• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಇಂದಿರಾ ಕ್ಯಾಂಟೀನ್‌ ಗಳನ್ನು ಮುಚ್ಚದಂತೆ ಸಿದ್ದರಾಮಯ್ಯ ಆಗ್ರಹ

Any Mind by Any Mind
March 15, 2023
in ಇದೀಗ, ಕರ್ನಾಟಕ, ರಾಜಕೀಯ
0
ಇಂದಿರಾ ಕ್ಯಾಂಟೀನ್‌ ಗಳನ್ನು ಮುಚ್ಚದಂತೆ ಸಿದ್ದರಾಮಯ್ಯ ಆಗ್ರಹ
Share on WhatsAppShare on FacebookShare on Telegram

ADVERTISEMENT

ಬೆಂಗಳೂರು : ಮಾ.15: ರಾಜ್ಯ ಸರ್ಕಾರ ಇಂದಿರಾ ಕ್ಯಾಂಟೀನ್‌ ಗಳನ್ನು ಮುಚ್ಚಿದರೆ ಬಡವರು, ಕಾರ್ಮಿಕರು ಮತ್ತು ವಿದ್ಯಾರ್ಥಿಗಳ ಹೊಟ್ಟೆ ಮೇಲೆ ಹೊಡೆದಂತಾಗುತ್ತದೆ, ಇಂದಿರಾಗಾಂಧಿ ಅವರ ಹೆಸರಿದೆ ಎಂಬ ಏಕೈಕ ಕಾರಣಕ್ಕೆ ಕ್ಯಾಂಟೀನ್‌ ಗಳನ್ನು ಮುಚ್ಚಿದರೆ ಬಡವರ ಶಾಪ ಈ ಸರ್ಕಾರಕ್ಕೆ ತಟ್ಟಲಿದೆ ಎಂದು ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮ್ಮ ಸರ್ಕಾರ ಇರುವಾಗ ಇಂದಿರಾ ಕ್ಯಾಂಟೀನ್‌ ಗಳನ್ನು ಆರಂಭ ಮಾಡಿದ್ದೆವು. ಬೆಂಗಳೂರು ನಗರದ ಎಲ್ಲಾ 198 ವಾರ್ಡ್‌ ಗಳಲ್ಲಿ ಆರಂಭ ಮಾಡಿದ್ದೆವು. ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಆರಂಭ ಮಾಡಬೇಕು ಎಂದು ನಿರ್ಧಾರ ಮಾಡಿದ್ದೆವು, ಅಷ್ಟೊತ್ತಿಗೆ ನಮ್ಮ ಸರ್ಕಾರ ಅಧಿಕಾರದಿಂದ ಹೋಗಿ ಸಮ್ಮಿಶ್ರ ಸರ್ಕಾರ ಬಂದಿತು. ಆ ನಂತರ ಆಪರೇಷನ್‌ ಕಮಲದ ಅನೈತಿಕ ಮಾರ್ಗದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿತು. ನಾವು ಇಂದಿರಾ ಗಾಂಧಿ ಅವರ ಹೆಸರಿಟ್ಟು ಕ್ಯಾಂಟೀನ್‌ ಗಳನ್ನು ಆರಂಭ ಮಾಡಿದ್ದೆವು. ಕ್ಯಾಂಟೀನ್‌ ಸ್ಥಾಪನೆಯ ನಮ್ಮ ಉದ್ದೇಶ ಬಡವರು, ಹಳ್ಳಿಗಳಿಂದ ಬರುವ ಜನರು, ಆಸ್ಪತ್ರೆಗಳಿಗೆ ಬರುವವರು, ವಿದ್ಯಾರ್ಥಿಗಳು ಮುಂತಾದವರಿಗೆ ಕಡಿಮೆ ಬೆಲೆಯಲ್ಲಿ ಆಹಾರ ಪದಾರ್ಥಗಳು ಸಿಗಬೇಕು ಎಂಬುದಾಗಿತ್ತು. ಒಟ್ಟು ನಾವು 400 ಇಂದಿರಾ ಕ್ಯಾಂಟೀನ್‌ ಗಳನ್ನು ಸ್ಥಾಪನೆ ಮಾಡಿದ್ದೆವು. ಈಗಿನ ಬಿಜೆಪಿ ಸರ್ಕಾರ ಇಂದಿರಾ ಕ್ಯಾಂಟೀನ್‌ ಗಳನ್ನು ಶಾಶ್ವತವಾಗಿ ಮುಚ್ಚಲು ಹೊರಟಿದೆ. ಇದು ಬಡ ಜನರಿಗೆ ಮಾಡುತ್ತಿರುವ ದ್ರೋಹವಾಗುತ್ತದೆ. ಜಯಲಲಿತ ಅವರು ಆರಂಭ ಮಾಡಿದ್ದ ಅಮ್ಮ ಕ್ಯಾಂಟೀನ್‌ ಗಳನ್ನು ಡಿಎಂಕೆ ಸರ್ಕಾರ ಬಂದ ಮೇಲೆ ಮುಚ್ಚಲಿಲ್ಲ, ಅದನ್ನು ಮುಂದುವರೆಸಿಕೊಂಡು ಹೋಗಿದ್ದರು. ಈ ಬಿಜೆಪಿಯವರು ತಮ್ಮ ಪ್ರಣಾಳಿಕೆಯಲ್ಲಿ ಇನ್ನೂ 300 ಇಂದಿರಾ ಕ್ಯಾಂಟೀನ್‌ ಗಳನ್ನು ತೆರೆಯುವುದಾಗಿ ಹೇಳಿ ಈಗ ಮುಚ್ಚಲು ಹೊರಟಿದ್ದಾರೆ. ಇದು ಬಡವರು, ಕಾರ್ಮಿಕರ ಹೊಟ್ಟೆ ಮೇಲೆ ಹೊಡೆಯುವ ಕೆಲಸ.

ನಿನ್ನೆ ಬ್ಯಾಡಗಿ, ಹಿರೇಕೆರೂರಿನಲ್ಲಿ ಇಂದಿರಾ ಕ್ಯಾಂಟೀನ್‌ ನಡೆಯುತ್ತಿದೆಯಾ ಎಂದು ಕೇಳಿದೆ, ಈ ಎಲ್ಲಾ ಕಡೆ ಮುಚ್ಚಿದ್ದಾರಂತೆ. ಬೆಂಗಳೂರು ನಗರದ ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿದ್ದ ಇಂದಿರಾ ಕ್ಯಾಂಟೀನನ್ನು ಮುಚ್ಚಿದ್ದಾರೆ. ಬೆಂಗಳೂರು ನಗರದ ಎಲ್ಲಾ 198 ವಾರ್ಡ್‌ ಗಳಲ್ಲಿ ಕ್ಯಾಂಟೀನ್ ಆರಂಭ ಮಾಡಿದ್ದೆವು. ಪ್ರತಿ ಹೊತ್ತು ಸುಮಾರು 500 ಜನ ಒಂದೊಂದು ಕ್ಯಾಂಟೀನ್‌ ನಲ್ಲಿ ತಿಂಡಿ, ಊಟ ಮಾಡುತ್ತಿದ್ದರು.

ಯಾವ ಕಾರಣಕ್ಕೂ ಈ ಇಂದಿರಾ ಕ್ಯಾಂಟೀನ್‌ ಗಳನ್ನು ಮುಚ್ಚಬಾರದು ಎಂದು ನಾನು ಒತ್ತಾಯ ಮಾಡುತ್ತೇನೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹೆಸರಿದೆ ಎಂಬ ಕಾರಣಕ್ಕೆ ಈ ಕ್ಯಾಂಟೀನ್‌ ಗಳನ್ನು ಮುಚ್ಚಲು ಹೋಗಬಾರದು. ವಾಜಪೇಯಿ, ಸಾವರ್ಕರ್‌, ದೀನದಯಾಳ್‌ ಉಪಾಧ್ಯಾಯ ಹೆಸರಿನಲ್ಲಿ ಬಹಳಷ್ಟು ಕಾರ್ಯಕ್ರಮಗಳನ್ನು ಮಾಡಿಕೊಂಡಿದ್ದಾರೆ, ಅವನ್ನೆಲ್ಲಾ ನಾವು ತೆಗೆದುಹಾಕುತ್ತೇವೆ ಎಂದು ಹೇಳಿದ್ದೇವಾ? ಇಂದಿರಾ ಕ್ಯಾಂಟೀನ್ ನಮ್ಮ ಸರ್ಕಾರದ ಕಾರ್ಯಕ್ರಮ, ಹಿಂದಿನಿಂದ ಜನರ ಹಸಿವು ನೀಗಿಸುತ್ತಾ ಬಂದಿದೆ, ಯಾವುದೇ ಕಾರಣಕ್ಕೂ ಇದನ್ನು ಮುಚ್ಚುವುದು ಬೇಡ ಎಂದು ಒತ್ತಾಯ ಮಾಡುತ್ತೇನೆ. ಮುಚ್ಚುವ ತಪ್ಪು ಮಾಡಿದರೆ ಜನ ನಿಮಗೆ ಶಾಪ ಹಾಕುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದ್ರು..

Tags: BJPBJP GovernmentBjpKaranatakabsbommaicmbommaiCongress Leader’sIndira Canteenlatest newssiddaramaiahಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಉದ್ಯೋಗಕ್ಕಾಗಿ ಭೂ ಹಗರಣ : ಲಾಲೂ ಪ್ರಸಾದ್​ ಯಾದವ್​, ರಾಬ್ರಿ ದೇವಿ ಹಾಗೂ ಮಿಸಾ ಭಾರತಿಗೆ ಜಾಮೀನು

Next Post

ʻಕಬ್ಜʼ ಚಿತ್ರದ ಅದ್ಧೂರಿ ಪ್ರಿ ರಿಲೀಸ್‌ ಕಾರ್ಯಕ್ರಮ

Related Posts

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
0

ಬೆಂಗಳೂರು: ನಾನು ಎಂಎಲ್ಎ ಆದ ಮೇಲೆ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಯಾವ ಜಾತಿ ಗಲಭೆ, ಜಾತಿ ರಾಜಕಾರಣ, ಪೊಲೀಸರ ಮೇಲೆ ಒತ್ತಡ, ಒತ್ತಾಯ ಮಾಡಿಲ್ಲ.ಕುವೆಂಪುರವರು ಹೇಳಿದಂತೆ ನಮ್ಮ...

Read moreDetails

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

January 13, 2026
Next Post
ʻಕಬ್ಜʼ ಚಿತ್ರದ ಅದ್ಧೂರಿ ಪ್ರಿ ರಿಲೀಸ್‌ ಕಾರ್ಯಕ್ರಮ

ʻಕಬ್ಜʼ ಚಿತ್ರದ ಅದ್ಧೂರಿ ಪ್ರಿ ರಿಲೀಸ್‌ ಕಾರ್ಯಕ್ರಮ

Please login to join discussion

Recent News

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada