• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗಂಡು ಮಕ್ಕಳಿಗೆ ಜಾಗೃತಿ ಮೂಡಿಸುವ ಕೆಲಸ ಆಗಬೇಕು: ಸಿಎಂ ಬಸವರಾಜ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
March 8, 2023
in Top Story, ಕರ್ನಾಟಕ
0
ಗಂಡು ಮಕ್ಕಳಿಗೆ ಜಾಗೃತಿ ಮೂಡಿಸುವ ಕೆಲಸ ಆಗಬೇಕು: ಸಿಎಂ ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ಬೆಂಗಳೂರು: ನಮ್ಮ ತಾಯಿ,  ಮಕ್ಕಳು,  ಪತ್ನಿಯಿಂದ ಸದಾ  ಸೇವೆ ಪಡೆಯುವುದು  ಪುರುಷ. ಮಹಿಳೆಗೆ  ತೊಂದರೆಯಾದರೆ ಅದು  ಗಂಡು ಮಕ್ಕಳಿಂದ , ಹೀಗಾಗಿ ಗಂಡು ಮಕ್ಕಳಿಗೆ ಜಾಗೃತಿ ಮೂಡಿಸುವ ಕೆಲಸ ಆಗಬೇಕು ಎಂದು ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ADVERTISEMENT

ಅವರು ಇಂದು  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ರವೀಂದ್ರ ಕಲಾಕ್ಷೇತ್ರ ಕನ್ನಡ ಭವನದಲ್ಲಿ ಆಯೋಜಿಸಿರುವ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ” ಕಾರ್ಯಕ್ರಮ ಉದ್ಘಾಟಿಸಿ ಮತ್ತು “ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ” ಮಾಡಿ ಮಾತನಾಡಿದರು.

ಜಗತ್ತಿನ ಎಲ್ಲಾ ದೇಶಗಳಲ್ಲಿ  ಮಹಿಳೆಯರನ್ನು ಒಗ್ಗೂಡಿಸಿ ಅವರ ಸುರಕ್ಷತೆ ಹಾಗೂ ಆರ್ಥಿಕ ಸ್ವಾತಂತ್ರ್ಯ ನೀಡಿ  ಸಬಲರನ್ನಾಗಿ ಮಾಡಲು ಸಂಯುಕ್ತ ರಾಷ್ಟ್ರ  ತೀರ್ಮಾನ ಮಾಡಿ ಈ ದಿನಾಚರಣೆ ಆಚರಣೆ ಮಾಡಲಾಗುತ್ತಿದೆ.

ಮಹಿಳೆಯರ ಸಾಧನೆ

ನಮ್ಮದು ಪುರುಷ ಪ್ರಧಾನ ಸಮಾಜ ಆದರೆ, ಮೊದಲಿನಿಂದಲೂ ನೋಡಿದರೆ, ಮಹಿಳೆ ಸಾಕಷ್ಟು ಸಾಧನೆ ಮಾಡಿದ್ದಾಳೆ. ನಮ್ಮ ಪುರಾಣಗಳಲ್ಲಿ ಮಹಿಳೆಯರು ಸಾಕಷ್ಟು  ಮಹತ್ವ ಪಡೆದಿದ್ದಾರೆ.  ಸ್ವಾತಂತ್ರ್ಯ. ಹೋರಾಟದಲ್ಲಿ ಕಿತ್ತೂರು ಚೆನ್ನಮ್ಮ ಕಹಳೆ ಊದಿದರು. ಅನೇಕ ಮಹಿಳೆಯರು ಸ್ವಾತಂತ್ರ್ಯ ಹೋರಾಟ ಮಾಡಿದ್ದಾರೆ‌.

ಗ್ರಾಮೀಣ ಆರ್ಥಿಕತೆಯಲ್ಲಿ ಮಹಿಳೆಯರ ಪಾಲುದಾರಿಗೆ ಹೆಚ್ಚು

ನಾವು ಸಮಸ್ಯೆ ಬಗ್ಗೆ ಚರ್ಚೆ ಮಾಡುತ್ತೇವೆ‌ . ಆದರೆ ಮಹಿಳೆಯರು ಸಮಸ್ಯೆಯ ಜೊತೆಗೆ ಬದುಕುತ್ತಿದ್ದಾರೆ. ಹೀಗಾಗಿ  ಈ ವರ್ಷ ಬಜೆಟ್ ನಲ್ಲಿ ಹೊಲದಲ್ಲಿ ಕೆಲಸ ಮಾಡುವ ಎಲ್ಲ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ಸಾವಿರ ರೂ ನೀಡಲು ತೀರ್ಮಾನಿಸಲಾಗಿದೆ.  ಅಂಗನವಾಡಿ ಕಾರ್ಯಕರ್ತರು  ಎಲ್ಲ ಮಕ್ಕಳ ತಾಯಿಯಾಗಿ‌‌ ಕೆಲಸ ಮಾಡುತ್ತಿದ್ದಾರೆ. ಅವರ ಸಹನೆ ಮೆಚ್ಚುವಂತದ್ದು, ಅವರಿಗೆ ಕಳೆದ ವರ್ಷ 1000 ರೂ. ಈ ವರ್ಷ ಒಂದು ಸಾವಿರ. ರೂ. ಹೆಚ್ಚಳ ಮಾಡಲಾಗಿದೆ. ಉದ್ಯೋಗ, ಶಿಕ್ಷಣ ಮತ್ತು ಸಬಲೀಕರಣ ಎಂಬ ಮೂರು ಮಂತ್ರ ಅಳವಡಿಸಿಕೊಂಡು  ಶಿಕ್ಷಣದ ಮೇಲೆ ಬಂಡವಾಳ ಹೂಡಿಮೆ ಮಾಡಲಾಗಿದೆ.

ಅದಕ್ಕಾಗಿ ಎಲ್ಲ ಹೆಣ್ಣುಮಕ್ಕಳಿಗೆ  ಉಚಿತ ಶಿಕ್ಷಣ ಕೊಡಲು‌ ತೀರ್ಮಾಸಲಾಗಿದೆ ಎಂದರಲ್ಲದೇ ಮಹಿಳೆಯರು ಎಲ್ಲ ರಂಗದಲ್ಲಿ ಕೆಲಸ ಮಾಡುತ್ತಿದ್ದಾರೆ.‌  ಆತ್ಮವಿಶ್ವಾಸ ವಿದ್ದರೆ  ಏನಾದರೂ  ಸಾಧಿಸಬಹುದು ಎಂದರು.

ಸ್ತ್ರೀ ಸಾಮರ್ಥ್ಯ

ಸ್ತ್ರೀ ಸಾಮರ್ಥ್ಯ ಯೋಜನೆ ಅಡಿ 5 ಲಕ್ಷ ರೂ. ನೀಡಲಾಗುತ್ತಿದೆ. ಆರೂವರೆ ಕೊಟೆ ಜನಸಂಖ್ಯೆ ಇದೆ‌.‌  _13 ಕೋಟಿ ಕೈಗಳು ಕೆಲಸ ಮಾಡಿದರೆ ಇನ್ನೂ ಹೆಚ್ಚು ಅಭಿವೃದ್ದಿ ಸಾಧಿಸಲು ಸಾಧ್ಯ ಎಂದರು. ಸ್ತ್ರೀ ಶಕ್ತಿ ಯಿಂದ ರಾಜ್ಯದ ಅಭಿವೃದ್ಧಿ ಸಾಧ್ಯ ಎಂಬ ನಂಬಿಕೆ ನಮ್ಮ ಸರ್ಕಾರದ್ದು ಎಂದರು.

ಮಹಿಳಾ ಸುರಕ್ಷತೆಗೆ ವ್ಯವಸ್ಥೆ

ಮಹಿಳೆಯ ಸುರಕ್ಷತೆಗೆ  ನಮ್ಮ ಸರ್ಕಾರ ವ್ಯವಸ್ಥೆ ಕಲ್ಪಿಸಿದ್ದು, ಸುರಕ್ಷಿತ ನಗರ ಯೋಜನೆ ಗೆ ಚಾಲನೆ ನೀಡಲಾಗಿದೆ. ಏಳು ಸಾವಿರ  ಕ್ಯಾಮೆರಾ ಅಳವಡಿಸಿ ಕಮಾಂಡ್ ಸೆಂಟರ್ ಸ್ಥಾಪಿಸಲಾಗಿದೆ. 400 ವಾಹನಗಳನ್ನು ಒದಗಿಸಲಾಗಿದೆ.  ಈ ಯೋಜನೆಯನ್ನು ತಾಲ್ಲೂಕು ಕೇಂದ್ರ ಹಾಗೂ ಎಲ್ಲಾ ಮಹಾನಗರಪಾಲಿಕೆಗಳಿಗೆ ವಿಸ್ತರಣೆ ಮಾಡಲಾಗುವುದು ಎಂದರು. ಎಲ್ಲಾ ಹಂತಗಳಲ್ಲಿ ಮಹಿಳಾ ಸುರಕ್ಷತೆ  ಅತ್ಯಂತ ಮುಖ್ಯವಾಗಿದೆ ಎಂದರು.

ಆರ್ಥಿಕತೆ

ಮಹಿಳೆಯರು ಹಣ ಉಳಿತಾಯ ಮಾಡುವ ಪ್ರವೃತ್ತಿಯಿಂದ ನಮ್ಮ ಆರ್ಥಿಕತೆ ಇನ್ನೂ ಸದೃಢವಾಗಿದೆ. ಅಮೇರಿಕಾದ ಬ್ಯಾಂಕುಗಲು ದಿವಳಿಯಾದರೂ ನಮ್ಮ ಮಹಿಳೆಯರ ಉಳಿತಾಯ ಸಂಸ್ಕೃತಿ ಆರ್ಥಿಕತೆಗೆ ಕೊಡುಗೆ ನೀಡಿದೆ ಎಂದರು.

ಅಂತಾರಾಷ್ಟ್ರೀಯ ‌ಮಟ್ಟಕ್ಕೇರಬೇಕು

ನಾವು ಯಾರದೇ ಮನೆಯಲ್ಲಿ ಹುಟ್ಟಿದರೂ ನಾವು ಬೆಳೆದು ಇತರರಿಗೆ ನೆರವಾಗುವ ಕೆಲಸ ಮಾಡಬೇಕು. ಇದರಿಂದ ಸಮಾಜಕ್ಕೆ ಅನುಕೂಲವಾಗಲಿದೆ. ಐಟಿ ಬಿಟಿ, ಬ್ಯಾಂಕಿಂಗ್ ಕ್ಷೇತ್ರ, ಸೇರಿದಂತೆ ಎಲ್ಲಾ ರಂಗದಲ್ಲಿಯೂ  ಮುಂದಿರುವ ಮಹಿಳೆಯರು ವಿಮಾನ, ಬಸ್ , ಟ್ರಕ್, ಟ್ರ್ಯಾಕ್ಟರ್ ಎಲ್ಲವನ್ನೂ ಓಡಿಸುತ್ತಾರೆ. ನಮ್ಮ ಕನ್ನಡದ ಮಹಿಳೆಯರು ಅಂತಾರಾಷ್ಟ್ರೀಯ ‌ಮಟ್ಟದಲ್ಲಿ ಹೆಸರು ಮಾಡಬೇಕು ಎಂದು ಸಿಎಂ ಆಶಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್, ಸಾಲು ಮರದ ತಿಮ್ಮಕ್ಕ, ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ.ನಾಯ್ಡು, ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ರಾಜಣ್ಣಗೌಡ, ಡಿ.ಆರ್.ಡಿ.ಓ ಸಂಸ್ಥೆಯ ಆಶು ಭಾಟಿಯಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕಿ ಡಾ; ಅನುರಾಧಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ:ಮಂಜುಳಾ ಮೊದಲಾದವರು ಉಪಸ್ಥಿತರಿದ್ದರು.

Tags: Basavaraj Bommaiಅಂತರಾಷ್ಟ್ರೀಯ ಮಹಿಳಾ ದಿನಾಚರಣೆಬಿಜೆಪಿ
Previous Post

ಕಲಬುರಗಿ: ಹೋಳಿ ಹಬ್ಬದ ಕಾಮ ದಹನ ವೇಳೆ ಗಲಾಟೆ- ಯುವಕ ಸಾವು

Next Post

‘ಭಾರತ ಎಂಬ ಹೆಸರು ನೀಡಿದ್ದೇ ಮುಸಲ್ಮಾನ ದೊರೆಗಳು ಎಂದು ಹೇಳಿದರೂ ಆಶ್ಚರ್ಯವಿಲ್ಲ’: ಸಿ.ಟಿ ರವಿ

Related Posts

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?
ಅಂಕಣ

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

by ಪ್ರತಿಧ್ವನಿ
April 13, 2026
0

ವಿಶೇಷ ಲೇಖನ : ನಾ ದಿವಾಕರ, ಹಿರಿಯ ಲೇಖಕರು.. ಡಾ. ಬಿ.ಆರ್. ಅಂಬೇಡ್ಕರ್ ಮತ್ತೊಮ್ಮೆ ವಾರ್ಷಿಕ ಆಚರಣೆಗಳ ಕೇಂದ್ರ ಬಿಂದುವಾಗಿ ಸಾರ್ವಜನಿಕರ ನಡುವೆ ಕಾಣಿಸಿಕೊಳ್ಳಲಿದ್ದಾರೆ. ತಾನು ದೇಶದ...

Read moreDetails
ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

April 13, 2026
ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

April 13, 2026
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

April 12, 2026
Next Post
‘ಭಾರತ ಎಂಬ ಹೆಸರು ನೀಡಿದ್ದೇ ಮುಸಲ್ಮಾನ ದೊರೆಗಳು ಎಂದು ಹೇಳಿದರೂ ಆಶ್ಚರ್ಯವಿಲ್ಲ’: ಸಿ.ಟಿ ರವಿ

‘ಭಾರತ ಎಂಬ ಹೆಸರು ನೀಡಿದ್ದೇ ಮುಸಲ್ಮಾನ ದೊರೆಗಳು ಎಂದು ಹೇಳಿದರೂ ಆಶ್ಚರ್ಯವಿಲ್ಲ’: ಸಿ.ಟಿ ರವಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada