• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬ್ಯಾಗ್‌ ಖರೀದಿಯಲ್ಲಿ ನಿಯಮ ಉಲ್ಲಂಘಿಸಿದ್ದ ಸಿಂಧೂರಿ: ತನಿಖೆಯಿಂದ ಬಹಿರಂಗ..!

ಪ್ರತಿಧ್ವನಿ by ಪ್ರತಿಧ್ವನಿ
March 1, 2023
in Top Story
0
ಆಕ್ಸಿಜನ್ ಸರಬರಾಜನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಡೆದಿದ್ದರೇ ? ಕೋರ್ಟ್ ನೇಮಿಸಿದ್ದ ಸಮಿತಿಯು ತನಿಖೆಯಲ್ಲಿ ಎಡವಿತೆ?
Share on WhatsAppShare on FacebookShare on Telegram

ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ವೇಳೆ ರೋಹಿಣಿ ಸಿಂಧೂರಿ, ಆ ಜಿಲ್ಲಾ ವ್ಯಾಪ್ತಿಯ ನಗರ ಮತ್ತು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳಿಗೆ‌ 14,71,458 ಬಟ್ಟೆ ಬ್ಯಾಗ್‌ಗಳನ್ನು ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದಿಂದ  52ರಂತೆ ಖರೀದಿಸಲು ಅನುಮೋದನೆ ನೀಡುವ ವೇಳೆ ನಿಯಮ ಉಲ್ಲಂಘಿಸಿದ್ದರು ಎಂಬುದು  ತನಿಖೆಯಲ್ಲಿ ಬಹಿರಂಗಗೊಂಡಿದೆ.

ADVERTISEMENT

ಸರ್ಕಾರಕ್ಕೆ ಸಲ್ಲಿಸಿದ್ದ ಪ್ರಾಥಮಿಕ ವಿಚಾರಣಾ ವರದಿಯಲ್ಲಿ ವಸತಿ ಇಲಾಖೆಯ ಕಾರ್ಯದರ್ಶಿಯಾಗಿದ್ದ ಜೆ. ರವಿಶಂಕರ್ ಉಲ್ಲೇಖಿಸಿದ್ದಾರೆ.

ರೋಹಿಣಿ ಸಿಂಧೂರಿ ವಿರುದ್ಧ ಈಚೆಗೆ ಆರೋಪ ಮಾಡಿದ್ದ ಐಪಿಎಸ್‌ ಅಧಿಕಾರಿ ಡಿ.ರೂಪಾ ಮೌದ್ಗಿಲ್‌ ಅವರು, ಅಗ್ಗದ ಬ್ಯಾಗ್‌ಗಳನ್ನೂ ಅತಿ ಹೆಚ್ಚು ಬೆಲೆಗೆ ಸಿಂಧೂರಿ ಖರೀದಿಸಿದ್ದ ಪ್ರಕರಣ ಹಾಗೂ ರವಿಶಂಕರ್‌ ಅವರು ಸಲ್ಲಿಸಿದ್ದ ಪ್ರಾಥಮಿಕ ವಿಚಾರಣಾ ವರದಿಯನ್ನು ಉಲ್ಲೇಖಿಸಿದ್ದರು.

ಬಟ್ಟೆ ಬ್ಯಾಗ್‌ ಖರೀದಿಯಲ್ಲಿ ರೋಹಿಣಿ ಸಿಂಧೂರಿ ಅಕ್ರಮ ನಡೆಸಿದ್ದಾರೆ ಎಂದು ಆರೋಪಿಸಿ ಜೆಡಿಎಸ್‌ ಶಾಸಕ ಸಾ.ರಾ. ಮಹೇಶ್‌ ಮತ್ತು ಶೈಲೇಂದ್ರ ವಿ. ಭೀಮರಾವ್‌ ಎಂಬವರು ನೀಡಿದ್ದ ದೂರಿನ ಮೇಲೆ ವಿಚಾರಣೆಗಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ರವಿಶಂಕರ್ ಅವರನ್ನು ನೇಮಿಸಿತ್ತು.

ಬಟ್ಟೆ ಬ್ಯಾಗ್‌ ಗಳನ್ನು ಪಾರದರ್ಶಕ ಕಾಯ್ದೆ ಹಾಗೂ ನಿಯಮಾವಳಿಗಳ ನಿಯಮ 4 (ಎಚ್‌) ಅನ್ವಯ ವಿನಾಯಿತಿ ಹೊಂದಿರುವ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಮೂಲಕ  52ಕ್ಕೆ ನಿಗದಿಪಡಿಸಿ ಖರೀದಿಸುವ ಮೊದಲು ಮುಕ್ತ ಮಾರುಕಟ್ಟೆಯಲ್ಲಿ ಇದೇ ಬಟ್ಟೆ ಬ್ಯಾಗ್‌ಗಳು 10ರಿಂದ 13ಕ್ಕೆ ಸಿಗಬಹುದಾದ ಸಾಧ್ಯತೆ ಪರಿಶೀಲಿಸಬೇಕಿತ್ತು. ಆ ಮೂಲಕ, ಸರ್ಕಾರಕ್ಕೆ ಹೆಚ್ಚಿನ ಆರ್ಥಿಕ ಹೊರೆಯಾಗುವ ಸಾಧ್ಯತೆಯನ್ನು ಗಮನಿಸಬೇಕಿತ್ತು ಎಂದು ವರದಿಯಲ್ಲಿ ತಿಳಿಸಲಾಗಿದೆ.

ಪಾಲಿಕೆಯ ಸಾಮಾನ್ಯ ಸಭೆಯ ಘಟನೋತ್ತರ ಅನುಮೋದನೆಯ ಮೇರೆಗೆ ಖರೀದಿಗೆ ಜಿಲ್ಲಾಧಿಕಾರಿಯಾಗಿದ್ದ ಸಿಂಧೂರಿ ಅನುಮೋದನೆ ನೀಡಿದ್ದರು. ಆದರೆ, ಸರ್ಕಾರಕ್ಕೆ ಸಲ್ಲಿಸಿದ್ದ ವರದಿಯಲ್ಲಿ ಸಿಂಧೂರಿಯವರು ಪಾಲಿಕೆಯ ಸಭೆ ಅಥವಾ ಇತರ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯಿತಿಗಳಿಂದ ಘಟನೋತ್ತರ ಅನುಮೋದನೆ ಪಡೆದಿರುವ ಮಾಹಿತಿ ಇಲ್ಲ ಎಂದೂ ವರದಿಯಲ್ಲಿದೆ.

ರವಿಶಂಕರ್‌ ಅವರ ವಿಚಾರಣಾ ವರದಿ ಮೇಲೆ ಡಿಪಿಎಆರ್‌’ಗೆ ಅಭಿಪ್ರಾಯ ನೀಡಿರುವ ನಗರಾಭಿವೃದ್ಧಿ ಇಲಾಖೆ, ಪಾರದರ್ಶಕ ಕಾಯ್ದೆ ಹಾಗೂ ನಿಯಮಾವಳಿಗಳ ನಿಯಮ 4 (ಎಚ್‌) ಅನ್ವಯ ನಗರ ಸ್ಥಳೀಯ ಸಂಸ್ಥೆಗಳು ಸೇರಿದಂತೆ ಯಾವುದೇ ಸರ್ಕಾರಿ ಸಂಸ್ಥೆಗಳು ಟೆಂಡರ್‌ ಮೂಲಕ ಸಾಮಗ್ರಿಗಳನ್ನು ಖರೀದಿಸಬೇಕು. ಅಲ್ಲದೆ, ನಿಗಮದಿಂದ ಕೇವಲ ಬಟ್ಟೆಗಳನ್ನು ಮಾತ್ರ ಖರೀದಿಸಬಹುದಾಗಿದೆ. ಬಟ್ಟೆಗಳ ಬ್ಯಾಗ್‌ ಖರೀದಿಸಿರುವುದು ನಿಯಮ ಉಲ್ಲಂಘನೆ. ಜಿಲ್ಲಾಧಿಕಾರಿಗೆ ಆರ್ಥಿಕ ಪ್ರತ್ಯಾಯೋಜನೆಯ ಅಧಿಕಾರ  5 ಕೋಟಿ ಮಾತ್ರ ಇದೆ. ಆದರೆ, ಬಟ್ಟೆ ಬ್ಯಾಗ್‌ ಖರೀದಿ ಮೊತ್ತ  5 ಕೋಟಿಯನ್ನು ಮೀರಿದ್ದು, ಆರ್ಥಿಕ ಅಧಿಕಾರದ ಪ್ರತ್ಯಾಯೋಜನೆಯು ಉಲ್ಲಂಘನೆಯಾಗಿದೆ ಎಂದು ತಿಳಿಸಿದೆ.

ಕೇಂದ್ರ ಸರ್ಕಾರದ ಯೋಜನೆಯಾದ ಸ್ವಚ್ಛ ಭಾರತ್‌ ಮಿಷನ್‌ ಅಡಿಯಲ್ಲಿ ಮಾಹಿತಿ, ಶಿಕ್ಷಣ ಮತ್ತು ಸಂವಹನ (ಐಇಸಿ) ಚಟುವಟಿಕೆಗೆ ನಿಗದಿಪಡಿಸಿದ ಅನುದಾನದಲ್ಲಿ ಬ್ಯಾಗ್‌’ಗಳನ್ನು ಖರೀದಿಸಿ, ವಿತರಿಸಲು ಅವಕಾಶ ಇಲ್ಲ. ಅಲ್ಲದೆ, ಐಇಸಿ ಚಟುವಟಿಕೆಗೆ ಸಂಬಂಧಪಟ್ಟಂತೆ ಅನುದಾನ ವೆಚ್ಚ ಮಾಡುವಾಗ ಕ್ರಿಯಾಯೋಜನೆ ತಯಾರಿಸಿ ರಾಜ್ಯ ಉನ್ನತಾಧಿಕಾರ(ಎಸ್‌’ಎಚ್‌’ಪಿಸಿ) ಸಮಿತಿಯ ಮುಂದೆ ಮಂಡಿಸಿ ಅನುಮೋದನೆ ಪಡೆಯಬೇಕು. ಈ ಪ್ರಕರಣದಲ್ಲಿ ಈ ಪ್ರಕ್ರಿಯೆಯನ್ನೂ ಪಾಲಿಸಿಲ್ಲ ಎಂದೂ ತಿಳಿಸಿದೆ.

Tags: Rohini SindhuriSARA MAHESH
Previous Post

ಟ್ರೇಲರ್ ಮೂಲಕ ಸೈನ್ಸ್ ಫಿಕ್ಷನ್ ‘ಮಂಡಲ’ ಹೊಸ ಲೋಕ ಅನಾವರಣ

Next Post

ಸರ್ಕಾರಿ ನೌಕರರ ಮುಷ್ಕರ : ಎಸ್​ಎಸ್​ಎಲ್​ಸಿ ಪೂರ್ವಭಾವಿ ಪರೀಕ್ಷೆ ಮುಂದೂಡಿಕೆ

Related Posts

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
0

ಮೇಷ ರಾಶಿಯ ಇಂದಿನ ಭವಿಷ್ಯ ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯುವಿರಿ. ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲು ಇಂದು ಸೂಕ್ತ ದಿನ. ಸಂಜೆ ವೇಳೆಗೆ ಅನಿರೀಕ್ಷಿತ ಶುಭವಾರ್ತೆ ಕೇಳುವ ಸಾಧ್ಯತೆ...

Read moreDetails
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
Next Post
ಸರ್ಕಾರಿ ನೌಕರರ ಮುಷ್ಕರ : ಎಸ್​ಎಸ್​ಎಲ್​ಸಿ ಪೂರ್ವಭಾವಿ ಪರೀಕ್ಷೆ ಮುಂದೂಡಿಕೆ

ಸರ್ಕಾರಿ ನೌಕರರ ಮುಷ್ಕರ : ಎಸ್​ಎಸ್​ಎಲ್​ಸಿ ಪೂರ್ವಭಾವಿ ಪರೀಕ್ಷೆ ಮುಂದೂಡಿಕೆ

Please login to join discussion

Recent News

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

January 18, 2026
25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada