• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯದಲ್ಲಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಲ್ಲಿ ಗುರಿ ಮೀರಿ ಶೇ.126 ರಷ್ಟು ಸಾಧನೆ: ಸಚಿವ ಡಾ.ಕೆ.ಸುಧಾಕರ್‌

ಪ್ರತಿಧ್ವನಿ by ಪ್ರತಿಧ್ವನಿ
February 27, 2023
in ಕರ್ನಾಟಕ
0
ನೈಜ, ವಸ್ತುಸ್ಥಿತಿ ಆಧಾರಿತ ಪ್ರಣಾಳಿಕೆ ಬಿಜೆಪಿ ಗುರಿ: ಸಚಿವ ಡಾ. ಕೆ. ಸುಧಾಕರ್‌
Share on WhatsAppShare on FacebookShare on Telegram

 ‘ಬಳ್ಳಾರಿ ಅಂಧತ್ವ ಮುಕ್ತ ಜಿಲ್ಲೆ’ ಅಭಿಯಾನಕ್ಕೆ ಉತ್ತಮ ಸ್ಪಂದನೆ

ADVERTISEMENT

ಬೆಂಗಳೂರು: ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಲ್ಲಿ(Cataract surgery) ಕೇಂದ್ರ ಸರ್ಕಾರ(Central Government) ನೀಡಿದ್ದ ಗುರಿಯನ್ನು ಮೀರಿ ಶೇ.126 ರಷ್ಟು ಸಾಧನೆಯನ್ನು ರಾಜ್ಯ ಸರ್ಕಾರ ಮಾಡಿದೆ. ಜೊತೆಗೆ, ಮಧುಮೇಹದಿಂದ ಬಳಲುತ್ತಿರುವವರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ(Government Hospital) ಗ್ರೀನ್‌ ಲೇಸರ್‌ ಚಿಕಿತ್ಸೆ(Green laser treatment) ಆರಂಭಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌(Dr.K.Sudhakar) ತಿಳಿಸಿದ್ದಾರೆ.

ಕೇಂದ್ರ ಸರ್ಕಾರವು ಪ್ರಸಕ್ತ ವರ್ಷ 3,39,600 ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗಳನ್ನು ನಡೆಸುವ ಗುರಿ ನೀಡಿತ್ತು. ಈಗಾಗಲೇ 4,28,451 ಶಸ್ತ್ರಚಿಕಿತ್ಸೆ ಮಾಡಿ ಒಟ್ಟಾರೆ ಶೇ.126 ರಷ್ಟು ಸಾಧನೆ ಮಾಡಲಾಗಿದೆ. ಎನ್.ಜಿ.ಒ, ವೈದ್ಯಕೀಯ ಕಾಲೇಜುಗಳು, ಇತರೆ ವಲಯಗಳಲ್ಲಿಯೂ ಉತ್ತಮ ಸಾಧನೆಯಾಗಿದೆ. ರಾಜ್ಯದಲ್ಲಿ ಅಂಧತ್ವ ನಿವಾರಣೆ ಅಭಿಯಾನಕ್ಕೆ ಉತ್ತಮ ಸ್ಪಂದನೆ ದೊರೆತಿದೆ ಎಂದು ಸಚಿವರು ವಿವರಿಸಿದ್ದಾರೆ.

ವಿಶೇಷವಾಗಿ ಹೈದರಾಬಾದ್ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ಅನೇಕರು ಡಯಾಬಿಟಿಕ್ ರೆಟಿನೋಪತಿ ಸಮಸ್ಯೆಗೆ ಒಳಗಾಗುತ್ತಿದ್ದು, ಇದಕ್ಕಾಗಿ ಅತ್ಯಾಧುನಿಕ ಗ್ರೀನ್ ಲೇಸರ್ ಚಿಕಿತ್ಸೆ ಪರಿಚಯಿಸಲಾಗಿದೆ. ವಿಜಯಪುರ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ನೇತ್ರ ತಜ್ಞರು ವಿಶೇಷ ಪರಿಣತಿ ಪಡೆದು ಇಂತಹ ವಿನೂತನ ಚಿಕಿತ್ಸೆಯನ್ನು ಪ್ರಾಯೋಗಿಕವಾಗಿ ಮಾಡುತ್ತಿದ್ದಾರೆ. ಇದರಿಂದ ಉತ್ತಮ ಫಲಿತಾಂಶ ದೊರೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಬೇರೆ ಆಸ್ಪತ್ರೆಗಳಿಗೆ ವಿಸ್ತರಿಸಲು ಕ್ರಮ

ಮಧುಮೇಹದಿಂದ ರೆಟಿನೋಪತಿ ಸಮಸ್ಯೆಗೆ ಒಳಗಾದರೆ ಕ್ರಮೇಣ ದೃಷ್ಟಿಗೆ ಹಾನಿಯಾಗುವ ಸಂಭವ ಇರುತ್ತದೆ. ಇದನ್ನು ಪತ್ತೆ ಮಾಡಿ ಅಗತ್ಯ ಕಂಡುಬಂದಲ್ಲಿ ಗ್ರೀನ್ ಲೇಸರ್ ಚಿಕಿತ್ಸೆ ನೀಡಿ ಸಮಸ್ಯೆ ಪರಿಹರಿಸಬಹುದಾಗಿದೆ. ಡಯಾಬಿಟಿಕ್ ರೆಟಿನೋಪತಿಗೆ ಒಳಗಾದವರಿಗೆ ಎಷ್ಟು ಬೆಳಕಿದ್ದರೂ ಕಾಣುವುದಿಲ್ಲ. ವಿಜಯಪುರ ಜಿಲ್ಲೆಯಲ್ಲಿ ಒಂದು ತಿಂಗಳಿಂದ 40 ಕ್ಕೂ ಹೆಚ್ಚು ರೋಗಿಗಳಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಈ ಚಿಕಿತ್ಸೆಯನ್ನು ಇತರೆ ಆಸ್ಪತ್ರೆಗಳಿಗೂ ವಿಸ್ತರಿಸಲಾಗುವುದು. ಗ್ರಾಮೀಣ ಭಾಗದಲ್ಲಿ ರೋಗಿಗಳನ್ನು ಪರಿಶೀಲನೆ ಮಾಡಿ ಚಿಕಿತ್ಸೆ ಅಗತ್ಯವಿರುವವರನ್ನು ಜಿಲ್ಲಾ ಹಂತಕ್ಕೆ ರೆಫರ್ ಮಾಡಲಾಗುತ್ತಿದೆ. ಜನರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದೆ ಎಂದು ಹೇಳಿದ್ದಾರೆ.

ಇದರ ಜೊತೆಗೆ, “ಬಳ್ಳಾರಿ ಅಂಧತ್ವ ಮುಕ್ತ ಜಿಲ್ಲೆ” ಅಭಿಯಾನಕ್ಕೆ ಉತ್ತಮ ಸ್ಪಂದನೆ ದೊರೆಯುತ್ತಿದ್ದು, ಬಳ್ಳಾರಿ ಜಿಲ್ಲೆಯ ಪ್ರತಿಯೊಂದು ತಾಲ್ಲೂಕುಗಳಲ್ಲಿ ವಿಶೇಷ ಸಂಚಾರಿ ಚಿಕಿತ್ಸಾ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ತಾಲ್ಲೂಕು ಆಸ್ಪತ್ರೆಗಳಲ್ಲಿ ವಿಶೇಷ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುತ್ತಿದೆ. ಶಿಬಿರದಲ್ಲಿ ಸರಾಸರಿ 22 ಮಂದಿಗೆ ಶಸ್ತ್ರಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

Tags: ಸಚಿವ ಡಾ.ಕೆ.ಸುಧಾಕರ್‌
Previous Post

ಬೆಂಗಳೂರು–ಮೈಸೂರು ಎಕ್ಸ್‌’ಪ್ರೆಸ್‌’ವೇನಲ್ಲಿ ಟೋಲ್ ಸಂಗ್ರಹ ಮುಂದೂಡಿಕೆ: ಪ್ರತಾಪ್ ಸಿಂಹ

Next Post

SHIVAMOGGA | ನಿರೀಕ್ಷೆಗೂ ಮೀರಿ ಸೇರಿದ ಜನ,‌ ಕಿಲೋಮೀಟರ್ ಟ್ರಾಫಿಕ್ ಜಾಮ್ #PRATIDHVANI

Related Posts

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ
ಕರ್ನಾಟಕ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

by ಪ್ರತಿಧ್ವನಿ
April 16, 2026
0

ಬೆಂಗಳೂರು: 2025-26ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನು ನೀಡುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸ್ಪಷ್ಟ...

Read moreDetails
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
Next Post
SHIVAMOGGA | ನಿರೀಕ್ಷೆಗೂ ಮೀರಿ ಸೇರಿದ ಜನ,‌ ಕಿಲೋಮೀಟರ್ ಟ್ರಾಫಿಕ್ ಜಾಮ್ #PRATIDHVANI

SHIVAMOGGA | ನಿರೀಕ್ಷೆಗೂ ಮೀರಿ ಸೇರಿದ ಜನ,‌ ಕಿಲೋಮೀಟರ್ ಟ್ರಾಫಿಕ್ ಜಾಮ್ #PRATIDHVANI

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada