• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ತೀವ್ರ ಆಕ್ರೋಶದ ಹಿನ್ನೆಲೆಯಲ್ಲಿ ಕರ್ನಾಟಕದ ಸ್ಥಬ್ಧ ಚಿತ್ರಕ್ಕೆ ಮತ್ತೆ ಅನುಮತಿ ನೀಡಿದ ಕೇಂದ್ರ

ಫಾತಿಮಾ by ಫಾತಿಮಾ
January 13, 2023
in Top Story, ಅಂಕಣ
0
ತೀವ್ರ ಆಕ್ರೋಶದ ಹಿನ್ನೆಲೆಯಲ್ಲಿ ಕರ್ನಾಟಕದ ಸ್ಥಬ್ಧ ಚಿತ್ರಕ್ಕೆ ಮತ್ತೆ ಅನುಮತಿ ನೀಡಿದ ಕೇಂದ್ರ
Share on WhatsAppShare on FacebookShare on Telegram

ADVERTISEMENT

ಗಣರಾಜ್ಯೋತ್ಸವ ಪರೇಡ್‌ನಿಂದ ಕರ್ನಾಟಕದ ಟ್ಯಾಬ್ಲೋವನ್ನು ಕೈಬಿಡುವ ಕೇಂದ್ರ ಸರ್ಕಾರದ ನಿರ್ಧಾರ ಹೊರಬಿದ್ದ ನಂತರ ಕರ್ನಾಟಕದಲ್ಲಿ ವ್ಯಕ್ತವಾದ ತೀವ್ರವಾದ ಆಕ್ರೋಶಕ್ಕೆ ತಲೆಬಾಗಿದ ಕೇಂದ್ರ ರಕ್ಷಣಾ ಸಚಿವಾಲಯವು ರಾಜ್ಯದ ಟ್ಯಾಬ್ಲೋವನ್ನೂ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಪ್ರದರ್ಶಿಸಲು ಒಪ್ಪಿಕೊಂಡಿದೆ.

ಕರ್ನಾಟಕದ ಮುಖ್ಯ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ರಕ್ಷಣಾ ಸಚಿವಾಲಯವು “ಕರ್ನಾಟಕ ರಾಜ್ಯ ಸರ್ಕಾರದ ಪ್ರಸ್ತಾವನೆಯನ್ನು 2023ರ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಭಾಗಿಯಾಗಿಸಲು ಸರ್ಕಾರವು ಶಾರ್ಟ್‌ಲಿಸ್ಟ್ ಮಾಡಿದೆ” ಎಂದು ಬರೆದಿದೆ ಎಂದು ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ.

‘ನಾರಿ ಶಕ್ತಿ’ಯನ್ನು ಬಿಂಬಿಸುವ ಮಹಿಳಾ ಕೇಂದ್ರಿತ ಟ್ಯಾಬ್ಲೋವನ್ನು ಕರ್ನಾಟಕವು ಈ ಬಾರಿ ಮಾಡಲು ಉದ್ದೇಶಿಸಿತ್ತು. ಇದೀಗ ಸರ್ಕಾರಕ್ಕೆ ಏಳು ದಿನಗಳ ಅವಕಾಶ ಲಭಿಸಿದ್ದು ಜನವರಿ 19ರ ಒಳಗಡೆ ಟ್ಯಾಬ್ಲೋ ತಯಾರಿಸಿ ದೆಹಲಿಗೆ ಕಳುಹಿಸಬೇಕಾಗಿದೆ..

ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಈ ಬಾರಿ ಅವಕಾಶ ನೀಡದೇ ಇರುವುದು ಪ್ರತಿಪಕ್ಷ ಕಾಂಗ್ರೆಸ್ ಮತ್ತು ಜೆಡಿಎಸ್‌ನಿಂದ ತೀವ್ರವಾಗಿ ಟೀಕೆಗೆ ಒಳಗಾಗಿತ್ತು. ಆನಂತರ ಮುಖ್ಯಮಂತ್ರಿ ಬೊಮ್ಮಾಯಿಯವರು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ಈ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದರು. ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಮಾತನಾಡಿ ಕರ್ನಾಟಕಕ್ಕೆ ಈಗ ಮತ್ತೆ ಅವಕಾಶ ಲಭಿಸಿದೆ.

ಕಳೆದ ವರ್ಷ, ರಾಜ್ಯದ ಟ್ಯಾಬ್ಲೋ ‘ಸಾಂಪ್ರದಾಯಿಕ ಕರಕುಶಲತೆಯ ತೊಟ್ಟಿಲು’ ಎರಡನೇ ಅತ್ಯುತ್ತಮ ಪ್ರಶಸ್ತಿಯನ್ನು ಪಡೆದಿದ್ದು, ಕೇಂದ್ರ ಸರ್ಕಾರ ತನ್ನ ಮೊದಲಿನ ನಿರ್ಧಾರಕ್ಕೇ ಬದ್ಧವಾಗಿದ್ದರೆ, 13 ವರ್ಷಗಳಲ್ಲಿ ಮೊದಲ ಬಾರಿಗೆ ಜನವರಿ 26 ರ ಪರೇಡ್‌ನಲ್ಲಿ ಕರ್ನಾಟಕದ ಟ್ಯಾಬ್ಲೋ ಇರುತ್ತಿರಲಿಲ್ಲ.

ಕೇಂದ್ರ ಸರ್ಮಾರದ ಮೊದಲಿನ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದ ಜೋಶಿ, ಈ ಬಾರಿಯು ಇದುವರೆಗೆ ಅವಕಾಶ ಪಡೆಯದ ರಾಜ್ಯಗಳು ಭಾಗವಹಿಸುವಂತೆ ಮಾಡುವುದು ಗುರಿಯಾಗಿತ್ತು ಎಂದು ಹೇಳಿದ್ದರು.

ಗಣರಾಜ್ಯೋತ್ಸವದ ಸ್ತಬ್ಧಚಿತ್ರವನ್ನು ತಿರಸ್ಕರಿಸುವುದು ಸಾಮಾನ್ಯವಾಗಿ ರಾಜಕೀಯ ಕುತಂತ್ರವಾಗಿದ್ದು ಕಳೆದ ವರ್ಷ ಕೇಂದ್ರ ಸರ್ಕಾರವು ಕೇರಳ ಮತ್ತು ಪಶ್ಚಿಮ ಬಂಗಾಳದ ಗಣರಾಜ್ಯೋತ್ಸವದ ಸ್ಥಬ್ಧಚಿತ್ರವನ್ನು ತಿರಸ್ಕರಿಸಿರುವುದನ್ನು ನಾವಿಲ್ಲಿ ನೆನಪಿಸಿಕೊಳ್ಳಬಹುದು.

Tags: ಕರ್ನಾಟಕದ ಟ್ಯಾಬ್ಲೋಗಣರಾಜ್ಯೋತ್ಸವ
Previous Post

ಒಂದೇ ಕಡೆ ನಿಂತ್ರೆ ಬಲವಿಲ್ಲ, ಎರಡು ಕಡೆ ನಿಲ್ಲಲು ದೇವಿ ಸೂಚನೆ‌ ರಾಜಕೀಯ ಭವಿಷ್ಯ ನುಡಿದ ಮನೆ ದೇವರು..!

Next Post

ಕೇಂದ್ರದ ಮಾಜಿ ಸಚಿವ ಶರದ್ ಯಾದವ್ ನಿಧನ

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
Next Post
ಕೇಂದ್ರದ ಮಾಜಿ ಸಚಿವ ಶರದ್ ಯಾದವ್  ನಿಧನ

ಕೇಂದ್ರದ ಮಾಜಿ ಸಚಿವ ಶರದ್ ಯಾದವ್ ನಿಧನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada