• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆರ್.ಧ್ರುವನಾರಾಯಣ್ ಧಿಡೀರ್ ಸಾವು: ಕಾಂಗ್ರೆಸ್ ಪಾಳಯದಲ್ಲಿ ಶೋಕ

ಪ್ರತಿಧ್ವನಿ by ಪ್ರತಿಧ್ವನಿ
March 11, 2023
in Top Story
0
ರಾಜ್ಯ ರಾಜಕಾರಣದ  ಧೃವತಾರೆಯ ಅಕಾಲಿಕ ನಿರ್ಗಮನ: ಅಗಲಿದ ನಾಯಕನಿಗೆ ಭಾವಪೂರ್ಣ ಶ್ರದ್ಧಾಂಜಲಿಯೊಂದಿಗೆ..
Share on WhatsAppShare on FacebookShare on Telegram

ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಧಿಡೀರ್ ಸಾವು ಕಾಂಗ್ರೆಸ್ ಪಾಳಯವನ್ನ ಶೋಕ ಸಾಗರದಲ್ಲಿ ಮುಳುಗಿಸಿದೆ. ಮೈಸೂರಿನ ವಿಜಯನಗರದ ನಿವಾಸದಲ್ಲಿ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿತ್ತು. ಭಾನುವಾರ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ಸಿದ್ಧತೆ ನಡೆಸಿದ್ದಾರೆ. .ಆರ್.ಧೃವನಾರಾಯಣ್ ಅವರ ಅಂತ್ಯಕ್ರಿಯೆ ಹುಟ್ಟೂರು ಚಾಮರಾಜನಗರ ತಾಲ್ಲೂಕಿನ ಹೆಗ್ಗವಾಡಿಯಲ್ಲಿ ನಡೆಯಲಿದೆ.

ADVERTISEMENT

ಭಾನುವಾರ ಮಧ್ಯಾಹ್ನ 2 ಗಂಟೆ ವೇಳೆಗೆ ಧೃವನಾರಾಯಣ್ ಅವರ ಅಂತ್ಯಕ್ರಿಯೆ ನೆರವೇರಲಿದ್ದು ಸಂಬಂಧಿಕರು, ರಾಜಕೀಯ ನಾಯಕರು, ಸ್ನೇಹಿತರು ಭಾಗಿಯಾಗಲಿದ್ದಾರೆ. ಹುಲ್ಲಹಳ್ಳಿ ರಸ್ತೆಯಿಂದ ಪಾರ್ಥೀವ ಶರೀರದ ಮೆರವಣಿಗೆ ನಡೆಯಲಿದ್ದು ಇದಾದ ಬಳಿಕ ಹುಟ್ಟೂರು ಹೆಗ್ಗವಾಡಿಗೆ ಪಾರ್ಥಿವ ಶರೀರ ರವಾನೆಯಾಗಲಿದೆ.

ಸಿದ್ದರಾಮಯ್ಯ ಸಾಂತ್ವನ…

ಮಾಜಿ ಸಿಎಂ ಸಿದ್ಧರಾಮಯ್ಯ ವಿಧಿವಶರಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ದಾವಣಗೆರೆಯಿಂದ ಮೈಸೂರಿಗೆ ಆಗಮಿಸಿದ ಮಾಜಿ ಸಿಎಂ ಸಿದ್ಧರಾಮಯ್ಯ ಮೈಸೂರಿನ ವಿಜಯ ನಗರ ನಿವಾಸದಲ್ಲಿ ಆರ್.ದೃವನಾರಾಯಣ್ ಅವರ ಕುಟುಂಬಸ್ಥರನ್ನ ಭೇಟಿ ಮಾಡಿದ್ರು. ಧ್ರುವನಾರಾಯಣ ಜೊತೆಗಿದ್ದ ಒಡನಾಟ ನೆನೆದರು.

ಕಾಂಗ್ರೆಸ್ ಗೆ ನಷ್ಟ..
ಆರ್ ಧ್ರುವನಾರಾಯಣ್ ಹಠಾತ್ ನಿಧನದಿಂದ ಕಾಂಗ್ರೆಸ್ ಪಕ್ಷಕ್ಕೆ ಮಾತ್ರವಲ್ಲದೇ ಇಡೀ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಸಿದ್ದರಾಮಯ್ಯ ಭಾವುಕರಾದ್ರು.ಅವರು ಎಲ್ಲಾ ವರ್ಗದವರೊಂದಿಗೂ ಒಡನಾಟ ಹೊಂದಿದ್ದರು.ಪಕ್ಷ ಸಂಘಟನೆ ವಿಚಾರದಲ್ಲಿ ಸದಾ ಸಕ್ರಿಯರಾಗಿರುತ್ತಿದ್ಧರು.ಅವರ ಅಕಾಲಿಕ ಸಾವಿನಿಂದ ತುಂಬಲಾರದ ನಷ್ಟವಾಗಿದೆ.ಅವರ ಕುಟುಂಬ ಸದಸ್ಯರಿಗೆ ದುಖಃ ಭರಿಸುವ ಶಕ್ತಿ ಕೊಡಲಿ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿಕೆ ನೀಡಿದ್ರು.

ಗಳಗಳನೆ ಅತ್ತ ಪ್ರತಾಪ್ ಸಿಂಹ..

ಧ್ರುವನಾರಾಯಣ್ ಸಾಹೇಬರ ಹಠಾತ್ ಸಾವಿನ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ಬೇಸರವಾಯಿತು ಎಂದು ಧ್ರುವನಾರಾಯಣ್ ಅಂತಿಮ ದರ್ಶನ ಪಡೆದ ಬಳಿಕ ಸಂಸದ ಪ್ರತಾಪ್ ಸಿಂಹ ಬೇಸರಗೊಂಡ್ರು.ಮಾಧ್ಯಮಗಳ ಮುಂದೆ ಗಳ ಗಳನೆ ಅತ್ತ ಪ್ರತಾಪ್ ಸಿಂಹ, ಧ್ರುವನಾರಾಯಣ ಜತೆಗಿನ ಒಡನಾಟ ನೆನೆದು ಕಣ್ಣೀರಿಟ್ಟರು.
ದುಃಖದಿಂದಲೇ ಮಾತನಾಡಿದ ಸಂಸದ ಪ್ರತಾಪ್ ಸಿಂಹ.
ಧ್ರುವನಾರಾಯಣ್ ಸಾಹೇಬರು ನನಗೆ ಹಲವು ಬಾರಿ ಗೈಡ್ ಮಾಡಿದ್ದಾರೆ.ಒಳ್ಳೆಯ ಕೆಲಸ ಮಾಡುತ್ತಿದೀಯಾ ಎಂದು ಬೆನ್ನು ತಟ್ಟಿದ್ದರು.ಚಾಮರಾಜನಗರ ಭಾಗದಲ್ಲಿ ಮೊರಾರ್ಜಿ ದೇಸಾಯಿ ಶಾಲೆ, ಇನ್ನಿತರ ವಸತಿ ಶಾಲೆಗಳು ಬಂದಿವೆ ಎಂಬುದಕ್ಕೆ ಧ್ರುವನಾರಾಯಣ್ ಅವರು ಕಾರಣ.ರಾಜಕೀಯ ವಲಯಕ್ಕೆ ಧ್ರುವನಾರಾಯಣ್ ಸಾವು ತುಂಬಲಾರದ ನಷ್ಟ.ಈ ಭಾಗದ ಜನ ನತದೃಷ್ಟರು ಎನಿಸುತ್ತದೆ.
ಅವರ ಕುಟುಂಬಕ್ಕೆ ಸಾವಿನ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರತಾಪ್ ಸಿಂಹ ಸಂತಾಪ ಸೂಚಿಸಿದ್ರು.

ಅಂತಿಮ ದರ್ಶನಕ್ಕೆ ಜನಸಾಗರ..
ಧ್ರುವನಾರಾಯಣ ನಿವಾಸಕ್ಕೆ ಆಗಮಿಸಿದ ಸಾವಿರಾರು ಕೈ ಕಾರ್ಯಕರ್ತರು ಹಾಗೂ ಧ್ರುವನಾರಾಯಣ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕನಿಗೆ ಕಡೇ ನಮನ ಸಲ್ಲಿಸಿದರು. ಕೆಲವರು ಶವದ ಮುಂದೆ ಕಣ್ಣೀರಿಟ್ಟು, ಧ್ರುವನಾರಾಯಣ ಅವರಿಗೆ ಜೈ ಕಾರ ಕೂಗಿದ್ರು.

ಇಷ್ಟೇ ಅಲ್ಲದೆ Aicc ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ , ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ , ರಾಜ್ಯ ಕೈ ಉಸ್ತುವಾರಿ ರಣದೀಪ್ ಸುರ್ಜೆವಾಲಾ, ವಸತಿ ಸಚಿವ ಸೋಮಣ್ಣ , ಸುತ್ತೂರು ಶ್ರೀಗಳು , ಮಾಜಿ ಸಚಿವ ಮಹದೇವಪ್ಪ , ಮಾಜಿ ಶಾಸಕಿ ಗೀತಾ ಮಹಾದೇವಪ್ರಸಾದ್ , ಶಾಸಕ ತನ್ವಿರ್ ಸೇಠ್ , ಸಂಸದ ಶ್ರೀನಿವಾಸ್ ಪ್ರಸಾದ್ ಸೇರಿದಂತೆ ಅನೇಕರು ಧ್ರುವನಾರಾಯಣ ಅವರಿಗೆ ಅಂತಿಮ ನಮನ ಸಲ್ಲಿಸಿದರು.

Tags: Congress Partyಆರ್.ದ್ರುವನಾರಾಯಣ್ಸಿದ್ದರಾಮಯ್ಯ
Previous Post

MALLIKARJUN KHARGE | ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಅಪಾರ ಗೌರವವಿದೆ..! #PRATIDHVANI

Next Post

ನಕ್ಸಲರ ಬೆ‌ನ್ನುಮೂಳೆ ಮುರಿದಿದ್ದೇವೆ: ವಿಜಯೇಂದ್ರ

Related Posts

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?
Top Story

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

by ಪ್ರತಿಧ್ವನಿ
April 27, 2026
0

ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಹೊಸ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ, Grok ಎಂಬ ಚಾಟ್‌ಬಾಟ್ ಭಾರತದ ಪ್ರಧಾನಿ ಯಾರು ಆಗಬೇಕು ಎಂಬ ಪ್ರಶ್ನೆಗೆ ನೀಡಿದ ಉತ್ತರ ರಾಜಕೀಯ...

Read moreDetails
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

April 26, 2026
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
Next Post
‘ನಿಮ್ಮ ಹೆಸರಿಗೆ ಜೈಕಾರ ಹಾಕಿಸಿಕೊಳ್ಳಬೇಡಿ, ಪಕ್ಷಕ್ಕೆ ಜೈಕಾರ ಹಾಕಿಸಿ’ : ಸ್ವಪಕ್ಷೀಯರಿಗೆ ವಿಜಯೇಂದ್ರ ಟಾಂಗ್​

ನಕ್ಸಲರ ಬೆ‌ನ್ನುಮೂಳೆ ಮುರಿದಿದ್ದೇವೆ: ವಿಜಯೇಂದ್ರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada