• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹತ್ತು ದಿನದಲ್ಲಿ ಕೆರೆ ನಿರ್ಮಾಣ : ಮನುಷ್ಯ ಬದುಕ ಬೇಕಾದರೆ ಪರಿಸರ ಉಳಿಸಬೇಕು..!

Any Mind by Any Mind
March 15, 2023
in Top Story, ಇದೀಗ, ಕರ್ನಾಟಕ
0
ಹತ್ತು ದಿನದಲ್ಲಿ ಕೆರೆ ನಿರ್ಮಾಣ : ಮನುಷ್ಯ ಬದುಕ ಬೇಕಾದರೆ ಪರಿಸರ ಉಳಿಸಬೇಕು..!
Share on WhatsAppShare on FacebookShare on Telegram

ADVERTISEMENT

ಶಿವಮೊಗ್ಗ:ಮಾ.15: ಶಿವಮೊಗ್ಗದ ಸರ್ಜಿ ಫೌಂಡೇಶನ್‌, ಉತ್ತಿಷ್ಠ ಭಾರತ ಮಲೆನಾಡು ಮತ್ತು ಸಿಹಿಮೊಗೆ ಕ್ರಿಕೆಟ್‌ ಅಕಾಡೆಮಿ ಹಾಗೂ ಪರಿಸರಾಸಕ್ತರು ಒಡಗೂಡಿ ಬಿದರೆ ಮಲ್ನಾಡ್‌ ಕ್ಯಾನ್ಸರ್‌ ಆಸ್ಪತ್ರೆ ಎದುರು ಶ್ರೀ ಸಾಯಿಬಾಬಾ ಮಂದಿರ ಬಳಿ ನೂತನ ಕೆರೆ ನಿರ್ಮಿಸಿದ್ದಾರೆ. ಬಿಸಿಲ ಬೇಗೆಗೆ ಪ್ರಾಣಿ, ಪಕ್ಷಿಗಳ ನೀರಡಿಕೆ ನೀಗಲು‌ ಹಾಗೂ ಜಲಸಂವರ್ಧನೆ ಆಶಯದಿಂದ ಈ ಪರಿಸರಾಸಕ್ತರು ನೀರಿನ‌ ಚಿಲುಮೆ ಹರಿಸಿದ್ದಾರೆ.

ಸರ್ಜಿ ಫೌಂಡೇಶನ್‌ನ ಮ್ಯಾನೇಜಿಂಗ್‌ ಟ್ರಸ್ಟಿ ಡಾ.ಧನಂಜಯ ಸರ್ಜಿ, ಶಿವಮೊಗ್ಗಕ್ಕೆ ಪರಿಸರ ಪ್ರೇಮಿಗಳು, ಪರೋಪಕಾರಂ, ಪರ್ಯಾವರಣ ಟ್ರಸ್ಟ್‌ ಕಾರ್ಯವನ್ನ ಶಿವಮೊಗ್ಗ ಜನ ಶ್ಲಾಘಿಸಿದ್ದಾರೆ. ಈ ಸಾಮಾಜಿಕ ‌ಕಾರ್ಯದ ಬಗ್ಗೆ ಮಾತನಾಡಿದ ಸರ್ಜಿ ಫೌಂಡೆಶನ್ ನ ಡಾ. ಧನಂಜಯ ಸರ್ಜಿ, ಪುಷ್ಕರಣಿ, ಕೆರೆ-ಕಟ್ಟೆಗಳ ನಿರ್ಮಾಣ ಈ ಹೊತ್ತಿಗೆ ಅವಶ್ಯ ಕಾರ್ಯ ಎಂದರು.

ಮನುಷ್ಯ ಬಾಳಬೇಕಾದರೆ ಪರಿಸರವನ್ನು ಉಳಿಸುವುದು ತುಂಬಾ ಅಗತ್ಯವಿದೆ. ನೀರಿನ ಸಂಗ್ರಹಣೆ ತುಂಬಾ ಅಗತ್ಯವಿದೆ. ಭಗವಂತನ ಸೃಷ್ಟಿ ಇದು, ಕರ್ನಾಟಕ ನೀರಿನ ಲೆವೆಲ್‌ 4 ರಿಂದ 5 ಮೀಟರ್‌ಗೆ ಬಂದಿದೆ, ಸುಮಾರು 4 ಸಾವಿರ ಬಿಲಿಯನ್‌ ಕ್ಯೂಬಿಕ್‌ ಮೀಟರ್‌ ಮಳೆಯಿಂದ ಲಭ್ಯವಾಗುತ್ತದೆ. ಈ ಪೈಕಿ ಮೂರನೇ ಒಂದು ಭಾಗದಷ್ಟು ನೀರು ವಿವಿಧ ಕೆರೆ, ಕಟ್ಟೆ, ಜಲಾಶಯ ಸೇರಿದಂತೆ ನೀರು ಸಂಗ್ರಹವಾಗುತ್ತದೆ. ಉಳಿದೆಲ್ಲಾ ನೀರು ಸಮುದ್ರದ ಪಾಲು ಆಗುತ್ತದೆ. ಭೂಮಿಯು ನೀರನ್ನು ಹೀರಿಕೊಂಡಷ್ಟು ನೀರಿನ ಸೆಲೆ ಹೆಚ್ಚಾಗುತ್ತ ಹೋಗುತ್ತದೆ. ಇಲ್ಲವಾದರೆ ಭೂಕುಸಿತ, ಭೂಕಂಪ ಸೇರಿದಂತೆ ಪ್ರಕೃತಿ ವಿಕೋಪಗಳು ಸಂಭವಿಸುವ ಸಾಧ್ಯತೆ ಹೆಚ್ಚಾಗುತ್ತದೆ. ಆದ್ದರಿಂದ ನೀರಿನ ಸಂಗ್ರಹ ಮತ್ತು ನೀರನ್ನು ಉಳಿಸುವಲ್ಲಿ ಕೆರೆ ಕಟ್ಟೆಗಳು ಅಭಿವೃದ್ಧಿ ಅತಿ ಮುಖ್ಯ. ಒಟ್ಟು ನೀರಿನ ಪ್ರಮಾಣದಲ್ಲಿ ಶೇ.70 ರಷ್ಟು ಕೃಷಿಗೆ ಬಳಕೆಯಾದರೆ, ಶೇ.8 ರಿಂದ 9 ರಷ್ಟು ನೀರು ಗೃಹ ಬಳಕೆ ಇತ್ಯಾದಿಗೆ ಹೋಗುತ್ತದೆ. 2 ರಷ್ಟು ಕೈಗಾರಿಕೆಗಳಿಗೆ  ಹೋಗುತ್ತದೆ, ಇತ್ತೀಚಿನ ಎರಡು ವರ್ಷಗಳಲ್ಲಿ ಮಳೆ ಪ್ರಮಾಣ ಇಳಿಕೆ ಆಗಿತ್ತು, ಮಳೆ ಹೆಚ್ಚಾದ್ದರಿಂದ ಶೇ. 14 ರಿಂದ 15 ರಷ್ಟು ಏರಿಕೆ ಕಂಡಿದೆ. ಕೆರೆ -ಕಟ್ಟೆಗಳ ನಿರ್ಮಾಣದಂತಹ ಕೆಲಸಗಳು ನಮಗೆ ಪೂರಕವಾಗುತ್ತವೆ.  ಇಲ್ಲದಿದ್ದರೆ ಕುಡಿಯಲಿಕ್ಕೂ ನೀರು ಸಿಗದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಆದ್ದರಿಂದ  ಮಳೆ ನೀರನ್ನು ಉಳಿಸಬೇಕಾದರೆ ಕೆರೆ ಕಟ್ಟೆಗಳ ಜೀರ್ಣೋದ್ಧಾರ ಅತೀ ಅವಶ್ಯ ಎಂದು ಅಭಿಪ್ರಾಯಪಟ್ಟರು.

ಶಿವಮೊಗ್ಗ ಬಿದರೆ ಗ್ರಾಮದ ಸಾಯಿಬಾಬ ಮಂದಿರದ ಎದುರು, ಒಂದು ಪುಷ್ಕರಣಿಯಂತಹ ಕೆರೆ ( ಕಲ್ಯಾಣಿ) ಮಾಡಿದ್ದೇವೆ. ಸುಮಾರು ನೂರು ಅಡಿ ಉದ್ದ, ನೂರೈವತ್ತು  ಅಡಿ ಅಗಲ ಹಾಗೂ ಹದಿನೈದು ಅಡಿ ಆಳದ ಈ ಕೆರೆ ಹತ್ತೇ ದಿನದಲ್ಲಿ ಸಿದ್ಧವಾಗಿದೆ. ಶಿವಮೊಗ್ಗ ನಗರಾಭಿವೃದ್ಧಿ ಮಂಡಳಿಯೇ ಅನುಮತಿ ನೀಡಿ ಪಾಳು ಬಿದ್ದಿದ್ದ ಜಾಗದಲ್ಲಿ ನೀರಿನ ಸೆಲೆ ಮೂಡಿದೆ. ಬಹಳ ಮುಖ್ಯವಾಗಿ ಪುಷಕರಣಿ ಯಾಕೆ ಬೇಕು, ಕೆರೆ-ಕಟ್ಟೆಗಳೇಕೆ ಇರಬೇಕು ಎಂಬುದಕ್ಕೆ ವೈಜ್ಞಾನಿಕ ಕಾರಣಗಳಿವೆ. ಮಳೆ ನೀರಿನ ಇಂಗುಗುಂಡಿಗಳಂತೆ ಈ ಜಲ‌ಮೂಲಗಳು ಕೆಲಸ ಮಾಡುತ್ತವೆ. ಬಿದ್ದ ಮಳೆ ಸಮುದ್ರ ಸೇರುವುದನ್ನ ತಡೆಯಲು ಇವು ಅವಶ್ಯ. ಈ ತರಹದ ಕೆಲಸಗಳನ್ನ ಮಾಡುವುದರಿಂದ ಮಣ್ಣು ನೀರನ್ನ ಹಿಡಿದಿಟ್ಟುಕೊಳ್ಳುವ ಮೂಲಕ ಸಾಂದ್ರತೆ ಹೆಚ್ಚುತ್ತೆ. ಭೂಮಿ ಕುಸಿತ ತಡೆಯಬಹುದು. ಸಹಜವಾಗಿ ಅಂತರ್ಜಲ ಮಟ್ಟ ಕೂಡ ಹೆಚ್ಚುತ್ತೆ. ಕೆರೆ, ಪುಷ್ಕರಣಿ ಹಿಂದಿನ ಕಾಲದಲ್ಲಿ ನಿರ್ಮಾಣ ಮಾಡುತ್ತಿದ್ದದ್ದೇ ಇಂತಹ ವೈಜ್ಞಾನಿಕ ಕಾರಣಗಳಿಂದ. ಹಾಗಾಗಿ ಬಿದ್ದ ಮಳೆ ನೀರನ್ನ ಹಿಡಿದಿಡುವುದು ಮಹತ್ಕಾರ್ಯ. ಜಲಮೂಲಗಳ ರಕ್ಷಣೆ ಪ್ರಾಣಿ-ಪಕ್ಷಿಗಳ ನೀರಡಿಕೆ ನೀಗಲೂ ಕೂಡ ಅನುವಾಗುತ್ತೆ. ಈ ವರ್ಷದ ಬೇಸಿಗೆ ತಾಪ ಹೆಚ್ಚಿದೆ. ದೇವರ ದಯೆ ಯಿಂದ ಪುಷ್ಕರಣಿ ಹತ್ತೇ ದಿನದಲ್ಲಿ ಸಿದ್ಧವಾಗಿ ನೀರು ಜಿನುಗುತ್ತಿದೆ ಎಂದು ಡಾ.‌ಸರ್ಜಿ ಹೇಳಿದರು.

Tags: Congress PartyLakeShivamoggaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನಮ್ಮ ಪ್ರಾಣ ಹೋದರೂ  ಸರಿ ಒಂದು ಇಂಚು ಭೂಮಿಯನ್ನು ಕೂಡ ಮಹಾರಾಷ್ಟ್ರಕ್ಕೆ ಬಿಟ್ಟು ಕೊಡುವುದಿಲ್ಲ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

Next Post

ಐಟಿ ದಾಳಿ ವಿಚಾರವಾಗಿ ಮೊದಲ ಪ್ರತಿಕ್ರಿಯೆ ನೀಡಿದ ಎಂಎಲ್​ಸಿ ಆರ್​.ಶಂಕರ್​

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post
ಐಟಿ ದಾಳಿ ವಿಚಾರವಾಗಿ ಮೊದಲ ಪ್ರತಿಕ್ರಿಯೆ ನೀಡಿದ ಎಂಎಲ್​ಸಿ ಆರ್​.ಶಂಕರ್​

ಐಟಿ ದಾಳಿ ವಿಚಾರವಾಗಿ ಮೊದಲ ಪ್ರತಿಕ್ರಿಯೆ ನೀಡಿದ ಎಂಎಲ್​ಸಿ ಆರ್​.ಶಂಕರ್​

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada