ಬೆಂಗಳೂರು: ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಇಂದು ಆಮ್ ಆದ್ಮಿ ಪಕ್ಷ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
ಇಂದು ಬೆಳಿಗ್ಗೆ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಭಾಸ್ಕರ್ ರಾವ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಕಂದಾಯ ಸಚಿವ ಆರ್.ಅಶೋಕ, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಅಣ್ಣಾಮಲೈ ಸೇರಿ ಹಲವು ನಾಯಕರ ಜತೆ ಮಾತುಕತೆ ನಡೆಸಿದ ಬಳಿಕ ಇಂದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
ರಾಜಕೀಯ ಪಕ್ಷ ಸೇರಿ ಚುನಾವಣೆ ಸ್ಪರ್ಧಿಸುವ ಉದ್ದೇಶದಿಂದ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ರಾಜೀನಾಮೆ ಸ್ವೀಕಾರಗೊಂಡ ಬಳಿಕ ಅವರು ಆಮ್ಆದ್ಮಿ ಪಕ್ಷ ಸೇರಿದ್ದರು. ಬಸವನಗುಡಿಯಿಂದ ಸ್ಪರ್ಧಿಸುವ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಮೊದ ಮೊದಲು ಪಕ್ಷದಲ್ಲಿ ಸಕ್ರಿಯರಾಗಿದ್ದ ಭಾಸ್ಕರ್ ರಾವ್ ಕಳೆದ ಒಂದೆರಡು ತಿಂಗಳಿಂದ ಪಕ್ಷದಲ್ಲಿ ಅಷ್ಟಾಗಿ ಸಕ್ರಿಯರಾಗಿರಲಿಲ್ಲ.












