• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಅಂಕಣ

ಬ್ರಾಹ್ಮಣ ಸ್ವಾಮೀಜಿಗೆ ಪ್ರಾಣ ಬೆದರಿಕೆ ಹಾಕಿದ್ಯಾರು..!? ಕೇಂದ್ರ ಮಾಡಿದ್ದೇನು..?

ಕೃಷ್ಣ ಮಣಿ by ಕೃಷ್ಣ ಮಣಿ
February 9, 2023
in ಅಂಕಣ
0
ಬ್ರಾಹ್ಮಣ ಸ್ವಾಮೀಜಿಗೆ ಪ್ರಾಣ ಬೆದರಿಕೆ ಹಾಕಿದ್ಯಾರು..!? ಕೇಂದ್ರ ಮಾಡಿದ್ದೇನು..?
Share on WhatsAppShare on FacebookShare on Telegram

ಬ್ರಾಹ್ಮಣ ವಿಚಾರ ಕಳೆದ ನಾಲ್ಕೈದು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಇದರ ನಡುವೆ, ಬ್ರಾಹ್ಮಣ ಸಮುದಾಯದ ಸ್ವಾಮೀಜಿ ಒಬ್ಬರಿಗೆ ಜೀವ ಬೆದರಿಕೆ ಬಂದಿದ್ದು, ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ಆಧರಿಸಿದ ಕೇಂದ್ರ ಗೃಹ ಇಲಾಖೆ Y ಕೆಟಗರಿ ಭದ್ರತೆ ನೀಡುವ ನಿರ್ಧಾರ ಕೈಗೊಂಡಿದೆ. ಈಗಾಗಲೇ ಈ ಬಗ್ಗೆ ಮಠಕ್ಕೆ ರಾಜ್ಯ ಪೊಲೀಸ್ರು ಭದ್ರತೆ ಕೈಗೊಂಡಿದ್ದು, ಮುಂದಿನ ಎರಡು ದಿನಗಳಲ್ಲಿ ಕೇಂದ್ರ ಸರ್ಕಾರದ ಅಧಿಕೃತ ಆದೇಶ ಪತ್ರ ಮಠಕ್ಕೆ ಬರಲಿದೆ ಎನ್ನಲಾಗಿದೆ. ಯದುಗಿರಿ ಯತಿರಾಜ ಶ್ರೀಗಳಿಗೆ ಪ್ರಾಣ ಬೆದರಿಕೆ ಬಂದಿರುವ ಮಾಹಿತಿ ಹಿನ್ನೆಲೆ ಮಲ್ಲೇಶ್ವರಂನ ಸಂಪಿಗೆ ರಸ್ತೆಯ ಮಠದಲ್ಲಿ ಬಂದೋಬಸ್ತ್​ ಮಾಡಲಾಗಿದೆ.

ADVERTISEMENT

ರಾಮಾನುಜ ಜೀಯರ್ ಸ್ವಾಮೀಜಿಗೆ ಕಿಡಿಗೇಡಿಗಳು ನಿರಂತರವಾಗಿ ಪ್ರಾಣಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಮೂಲಭೂತವಾದಿ ಸಂಘಟನೆಗಳಿಂದ ಪ್ರಾಣ ಬೆದರಿಕೆ ಬರುತ್ತಿದ್ದ ವಿಚಾರದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮಠದ ಟ್ರಸ್ಟಿಗಳು ಪತ್ರ ಬರೆದು ಮಾಹಿತಿ ನೀಡಲಾಗಿತ್ತು. ಕೇಂದ್ರ ಗೃಹ ಮಂತ್ರಿಗಳಿಗೆ ಮಾಹಿತಿ ಹೋಗುತ್ತಿದ್ದಂತೆ, ಬೆಂಗಳೂರಿನ ಮಲ್ಲೇಶ್ವರಂ, ತೆಲಂಗಾಣ, ಆಂಧ್ರದಲ್ಲಿರುವ ಮಠಕ್ಕೆ ಭದ್ರತೆ ನೀಡುವ ವ್ಯವಸ್ಥೆ ಮಾಡಲಾಗಿದೆ. ಶ್ರೀ ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಸ್ವಾಮೀಜಿ ಅವರಿಗೆ ಜೀವಭಯ ಇರುವ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆ ಕೂಡ ಮಾಹಿತಿ ಸಂಗ್ರಹಿಸಿತ್ತು.

ಕೆಲವು ಸಂಘಟನೆಗಳ ಬ್ಯಾನ್​ ನಿರ್ಧಾರದ ಎಫೆಕ್ಟ್​..!

ದೇಶದಲ್ಲಿ ನರೇಂದ್ರ ಮೋದಿ ಸರ್ಕಾರ ಕೆಲವು ಸಮುದಾಯಕ್ಕೆ ಸೇರಿದ ಸಂಘಟನೆಗಳನ್ನು ನಿಷೇಧ ಮಾಡುವ ತೀರ್ಮಾನ ತೆಗೆದುಕೊಂಡಿತ್ತು. ಆ ನಿರ್ಧಾರದ ಬಳಿಕ ಸಾಕಷ್ಟು ಬೆದರಿಕೆ ಕರೆಗಳು ಬಂದಿದ್ದವು ಎನ್ನಲಾಗಿದೆ. ರಾಮಾನುಜ ಜೀಯರ್ ಸ್ವಾಮೀಜಿ​ ಸೇರಿದಂತೆ ಕೆಲವು ಬಲಪಂಥೀಯರು ಹಿಟ್​ಲಿಸ್ಟ್​ನಲ್ಲಿ ಇದ್ದಾರೆ ಎನ್ನಲಾಗಿತ್ತು. ಅದರಲ್ಲಿ ರಾಮಾನುಜ ಜೀಯರ್ ಸ್ವಾಮೀಜಿ ಕೂಡ ಒಬ್ಬರು. ಇದೇ ಕಾರಣದಿಂದ ಬೆದರಿಕೆ ಬರುತ್ತಿದ್ದ ಹಾಗೆ ಕೇಂದ್ರ ಸರ್ಕಾರದ ಗಮನ ಸೆಳೆದಿರುವ ಮಠದ ಟ್ರಸ್ಟಿಗಳು ಸ್ವಾಮೀಜಿಗಳ ಜೀವಕ್ಕೆ ಯಾವುದೇ ಸಂಕಷ್ಟ ಬಾರದಂತೆ ವೈ ಕೆಟಗರಿ ಭದ್ರತೆ ಸಿಗುವಂತೆ ನೋಡಿಕೊಂಡಿದ್ದಾರೆ.

Y ಕೆಟಗರಿ ಸೆಕ್ಯೂರಿಟಿ ಅಂದ್ರೆ ಹೇಗಿರುತ್ತೆ?

ಕೇಂದ್ರ ಗೃಹ ಇಲಾಖೆಯಡಿ ದೇಶದ ಗಣ್ಯರ ಭದ್ರತೆಗೆ Z ಕೆಟಗರಿ, Y ಕೆಟಗರಿ ಸೇರಿದಂತೆ ಸಾಕಷ್ಟು ಹಂತಗಳಲ್ಲಿ ಭದ್ರತೆ ನೀಡಲಾಗುತ್ತದೆ. ಗಣ್ಯರ ಸ್ಥಾನಮಾನ ಹಾಗು ಗಣ್ಯರಿಗೆ ಸಮಾಜದ ದುಷ್ಕರ್ಮಿಗಳಿಂದ ಇರುವ ಅಪಾಯದ ಆಧಾರದಲ್ಲಿ ಸೆಕ್ಯೂರಿಟಿ ನೀಡುವ ನಿರ್ಧಾರ ಮಾಡಲಾಗುದೆ. ಈ Y ಕೆಟಗರಿ ಭದ್ರತೆಯಲ್ಲಿ ಒಟ್ಟು 28 ಮಂದಿ ಭದ್ರತಾ ಸಿಬ್ಬಂದಿ ಇರಲಿದ್ದಾರದೆ. ಈ ಟೀಂನಲ್ಲಿ ಒಬ್ಬರು ಅಥವಾ ಇಬ್ಬರು ಕಮಾಂಡೋಗಳು ಇತ್ತರುತ್ತಾರೆ. ಇನ್ನುಳಿದಂತೆ ತರಬೇತಿ ಪಡೆದ ಪೊಲೀಸರು ಇರುತ್ತಾರೆ. ಯಾವ ಗಣ್ಯರಿಗೆ ಭದ್ರತೆ ಒದಗಿಸಲಾಗುತ್ತದೆಯೋ ಅವರಿಗೆ ಮೂರು ಪಾಳಿಗಳಲ್ಲೂ ಭದ್ರತೆ ನೀಡಲಾಗುತ್ತದೆ. ದಿನದ 24 ಗಂಟೆಗಳ ಕಾಲ ಶಸ್ತ್ರಧಾರಿತ ಕಮಾಂಡೋಗಳು ಭದ್ರತೆ ನೀಡುತ್ತಾರೆ.

ಬ್ರಾಹ್ಮಣ ಸ್ವಾಮೀಜಿ ಟಾರ್ಗೆಟ್​ ಆಗಿದ್ದು ಯಾಕೆ..?

ರಾಮಾನುಜ ಜೀಯರ್ ಸ್ವಾಮೀಜಿ ಜಮ್ಮು ಕಾಶ್ಮೀರ, ಅಯೋಧ್ಯೆ ಸೇರಿದಂತೆ ಹಲವಾರು ಕಡೆಗಳಲ್ಲಿ ರಾಮಾನುಜರ ಮೂರ್ತಿಗಳನ್ನು ಸ್ಥಾಪಿಸುವ ಮೂಲಕ ಧರ್ಮ ಪ್ರಚಾರ ಮಾಡುತ್ತಿದ್ದರು ಎನ್ನಲಾಗಿದೆ. ರಾಮಾನುಜ ಜೀಯರ್ ಸ್ವಾಮೀಜಿ ದೇಶಾದ್ಯಂತ ಧರ್ಮ ಪ್ರಚಾರ ಹಾಗು ಶಾಂತಿ ಸ್ಥಾಪನೆಯ ಕೆಲಸ ಮಾಡುತ್ತಿದ್ದರು. ಇದು ಕೆಲವು ಪಟ್ಟಭದ್ರ ಹಿತಾಸಕ್ತಿಗಳಮನ್ನು ಕೆರಳಿಸಿತ್ತು ಎನ್ನುವ ಮಾಹಿತಿ ಇದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಕೂಡ ರಾಜ್ಯ ಪೊಲೀಸ್​ ಅಧಿಕಾರಿಗಳಿಂದ ಈ ಬಗ್ಗೆ ಮಾಹಿತಿ ಪಡೆದುಕೊಂಡಿದ್ದು, ಶೀಘ್ರದಲ್ಲಿ ಸ್ವಾಮೀಜಿಗಳನ್ನು ಭೇಟಿ ಮಾಡಿ ಮಾಹಿತಿ ಪಡೆಯಲಿದ್ದಾರೆ ಎನ್ನಲಾಗಿದೆ.

Tags: Y ಕೆಟಗರಿ ಸೆಕ್ಯೂರಿಟಿಬೆಂಗಳೂರುರಾಮಾನುಜ ಜೀಯರ್ ಸ್ವಾಮೀಜಿ
Previous Post

ಟಾಂಗ್ ಗೆ ವ್ಯಂಗ್ಯವಾಗಿ ಟಾಂಗ್ ಕೊಟ್ಟ ಗುಡುಗಿದ ಮೋದಿ..!

Next Post

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರೇ ಅಂತಿಮ: ಸಿಎಂ ಬಸವರಾಜ ಬೊಮ್ಮಾಯಿ

Related Posts

ಹೆಣ್ಣು ದನಿಗೆ ದನಿಯಾಗುವ ಸಾಹಿತ್ಯ ಹೂರಣ-ನಾ ದಿವಾಕರ ಲೇಖನ
ಅಂಕಣ

ಹೆಣ್ಣು ದನಿಗೆ ದನಿಯಾಗುವ ಸಾಹಿತ್ಯ ಹೂರಣ-ನಾ ದಿವಾಕರ ಲೇಖನ

by ಪ್ರತಿಧ್ವನಿ
April 10, 2026
0

ಹೆಣ್ಣು ದನಿಗೆ ದನಿಯಾಗುವ ಸಾಹಿತ್ಯ ಹೂರಣ ಅದರ ಗರ್ಭದಲ್ಲಿರುವ ಕ್ಷೀಣ ದನಿಗಳನ್ನು ಸಮಾಜಕ್ಕೆ ಮರುಪರಿಚಯಿಸುವ ಸಾಹಿತ್ಯಿಕ ಕೃತಿ “ ಹಾಸನ ಮಣ್ಣಿನ ಹೆಣ್ಣು ದನಿಗಳು ” ನಾ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ಮಹತ್ಮಾ ಗಾಂಧಿ ನರೇಗಾ ಅಸ್ತಮಯ, ವಿಬಿಜಿ-ರಾಮ್ ಜಿ ಉದಯ: ಕರ್ನಾಟಕದ ಗ್ರಾಮೀಣ ಬದುಕಿನಲ್ಲಿ ಉದ್ಯೋಗದ ಬಿಕ್ಕಟ್ಟು

ಮಹತ್ಮಾ ಗಾಂಧಿ ನರೇಗಾ ಅಸ್ತಮಯ, ವಿಬಿಜಿ-ರಾಮ್ ಜಿ ಉದಯ: ಕರ್ನಾಟಕದ ಗ್ರಾಮೀಣ ಬದುಕಿನಲ್ಲಿ ಉದ್ಯೋಗದ ಬಿಕ್ಕಟ್ಟು

April 7, 2026
ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು- ಭಾಗ 4

ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು- ಭಾಗ 4

April 6, 2026
ಬೆಂಗಳೂರುದಲ್ಲಿ ಅನುಮಾನಾಸ್ಪದ ಬೊಲೆರೋ ಕಾರು : ಆತಂಕದ ವೈರಲ್ ವಿಡಿಯೋಗೆ ಪೊಲೀಸ್ ಪರಿಶೀಲನೆ

ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

April 3, 2026
Next Post
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರೇ ಅಂತಿಮ: ಸಿಎಂ ಬಸವರಾಜ ಬೊಮ್ಮಾಯಿ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರೇ ಅಂತಿಮ: ಸಿಎಂ ಬಸವರಾಜ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada