸಲಿ ಯಾರೋ ಒಬ್ಬರು ತೀರ್ಮಾನ ಮಾಡುವುದಕ್ಕೆ ಬರಲ್ಲ ರಾಜ್ಯದ ಜನ ಸರ್ಕಾರ ಏನ್ ಕೆಲಸ ಮಾಡಿದೆ. ಸಂಘಟನೆ ಏನಿದೆ ಎಲ್ಲವನ್ನೂ ಗಮನಿಸುತ್ತಾರೆ ಇವರ ನಾಯಕತ್ವ ಇದ್ದಾಗ ಏನು ಅಭಿವೃದ್ಧಿಯಾಗಿದೆ ಎಲ್ಲವನ್ನೂ ನೋಡ್ತಾರೆ ಎಂದು ಸ್ವಾಮೀಜಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
2013ರಲ್ಲಿ ಬಿಜೆಪಿ ಒಡೆದು ಮೂರು ಭಾಗ ಆಗಿರಲಿಲ್ಲ ಅಂದರೆ ಸಿದ್ದರಾಮಯ್ಯ ಈ ಜನ್ಮದಲ್ಲಿ ಸಿಎಂ ಆಗ್ತಾಇರಲಿಲ್ಲ ಪ್ರತಿನಿತ್ಯ ಯಡಿಯೂರಪ್ಪನವರ ಫೋಟೋ ಮನೆಯಲ್ಲಿಟ್ಟು ಪೂಜೆ ಮಾಡಬೇಕು ಎಂದು ಕುಟುಕಿದ್ದಾರೆ.
ಇನ್ನೂ ಬಿಜೆಪಿ ಒಡೆಯುವ ಪ್ರಶ್ನೆ ಇಲ್ಲ ಏಕತೆಯಿಂದ ಇದ್ದೇವೆ ಅಂದಿಗಿಂತ ಇಂದು ಬಿಜೆಪಿ ಸಂಘಟನಾತ್ಮಕವಾಗಿ ಸಾಕಷ್ಟು ಬೆಳೆದಿದೆ ಮೋದಿ ಅವರ ನಾಯಕತ್ವದ ಜೊತೆಗೆ ಅಭಿವೃದ್ಧಿ ಕೆಲಸ, ಸಂಘಟನೆ ಸಹ ಇದೆ ರಾಜ್ಯದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಯಾರೋ ಸ್ವಾಮೀಜಿ ಹೇಳಿದರೆ ಆಗಲ್ಲ ರಾಜ್ಯದ ಜನರು ಅದನ್ನು ತೀರ್ಮಾನ ಮಾಡಬೇಕು ಆ ಜನ ಬಿಜೆಪಿ ಪರವಾಗಿ ಇದ್ದಾರೆ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದ್ದಾರೆ.

ಇನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಎರಡು ದಿನಗಳ ರಾಜ್ಯ ಪ್ರವಾಸದ ವಿಚಾರವಾಗಿ ಪ್ರತಿಕ್ರಿಯಿಸಿ ಅಮಿತ್ ಶಾ ಐದು ವರ್ಷನೂ ಇಲ್ಲಿ ಬಂದು ಆಳ್ವಿಕೆ ಮಾಡಕ್ಕೆ ಬರಲ್ಲ ಒಂದು ಸರಿ ರಾಹುಲ್ ಗಾಂಧಿ ಭಾರತ್ ಜೋಡೋ ಎಂದು ಬಂದು ಹೋದರು ಹಾಗಾದ್ರೆ ಭಾರತ ಜೋಡ್ಸಿ ಬಿಟ್ರಾ ರಾಹುಲ್ ಗಾಂಧಿಗೆ ದೇಶ ನೋಡುವ ಅವಕಾಶ ಸಿಕ್ತು. ಅದಕ್ಕಾಗಿ ನಾನು ಸಂತೋಷ ಪಡುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಯನ್ನ ಟೀಕಿಸಿದ್ದಾರೆ.
ಅಮಿತ್ ಶಾ ದೆಹಲಿಯಲ್ಲೇ ಕುಳಿತು ಎಲ್ಲವನ್ನೂ ಗಮನಿಸ್ತಾ ಇದ್ದಾರೆ ಭಯೋತ್ಪಾದನೆ ನಿಗ್ರಹಕ್ಕೆ ಅಮಿತ್ ಶಾ ಎಷ್ಟು ಕ್ರಮವನ್ನು ಕೈಗೊಂಡರು ಇದೇ ಸಿದ್ದರಾಮಯ್ಯ ಇದ್ದಂತಹ ಸಂದರ್ಭದಲ್ಲಿ ಏಕೆ ಮಾಡ್ಲಿಲ್ಲ ಡಿ.ಕೆ ಶಿವಕುಮಾರ್ ಆಗ ಯಾಕೆ ಬಾಯಿ ಮುಚ್ಚಿಕೊಂಡು ಕುಳಿತ್ತಿದ್ದರು ಎಂದು ತಿರುಗೇಟು ನೀಡಿದ್ದಾರೆ. ಕೇಂದ್ರ ಗೃಹ ಸಚಿವರು ದಿಟ್ಟ ಹೆಜ್ಜೆ ಇಟ್ಟು ಮುನ್ನುಗುತ್ತಿದ್ದಾರೆ ನಾವು ಶಾಂತಿ ಕಾಪಾಡಬೇಕು ಎಂಬ ಪ್ರಯತ್ನ ಮಾಡುತ್ತಿದ್ದೇವೆ ಆದರೆ, ಕಾಂಗ್ರೆಸ್ ಶಾಂತಿ ಕದಡುವ ಭಯೋತ್ಪಾದಕರಿಗೆ ಬೆಂಬಲ ಕೊಡುವ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.
ಅಮಿತ್ ಶಾ ಮಾಡುತ್ತಿರುವ ಕೆಲಸ ಬೆಂಬಲಿಸಿ ನೀವು ರಾಷ್ಟ್ರಭಕ್ತರಾಗುತ್ತೀರಿ ಇಲ್ಲವಾದ್ರೇ ಭಯೋತ್ಪಾದಕರ ರಕ್ತ ನಿಮ್ಮ ಮೈಯಲ್ಲಿ ಹರಿಯುತ್ತಿದೆ ಎಂದು ರಾಜ್ಯದ ಜನ ತೀರ್ಮಾನ ಮಾಡ್ತಾರೆ ಇವಾಗ ಅಲ್ಪ ಸ್ವಲ್ಪ ಸೀಟ್ ಬಂದಿದೆ ಮುಂದಿನ ಚುನಾವಣೆಯಲ್ಲಿ ಭಯೋತ್ಪಾದಕರ ಜೊತೆ ಜನ ನಿಮ್ಮನ್ನು ಹೊರಗೆ ಕಳಿಸ್ತಾರೆ ಎಂದು ಮಾಜಿ ಸಚಿವ ಈಶವರಪ್ಪ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ರನ್ನು ಎಚ್ಚರಿಸಿದ್ದಾರೆ.
ಇನ್ನು ಹೊಸ ವರ್ಷಾಚರಣೆ ಕುರಿತು ಪ್ರಶ್ನೆಗೆ ಪ್ರತಿಕ್ರಿಯಿಸಿ ನನಗೆ ಹೊಸ ವರ್ಷ ಯುಗಾದಿಗೆ. ಇವಾಗ ಅಲ್ಲ ಹೊಸ ವರ್ಷ, ಸಂಭ್ರಮಾಚರಣೆ ಬೇರೆ ಬೇರೆ ಹಿಂದೂ ಸಂಪ್ರದಾಯದಂತೆ ಯುಗಾದಿಗೆ ನಾನು ಹೊಸ ವರ್ಷ ಮಾಡುತ್ತೇನೆ ಇದು ಕ್ರಿಶ್ಚಿಯನ್ ರ ಹಬ್ಬ, ವಿದೇಶಿಯರ ಹಬ್ಬ ಅವರು ಸಂತೋಷದ ಮಾಡಲಿ ಅದಕ್ಕೆ ನಾವೇನ್ ಅಡ್ಡಿಪಡಿಸಲ್ಲ ಎಂದಿ ಹೇಳಿದ್ದಾರೆ.






