• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಬಿಜೆಪಿಯವರು600 ಭರವಸೆಗಳನ್ನು ನೀಡಿದ್ದರು ಅದರಲ್ಲಿ 50 ಭರವಸೆಗಳನ್ನು ಕೂಡ ಈಡೇರಿಸಿಲ್ಲ

ಪ್ರತಿಧ್ವನಿ by ಪ್ರತಿಧ್ವನಿ
February 4, 2023
in ಇತರೆ / Others, ಇದೀಗ, ಕರ್ನಾಟಕ, ರಾಜಕೀಯ
0
ಬಿಜೆಪಿಯವರು600 ಭರವಸೆಗಳನ್ನು ನೀಡಿದ್ದರು ಅದರಲ್ಲಿ 50 ಭರವಸೆಗಳನ್ನು ಕೂಡ ಈಡೇರಿಸಿಲ್ಲ
Share on WhatsAppShare on FacebookShare on Telegram

ADVERTISEMENT

ನಮ್ಮಲ್ಲಿ ಈಗ 69 ಕಾಂಗ್ರೆಸ್‌ ಶಾಸಕರು ಇದ್ದಾರೆ ಮತ್ತು ಇಬ್ಬರು ಪಕ್ಷೇತರ ಶಾಸಕರು ನಮಗೆ ಬೆಂಬಲ ನೀಡಿದ್ದಾರೆ. ಒಟ್ಟು 71 ಶಾಸಕರಿದ್ದೇವೆ. ಈ 71 ಜನರೂ ಮುಂದಿನ ಚುನಾವಣೆಯಲ್ಲಿ ಗೆಲ್ಲುತ್ತಾರೆ ಎಂದು ನಾನು ಹೇಳಲ್ಲ, ಆದರೆ 99% ಜನ ಗೆಲ್ಲುತ್ತಾರೆ. ಕಾಂಗ್ರೆಸ್‌ ಸೇರುವವರು ತುಂಬಾ ಜನ ಇದ್ದಾರೆ, ನಮ್ಮ ಪಕ್ಷದ ಸಿದ್ದಾಂತಗಳನ್ನು ಒಪ್ಪಿಕೊಂಡು ಬಂದವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ.

ಸಿಟಿ ರವಿ ಒಬ್ಬ ಸುಳ್ಳು ಹೇಳುವ ರಾಜಕಾರಣಿ. ಪಕ್ಕಾ ಆರ್‌,ಎಸ್‌,ಎಸ್‌ ವ್ಯಕ್ತಿ. ಅಂಥವರ ಮಾತಿಗೆ ಬೆಲೆ ಕೊಡಬೇಕಾದ ಅಗತ್ಯವಿಲ್ಲ. ಡಿ.ಕೆ ಶಿವಕುಮಾರ್‌ ಮತ್ತು ಪಕ್ಷದಿಂದ ಸಮೀಕ್ಷೆ ನಡೆದಿದ್ದು ನಾವು ಬಹುಮತ ಪಡೆಯುವುದು ನಿಶ್ಚಯ ಎಂಬ ವರದಿ ಇದೆ, ಇಂತಿಷ್ಟೇ ಸ್ಥಾನಗಳಲ್ಲಿ ಗೆಲ್ಲುತ್ತೇವೆ ಎಂದು ಇಲ್ಲಿ ಹೇಳುವುದಿಲ್ಲ.

ದೇವೇಗೌಡರು, ಕುಮಾರಸ್ವಾಮಿ ಅವರು ಕಣ್ಣೀರು ಹಾಕುವುದು ಯಾಕೆ ಎಂದು ಜನರಿಗೆ ಈಗ ಅರ್ಥವಾಗಿದೆ. ಕಣ್ಣೀರು ಹಾಕುವುದರಿಂದ ಜನರ ಸಿಂಪತಿ ಸಿಗುತ್ತೆ ಅಂದುಕೊಂಡರೆ ಅದು ತಪ್ಪುಕಲ್ಪನೆ. ಅವರಿಗೆ ತೊಂದರೆ ಆದಾಗಲೆಲ್ಲ ಕಣ್ಣೀರು ಹಾಕುವುದು ಮಾತ್ರ ನಿಜ.

ಎಂ.ಬಿ ಪಾಟೀಲರಿಗೆ ಅಸಮಾಧಾನ ಇದ್ದರೆ ಅವರು ಇಂದು ನನ್ನ ಜೊತೆ ಹೀಗೆ ಕೂತುಕೊಳ್ತಿದ್ದರಾ? ಅಂಥಾ ಯಾವ ಅಸಮಾಧಾನಗಳು ಇಲ್ಲ.

ನನಗೆ 75 ವರ್ಷ ತುಂಬಿದ್ದರ ಪ್ರಯುಕ್ತ ನಮ್ಮ ಪಕ್ಷದ ನಾಯಕರು ಎಲ್ಲರೂ ಸೇರಿಕೊಂಡು “ನಿಮಗೆ 75 ವರ್ಷ ತುಂಬಿದೆ, ಇದು ಜೀವನದ ಒಂದು ಮೈಲಿಗಲ್ಲು, ಹಾಗಾಗಿ ಜನ್ಮದಿನದ ಆಚರಣೆ ಮಾಡೋಣ” ಎಂದರು. ಅದಕ್ಕೆ ನಾನು ಒಪ್ಪಿಗೆ ಕೊಟ್ಟಿದ್ದೆ, ಕಾರ್ಯಕ್ರಮವೂ ಬಹಳಾ ಚೆನ್ನಾಗಿ ನಡೆಯಿತು. ಬಿಜೆಪಿಯವರು ಇದೇ ರೀತಿ ಕಾರ್ಯಕ್ರಮ ಮಾಡುವ ಬಗ್ಗೆ ನನಗೆ ಮಾಹಿತಿ ಇಲ್ಲ.

2018ರಲ್ಲಿ ಬಿಜೆಪಿಯವರು ಜನರಿಗೆ ತಮ್ಮ ಪ್ರಣಾಳಿಕೆಯ ಮೂಲಕ 600 ಭರವಸೆಗಳನ್ನು ನೀಡಿದ್ದರು, ಅದರಲ್ಲಿ 50 ಭರವಸೆಗಳನ್ನು ಕೂಡ ಈಡೇರಿಸಿಲ್ಲ. ಅಂದರೆ ಅವರು ತಮ್ಮ 10% ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದ್ದಾರೆ ಎಂದರ್ಥ. ಆದರೆ ನಾವು 165 ಭರವಸೆಗಳನ್ನು ನೀಡಿ ನಮ್ಮ ಸರ್ಕಾರದ ಅವಧಿಯಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೆವು, ಇದರ ಜೊತೆಗೆ 30 ಹೊಸ ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದೆವು. ಈಗ ಮತ್ತೆ ನಾವು ಜನರಿಗೆ ಯಾವೆಲ್ಲಾ ಭರವಸೆ ನೀಡುತ್ತಿದ್ದೇವೆ ಅವೆಲ್ಲವನ್ನೂ ಜಾರಿ ಮಾಡುತ್ತೇವೆ, ನಮ್ಮ ಪ್ರತಿ ಬಜೆಟ್‌ ಮಂಡಿಸುವ ಮೊದಲು ಬಜೆಟ್‌ ಪೂರ್ವ ಸಭೆಗಳಲ್ಲಿ ಒಂದು ಕಡೆ ನಮ್ಮ ಪ್ರಣಾಳಿಕೆ ಇನ್ನೊಂದು ಕಡೆ ಜನರ ಅಗತ್ಯತೆಗಳನ್ನು ಇಟ್ಟುಕೊಂಡು ಚರ್ಚೆ ಮಾಡಿ ಕಾರ್ಯಕ್ರಮ ರೂಪಿಸುತ್ತಿದ್ದೆವು.

ಈ ಸರ್ಕಾರ ಅನಗತ್ಯ ಖರ್ಚುಗಳನ್ನು ಕಡಿಮೆ ಮಾಡಬೇಕು, ಸಾಲ ಪಡೆಯುವುದನ್ನು ಕಡಿಮೆ ಮಾಡಬೇಕು, ಭ್ರಷ್ಟಾಚಾರವನ್ನು ನಿಲ್ಲಿಸಬೇಕು. 100 ರೂಪಾಯಿಯ ಒಂದು ಕಾಮಗಾರಿಯಲ್ಲಿ 40 ರೂ. ಕಮಿಷನ್‌ ನೀಡಿದರೆ ಉಳಿಯುವುದು 60 ರೂ. ಇದರಲ್ಲಿ 18 ರೂ. ಜಿಎಸ್‌ಟಿ ನೀಡಿದರೆ 42 ರೂ. ಉಳಿಯುತ್ತೆ. ಹೀಗಾದರೆ ಯೋಜನೆ ಗುಣಮಟ್ಟದಿಂದ ಕೂಡಿರಲ್ಲ ಮತ್ತು ಶೀಘ್ರದಲ್ಲಿ ಕಾಮಗಾರಿ ಮುಗಿಯುವುದಿಲ್ಲ. ಹಿಂದೆ ಲಂಚವೇ ಇರಲಿಲ್ಲ ಎಂದು ಹೇಳಲ್ಲ, ಆದರೆ 40% ನಷ್ಟು ಲಂಚ ಯಾವತ್ತೂ ಇರಲಿಲ್ಲ. ಬಿಲ್‌ ಬರಲಿಲ್ಲ ಎಂಬ ಕಾರಣಕ್ಕೆ ಗುತ್ತಿಗೆದಾರರು ಯಾವ ಕಾಲದಲ್ಲೂ ಆತ್ಮಹತ್ಯೆ ಮಾಡಿಕೊಂಡ ನಿದರ್ಶನ ಇಲ್ಲ. ಗುತ್ತಿಗೆದಾರರ ಸಂಘದವರು ನೇರವಾಗಿ ಪ್ರಧಾನಿಗಳಿಗೆ ಪತ್ರ ಬರೆದ ನಿದರ್ಶನ ಕೂಡ ಇರಲಿಲ್ಲ. ಎನ್‌ಒಸಿ ಗೆ 8 ರಿಂದ 10% ಲಂಚ ನಿಗದಿ ಮಾಡಿದ್ದಾರೆ, ನಾನು 12 ವರ್ಷ ಹಣಕಾಸಿನ ಮಂತ್ರಿಯಾಗಿದ್ದೆ, ಯಾರಾದರೂ ಒಬ್ಬ ಸಿದ್ದರಾಮಯ್ಯರಿಗೆ 5 ಪೈಸೆ ಲಂಚ ನೀಡಿದ್ದೆ ಎಂದರೆ ರಾಜಕೀಯ ನಿವೃತ್ತಿಯಾಗುತ್ತೇನೆ.

5 ಲಕ್ಷ 40 ಸಾವಿರ ಕೋಟಿ ಸಾಲ ಮಾಡಿದ್ದಾರೆ. ಈ ವರ್ಷ 29 ಸಾವಿರ ಕೋಟಿ ಬಡ್ಡಿಗೆ ಪಾವತಿ ಮಾಡಬೇಕು. 14 ಸಾವಿರ ಕೋಟಿ ಅಸಲಿಗೆ ಕಟ್ಟಬೇಕು. ಸಾಲ ಜಾಸ್ತಿಯಾದಷ್ಟು ಬಡ್ಡಿ ಕಟ್ಟಬೇಕಾದ ಹಣ ಮತ್ತು ಅಸಲಿನ ಕಂತು ಜಾಸ್ತಿಯಾಗುತ್ತದೆ. 2018 ಮಾರ್ಚ್‌ ನಲ್ಲಿ ಮುಖ್ಯಮಂತ್ರಿ ಹುದ್ದೆಯಿಂದ ಇಳಿಯುವಾಗ ಈ ರಾಜ್ಯದ ಮೇಲೆ ಇದ್ದ ಒಟ್ಟು ಸಾಲ 2 ಲಕ್ಷದ 42 ಸಾವಿರ ಕೋಟಿ. ಇದು ಸ್ವಾತಂತ್ರ್ಯ ನಂತರದಿಂದ ನಮ್ಮ ಸರ್ಕಾರದ ಕೊನೆಯವರೆಗಿದ್ದ ಸಾಲ, ಬಿಜೆಪಿ ಬಂದ ನಂತರ 4 ವರ್ಷಗಳಲ್ಲಿ 3 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಇದರಿಂದ ಅನಗತ್ಯ ಹೊರೆ ಜಾಸ್ತಿಯಾಗಿದೆ, ಹೀಗಾದಾಗ ಅಭಿವೃದ್ಧಿ ಕಾರ್ಯಗಳಿಗೆ ಹಣ ಸಿಗುವುದಿಲ್ಲ. ರಸ್ತೆ, ಸೇತುವೆ, ನೀರಾವರಿ, ಮನೆ ಕಟ್ಟಿಸಿಕೊಡಲು, ಶಿಕ್ಷಣ ಈ ಎಲ್ಲಾ ಕಾರ್ಯಗಳಿಗೆ ಹಣದ ಕೊರತೆ ಆಗುತ್ತದೆ.

ಅದಾನಿಯಂತಹ ಬಂಡವಾಳಶಾಹಿಗಳ ಗುಂಪಿಗೆ ಮೋದಿ ಅವರು ಸಾಲ ಕೊಡಿಸಿದ್ರು, ಈಗ ಅಂಥಾ ಕಂಪೆನಿಗಳು ನಷ್ಟದಲ್ಲಿದ್ದಾವೆ. ಮುಂದೊಂದು ದಿನ ಇದನ್ನು ಎನ್‌ಪಿಎ ಮಾಡಿ ಸಾಲ ಮನ್ನಾ ಮಾಡಿಬಿಡುತ್ತಾರೆ. ಬರಬೇಕಾದ ಬ್ಯಾಂಕ್‌ ಹಣ ಮುಳುಗಿಹೋದರೆ ದೇಶದ ಮೇಲೆ ಖಂಡಿತಾ ಪ್ರಭಾವ ಬೀರುತ್ತದೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬಿಜೆಪಿ  ಅಂತರಿಕ ಸಭೆಯಲ್ಲಿ ಗೆಲ್ಲುವ ಕ್ಷೇತ್ರಗಳ ವಿಂಗಡಣೆ..! A,B,C,D ಸೂತ್ರ..!!

Next Post

ಘೋಷಿತ 93 ಅಭ್ಯರ್ಥಿಗಳ ಸಭೆ ಕರೆದ ಮಾಜಿ ಸಿಎಂ: ಅಭ್ಯರ್ಥಿಗಳಿಗೆ ಖಡಕ್ ಕ್ಲಾಸ್ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

Related Posts

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?
ರಾಜಕೀಯ

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

by ಪ್ರತಿಧ್ವನಿ
May 22, 2026
0

ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನಡುವಿನ ಆತ್ಮೀಯ ಬಾಂಧವ್ಯ ಇದೀಗ ಜಾಗತಿಕ ರಾಜತಾಂತ್ರಿಕ ವಲಯದಲ್ಲೇ ಭಾರಿ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
Next Post
ಘೋಷಿತ 93 ಅಭ್ಯರ್ಥಿಗಳ ಸಭೆ ಕರೆದ ಮಾಜಿ ಸಿಎಂ: ಅಭ್ಯರ್ಥಿಗಳಿಗೆ ಖಡಕ್ ಕ್ಲಾಸ್ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

ಘೋಷಿತ 93 ಅಭ್ಯರ್ಥಿಗಳ ಸಭೆ ಕರೆದ ಮಾಜಿ ಸಿಎಂ: ಅಭ್ಯರ್ಥಿಗಳಿಗೆ ಖಡಕ್ ಕ್ಲಾಸ್ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada