• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಅಮಿತ್​ ಷಾ ಆಗಮನಕ್ಕೂ ಮುನ್ನವೇ ಘರ್ಜಿಸಿದ ಮರಿಹುಲಿ..! ಏನಿದರ ಗುಟ್ಟು..?

ಕೃಷ್ಣ ಮಣಿ by ಕೃಷ್ಣ ಮಣಿ
January 28, 2023
in ಕರ್ನಾಟಕ, ರಾಜಕೀಯ
0
ಅಮಿತ್​ ಷಾ ಆಗಮನಕ್ಕೂ ಮುನ್ನವೇ ಘರ್ಜಿಸಿದ ಮರಿಹುಲಿ..! ಏನಿದರ ಗುಟ್ಟು..?
Share on WhatsAppShare on FacebookShare on Telegram

ಕೇಂದ್ರ ಗೃಹ ಸಚಿವ ಅಮಿತ್​ ಷಾ ಇಂದು ರಾಜ್ಯಕ್ಕೆ ಆಗಮಿಸಿದ್ದಾರೆ. ಅಧಿಕೃತ ಕಾರ್ಯಕ್ರಮಗಳ ಜೊತೆಗೆ ಪಕ್ಷದ ಕಾರ್ಯಕ್ರಮಗಳಲ್ಲೂ ಭಾಗಿಯಾಗಲಿರುವ ಅಮಿತ್​ ಷಾ ಕುಂದಗೋಳ ಹಾಗು ಬೆಳಗಾವಿಯಲ್ಲಿ ಬೃಹತ್​ ಱಲಿ ನಡೆಸಲಿದ್ದಾರೆ. ಅಮಿತ್​ ಷಾ ಬರುವ ಮುನ್ನವೇ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ನಿನ್ನೆ ವಿಜಯಪುರದಲ್ಲಿ ಭಾರತೀಯ ಜನತಾ ಪಾರ್ಟಿ ಹಾಗು ಬಿ.ಎಸ್​​ ಯಡಿಯೂರಪ್ಪ ವಿರೋಧಿ ಬಣಕ್ಕೆ ನೇರವಾಗಿಯೇ ಎಚ್ಚರಿಕೆ ಸಂದೇಶ ನೀಡಿದ್ದಾರೆ. ಒಂದು ವೇಳೆ ಯಡಿಯೂರಪ್ಪ ಅವರನ್ನು ನಿರ್ಲಕ್ಷ್ಯ ಮಾಡಿದ್ರೆ, ಯಡಿಯೂರಪ್ಪಗೆ ಕಲ್ಲು ಹೊಡೆಯುವ ಪ್ರಯತ್ನ ಮಾಡಿದ್ರೆ ಅದರ ಪರಿಣಾಮ  ಮುಂದಿನ ದಿನಗಳಲ್ಲಿ ಎದುರಿಸಲಿದ್ದೀರಿ ಎನ್ನುವ ಮೂಲಕ ಖಡಕ್​ ವಾರ್ನಿಂಗ್​ ಕೊಟ್ಟಿದ್ದಾರೆ. 

ADVERTISEMENT

ಚುನಾವಣೆಯಲ್ಲಿ ಟಿಕೆಟ್​ ಸಿಗುವ ವಿಶ್ವಾಸವಿದೆ..!

ವಿಜಯಪುರ ಜಿಲ್ಲೆ ಹೊರ್ತಿ ಗ್ರಾಮದಲ್ಲಿ ಮಾತನಾಡಿರುವ ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ, ಕಳೆದ ಬಾರಿ ಕೊನೆಯ ಕ್ಷಣದವರೆಗೂ ನಾನು ಚುನಾವಣೆಗೆ ನಿಲ್ಲುತ್ತೇನೆ ಎಂದಿತ್ತು. ಆದರೆ ಕೊನೆಯ ಕ್ಷಣದಲ್ಲಿ ನಿಲ್ಲಲು ಆಗಲಿಲ್ಲ. ಈ ಬಾರಿ ಹಾಗೇ ಆಗಬಾರದು ಎಂದುಕೊಂಡಿರುವೆ. ಪಕ್ಷ ಏನೇ ಜವಾಬ್ದಾರಿ‌ ಕೊಟ್ಟರೂ ಯಾವುದೇ ಕ್ಷೇತ್ರ ಸೂಚನೆ ನೀಡಿದರೂ ಚುನಾವಣೆ ನಿಲ್ಲುತ್ತೇನೆ ಎಂದಿದ್ದಾರೆ. ಕೊನೆಯಲ್ಲಿ ಅಂತಿಮವಾಗಿ‌ ಪಕ್ಷ ಏನೇ ನಿರ್ಧಾರ ಮಾಡಿದರು, ಒಬ್ಬ ಕಾರ್ಯಕರ್ತನಾಗಿ ಪಕ್ಷದ ನಾಯಕರು ಕೊಟ್ಟಿರುವ ಆದೇಶ ಪಾಲನೆ‌ ಮಾಡುವೆ ಎನ್ನುವ ಮೂಲಕ ವಿಜಯೇಂದ್ರ ಪಕ್ಷನಿಷ್ಠೆಯನ್ನು ಪ್ರದರ್ಶನ ಮಾಡಿದ್ದಾರೆ. ಇದರ ಜೊತೆಗೆ ಯಡಿಯೂರಪ್ಪನವರ ವಿಚಾರವಾಗಿ ಯತ್ನಾಳ್​ ಸೈಲೆಂಟ್ ಆಗಿದ್ದಕ್ಕೆ ಏನ್​ ಹೇಳ್ತೀರಾ..? ಎನ್ನುವ  ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ್ದು, ಪಕ್ಷದ ಹಿತ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ. ಪಕ್ಷದ ಭವಿಷ್ಯದ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ. ಯತ್ನಾಳ್​ ಹಿರಿಯರಿದ್ದಾರೆ ಅವರ ಬಗ್ಗೆ ನಾನು ಮಾತನಾಡಲ್ಲ. ಮಾನ್ಯ ಬಿ ಎಸ್ ಯಡಿಯೂರಪ್ಪ ನವರು ನಾಲ್ಕು ಬಾರಿ ಸಿಎಂ ಆಗಿ, ಎಲ್ಲಾ ವರ್ಗದ ಜನರು ಒಪ್ಪಿಕೊಂಡ ಒಬ್ಬ ಧೀಮಂತ ‌ನಾಯಕ, ರೈತ ನಾಯಕ, ಒಬ್ಬ ಹೋರಾಟಗಾರ. ಯಡಿಯೂರಪ್ಪನವರಿಗೆ ಕಲ್ಲನ್ನು ಎಸೆದರೆ ಅದು‌ ಪಕ್ಷಕ್ಕೆ ಹೊಡೆತ ಬೀಳುತ್ತದೆ. ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು, ಬರುವ ದಿನದಲ್ಲಿ ಇದು ಅರ್ಥವಾಗುತ್ತದೆ ಎನ್ನುವ ಮೂಲಕ ಪರೋಕ್ಷವಾಗಿ ಟಾಂಗ್​ ಕೊಟ್ಟಿದ್ದಾರೆ. 

ಅಮಿತ್​ ಷಾ ಆಗಮನಕ್ಕೂ ಮುನ್ನ ಹುಲಿ ಘರ್ಜನೆ..!

ಮೋದಿ ಬಂದ್ರು ಹೋದ್ರು. ಅಮಿತ್​ ಷಾ ಕೂಡ ರಾಜ್ಯಕ್ಕೆ ಬಂದಿದ್ದಾರೆ. ಆದರೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಯಡಿಯೂರಪ್ಪ ಹಾಗು ವಿಜಯೇಂದ್ರ ಬಗ್ಗೆ ಟೀಕಾಸ್ತ್ರ ಮುಂದುವರಿಸಿದ್ದರು. ಈ ಬಗ್ಗೆ ಬಿಜೆಪಿ ಹೈಕಮಾಂಟ್​ ನೋಟಿಸ್​ ಕೊಡುವ ಕೆಲಸ ಮಾಡಿದೆ. ಆದರೆ ನನಗೆ ಯಾವುದೇ ನೋಟಿಸ್ ಬಂದಿಲ್ಲ, ಯಡಿಯೂರಪ್ಪ ಬಗ್ಗೆ ಟೀಕೆ ಮಾಡದಂತೆ ಹೈಕಮಾಂಡ್​ ಸೂಚಿಸಿದೆ. ಹಿರಿಯರಿದ್ದಾರೆ ಯಡಿಯೂರಪ್ಪ ಅವರ ಬಗ್ಗೆ ಟೀಕೆ ಮಾಡೋದು ಬೇಡ ಎಂದಿದ್ದಾರೆ. ಹೈಕಮಾಂಡ್​ ಹೇಳಿದ ಮೇಲೆ ಅದನ್ನು ಪಾಲಿಸುತ್ತೇನೆ ಎಂದಿದ್ದರು ಯತ್ನಾಳ್​. ಆದರೆ ಅರುಣ್​ ಸಿಂಗ್​ ಗದಗದಲ್ಲಿ ಮಾತನಾಡಿ, ಬಸನಗೌಡ ಪಾಟೀಲ್​ ಯತ್ನಾಳ್​ ಅವರಿಗೆ ನೋಟಿಸ್​ ಕೊಟ್ಟಿದ್ದೇವೆ ಎನ್ನುವ ಮೂಲಕ ಯಡಿಯೂರಪ್ಪ ಅವರನ್ನು ಟೀಕೆ ಮಾಡದಂತೆ ನಿಯಂತ್ರಣ ಮಾಡಿದ್ದೇವೆ ಎನ್ನುವುದನ್ನು ಒಪ್ಪಿಕೊಂಡಿದ್ದಾರೆ. 

ಯಡಿಯೂರಪ್ಪ ಮುಖ್ಯ ಅನ್ನೋದನ್ನು ಅರಿತ ಭಾಜಪಾ..

ಯಡಿಯೂರಪ್ಪ ಇಲ್ಲದೆ ಚುನಾವಣೆ ಗೆಲ್ಲುವುದು ಕಷ್ಟ ಎನ್ನುವ ಸುಳಿವು ಬಿಜೆಪಿ ಹೈಕಮಾಂಡ್​ಗೆ ಈಗಾಗಲೇ ಮನವರಿಕೆ ಆಗಿದೆ. ಬಹುತೇಕ ಶಾಸಕರು ಯಡಿಯೂರಪ್ಪ ಅವರನ್ನು ಚುನಾವಣೆಗೆ ಕಳುಹಿಸಿಕೊಡುವಂತೆ ಒತ್ತಡ ಹಾಕುತ್ತಿದ್ದಾರೆ. ಹೈಕಮಾಂಡ್​ ಮಟ್ಟಕ್ಕೆ ಯಡಿಯೂರಪ್ಪ ಅವರನ್ನು ಕರೆದುಕೊಂಡು ಹೋಗಿ ರಾಜ್ಯದಲ್ಲಿ ಹೊಸ ನಾಯಕತ್ವಕ್ಕೆ ಪಟ್ಟ ಕೊಡುವ ತಯಾರಿ ನಡೆದಿತ್ತು. ಆದರೆ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಪಕ್ಷ ಚುನಾವಣೆಗೂ ಮುನ್ನವೇ ಸೋಲು ಒಪ್ಪಿಕೊಳ್ಳುವ ಪರಿಸ್ಥಿತಿಗೆ ಬಂದಿದೆ. ಮುಂದಿನ ದಿನಗಳಲ್ಲಿ ಮೋದಿ, ಅಮಿತ್​ ಷಾ, ಗಡ್ಕರಿ, ರಾಜನಾಥ್​ ಸಿಂಗ್​ ಕೂಡ ಬಂದು ಅಬ್ಬರದ ಪ್ರಚಾರ ಮಾಡಲು ಪ್ರವಾಸ ನಿಗದಿಯಾಗಿದೆ. ಆದರೆ ಅಂತಿಮವಾಗಿ ಯಡಿಯೂರಪ್ಪ ಬಾರದ ಹೊರತು ನಾವು ಚುನಾವಣೆಯಲ್ಲಿ ಗೆಲುವು ಅಸಾಧ್ಯ ಎನ್ನುವುದು ಬಿಜೆಪಿ ಶಾಸಕರ ಮಾತು. ಇದೇ ಕಾರಣಕ್ಕೆ ಹುಲಿಯನ್ನು ಟೀಕಿಸದಂತೆ ನೋಟಿಸ್ ಬಂದಿದೆ. ವಿಜಯೇಂದ್ರ ಕೂಡ ಖಡಕ್​ ಮಾತನಾಡಿದ್ದಾರೆ. 

Tags: ಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

MERK CARD SCAM | ವಿ.ವಿ ಗಳ ನಕಲಿ ಮಾರ್ಕ್ಸ್ ಕಾರ್ಡ್ ಮಾರಾಟ, 6ಸಾವಿರಕ್ಕೂ ಅಧಿಕ ಮಾರ್ಕ್ಸ್ ಕಾರ್ಡ್ಗಳ ವಶ | SCAM |

Next Post

DIGITAL CLOCK | ಶಾಲೆಗಳಿಗೆ ಬಿಜೆಪಿ ಚಿಹ್ನೆ ಮುದ್ರಿತಾ ಗಡಿಯಾರದ ವಿತರಣೆ ಸಿಡಿದೆದ್ದ ರೈತರು | BJP |MUKHESHNIRANI

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post
DIGITAL CLOCK | ಶಾಲೆಗಳಿಗೆ ಬಿಜೆಪಿ ಚಿಹ್ನೆ ಮುದ್ರಿತಾ ಗಡಿಯಾರದ ವಿತರಣೆ ಸಿಡಿದೆದ್ದ ರೈತರು | BJP |MUKHESHNIRANI

DIGITAL CLOCK | ಶಾಲೆಗಳಿಗೆ ಬಿಜೆಪಿ ಚಿಹ್ನೆ ಮುದ್ರಿತಾ ಗಡಿಯಾರದ ವಿತರಣೆ ಸಿಡಿದೆದ್ದ ರೈತರು | BJP |MUKHESHNIRANI

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada