• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಸವಣ್ಣನ ಹೆಸರು ಹೇಳುತ್ತಿರುವವರು, ಬಸವಣ್ಣನ ಮಾತಿನಂತೆ ನಡೆಯುತ್ತಿಲ್ಲ: ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
February 22, 2023
in Top Story, ರಾಜಕೀಯ
0
ಬಸವಣ್ಣನ ಹೆಸರು ಹೇಳುತ್ತಿರುವವರು, ಬಸವಣ್ಣನ ಮಾತಿನಂತೆ ನಡೆಯುತ್ತಿಲ್ಲ: ಸಿದ್ದರಾಮಯ್ಯ
Share on WhatsAppShare on FacebookShare on Telegram

ಬಾಗಲಕೋಟೆ: ಬಸವಣ್ಣನ ಹೆಸರು ಹೇಳುವವರು ಬಸವಣ್ಣನ ಮಾತಿನಂತೆ ನಡೆಯುತ್ತಿಲ್ಲ, ಅಂಥವರಿಗೆ ಮತ ಹಾಕುತ್ತೀರ? ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.

ADVERTISEMENT

ಜಿಲ್ಲೆಯ ಹುನಗುಂದದಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯ ಬೃಹತ್‌ ಸಾರ್ವಜನಿಕ ಸಮಾವೇಶದಲ್ಲಿ ಅವರು ಮಾತನಾಡಿದರು.

ಮೊದಲನೆಯದು ಪ್ರತೀ ಮನೆಯ ಯಜಮಾನಿಗೆ ಪ್ರತೀ ತಿಂಗಳು ರೂ.2,000 ದಂತೆ ವರ್ಷಕ್ಕೆ ರೂ.24,000 ನೀಡುತ್ತೇವೆ. ಎರಡನೆಯದು ರಾಜ್ಯದ ಪ್ರತೀ ಮನೆಗೆ ತಿಂಗಳಿಗೆ ಉಚಿತವಾಗಿ 200 ಯುನಿಟ್‌ ವಿದ್ಯುತ್‌ ಅನ್ನು ನೀಡುತ್ತೇವೆ. ನಾವು ಮುಂದೆ ಅಧಿಕಾರಕ್ಕೆ ಬಂದ ನಂತರ ಪ್ರತಿ ವ್ಯಕ್ತಿಗೆ 10 ಕೆ.ಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತೇವೆ. ಇದಕ್ಕೆ ಬದ್ಧರಿದ್ದೇವೆ ಎಂಬುದಕ್ಕೆ ಗ್ಯಾರೆಂಟಿ ಕಾರ್ಡ್‌ ಅನ್ನು ಕೂಡ ನೀಡಿದ್ದೇವೆ. ನಾವು ಕೊಟ್ಟ ಮಾತಿಗೆ ತಪ್ಪಿದರೆ ಒಂದು ಕ್ಷಣ ಕೂಡ ಅಧಿಕಾರದಲ್ಲಿ ಇರುವುದಿಲ್ಲ ಎಂದು ಹೇಳಿದರು.

ಇಂದು ರೈತರು ನನ್ನನ್ನು ಭೇಟಿ ಮಾಡಿ ನಂದವಾಡಿ ಏತನೀರಾವರಿ ಯೋಜನೆ ಮಾಡಿಕೊಡಬೇಕು ಎಂದು ಮನವಿ ಮಾಡಿದ್ದಾರೆ. ಈಗಾಗಲೇ ಮೊದಲ ಹಂತದ ಯೋಜನೆಯನ್ನು ಮಾಡಿಕೊಟ್ಟಿದ್ದೇವೆ, ಮುಂದೆ ಅಧಿಕಾರಕ್ಕೆ ಬಂದ ಮೇಲೆ ಎರಡನೇ ಹಂತದ ಯೋಜನೆಯನ್ನು ಕೂಡ ಮಾಡಿಕೊಡುತ್ತೇವೆ, ಈ ಬಗ್ಗೆ ಇಲ್ಲಿನ ರೈತರು ಯಾವುದೇ ಚಿಂತೆ ಮಾಡುವುದು ಬೇಡ. ರಾಜ್ಯದ ಎಲ್ಲಾ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದ್ದೇವೆ. ಬಾಗಲಕೋಟೆ ಜಿಲ್ಲೆಯಲ್ಲಿನ ಎಲ್ಲಾ ಸಂತ್ರಸ್ಥರಿಗೆ ಪುನರ್ವಸತಿ ವ್ಯವಸ್ಥೆ ಕಲ್ಪಿಸುವ ಕೆಲಸವನ್ನು ಮಾಡುತ್ತೇವೆಂದರು.

ಹಿಂದೆ ವಿಜಯಾನಂದ ಕಾಶಪ್ಪನವರು ಶಾಸಕರಾಗಿದ್ದಾಗ ಮಂತ್ರಿ ಪದವಿಗಾಗಿ ಲಾಭಿ ಮಾಡಿಲ್ಲ, ಅದರ ಬದಲು ಹುನಗುಂದ ಕ್ಷೇತ್ರಕ್ಕೆ ನಾನು ಕೇಳುವ ಎಲ್ಲಾ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ಕೊಡಿ ಸಾಕು ಎಂದಿದ್ದರು. ಅವರು ಕೇಳಿದ್ದ ಪ್ರತೀ ಬೇಡಿಕೆಗಳನ್ನು ಈಡೇರಿಸಿದ್ದೆ, ನಮ್ಮ ಸರ್ಕಾರ ಇದ್ದಾಗ ಸುಮಾರು 4,500 ಕೋಟಿ ಅನುದಾನವನ್ನು ಹುನಗುಂದಕ್ಕೆ ನೀಡಿದ್ದೆ. ಅಕ್ಷರಧಾಮ ಸ್ಥಾಪನೆಗೆ ಅನುಮೋದನೆ ನೀಡಿ, ಹಣ ಬಿಡುಗಡೆ ಮಾಡಿಕೊಟ್ಟಿದ್ದು ನಮ್ಮ ಸರ್ಕಾರ, ಆದರೆ ಇಂದು ಕೆಲಸ ನಿಂತಿದೆ ಎಂದು ತಿಳಿಸಿದರು.

ನನ್ನನ್ನು ಹೊಡೆದಾಕುವುದಾದರೆ ನಾನು ಸಿದ್ಧನಿದ್ದೇನೆ

ರಾಜ್ಯದ ಜನರ ಆಸ್ತಿ, ಪ್ರಾಣ ರಕ್ಷಣೆ ಮಾಡಬೇಕಾದ ಮಂತ್ರಿಯೊಬ್ಬ ಟಿಪ್ಪುವನ್ನು ಮುಗಿಸಿದಂತೆ ಸಿದ್ದರಾಮಯ್ಯ ಅವರನ್ನು ಮುಗಿಸಿ ಎಂದು ನನ್ನ ಹತ್ಯೆಗೆ ಜನರನ್ನು ಪ್ರಚೋದಿಸುತ್ತಾರೆ ಎಂದರೆ ಅಂಥವರು ಮಂತ್ರಿಯಾಗಿರಬೇಕ? ನನ್ನನ್ನು ಮುಗಿಸುವುದಕ್ಕೆ ನಿಮ್ಮೆಲ್ಲರ ಒಪ್ಪಿಗೆ ಇದೆಯಾ? ನೀವು ನನ್ನನ್ನು ಹೊಡೆದಾಕುವುದಾದರೆ ನಾನು ಸಿದ್ಧನಿದ್ದೇನೆ, ಎಲ್ಲಿಯವರೆಗೆ ರಾಜ್ಯದ ಜನರ ಆಶೀರ್ವಾದ ನನ್ನ ಮೇಲಿರುತ್ತದೆ ಅಲ್ಲಿಯವರೆಗೆ ಯಾರಿಂದಲೂ ನನ್ನನ್ನು ಮುಗಿಸಲು ಸಾಧ್ಯವಿಲ್ಲ ಎಂದರು.

ಮಹಾತ್ಮ ಗಾಂಧಿ ಅವರನ್ನು ಸೈದ್ಧಾಂತಿಕವಾಗಿ ಎದುರಿಸಲಾಗದೆ ಗೋಡ್ಸೆ ಮೂಲಕ ಕೊಲೆ ಮಾಡಿಸಿದರು, ಬಿಜೆಪಿಯವರು ಹೇಡಿಗಳು, ನೀವು ಬೌದ್ಧಿಕವಾಗಿ ದಿವಾಳಿಯಾಗಿದ್ದೀರಿ. ಒಬ್ಬ ಸಿದ್ದರಾಮಯ್ಯ ಹೋದರೆ ಸಾವಿರಾರು ಸಿದ್ದರಾಮಯ್ಯ ಹುಟ್ಟಿ ಬರುತ್ತಾರೆ. ನಾನು ರೈತರು, ಬಡವರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು, ಯುವಜನರ ಪರವಾಗಿ ಹೋರಾಟ ಮಾಡುತ್ತಿದ್ದೇನೆ, ಇದನ್ನು ಬಿಜೆಪಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಕಿಡಿಕಾರಿದರು.

ವಿಜಯಾನಂದ ಕಾಶಪ್ಪನವರ್‌ ಗೆದ್ದರೆ ಸಿದ್ದರಾಮಯ್ಯ ಗೆದ್ದಂತೆ.

ಹಿರೇಮಠ ಅವರು ನನ್ನ ಹೆಸರು ಹೇಳಿಕೊಂಡು ಇಲ್ಲಿ ಮತ ಕೇಳುತ್ತಿದ್ದಾರಂತೆ, ನೀವು ಅಂಥವರಿಗೆ ಉಗಿದು ಕಳಿಸಿ, ನನ್ನ ಹೆಸರು ಹೇಳುವ ಯೋಗ್ಯತೆ ಅವರಿಗೆ ಇದೆಯಾ ಎಂದು ಕೇಳಿ ಎಂದ ಅವರು, ವಿಜಯಾನಂದ ಕಾಶಪ್ಪನವರ್‌ ಗೆದ್ದರೆ ಸಿದ್ದರಾಮಯ್ಯ ಗೆದ್ದಂತೆ. ಕಾಶಪ್ಪನವರ್‌ ಗೆ ನೀಡುವ ಪ್ರತಿ ಮತ ಸಿದ್ದರಾಮಯ್ಯನಿಗೆ ಕೊಟ್ಟಂತೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡಿ, ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು.

Tags: BagalakoteCongress Partyprajadvani yatraಸಿದ್ದರಾಮಯ್ಯ
Previous Post

ವಸಿಷ್ಠ ಬಂಟನೂರು ನಿರ್ದೇಶನದ ‘1975’ ಚಿತ್ರದ ಟ್ರೇಲರ್ ರಿಲೀಸ್ : ಫೆ. 24ಕ್ಕೆ ಸಿನಿಮಾ ತೆರೆಗೆ

Next Post

KIRAN RAJ | ಪ್ಯಾರಾಶೂಟ್ ಅನುಭವ ಹೇಳಿದ ಕಿರಣ್ ರಾಜ್ PRATIDHVANI

Related Posts

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ
Top Story

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

by ಪ್ರತಿಧ್ವನಿ
January 14, 2026
0

ಬೆಂಗಳೂರು: ಕನ್ನಡದ ವಿಚಾರದಲ್ಲಿ ಸದಾ ಧ್ವನಿ ಎತ್ತುತ್ತಾ ಬಂದಿರುವ ಬಿಗ್‌ಬಾಸ್ ಕನ್ನಡ ಸ್ಪರ್ಧಿ ಅಶ್ವಿನಿ ಗೌಡ ಇದೀಗ ಫಿನಾಲೆ ವೀಕ್ ಟಾಸ್ಕ್‌ನಲ್ಲಿ ಮಾಡಿದ ತಪ್ಪಿನಿಂದ ಭಾರೀ ಟ್ರೋಲ್‌ಗೆ...

Read moreDetails
Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

January 14, 2026

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
Next Post
KIRAN RAJ | ಪ್ಯಾರಾಶೂಟ್ ಅನುಭವ ಹೇಳಿದ ಕಿರಣ್ ರಾಜ್ PRATIDHVANI

KIRAN RAJ | ಪ್ಯಾರಾಶೂಟ್ ಅನುಭವ ಹೇಳಿದ ಕಿರಣ್ ರಾಜ್ PRATIDHVANI

Please login to join discussion

Recent News

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ
Top Story

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

by ಪ್ರತಿಧ್ವನಿ
January 14, 2026
Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!
Top Story

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

by ನಾ ದಿವಾಕರ
January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!
Top Story

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

by ಪ್ರತಿಧ್ವನಿ
January 14, 2026
Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

January 14, 2026
ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

January 14, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada