• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ತಮಗೆ ರಾಜಕೀಯ ಜೀವದಾನ ನೀಡಿದ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಕಡೆಗಣಿಸಿದವರು ನರೇಂದ್ರ ಮೋದಿ ಅವರಲ್ಲವೇ? : ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
March 3, 2023
in ದೇಶ, ರಾಜಕೀಯ
0
ತಮಗೆ ರಾಜಕೀಯ ಜೀವದಾನ ನೀಡಿದ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಕಡೆಗಣಿಸಿದವರು ನರೇಂದ್ರ ಮೋದಿ ಅವರಲ್ಲವೇ? : ಸಿದ್ದರಾಮಯ್ಯ
Share on WhatsAppShare on FacebookShare on Telegram

ಬೆಳಗಾವಿ: ತಮಗೆ ರಾಜಕೀಯ ಜೀವದಾನ ನೀಡಿದ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಕಡೆಗಣಿಸಿದವರು ನರೇಂದ್ರ ಮೋದಿ ಅವರಲ್ಲವೇ?  ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.

ADVERTISEMENT

ಇಂದು ಬೆಳಗಾವಿಯಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು,  ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೂ ಸಾಧನೆಗಳ ಆಧಾರದಲ್ಲಿ ಮತ ಯಾಚಿಸಲಾಗದೆ ಪ್ರಧಾನಿ ಮೋದಿಯವರು ‘ಮರ್ ಜಾ ಮೋದಿ’ ಎಂದು ಕಾಂಗ್ರೆಸ್ ನವರು ಘೋಷಣೆ ಕೂಗುತ್ತಿದ್ದಾರೆ ಎಂದು ಅನುಕಂಪ ಗಳಿಸಲು ನಾಟಕ ಮಾಡುತ್ತಿರುವುದು ದುರದೃಷ್ಟಕರ ಎಂದು ಕಿಡಿಕಾರಿದರು.

ಮರ್ ಜಾ ಮೋದಿ ಎಂದು ಯಾರು, ಎಲ್ಲಿ ಕೂಗಿದ್ದರು ಎನ್ನುವುದನ್ನು ಮೋದಿಯವರು ಬಹಿರಂಗ ಪಡಿಸಬೇಕು. ಇಂಟಲಿಜೆನ್ಸ್, ಪೊಲೀಸ್, ತನಿಖಾ ಸಂಸ್ಥೆಗಳು ಎಲ್ಲವೂ ಕೈಯಲ್ಲಿರುವಾಗ  ಸಾಯಲು ಹೇಳಿದವರನ್ನು ಎಳೆದು ತಂದು  ಜೈಲಿಗೆ ಹಾಕಲು ಏನು ಅಡ್ಡಿ ಇದೆ? ಈ ದೇಶದಲ್ಲಿ ಒಬ್ಬ ಪ್ರಧಾನಿಗೆ ರಕ್ಷಣೆ ಇಲ್ಲ ಎಂದಾದರೆ ಇನ್ನು ಈ ಸಾಮಾನ್ಯ ಜನರಿಗೆ ಹೇಗೆ ರಕ್ಷಣೆ ನೀಡುತ್ತಾರೆ? ಇನ್ನು ಯಾಕೆ ಹಾಗೆ ಕೂಗಿದರವರ ಮೇಲೆ ಕ್ರಮ ತೆಗೆದುಕೊಂಡಿಲ್ಲ?  ಇವೆಲ್ಲ ಅನುಕಂಪ ಗಳಿಸಲು ಮಾಡುತ್ತಿರುವ ಗಿಮಿಕ್ ಗಳಷ್ಟೆ. ಜನರು ಮೂರ್ಖರಲ್ಲ, ಅವರಿಗೆ ಈ ನಾಟಕ ಅರ್ಥವಾಗುತ್ತದೆ ಎಂದು ಹೇಳಿದರು.

ಟಿಪ್ಪುವಿನಂತೆ ನನ್ನನ್ನೂ ಹೊಡೆದುಹಾಕಬೇಕು ಎಂದು ಹತ್ಯೆಗೆ ಪ್ರಚೋದಿಸಿದ್ದ ಸಚಿವ ಡಾ.ಅಶ್ವಥ್ ನಾರಾಯಣ್ ಅವರಿಗೆ  ಪ್ರಧಾನಿ ಮೋದಿಯವರು ತಲೆಗೆ ಕುಟ್ಟಿ ಬುದ್ದಿ ಹೇಳಬಹುದು ಎಂದು ಅಂದ್ಕೊಂಡಿದ್ದೆ.  ಆದರೆ ಅವರು  ತನ್ನನ್ನು ಮರ್ ಜಾ ಎಂದು ಹೇಳುತ್ತಿದ್ದಾರೆ ಎಂದು ಅನುಕಂಪಗಿಟ್ಟಿಸಿಕೊಳ್ಳಲು ಹೊರಟಿದ್ದಾರೆ ಎಂದರು.

ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಾಂಗ್ರೆಸ್ ಅವಮಾನಿಸುತ್ತಿದೆ ಎಂದು ಪ್ರಧಾನಿ ಮೋದಿಯವರು ಕಣ್ಣೀರು ಹಾಕುತ್ತಿದ್ದಾರೆ. ಇವರು ಕಡೆಗಣಿಸಿದ ನಾಯಕರು ಒಬ್ಬರು, ಇಬ್ಬರೇ? ಗುಜರಾತ್ ಗಲಭೆ ನಿಯಂತ್ರಿಸಲಾಗದ ನರೇಂದ್ರಮೋದಿಯವರನ್ನು ಕಿತ್ತುಹಾಕಲು ಆಗಿನ ಪ್ರಧಾನಿ ಅಟಲಬಿಹಾರಿ ವಾಜಪೇಯಿ ನಿರ್ಧರಿಸಿದ್ದರು. ಆಗ ಇವರನ್ನು ರಕ್ಷಿಸಿದ್ದು ಲಾಲ್ ಕೃಷ್ಣ ಅಡ್ವಾಣಿ. ಅಂತಹ ಹಿರಿಯನನ್ನೇ ಮೂಲೆಗೆ ತಳ್ಳಿರುವ ಮೋದಿಯವರಿಗೆ ಇತರರಿಗೆ ಉಪದೇಶ ಮಾಡುವ ಯಾವ ನೈತಿಕತೆ ಇದೆ? ಎಂದು ಪ್ರಶ್ನಿಸಿದರು.

ಬಿಜೆಪಿಯಲ್ಲಿಯೇ ನರೇಂದ್ರ ಮೋದಿಯವರು ಕಡೆಗಣಿಸಿದ ನಾಯಕರು ಒಬ್ಬರು, ಇಬ್ಬರೇ? ಅಟಲಬಿಹಾರಿ ವಾಜಪೇಯಿ,ಅಡ್ವಾಣಿ, ಮುರಳಿ ಮನೋಹರ ಜೋಷಿ, ಜಸ್ವಂತ್ ಸಿಂಗ್  ಮಾತ್ರವಲ್ಲ  ತಮ್ಮದೇ ರಾಜ್ಯದ ಹಿರಿಯ ಬಿಜೆಪಿ ನಾಯಕ ಕೇಶುಭಾಯಿ ಪಟೇಲ್ ಅವರಿಗೆ ಮೋದಿಯವರು ಮಾಡಿದ್ದ ಅವಮಾನ ಏನು ಕಡಿಮೆಯೇ? ಎಂದು ಕಿಡಿಕಾರಿದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗಲೇ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪನವರು ಜೈಲಿಗೆ ಹೋಗಿದ್ದು ಎನ್ನುವುದು ನೆನಪಿರಲಿ. ಕೊನೆಗೆ ಅವರು ಪಕ್ಷವನ್ನೇ ಬಿಟ್ಟುಹೋಗುವಂತೆ ಮಾಡಿದ್ದು ಯಾರು? ಪಕ್ಷ ತೊರೆದು ಹೋದ ಅವರನ್ನು ತುಚ್ಚೀಕರಿಸಿ ಹಿಂಸಿಸಿದ್ದು ಯಾರು? ಅವರೆಲ್ಲರೂ ಮೋದಿಯವರ ಶಿಷ್ಯರೇ ಅಲ್ಲವೇ? ಎಂದು ಪ್ರಶ್ನಿಸಿದರು.

ನರೇಂದ್ರ ಮೋದಿಯವರಿಂದ ಹಿಡಿದು ರಾಜ್ಯದ ಬಿಜೆಪಿ ನಾಯಕರ ವರೆಗೆ ಈಗ ಎಲ್ಲರೂ ಬಿ.ಎಸ್.ಯಡಿಯೂರಪ್ಪನವರನ್ನು ಹಾಡಿ ಹೊಗಳುತ್ತಿರುವುದು ಅವರ ಮೇಲಿನ ಪ್ರೀತಿಯಿಂದ ಖಂಡಿತ ಅಲ್ಲ. ಲಿಂಗಾಯತ ಮತಬ್ಯಾಂಕ್ ಮೇಲೆ ಕಣ್ಣಿಟ್ಟು ಮೋದಿ ಮತ್ತು ಬಳಗ ಈ ನಾಟಕ ಮಾಡುತ್ತಿದೆ. ಇದನ್ನು ಅರ್ಥಮಾಡಿಕೊಳ್ಳುವಷ್ಟು ಶಕ್ತಿ ಸಾಮರ್ಥ್ಯ ಲಿಂಗಾಯತ ಸಮುದಾಯಕ್ಕಿದೆ ಎಂದು ಹೇಳಿದರು.

ರಾಜ್ಯದಲ್ಲಿ ಬಿಜೆಪಿಗೆ ಮತ ತಂದುಕೊಡುವ ಯಾವ ನಾಯಕರ ಮುಖವೂ ಇಲ್ಲ ಎಂದು ನರೇಂದ್ರಮೋದಿಯವರಿಗೆ ಮನವರಿಕೆಯಾಗಿದೆ. ಅದೇ ರೀತಿ ತನ್ನ ಮುಖ ತೋರಿಸಿದರೂ ಹಿಂದಿನಂತೆ ಜನ ಮತಹಾಕುವುದಿಲ್ಲ ಎನ್ನುವುದು ಖಾತರಿಯಾಗಿದೆ. ಅದಕ್ಕೆಲ್ಲ ಈ ನಾಟಕ ಮಾಡುತ್ತಿದ್ದಾರೆ.

ಕರ್ನಾಟಕದ ನಾಯಕರನ್ನು ಕಾಂಗ್ರೆಸ್ ಅವಮಾನಿಸಿದೆ ಎಂದು ಅನುಕಂಪ ತೋರುತ್ತಿರುವ ಪ್ರಧಾನಿ ಮೋದಿಯವರು ರಾಜ್ಯದಿಂದ ಆರಿಸಿಹೋಗಿರುವ ಬಿಜೆಪಿಯ 25 ಸಂಸದರನ್ನು ಹೇಗೆ ನಡೆಸಿಕೊಂಡಿದ್ದಾರೆ? ಅವರೇನು ಕರ್ನಾಟಕದವರಲ್ಲವೇ? ಮೋದಿಯವರು ಅವರನ್ನು ಎಂದಾದರೂ ತಮ್ಮೆದುರು ತಲೆ ಎತ್ತಿ ಮಾತನಾಡಲು ಬಿಟ್ಟಿದ್ದರಾ?

“ನಾನು ಬದುಕಿರುವ ವರೆಗೆ ಕಾಂಗ್ರೆಸ್ ಏನೂ ಮಾಡಲು ಸಾಧ್ಯವಿಲ್ಲ” ಎಂಬ ನರೇಂದ್ರಮೋದಿಯವರ ಆತ್ಮರತಿಯ ಮಾತುಗಳನ್ನು ಕೇಳಿ ನಗುಬರುತ್ತಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರೇ ಪ್ರಧಾನಿಯಾಗಿ ಬಂದು ವ್ಯಾಪಕ ಪ್ರಚಾರ ನಡೆಸಿದರೂ ರಾಜ್ಯದಲ್ಲಿ ಬಿಜೆಪಿಗೆ ಬಹುಮತ ಬಂದಿರಲಿಲ್ಲ, ಮುಂದೆಯೂ ಬರುವುದಿಲ್ಲ. ನಾಲ್ಕು ದಿನಕ್ಕೊಮ್ಮೆ ರಾಜ್ಯಕ್ಕೆ ಹಾರಿ ಬರುತ್ತಿರುವ ನರೇಂದ್ರ ಮೋದಿಯವರ ಹತಾಶೆಯಲ್ಲಿಯೇ ಸೋಲಿನ ಸೂಚನೆ ಇದೆ.

ಕರ್ನಾಟಕದ ನಾಯಕರನ್ನು ಕಾಂಗ್ರೆಸ್ ಅವಮಾನಿಸುತ್ತಿದೆ ಎಂದು ಗೋಳಾಡುತ್ತಿರುವ ನರೇಂದ್ರ ಮೋದಿಯವರು  ಸಾರ್ವಜನಿಕ ಸಭೆಯಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿರುವ ಬಸವರಾಜ ಬೊಮ್ಮಾಯಿಯವರ ಅವರ ಹೆಸರನ್ನೇ ಹೇಳದೆ ಸಾರ್ವ ಜನಿಕವಾಗಿ ಅವಮಾನಿಸುತ್ತಿರುವುದು ಸರಿಯೇ? ಅವರು ಬಿಜೆಪಿಗೆ ಸೇರಿರುವವರಾಗಿರಬಹುದು, ಆದರೆ ಅವರು ರಾಜ್ಯಕ್ಕೆ ಮುಖ್ಯಮಂತ್ರಿ ಅಲ್ಲವೇ? ಎಂದು ಪ್ರಶ್ನಿಸಿದ್ದಾರೆ.

Tags: ಅಟಲಬಿಹಾರಿ ವಾಜಪೇಯಿಕೇಶುಭಾಯಿ ಪಟೇಲ್ಜಸ್ವಂತ್ ಸಿಂಗ್ನರೇಂದ್ರ ಮೋದಿಮುರಳಿ ಮನೋಹರ ಜೋಷಿಲಾಲ್ ಕೃಷ್ಣ ಅಡ್ವಾಣಿಸಿದ್ದರಾಮಯ್ಯ
Previous Post

KSDL ಅಧ್ಯಕ್ಷ ಸ್ಥಾನಕ್ಕೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ..!

Next Post

ಮಾ. 7 ರಂದು ಫಲಾನುಭವಿಗಳ ಉತ್ಸವ ಸಮ್ಮೇಳನಕ್ಕೆ ಸಿಎಂ ಅವರಿಂದ ಚಾಲನೆ: ಎಸ್.ಟಿ.ಸೋಮಶೇಖರ್

Related Posts

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
0

ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ವಿತರಣೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ವಿಶೇಷ ಚೇತನರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು. ಬೀದರ್...

Read moreDetails

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

July 5, 2025
Next Post
ಮಾ. 7 ರಂದು ಫಲಾನುಭವಿಗಳ ಉತ್ಸವ ಸಮ್ಮೇಳನಕ್ಕೆ ಸಿಎಂ ಅವರಿಂದ ಚಾಲನೆ: ಎಸ್.ಟಿ.ಸೋಮಶೇಖರ್

ಮಾ. 7 ರಂದು ಫಲಾನುಭವಿಗಳ ಉತ್ಸವ ಸಮ್ಮೇಳನಕ್ಕೆ ಸಿಎಂ ಅವರಿಂದ ಚಾಲನೆ: ಎಸ್.ಟಿ.ಸೋಮಶೇಖರ್

Please login to join discussion

Recent News

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 5, 2025

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada