• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿದ್ದೇಶ್ವರ ಸ್ವಾಮೀಜಿ ಅವರ ನಿಸ್ವಾರ್ಥ ಸೇವೆ, ಜ್ಞಾನ ಎಲ್ಲರಿಗೂ ಮಾದರಿ: ಪೃಥ್ವಿ ರೆಡ್ಡಿ

Any Mind by Any Mind
January 3, 2023
in Top Story, ಕರ್ನಾಟಕ
0
ಸಿದ್ದೇಶ್ವರ ಸ್ವಾಮೀಜಿ ಅವರ ನಿಸ್ವಾರ್ಥ ಸೇವೆ, ಜ್ಞಾನ ಎಲ್ಲರಿಗೂ ಮಾದರಿ: ಪೃಥ್ವಿ ರೆಡ್ಡಿ
Share on WhatsAppShare on FacebookShare on Telegram


ಬೆಂಗಳೂರು: ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ನಿಸ್ವಾರ್ಥ ಸೇವೆ ಹಾಗೂ ಅಪಾರ ಜ್ಞಾನವು ನಮ್ಮೆಲ್ಲರಿಗೂ ಮಾದರಿಯಾಗಬೇಕಿದೆ ಎಂದು ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಕ್ಷಕ್ಷ ಪೃಥ್ವಿ ರೆಡ್ಡಿ ಹೇಳಿದರು.

ADVERTISEMENT


ಶ್ರೀಗಳ ಅಗಲಿಕೆಯ ಕುರಿತು ಮಾತನಾಡಿದ ಅವರು, ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅವರ ಅಗಲಿಕೆಯಿಂದ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಸಿದ್ದೇಶ್ವರ ಸ್ವಾಮೀಜಿಯವರು ಮನುಕುಲವನ್ನು ಸರಿದಾರಿಯಲ್ಲಿ ಕೊಂಡೊಯ್ಯಲು ಜೀವನ ಪರ್ಯಂತ ಶ್ರಮಿಸಿದ್ದಾರೆ. ಅವರ ನಿಸ್ವಾರ್ಥ ಸೇವೆ ಹಾಗೂ ಜ್ಞಾನ ನಮ್ಮೆಲ್ಲರಿಗೂ ಮಾದರಿಯಾಗಬೇಕಿದೆ. ಅತ್ಯಂತ ಸರಳ ಜೀವನವನ್ನು ಅನುಸರಿಸಿದ ಅವರು ನಡೆ ಹಾಗೂ ನುಡಿಗೂ ಅಂತರವಿಲ್ಲದಂತೆ ಬದುಕಿದ್ದರು. ಆ ಮೂಲಕ ಸಮಾಜಕ್ಕೆ ಸ್ಫೂರ್ತಿಯಾಗುವಂತೆ ಜೀವನದ ಪ್ರತಿಕ್ಷಣವನ್ನೂ ಕಳೆದ ಸ್ವಾಮೀಜಿಯವರು ನಮ್ಮೊಂದಿಗೆ ಹಲವು ವರ್ಷಗಳು ಇರಬೇಕಿತ್ತು ಎಂದು ಹೇಳಿದರು.


ಕಠಿಣ ವಿಷಯಗಳನ್ನೂ ಸರಳವಾಗಿ ಜನರಿಗೆ ಅರ್ಥವಾಗುವಂತೆ ಹೇಳುವ ಕೌಶಲ್ಯತೆ ಸಿದ್ದೇಶ್ವರ ಸ್ವಾಮೀಜಿಯವರಿಗೆ ಇತ್ತು. ಅವರ ಮಧುರ ಮಾತು, ಪ್ರಖರ ವಿಷಯ ಹಾಗೂ ಪ್ರಬುದ್ಧ ಚಿಂತನೆ ಎಲ್ಲರನ್ನೂ ಆಕರ್ಷಿಸುತ್ತಿತ್ತು. ಅಧ್ಯಾತ್ಮದ ಜೊತೆಗೆ ವಿಜ್ಞಾನ, ಕೃಷಿ, ಶಿಕ್ಷಣ, ಪರಿಸರಕ್ಕೆ ಸಂಬಂಧಿಸಿದ ವಿಚಾರಗಳಲ್ಲೂ ಅವರು ಆಸಕ್ತಿ ಹೊಂದಿದ್ದರು. ಗಿಡಗಳಿಂದ ಹೆಚ್ಚು ಹೂವುಗಳನ್ನು ಕೀಳಬಾರದೆಂದು ಕೇವಲ ಒಂದೇ ಹೂವಿನಿಂದ ದೇವರನ್ನು ಪೂಜಿಸುತ್ತಿದ್ದ ಅವರದ್ದು ಹೂವಿನಷ್ಟೇ ಸೂಕ್ಷ್ಮವಾದ ಮನಸ್ಸಾಗಿತ್ತು ಎಂದರು.


ಅಲ್ಲದೇ ಸಿದ್ದೇಶ್ವರ ಸ್ವಾಮೀಜಿಯವರು ಜೀವನದುದ್ದಕ್ಕೂ ಅದ್ಭುತ ಸಾಧನೆ ಮಾಡಿ ಅಪಾರ ಅಭಿಮಾನಿಗಳನ್ನು ಹೊಂದಿದ್ದರು. ಯಾವುದೇ ಐಷಾರಾಮಿ ಜೀವನ ನಡೆಸದ ಅವರು ಸಾಮಾನ್ಯರಲ್ಲಿ ಸಾಮಾನ್ಯರಂತೆ ಬೆರೆಯುತ್ತಿದ್ದರು. ತಮಗೆ ಬರುತ್ತಿದ್ದ ಪ್ರಶಸ್ತಿಗಳನ್ನು ತಿರಸ್ಕರಿಸಿ ಬದುಕಿದ್ದ ಅವರು ನಿಜಕ್ಕೂ ನಡೆದಾಡುವ ದೇವರು. ಅವರ ಅಪಾರ ಸಂಖ್ಯೆಯ ಭಕ್ತರು, ಅಭಿಮಾನಿಗಳಿಗೆ ಅವರ ನಿಧನದ ದುಃಖವನ್ನು ನೀಗಿಸಿಕೊಳ್ಳುವ ಶಕ್ತಿ ದೊರೆಯಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ನಿಧನಕ್ಕೆ ಸಂತಾಪ ಸೂಚಿಸಿದರು.

Tags: ಪೃಥ್ವಿ ರೆಡ್ಡಿಸಿದ್ದೇಶ್ವರ ಸ್ವಾಮೀಜಿ
Previous Post

| SIDDARAMAIAH | ಸಿದ್ದೇಶ್ವರ ಶ್ರೀಗಳ ಅಗಲಿಕೆ ಇಡೀ ನಾಡಿಗೆ ತುಂಬಲಾರದ ನಷ್ಟ | SIDDESHWARA SHREE |

Next Post

Brijesh Kalappa : ಜಂಬದಲ್ಲಿ ಮೆರೆಯುತ್ತಿರುವ BJP ಗೆ ನಮ್ಮ ಪ್ರಶ್ನೆ | Pratidhvani

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
Next Post
Brijesh Kalappa : ಜಂಬದಲ್ಲಿ ಮೆರೆಯುತ್ತಿರುವ BJP ಗೆ ನಮ್ಮ ಪ್ರಶ್ನೆ | Pratidhvani

Brijesh Kalappa : ಜಂಬದಲ್ಲಿ ಮೆರೆಯುತ್ತಿರುವ BJP ಗೆ ನಮ್ಮ ಪ್ರಶ್ನೆ | Pratidhvani

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada