• Home
  • About Us
  • ಕರ್ನಾಟಕ
Wednesday, December 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮಾರ್ಚ್ 9ರ ಕಾಂಗ್ರೆಸ್ ಬಂದ್ ಗೆ ಯಾವ ಬೆಲೆಯೂ ಇಲ್ಲ: ಸಿಎಂ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
March 7, 2023
in ಕರ್ನಾಟಕ
0
ಮಾರ್ಚ್ 9ರ ಕಾಂಗ್ರೆಸ್ ಬಂದ್ ಗೆ ಯಾವ ಬೆಲೆಯೂ ಇಲ್ಲ: ಸಿಎಂ ಬೊಮ್ಮಾಯಿ
Share on WhatsAppShare on FacebookShare on Telegram

ಮೈಸೂರು: ಮಾರ್ಚ್ 9 ರಂದು ಕಾಂಗ್ರೆಸ್ ಕರೆ ನೀಡಿರುವ ಬಂದ್’ಗೆ ಯಾವ ಬೆಲೆಯೂ ಇಲ್ಲ. ಎರಡು ಗಂಟೆ ಬಂದ್ ಅಂದ್ರೆ ಅರ್ಥ ಏನು ಎಂದು ಪ್ರಶ್ನಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ.

ADVERTISEMENT

ಮೈಸೂರಿನ ಮಂಡಕಳ್ಳಿ ವಿಮಾನ‌ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವತ್ತಾದ್ರು ಇಂತಹ ಬಂದ್ ಬಗ್ಗೆ ಕೇಳಿದ್ದೀರಾ ? ಇದನ್ನ ಬಂದ್ ಅನ್ನುತ್ತಾರಾ? ಭ್ರಷ್ಟಚಾರ ಮಾಡಿದವರು ಜೈಲಿಗೆ ಹೋಗಿ ಬಂದವರು, ಇವರು ಇಂಥ ಬಂದ್ ಗೆ ಕರೆ ಕೊಟ್ಟರೆ ಜನರ ಮುಂದೆ ನಡೆಯುತ್ತಾ. ಈ ಬಂದ್ ಗೆ ಯಾವ ಬೆಲೆಯೂ ಇಲ್ಲ ಎಂದು ಗೇಲಿ ಮಾಡಿದರು.

ಅದೇ ದಿನ ಪರೀಕ್ಷೆಗಳಿವೆ. ಜನ ಸಾಮನ್ಯರಿಗೆ ತೊಂದರೆಯಾಗುತ್ತದೆ. ಇದು ಅವರಿಗೆ ಅರ್ಥವಾಗುವುದಿಲ್ಲ. ಬಂದ್ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಆದೇಶ ಇದೆ ಎಂದು ಹೇಳಿದರು.

ಮಾಡಾಳು ವಿರೂಪಾಕ್ಷ ಅವರಿಗೆ ಹೈ ಕೋರ್ಟ್ ಜಾಮೀನು ವಿಚಾರವಾಗಿ ಪ್ರತಿಕ್ರಿಯಿಸಿ, ಇದು ನನ್ನ ಗಮನಕ್ಕೆ ಬಂದಿಲ್ಲ. ಹೈ ಕೋರ್ಟ್ ತೀರ್ಮಾನವನ್ನು ನಾನು ವಿಶ್ಲೇಷಣೆ ಮಾಡುವುದಿಲ್ಲ ಎಂದರು.

ಲೋಕಾಯುಕ್ತ ಬಂದ್ ಮಾಡಲಿಲ್ಲ, ಹಲ್ಲು ಕಿತ್ತಿದ್ದರು

ಲೋಕಾಯುಕ್ತ ಬಂದ್ ಮಾಡಿದ್ದರೆ ರಾಜೀನಾಮೆ ಕೊಡುತ್ತೇನೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಬೊಮ್ಮಾಯಿ, ಅವರು ಲೋಕಾಯುಕ್ತ ಬಂದ್ ಮಾಡಲಿಲ್ಲ. ಆದ್ರೆ ಲೋಕಾಯುಕ್ತದ ಎಲ್ಲಾ ಹಲ್ಲುಗಳನ್ನ ಕಿತ್ತಿದ್ದರು. ಹಲ್ಲು ಕಿತ್ತ ಮೇಲೆ ಇದ್ದರೆ ಎಷ್ಟು ಇಲ್ಲದಿದ್ದರೆ ಎಷ್ಟು. ಅವರ ಕಾಲದಲ್ಲಿ ಲೋಕಾಯುಕ್ತ ಇದಿದ್ದರೆ ಎಸಿಬಿಗೆ ಏಕೆ ಕೇಸ್ ಗಳು ವರ್ಗಾವಣೆ ಆಗುತ್ತಿತ್ತು ಎಂದು ಪ್ರಶ್ನಿಸಿದರು.

ಬಿಜೆಪಿಯದ್ದು 40% ಸಂಕಲ್ಪ ಯಾತ್ರೆ ಎಂಬ ಸಿದ್ದರಾಮಯ್ಯ ಟೀಕೆಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ನವರದ್ದು 100% ಗಾಗಿ ಪ್ರಜಾಧ್ವನಿ ಯಾತ್ರೆ ಎಂದು ನಾನು ಹೇಳುತ್ತೇನೆ. ಅವರಿಗೆ ಭ್ರಷ್ಟಚಾರದ ಬಗ್ಗೆ ಮಾತನಾಡುವ ಯಾವ ನೈತಿಕತೆ ಇಲ್ಲ. ಭ್ರಷ್ಟಚಾರದಲ್ಲಿ ಅವರ ಕೈಗಳೇ ಕಪ್ಪಾಗಿವೆ.

ಸಿದ್ದರಾಮಯ್ಯ ರಸ್ತೆ ಪರಿಶೀಲಿಸಲಿ, ನಮ್ಮ ತಕರಾರೇನು ಇಲ್ಲ

ಬೆಂಗಳೂರು ಮೈಸೂರು ಹೈವೆ ಕ್ರೆಡಿಟ್ ವಿಚಾರ. ಈ ರಸ್ತೆಯ ಕ್ರೆಡಿಟ್ ಕಾಂಗ್ರೆಸ್ ಹೇಗೆ ಸಲ್ಲುತ್ತೆ ಹೇಳಿ. ರಸ್ತೆ ಆಗಿದ್ದು ಬಿಜೆಪಿ ಸರ್ಕಾರದ ಅವಧಿಯಲ್ಲಿ‌. ರಸ್ತೆ ಮಾಡುವುದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅದನ್ನ ಸಿದ್ದರಾಮಯ್ಯ ಹೇಗೆ ಮಾಡುತ್ತಾರೆ. ಕಾಂಗ್ರೆಸ್ ಮಾತು ಕೇಳಿದರೆ ಜನ ನಗುತ್ತಾರೆ‌. ರಸ್ತೆ ವಿಸ್ತೀರ್ಣ ಆಗಬೇಕೆಂಬ ಪ್ರಸ್ತಾವನೆ 20 ವರ್ಷಗಳ ಹಿಂದೆಯೇ ಇತ್ತು. ಸಿದ್ದರಾಮಯ್ಯ ಅವರ ಅವಧಿ ಅದೇನು ಮೊದಲ ಬಾರಿ ಪ್ರಸ್ತಾಪ ಆಗಿದ್ದಲ್ಲ. ಪ್ರಸ್ತಾಪ ಮಾಡುವುದಕ್ಕೂ ಹಣ ಬಿಡುಗಡೆ ಮಾಡಿ ಕೆಲಸ ಮಾಡಿಸುವುದಕ್ಕೂ ವ್ಯತ್ಯಾಸ ಇದೆ. ಸಿದ್ದರಾಮಯ್ಯನವರು ರಸ್ತೆ ಪರಿಶೀಲನೆ ಮಾಡಲಿ. ನಮ್ಮ ತಕರಾರು ಏನು ಇಲ್ಲ. ಸಾವಿರಾರು ಜನರು ಈಗಾಗಲೇ ಓಡಾಡುತ್ತಿದ್ದಾರೆ. ಅದರಲ್ಲಿ ಸಿದ್ದರಾಮಯ್ಯ ಕೂಡ ಒಬ್ಬರು ಎಂದರು.

ಸಿದ್ದರಾಮಯ್ಯ ಮೇಲೆ ಕಾಫಿ, ಟೀ  ಆರೋಪ ಕುರಿತು ಮಾತನಾಡಿ, ಏನು ಆರೋಪಗಳಿವೆ ಎಂಬುದು ಗೊತ್ತಿಲ್ಲ. ದಾಖಲೆ ತರಿಸಿಕೊಂಡು ಪರಿಶೀಲಿಸುತ್ತೇನೆ. ಮೊದಲು ದಾಖಲೆ ತರಿಸಿಕೊಂಡು ನೋಡುತ್ತೇನೆ.  ಆರೋಪಗಳು ಸರಿ ಇದ್ದರೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

Tags: Basavaraj BommaiCongress PartyMysoreಬಿಜೆಪಿಸಿದ್ದರಾಮಯ್ಯ
Previous Post

M.K.SOMASHEKHAR | ಮೈಸೂರು ಸ್ಪಚ್ಛನಗರಿ ಅಲ್ಲ.. ಕಸದನಗರ ಆಗಿದೆ..! #PRATIDHVANI

Next Post

H3N2 ವೈರಸ್‌ : ಹೊಸ ಗೈಡ್ ಲೈನ್ ಬಿಡುಗಡೆ ಮಾಡಿಲ್ಲ, ಎಚ್ಚರ ಅಗತ್ಯ- ಸಿಎಂ ಬಸವರಾಜ ಬೊಮ್ಮಾಯಿ

Related Posts

Daily Horoscope: ಇಂದು ಅತಿ ಹೆಚ್ಚು ಆರ್ಥಿಕ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ಅತಿ ಹೆಚ್ಚು ಆರ್ಥಿಕ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
December 24, 2025
0

ಮೇಷ ರಾಶಿಯ ಇಂದಿನ ಭವಿಷ್ಯ ಮೇಷ ರಾಶಿಯವರ ಕುಟುಂಬದಲ್ಲಿ ಇಂದು ನೆಮ್ಮದಿಯ ವಾತಾವರಣ ಇರುತ್ತದೆ. ಯಾವುದೇ ವ್ಯವಹಾರದಲ್ಲೂ ಸುಲಭವಾಗಿ ಅನುಕೂಲ ಆಗುತ್ತದೆ. ಹೊಸ ವಾಹನ ಖರೀದಿಗಾಗಿ ಹಣ...

Read moreDetails

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

December 23, 2025

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

December 23, 2025
Next Post
ಹುಲಗೂರಿನಲ್ಲಿ ಮಿನಿ ಟೆಕ್ಸ್ ಟೈಲ್ ಪಾರ್ಕ್ ಸ್ಥಾಪನೆಗೆ ಕ್ರಮ :ಸಿಎಂ

H3N2 ವೈರಸ್‌ : ಹೊಸ ಗೈಡ್ ಲೈನ್ ಬಿಡುಗಡೆ ಮಾಡಿಲ್ಲ, ಎಚ್ಚರ ಅಗತ್ಯ- ಸಿಎಂ ಬಸವರಾಜ ಬೊಮ್ಮಾಯಿ

Please login to join discussion

Recent News

Daily Horoscope: ಇಂದು ಅತಿ ಹೆಚ್ಚು ಆರ್ಥಿಕ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ಅತಿ ಹೆಚ್ಚು ಆರ್ಥಿಕ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
December 24, 2025
ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ
Top Story

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

by ಪ್ರತಿಧ್ವನಿ
December 24, 2025
Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಅತಿ ಹೆಚ್ಚು ಆರ್ಥಿಕ ಲಾಭ ಪಡೆಯುವ ರಾಶಿಗಳಿವು..!

Daily Horoscope: ಇಂದು ಅತಿ ಹೆಚ್ಚು ಆರ್ಥಿಕ ಲಾಭ ಪಡೆಯುವ ರಾಶಿಗಳಿವು..!

December 24, 2025
ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

December 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada