• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಶಾಲೆ ಆವರಣದಲ್ಲಿ ಭೂತಪ್ಪ ಪ್ರತ್ಯಕ್ಷ: ಬಿಜೆಪಿ ಶಾಸಕನ ಮೇಲೆ‌ ತೆರವು ಆರೋಪ

ಪ್ರತಿಧ್ವನಿ by ಪ್ರತಿಧ್ವನಿ
March 3, 2023
in Top Story, ಇದೀಗ
0
ಶಾಲೆ ಆವರಣದಲ್ಲಿ ಭೂತಪ್ಪ ಪ್ರತ್ಯಕ್ಷ: ಬಿಜೆಪಿ ಶಾಸಕನ ಮೇಲೆ‌ ತೆರವು ಆರೋಪ
Share on WhatsAppShare on FacebookShare on Telegram

ADVERTISEMENT

ಶಿವಮೊಗ್ಗ: ಶಿವಮೊಗ್ಗ ನಗರದ ಸವಳಂಗ ರಸ್ತೆಯ ಚನ್ನಮುಂಭಾಪುರದಲ್ಲಿರುವ ಅಕ್ಷರ ಶಾಲೆ‌ ಭೂತಪ್ಪನ ಕಟ್ಟೆ ತೆರವು ಮಾಡಿರುವ ಆರೋಪ ಎದುರಿಸುತ್ತಿದೆ. ಶಾಲೆಯು ಶಿವಮೊಗ್ಗ ಗ್ರಾಮಾಂತರ ಶಾಸಕ ಕೆಬಿ ಅಶೋಕ್ ನಾಯ್ಕ್ ಒಡೆತನದಲ್ಲಿದೆ. ಹಾಗಾಗಿ ಬಿಜೆಪಿ ಶಾಸಕರೇ ಹಿಂದೂ ದೇವರ ವಿಗ್ರಹ ಧ್ವಂಸ ಮಾಡಿದ್ದಾರೆಂದು ಕೆಲ ದಿನಗಳಿಂದ ಊರ ಗ್ರಾಮಸ್ಥರು ಪ್ರತಿಭಟನೆ ಮಾಡುತ್ತಿದ್ದಾರೆ. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಈಗಾಗಲೇ ಭೂತಪ್ಪನ ಕಲ್ಲನ್ನ ಸ್ಥಳಾಂತರಮಾಡಲಾಗಿದೆ. ಈ ವಿಡಿಯೋಗಳು, ಫೊಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಈ ಕುರಿತು
ಕಾಲೇಜು ಪ್ರಾಂಶುಪಾಲ ಗಿರೀಶ್ ಮಾತನಾಡಿದ್ದಾರೆ.

ಈ ಅಕ್ಷರ ಸಂಸ್ಥೆ ಸವಳಂಗ ರಸ್ತೆಯಲ್ಲಿದೆ. ಹತ್ತು ವರ್ಷಗಳ ಹಿಂದೆ ಸಣ್ಣದಾಗಿ ಚೌಡೇಶ್ವರಿ ದೇವಸ್ಥಾನ ಇರೋದು ನನ್ನ ಗಮನಕ್ಕೆ ಬಂದಿತ್ತು. ಅಂದಿನಿಂದ ದೇವಸ್ಥಾನದ ಪೂಜಾಕಾರ್ಯಗಳು ನಡೆಯುತ್ತಾ ಬಂದಿವೆ. ನಾವೂ ಕೂಡ ಹೂವು ಹಣ್ಣುಗಳನ್ನ ನೀಡುತ್ತಾ ಬಂದಿದ್ದೇವೆ. ಚೌಡೇಶ್ವರಿ ತಾಯಿಗೆ ಶಕ್ತಿ ಕೂಡ ಇದೆ. ಆದರೆ ಶಿವರಾತ್ರಿ ದಿನ ಶನಿವಾರ ಹಾಗೂ ಭಾನುವಾರ ಶಾಲೆಗೆ ರಜೆ ನೀಡಲಾಗಿತ್ತು. ಅಂದು ಕಾಲೇಜಿನ ಬೇಲಿ ತೆರವುಗೊಳಿಸಿದ ಗ್ರಾಮಸ್ಥರು ಭೂತಪ್ಪನ ವಿಗ್ರಹ ಇರಿಸಿದ್ದಾರೆ. ಈ ಬಗ್ಗೆ ಕೆಲ ಗ್ರಾಮಸ್ಥರ ಗಮನಕ್ಕೆ ತಂದಾಗ ಇದನ್ನ ತೆರವುಗೊಳಿಸೋದಾಗಿಯೂ ಕೂಡ ಒಪ್ಪಿಕೊಂಡಿದ್ದರು ಎಂದು ಹೇಳಿದರು.

ಎರಡು ದಿನಗಳಲ್ಲಿ ನೋಡು ನೋಡುತ್ತಿದ್ದಂತೆ ಆ ಜಾಗದಲ್ಲಿ ಕೆಂಪು ಬಟ್ಟೆ ಕಟ್ಟಿ, ಕುಂಕುಮ ಚೆಲ್ಲಿ ಭೂತಪ್ಪ ಎಂದು ಬಿಂಬಿಸಿ ಭಯ ಮೂಡಿಸಿದ್ದರು. ಮಕ್ಕಳೂ ಕೂಡ ಬೆದರತೊಡಗಿದರು. ಇದು ತಾರಕಕ್ಕೆ ಹೋಗುತ್ತಿದ್ದಂತೆ ನಾವು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದೆವು. ಎರಡು ಮೂರು ದಿನಗಳ ನಂತರ ಪೊಲೀಸರು ಸ್ಥಳಕ್ಕೆ ಬಂದು ವಿಗ್ರಹ ತೆರವುಗೊಳಿಸಿದರು. ನಂತರ ಪಟ್ಟು ಬಿಡದೇ ರಚ್ಚೆ ಹಿಡಿದ ಕೆಲವರು ಪ್ರತಿಭಟನೆ ಮಾಡುತ್ತಿರುವುದಲ್ಲದೇ ರಸ್ತೆ ತಡೆಯನ್ನೂ ಮಾಡಿದ್ದಾರೆ. ಮಕ್ಕಳು ಓದುವ ಸ್ಥಳದಲ್ಲಿ ಪರಂಪರೆ, ಹಿನ್ನೆಲೆ ಇಲ್ಲದ ಅನಧಿಕೃತ ಭೂತಪ್ಪ ಬೇಡ. ಕಾನೂನು ಪ್ರಕಾರ ಕ್ರಮ ಕೈಗೊಂಡಿದ್ದೇವೆ. ಅವರ ಜಾಗದಲ್ಲಿ ಬೇಕಾದರೆ ಮಾಡಿಕೊಳ್ಳಲಿ ಶಾಲಾ ಆವರಣದಲ್ಲಿ ಬೇಡ ಎಂದು ಗಿರೀಶ್ ಹೇಳಿದರು.

ಕಾಲೇಜು ಕನ್ನಡ ಉಪನ್ಯಾಸಕ ಸುರೇಶ್ ಮಾತನಾಡಿ,‌ ಶಾಲೆಯಲ್ಲಿ ಐನೂರು ಮಕ್ಕಳು ಹಾಗೂ ಕಾಲೇಜಿನಲ್ಲಿ ಆರುನೂರು ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಊರಿನ ಜನ ಶಾಲಾ ಆವರಣದಲದಲ್ಲಿ ಭಯಾನಕ ವಾತಾವರಣ ನಿರ್ಮಾಣ ಮಾಡಿದ್ದರು. ಕೋಳಿ ಕೊಯ್ದು, ರುಂಡ ಮುಂಡ ಬಿಟ್ಟು ಹೋಗಿದ್ದರು. ಪೋಷಕರ ಗಮನಕ್ಕೂ ಇದು ಬಂದಿತ್ತು.‌ಪೋಷಕರೂ ಸಹ ನಮಗೆ ಮನವಿ ಮಾಡುತ್ತಿದ್ದರು. ಹೊಸದಾಗಿ ಭಯ ಸೃಷ್ಟಿಸಿದ ಸ್ಥಳದಲ್ಲಿ ಮಕ್ಕಳ ಭೋಜನಾಶಾಲೆ ಕೂಡ ಇದೆ ಎಂದರು.

Tags: ಬಿಜೆಪಿಶಾಸಕ ಕೆ ಬಿ ಅಶೋಕ್ ನಾಯ್ಕ್ಶಿವಮೊಗ್ಗ
Previous Post

ರಾಜ್ಯದಲ್ಲಿ ಫಾಕ್ಸ್ ಕಾನ್ ಕಂಪೆನಿಯಿಂದ ಬೃಹತ್‌ ಹೂಡಿಕೆ: 1 ಲಕ್ಷ ಉದ್ಯೋಗ ಸೃಷ್ಟಿಯ ನಿರೀಕ್ಷೆ

Next Post

BJP ನಾಯಕರು ಜನರನ್ನು ಮೂರ್ಖರನ್ನಾಗಿ ಮಾಡ್ತಿರೋದು ಏಕೆ..?

Related Posts

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌
Top Story

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌

by ಪ್ರತಿಧ್ವನಿ
December 14, 2025
0

ಬಿಗ್‌ ಬಾಸ್‌ ಕನ್ನಡ (Bigg Boss Kannada) ಸೀಸನ್‌ 12 ಎರಡು ತಿಂಗಳನ್ನು ಯಶಸ್ವಿಯಾಗಿ ಪೂರೈಸಿದೆ. ಮನೆಯಲ್ಲಿ ಸ್ಪರ್ಧಿಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಇಂದು ಕೂಡ ಆಶ್ಚರ್ಯಕರವಾಗಿ ಡಬ್ಬಲ್‌...

Read moreDetails
ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

December 14, 2025
ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?

December 14, 2025
ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

December 14, 2025
ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

December 14, 2025
Next Post
BJP ನಾಯಕರು ಜನರನ್ನು ಮೂರ್ಖರನ್ನಾಗಿ ಮಾಡ್ತಿರೋದು ಏಕೆ..?

BJP ನಾಯಕರು ಜನರನ್ನು ಮೂರ್ಖರನ್ನಾಗಿ ಮಾಡ್ತಿರೋದು ಏಕೆ..?

Please login to join discussion

Recent News

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌
Top Story

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌

by ಪ್ರತಿಧ್ವನಿ
December 14, 2025
ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್
Top Story

ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 14, 2025
ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?
Top Story

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?

by ಪ್ರತಿಧ್ವನಿ
December 14, 2025
ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್
Top Story

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 14, 2025
ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ
Top Story

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

by ಪ್ರತಿಧ್ವನಿ
December 14, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌

December 14, 2025
ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

December 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada