• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಎಚ್.ಡಿ.ಕುಮಾರಸ್ವಾಮಿಗೆ ಅಡಕೆ ತಟ್ಟೆ, ವಾಟರ್ ಬಾಟಲ್ ಹಾರ ಹಾಕಿ ಸ್ವಾಗತ

ಪ್ರತಿಧ್ವನಿ by ಪ್ರತಿಧ್ವನಿ
February 21, 2023
in ಕರ್ನಾಟಕ, ರಾಜಕೀಯ
0
ಎಚ್.ಡಿ.ಕುಮಾರಸ್ವಾಮಿಗೆ ಅಡಕೆ ತಟ್ಟೆ, ವಾಟರ್ ಬಾಟಲ್ ಹಾರ ಹಾಕಿ ಸ್ವಾಗತ
Share on WhatsAppShare on FacebookShare on Telegram

ಭದ್ರಾವತಿ : 2023 ಕ್ಕೆ ಶತಾಯಗತಾಯ ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜ್ಯ ಪ್ರವಾಸ ಮಾಡುತ್ತಿರುವ ಜೆಡಿಎಸ್ ದಳಪತಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮಲೆನಾಡು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಅಬ್ಬರದ ಪ್ರಚಾರ ಆರಂಭಿಸಿದ್ದಾರೆ.

ADVERTISEMENT

ಶಿವರಾತ್ರಿ ಹಬ್ಬದ ಹಿನ್ನೆಲೆ ಪಂಚರತ್ನ ರಥಯಾತ್ರೆಗೆ ಬ್ರೇಕ್ ನೀಡಿದ್ದ ಮಾಜಿ ಸಿಎಂ ಹೆಚ್ಡಿಕೆ, ಶಿವಮೊಗ್ಗದಲ್ಲಿ ಯಾತ್ರೆ ಪುನಾರಂಭ ಮಾಡಿದ್ದು, ಜೆಡಿಎಸ್ ಕಾರ್ಯಕರ್ತರು ವಿಭಿನ್ನ ಹಾರ, ಬೈಕ್ ರ್ಯಾಲಿ ಜೊತೆಗೆ ಅಭೂತಪೂರ್ವ ಸ್ವಾಗತ ಕೋರುವ ಮೂಲಕ ಮೊದಲ ದಿನದ ಪಂಚರತ್ನ ಯಾತ್ರೆ ಭರ್ಜರಿ ರೆಸ್ಪಾನ್ಸ್ ನೀಡಿದ್ದಾರೆ.

ಹೌದು, ಜೆಡಿಎಸ್ ಪಕ್ಷದ ಪಂಚರತ್ನ ಯಾತ್ರೆಗೆ ಮಲೆನಾಡು ಶಿವಮೊಗ್ಗದಲ್ಲಿ ಇಂದು ಅಭೂತಪೂರ್ವ ಸ್ವಾಗತ ದೊರೆಕಿದೆ.

ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಇಂದು ಬೆಳಿಗ್ಗೆ ಭದ್ರಾವತಿ ತಾಲೂಕಿನ ಕಾರೆಹಳ್ಳಿಗೆ ಆಗಮಿಸುತ್ತಿದ್ದಂತೆ ಸಾವಿರಾರು ಕಾರ್ಯಕರ್ತರು ವಿವಿಧ ಬಗೆಯ ಹಾರಗಳನ್ನು ಹಾಕುವ ಮೂಲಕ ನೆಚ್ಚಿನ ನಾಯಕನಿಗೆ ಸ್ವಾಗತ ಕೋರಿದ್ದಾರೆ.

ಭದ್ರಾವತಿ ವಿಧಾನಸಭಾ ವ್ಯಾಪ್ತಿಯ ಕಾರೆಹಳ್ಳಿ, ಬಾರಂದೂರು, ಕೆಂಚನಹಳ್ಳಿ, ಮಾವಿನಕರೆ, ತಾಷ್ಕಂಟ್ ನಗರ, ಹೀರಹಳ್ಳಿ, ಮಾರುತಿ ನಗರ , ಅಂತರಗಂಗೆ , ಶಿವಾಜಿ ವೃತ್ತ, ರಂಗಪ್ಪ ಸರ್ಕಲ್, ಕನಕ ಮಂಟಪ ಸೇರಿದಂತೆ ಹಲವು ಹಳ್ಳಿಗಳ ಮಾರ್ಗವಾಗಿ ಸಾಗಿದ ಪಂಚರತ್ನ ಯಾತ್ರೆಯಲ್ಲಿ ಹೆಚ್‌ಡಿಕೆ, ಜೆಡಿಎಸ್ ಪಕ್ಷದ ಅಭ್ಯರ್ಥಿ ಶಾರದ ಅಪ್ಪಾಜಿ ಗೌಡರಿಗೆ ಮತಯಾಚನೆ ಮಾಡಿದರು.

ರಾಜ್ಯದಲ್ಲಿನ ಪ್ರಸ್ತುತ ಸಮಸ್ಯೆಗಳಿಗೆ ಪಂಚರತ್ನ ಯೋಜನೆ ಮೂಲಕ ಪರಿಹಾರ ನೀಡುತ್ತೇವೆ. ಪಂಚರತ್ನ ಯೋಜನೆ ಮೂಲಕ ಶಿಕ್ಷಣ, ಆರೋಗ್ಯ, ಉದ್ಯೋಗ, ಕೃಷಿಗೆ ಹೆಚ್ಚು ಆದ್ಯತೆ ನೀಡುವುದರ ಜೊತೆಗೆ ಸಂಧ್ಯಾಕಾಲದಲ್ಲಿ ವಯೋವೃದ್ಧರಿಗೆ 5 ಸಾವಿರ ನೀಡುತ್ತೇವೆ ಎಂದು ಭರವಸೆ ನೀಡಿದ್ದಾರೆ.

ರಥಯಾತ್ರೆಯಲ್ಲಿ ಸಾಗಿ ಬಂದ ಮಾಜಿ ಸಿಎಂ ಹೆಚ್ಡಿಕೆ, ಭದ್ರಾವತಿ ಅಭ್ಯರ್ಥಿ ಶಾರದಾ ಅಪ್ಪಾಜಿಗೌಡ, ಜಿಲ್ಲಾಧ್ಯಕ್ಷ ಎಂ.ಶ್ರೀಕಾಂತ್ ಅವರಿಗೆ ಹೂವಿನ ಹಾರಗಳ ಜೊತೆ ವಿಭಿನ್ನ ಹಾರ ಸಹ ಹಾಕಿದ್ದಾರೆ.

ಭದ್ರಾವತಿಯ ಬಾರಂದೂರಿನಲ್ಲಿ ಅಡಿಕೆ ತಟ್ಟೆ ಹಾರ, ಗೌರಪುರದಲ್ಲಿ ಕಲ್ಲಂಗಡಿ ಹಾರ ಹಾಗೂ ಅತಂರಗಂಗೆ ಗ್ರಾಮದಲ್ಲಿ ವಾಟರ್ ಬಾಟಲ್ ಹಾರ ಹಾಕಿ, ಮುಖಂಡರು- ಕಾರ್ಯಕರ್ತರು ಸ್ವಾಗತ ಕೋರಿದ್ದಾರೆ.

ಇನ್ನೂ ಪಂಚರತ್ನ ರಥಯಾತ್ರೆ ಸಾಗಿದ ಭದ್ರಾವತಿಯ ಹಳ್ಳಿಯ ರಸ್ತೆಗಳು ಕಿರಿದಾಗಿದ್ದರಿಂದ ಕೆಲಕಾಲ ವಾಹನ ಸವಾರರು ವಾಹನ ದಟ್ಟಣೆಯಿಂದ ಕಿರಿ ಕಿರಿ ಅನುಭವಿಸಿದರು‌.

ಸುಡುವ ಬಿಸಿಲಿನಲ್ಲಿ ತೆರೆದ ವಾಹನದಲ್ಲಿ ಮುಂದೆ ಸಾಗಿದ ಮಾಜಿ ಸಿಎಂ ಹೆಚ್ಡಿಕೆ, ಪ್ರತಿ ಹಳ್ಳಿಯಲ್ಲೂ ಕಾರ್ಯಕರ್ತರು ಹಾಗೂ ಜನರನ್ನುದ್ದೇಶಿಸಿ ಮಾತನಾಡಿದರು.

 ನಮ್ಮದು ರೈತರು, ಕೂಲಿ ಕಾರ್ಮಿಕ ಪರವಾದ ಸರ್ಕಾರ ಎಂದು ಈಗಾಗಲೇ ಸಾಬೀತು ಪಡಿಸಿದ್ದೇವೆ. ಮುಂದಿನ ದಿನದಲ್ಲಿ ಈ ವರ್ಗದ ಜನರ ಕಣ್ಣೀರು ಒರೆಸುತ್ತೇವೆ. ರಾಜ್ಯದಲ್ಲಿ ಶ್ರೀಮಂತ, ಬಡವ ಎನ್ನುವ ಬೇದವಿಲ್ಲದೆ ಎಲ್ಲರೂ ಒಂದೇ ಎನ್ನುವ ಭಾವನೆ ಮೂಡಿಸುವುದು ನಮ್ಮ ಉದ್ದೇಶವಾಗಿದ್ದು, ಭದ್ರಾವತಿಯ ವಿಐಎಸ್ ಎಲ್ ಮತ್ತು ಎಂಪಿಎಂ ಕಾರ್ಖಾನೆ ಕಾರ್ಮಿಕರ ಬದುಕು ಬೀದಿಗೆ ಬೀಳಲು ಬಿಡುವುದಿಲ್ಲ. ಅವರ ಅಳಲು ಆಲಿಸಲು ಮುಂದಿನ ದಿನದಲ್ಲಿ ಪಕ್ಷ ಅಧಿಕಾರಕ್ಕೆ ಬರಲಿದೆ. ಅದಕ್ಕೆ ನೀವು ಮನಸ್ಸು ಮಾಡ ಬೇಕು. ವಿಧಾನಸಭೆಗೆ ಜೆಡಿಎಸ್ ಅಭ್ಯರ್ಥಿ ಶಾರದಾ ಅಪ್ಪಾಜಿ ಗೌಡ ಅವರನ್ನು ಚುನಾವಣೆಯಲ್ಲಿ ಗೆಲ್ಲಿಸಿ ಎಂದು ಮನವಿ ಮಾಡಿದರು.

ಇನ್ನೂ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಹೆಚ್ಡಿಕೆ ರಥಯಾತ್ರೆ ಮುಂದುವರೆಸುತ್ತಿರುವುದು ಜಿಲ್ಲೆಯ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರಿಗೆ ಮತ್ತಷ್ಟು ಶಕ್ತಿ ನೀಡಿರುವುದಂತೂ ಸತ್ಯ.

Tags: H D KumarswamyJDS KarnatakaShivamogga
Previous Post

ಕೇಂದ್ರ ಸರ್ಕಾರ ನೀಡಿರುವ ಸಾಲ, ರಾಜ್ಯದ ಬಜೆಟ್ ಪುಸ್ತಕದಲ್ಲಿ ನೀಡಿರುವ ಅಂಕಿ ಅಂಶಗಳಲ್ಲಿ ವ್ಯಾತ್ಯಾಸವಿದೆ: ಸಿದ್ದರಾಮಯ್ಯ

Next Post

ಸಿದ್ದರಾಮಯ್ಯ ಮಾತಿಗೆ ಸದನ ಸೈಲೆಂಟ್ ಆಗಿದ್ದೇಕೆ …!

Related Posts

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ
ರಾಜಕೀಯ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

by ಪ್ರತಿಧ್ವನಿ
April 25, 2026
0

ನವದೆಹಲಿ: ದೇಶದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕ ರಾಘವ ಚಡ್ಡಾ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿರುವುದು ಮಹತ್ವದ ರಾಜಕೀಯ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
Next Post
ಸಿದ್ದರಾಮಯ್ಯ ಮಾತಿಗೆ ಸದನ ಸೈಲೆಂಟ್ ಆಗಿದ್ದೇಕೆ …!

ಸಿದ್ದರಾಮಯ್ಯ ಮಾತಿಗೆ ಸದನ ಸೈಲೆಂಟ್ ಆಗಿದ್ದೇಕೆ …!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada