• Home
  • About Us
  • ಕರ್ನಾಟಕ
Thursday, December 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

‘ಕೋಲಾರದಲ್ಲಿ ನಾನೇ ಗೆಲ್ಲೋದು’ ಸಿದ್ದರಾಮಯ್ಯ ವಿಶ್ವಾಸಕ್ಕೆ ಹೊಡೆತ..!

ಕೃಷ್ಣ ಮಣಿ by ಕೃಷ್ಣ ಮಣಿ
January 22, 2023
in Top Story, ರಾಜಕೀಯ
0
‘ಕೋಲಾರದಲ್ಲಿ ನಾನೇ ಗೆಲ್ಲೋದು’ ಸಿದ್ದರಾಮಯ್ಯ ವಿಶ್ವಾಸಕ್ಕೆ ಹೊಡೆತ..!
Share on WhatsAppShare on FacebookShare on Telegram

ಕೋಲಾರ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಮಾಡಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧಾರ ಮಾಡಿದ್ದಾರೆ. ಕಳೆದ ಜನವರಿ 9ರಂದು ಕೋಲಾರದಲ್ಲಿ ಮಹತ್ವದ ಸಭೆ ಮಾಡಿದ್ದ ಸಿದ್ದರಾಮಯ್ಯ, ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡ್ತೇನೆ ಎಂದು ಘೋಷಣೆ ಮಾಡಿದ್ದರು. ಅಂದಿನ ಸಭೆಗೂ ಮುನ್ನ ಕೆ.ಹೆಚ್​ ಮುನಿಯಪ್ಪ ಅವರ ಮೆನೆಗೆ ಹೋಗಿದ್ದ ಸಿದ್ದರಾಮಯ್ಯ, ಮುನಿಯಪ್ಪ ಅವರನ್ನು ಕಾರ್ಯಕ್ರಮಕ್ಕೆ ಜೊತೆಯಲ್ಲಿ ಕರೆದುಕೊಂಡು ಹೋಗುವ ಮಹತ್ವದ ಹೆಜ್ಜೆ ಇರಿಸಿದ್ದರು. ಆದರೆ ಆ ಒಗ್ಗಟ್ಟು ಕೆಲವೇ ಗಂಟೆಗಳು ಉಳಿಯಲಿಲ್ಲ ಎನ್ನುವ ಮಾತುಗಳು ಕೇಳಿಬಂದಿದ್ದವು. ವೇದಿಕೆ ಕಾರ್ಯಕ್ರಮ ಮುಗಿಸಿಕೊಂಡು ಶ್ರೀನಿವಾಸಗೌಡ ಮನೆಗೆ ಊಟಕ್ಕೆ ಹೊರಟಿದ್ದ ಸಿದ್ದರಾಮಯ್ಯ ಅಂಡ್​ ಟೀಂ, ದಲಿತ ನಾಯಕ ಕೆ.ಹೆಚ್​ ಮುನಿಯಪ್ಪ ಅವರನ್ನು ಬಿಟ್ಟು ಹೋಗಿದ್ದರು. ಒಬ್ಬಂಟಿಯಾಗಿ ವೇದಿಕೆಯಿಂದ ಹೊರಟು ಮನೆ ಸೇರಿದ್ದರು ಮುನಿಯಪ್ಪ. 

ADVERTISEMENT

‘ನಾನೇ ಗೆಲ್ಲೋದು’ ಪ್ರಜಾಧ್ವನಿಯಲ್ಲಿ ಬಣ್ಣ ಬಯಲು..!

ಕೋಲಾರದಲ್ಲಿ ಸಿದ್ದರಾಮಯ್ಯ ದಲಿತ ವಿರೋಧಿ ಯಾವುದೇ ಕಾರಣಕ್ಕೂ ಮತಗಳನ್ನು ಸಿದ್ದರಾಮಯ್ಯಗೆ ಹಾಕಬೇಡಿ ಎಂದು ಅಭಿಯಾನ ನಡೆಸಲಾಗಿದೆ. ಇನ್ನು ಕೋಲಾರದಲ್ಲಿ ಡಿಸಿ ಆಗಿದ್ದ ಡಿ.ಕೆ ರವಿ ಆತ್ಮಹತ್ಯೆಗೆ ಸಿದ್ದರಾಮಯ್ಯನೇ ಕಾರಣ, ಈ ಬಾರಿ ಕೋಲಾರದ ಜನರು ಡಿಕೆ ರವಿ ಸಾವಿಗೆ ಸೇಡು ತೀರಿಸಿಕೊಳ್ಳಬೇಕು ಎನ್ನುವ ಪೋಸ್ಟ್​ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಿವೆ. ಇದರ ನಡುವೆ ಕಾಂಗ್ರೆಸ್​ ಪ್ರಜಾಧ್ವನಿ ಯಾತ್ರೆ ನಡೆಸುತ್ತಿದ್ದು, ಕೋಲಾರದಲ್ಲಿ ಯಾರೇ ಸ್ಪರ್ಧೆ ಮಾಡಲಿ, ನಾನೇ ಗೆಲ್ಲೋದು ಎಂದು ಸಿದ್ದರಾಮಯ್ಯ ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ಈ ಆತ್ಮವಿಶ್ವಾದ ಮಾತುಗಳ ನಡುವೆ ಸೋಮವಾರ ಕೋಲಾರದಲ್ಲಿ ಪ್ರಜಾಧ್ವನಿ ಯಾತ್ರೆ ನಡೆಯಲಿದ್ದು ರಮೇಶ್​ ಕುಮಾರ್​ ಬಣ ಹಾಗು ಕೆ.ಹೆಚ್​ ಮುನಿಯಪ್ಪ ಬಣದ ಭಿನ್ನಾಭಿಪ್ರಾಯ ಹೊರಕ್ಕೆ ಬೀಳುವ ಸಾಧ್ಯತೆ ದಟ್ಟವಾಗಿದೆ. 

JDS​ ಬೆಂಬಲಿಗನ ಮೇಲೆ ಸಿದ್ದು ಬೆಂಬಲಿಗನ ಗೂಂಡಾಗಿರಿ..!

ಕೋಲಾರದಲ್ಲಿ ಕಾಂಗ್ರೆಸ್​ನಿಂದ ಸಿದ್ದರಾಮಯ್ಯ ಬಿಜೆಪಿಯಿಂದ ವರ್ತೂರು ಪ್ರಕಾಶ್​​ ಕುರುಬ ಸಮುದಾಯದ ಅಭ್ಯರ್ಥಿಗಳಾಗಿದ್ದರೆ, ಜೆಡಿಎಸ್​ನಿಂದ ಸಿ.ಎಂ.ಆರ್​ ಶ್ರೀನಾಥ್​ ಒಕ್ಕಲಿಗ ಸಮುದಾಯದ ಅಭ್ಯರ್ಥಿ ಆಗಿದ್ದಾರೆ. ಈ ನಡುವೆ ಕುರುಬ ಸಮುದಾಯದ ಜಿಲ್ಲಾಧ್ಯಕ್ಷ ಜೆ ಕೆ ಜಯರಾಂ  ಜೆಡಿಎಸ್​​ ಮುಖಂಡ ಕೆ.ಟಿ.ಆಶೋಕ್‌ಗೆ ಫೋನ್​ನಲ್ಲಿ ಧಮ್ಕಿ ಹಾಕಿದ್ದಾರೆ. ಅಷ್ಟೇ ಅಲ್ಲ ‘ನೀನೇನು ಒಕ್ಕಲಿಗರಿಗೆ ಹುಟ್ಟಿದ್ಯಾ..?’ ಎಂದು ಕೊಟ್ಟಿರುವ ಹೇಳಿಕೆ ಒಕ್ಕಲಿಗರ ಕಣ್ಣು ಕೆಂಪಾಗುವಂತೆ ಮಾಡಿದೆ. ಒಕ್ಕಲಿಗರು ಜೆಡಿಎಸ್​ ಕಡೆಗೆ ವಾಲಿದ್ರೆ, ಕುರುಬರ ಮತಗಳು ಸಿದ್ದರಾಮಯ್ಯ ಹಾಗು ವರ್ತೂರು ಪ್ರಕಾಶ್​​ ನಡುವೆ ಹಂಚಿಕೆ ಆದ್ರೆ ಫಲಿತಾಂಶದ ಮೇಲೆ ಯಾವುದೇ ಪ್ರಬಾವ ಬೀರುವುದಿಲ್ಲ. ಆದರೆ ಕ್ಷೇತ್ರದಲ್ಲಿ ಅತಿ ಹೆಚ್ಚು ಮತದಾರರನ್ನು ಹೊಂದಿರುವ ಪರಿಶಿಷ್ಟ ಜಾತಿ ಹಾಗು ಮುಸ್ಲಿಂ ಸಮುದಾಯದ ಮತದಾರ ಮನಸ್ಸು ಗೆಲ್ಲುವ ನಾಯಕ ಗೆಲ್ಲುವುದು ನಿಶ್ಚಿತ. ಈಗಾಗಲೇ ದಲಿತ ನಾಯಕರ ವಿರುದ್ಧ ಮನಸ್ಥಿತಿ ಸಿದ್ದರಾಮಯ್ಯಗೆ ಇದೆ ಎನ್ನುವ ಸಂದೇಶ ರವಾನೆ ಆಗಿದ್ದು, ಸಿದ್ದರಾಮಯ್ಯ ಗೆಲುವಿಗೆ ಅಡ್ಡಿ ಆತಂಕ ಎದುರಾಗಿದೆ. 

 ಸಿದ್ದರಾಮಯ್ಯ ನಿಜವಾಗಲೂ ದಲಿತ ವಿರೋಧಿನಾ..? 

ಅಹಿಂದ ನಾಯಕ ಎನ್ನುವ ಪಟ್ಟ ಪಡೆದುಕೊಂಡಿರುವ ಸಿದ್ದರಾಮಯ್ಯ, ನಿಜವಾಗಲೂ ದಲಿತ ವಿರೋಧಿನಾ ಎನ್ನುವ ಪ್ರಶ್ನೆ ಮೂಡುವುದು ಸಹಜ. ದಲಿತ ವಿರೋಧಿ ಎನ್ನುವುದಕ್ಕೆ ಕೋಲಾರದ ಜನರು ಸಾಕಷ್ಟು ನಿದರ್ಶನಗಳನ್ನೂ ನೀಡಿದ್ದಾರೆ. 2014ರ ಮಧುಗಿರಿ ಚುನಾವಣೆಯಲ್ಲಿ ಡಾ ಜಿ ಪರಮೇಶ್ವರ್​ ಅವರನ್ನು ಸೋಲಿಸಿ ಸಿದ್ದರಾಮಯ್ಯ ತಂತ್ರಗಾರಿಕೆ ಮೆರೆದಿದ್ದರು. ಒಂದು ವೇಳೆ ಅಂದು ಡಾ ಜಿ ಪರಮೇಶ್ವರ್​ ಚುನಾವಣೆಯಲ್ಲಿ ಗೆಲುವು ಪಡೆದಿದ್ದರೆ ಕೆಪಿಸಿಸಿ ಅಧ್ಯಕ್ಷರಾಗಿದ್ದ ದಲಿತ ನಾಯಕ ಪರಮೇಶ್ವರ್​ ಮುಖ್ಯಮಂತ್ರಿ ಆಗುವ ಅವಕಾಶವಿತ್ತು. ಇನ್ನು 2018ರಲ್ಲಿ ಜೆಡಿಎಸ್​ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡುವುದಕ್ಕೆ ಸಿದ್ಧವಿತ್ತು. ಆದರೆ ಸಿದ್ದರಾಮಯ್ಯ ವಿರೋಧದಿಂದ ಆ ಸ್ಥಾನವೂ ತಪ್ಪಿತ್ತು. ಇನ್ನು 2019ರ ಲೋಕಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದ ಪ್ರಭಾವಿ ನಾಯಕ ಕೆ.ಹೆಚ್​ ಮುನಿಯಪ್ಪ ಅವರನ್ನು ಸೋಲಿಸಿದ್ದು ಸಿದ್ದರಾಮಯ್ಯ ಆಪ್ತ ಬಣ ಎನ್ನುವ ಕಿಚ್ಚು ದಲಿತ ಸಮುದಾಯವನ್ನು ಕಾಡುತ್ತಿದೆ. ಇದಕ್ಕೆಲ್ಲಾ ಉತ್ತರ ಕೋಲಾರದಲ್ಲಿ ಕೊಡುತ್ತೇವೆ ಎನ್ನುವುದು ಆ ಸಮುದಾಯದ ಮಾತಾಗಿದೆ. 

ಪ್ರಜಾಧ್ವನಿ ಯಾತ್ರೆಯಿಂದಲೂ ಮುಖಂಡರು ದೂರ..!

ಕೋಲಾರದಲ್ಲಿ ಪ್ರಜಾಧ್ವನಿ ಕಾರ್ಯಕ್ರಮಕ್ಕೆ ಸಿದ್ಧತೆಗಳು ನಡೆಯುತ್ತಿವೆ. ರಮೇಶ್ ಕುಮಾರ್​​ ಬಣ ತಯಾರಿ ಮಾಡಿಕೊಳ್ಳುವ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಆದರೆ ಮುನಿಯಪ್ಪ ಬಣ ಪೂರ್ವ ಸಿದ್ಧತೆ ಕಾರ್ಯಕ್ರಮದಿಂದ ದೂರ ಉಳಿದುಕೊಂಡಿದೆ. ಕೆ.ಹೆಚ್​ ಮುನಿಯಪ್ಪ ಅವರ ಭಾವಚಿತ್ರ ಫ್ಲೆಕ್ಸ್​​ಗಳಿಗೆ ಸೀಮಿತವಾಗಿದೆ. ಮುನಿಯಪ್ಪ ಭಾಗವಹಿಸುವಿಕೆ ದೂರದ ಮಾತು ಎಂದೇ ಹೇಳಲಾಗ್ತಿದೆ. ಕಾರ್ಯಕ್ರಮಕ್ಕೆ ಕರೆದುಕೊಂಡು ಬಂದಿದ್ದ ಸಿದ್ದರಾಮಯ್ಯ, ಊಟಕ್ಕೆ ಹೋಗುವಾಗ ದಲಿತ ಎನ್ನುವ ಕಾರಣಕ್ಕೆ ಬಿಟ್ಟು ಹೋದರು ಎನ್ನುವ ಮಾತುಗಳು ಕೋಲಾರದಲ್ಲಿ ಹರಡಿದೆ. ಇದು ಸಿದ್ದರಾಮಯ್ಯ ವಿಶ್ವಾಸಕ್ಕೆ ಧಕ್ಕೆ ತರುವ ಎಲ್ಲಾ ಸಾಧ್ಯತೆಗಳು ಇವೆ ಎನ್ನಬಹುದು. 

Previous Post

ಕಾಂಗ್ರೆಸ್​ ಸೋಲಿಸಲು ಸುಪಾರಿ ಪಡೆದಿದ್ದು ಸಿದ್ದರಾಮಯ್ಯನಾ..? ಜಮೀರಾ..?

Next Post

Tiger Attack : ಸೌದೆ ತರಲು ಹೋಗಿ ಶವವಾದ | Pratidhvani

Related Posts

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ
Top Story

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

by ಪ್ರತಿಧ್ವನಿ
December 18, 2025
0

ನವದೆಹಲಿ: ಶಾಲಾ ಹಂತದಿಂದಲೇ ಭಗವದ್ಗೀತೆಯನ್ನು( Bhagavad Gita) ಮಕ್ಕಳಿಗೆ ಬೋಧಿಸಬೇಕು. ಇದು ಅತ್ಯಂತ ಉತ್ತಮ ಶೈಕ್ಷಣಿಕ ಸುಧಾರಣಾ ಕ್ರಮವಾಗುತ್ತದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು...

Read moreDetails
Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

December 18, 2025
ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?

ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?

December 17, 2025
ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

December 17, 2025

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

December 17, 2025
Next Post
Tiger Attack : ಸೌದೆ ತರಲು ಹೋಗಿ ಶವವಾದ | Pratidhvani

Tiger Attack : ಸೌದೆ ತರಲು ಹೋಗಿ ಶವವಾದ | Pratidhvani

Please login to join discussion

Recent News

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ
Top Story

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

by ಪ್ರತಿಧ್ವನಿ
December 18, 2025
Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!
Top Story

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

by ಪ್ರತಿಧ್ವನಿ
December 18, 2025
ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?
Top Story

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

by ಪ್ರತಿಧ್ವನಿ
December 17, 2025
Top Story

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

by ಪ್ರತಿಧ್ವನಿ
December 17, 2025
Top Story

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
December 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

December 18, 2025
Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

December 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada