• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Minister R.Ashok v/s H.D.Kumaraswamy : ಸಚಿವ ಆರ್.ಅಶೋಕ್ ಗಿಣಿಭವಿಷ್ಯ.. ಸಂಖ್ಯಾಸಾಸ್ತ್ರ ಹೇಳ್ತಾರಾ..? : ಹೆಚ್.ಡಿಕೆ ಟಾಂಗ್

Any Mind by Any Mind
March 16, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
Minister R.Ashok v/s H.D.Kumaraswamy : ಸಚಿವ ಆರ್.ಅಶೋಕ್ ಗಿಣಿಭವಿಷ್ಯ.. ಸಂಖ್ಯಾಸಾಸ್ತ್ರ ಹೇಳ್ತಾರಾ..? : ಹೆಚ್.ಡಿಕೆ ಟಾಂಗ್
Share on WhatsAppShare on FacebookShare on Telegram

ಬೆಂಗಳೂರು : ಮಾ.15: ಕೋಲಾರದಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪಯಾತ್ರೆಯಲ್ಲಿ ಜೆಡಿಎಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದ ಸಚಿವ ಆರ್.ಅಶೋಕ್ ಅವರು, ಜೆಡಿಎಸ್‌ ಪಕ್ಷದ ಶ್ರೀನಿವಾಸಗೌಡ ಪಕ್ಷ ಬಿಟ್ಟು ಓಡು ಮಗಾ.. ಓಡು ಮಗಾ.. ಎಂದು ಹೋಗುತ್ತಿದ್ದಾರೆ ಅಂತಾ ಆರ್.ಅಶೋಕ್ ಟೀಕಿಸಿದ್ದರು.‌ ಅಶೋಕ್ ಹೇಳಿಕೆಗೆ ಪ್ರತಿಕ್ರಿಯೆಗೆ ಖಡಕ್ ರಿಪ್ಲೆ ಕೊಟ್ಟಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್‌ ಮಾಡಿ ಹಿಗ್ಗಾ-ಮುಗ್ಗಾ ಜಾಡಿಸಿದ್ದಾರೆ..

ADVERTISEMENT

ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಸಾರಾಂಶ :

ಸನ್ಮಾಶ್ರೀ ಸಚಿವ ಆರ್.ಅಶೋಕ್ ಅವರು ಭವಿಷ್ಯವನ್ನು, ಸಂಖ್ಯಾಸಾಸ್ತ್ರವನ್ನು ಹೇಳುತ್ತಾರೆ ಎಂದು ನನಗೆ ಗೊತ್ತಾಗಿದ್ದು ಈಗಲೇ. ಅವರಲ್ಲೂ ಒಬ್ಬರು ‘ಕಾಲಜ್ಞಾನಿ’, ‘ಸಂಖ್ಯಾಜ್ಞಾನಿ’ ಇದ್ದಾರೆನ್ನುವ ಸೋಜಿಗ ನನಗೆ ಬೆಕ್ಕಸ ಬೆರಗುಂಟು ಮಾಡಿದೆ. ಚುನಾವಣೆ ನಂತರ ತಮ್ಮ ದುಡಿಮೆಗೆ ದೋಖಾ ಇಲ್ಲ ಎನ್ನುವ ಆತ್ಮವಿಶ್ವಾಸ ಅಶೋಕ್ ಅವರಲ್ಲಿದೆ, ಸಂತೋಷ..ನಮ್ಮ ಜೆಡಿಎಸ್ ಪಕ್ಷಕ್ಕೆ 20 ಸ್ಥಾನಗಳು ಬರುತ್ತವೆ ಎಂದು ಚಿಕ್ಕಬಳ್ಳಾಪುರದಲ್ಲಿ ಗಿಣಿಭವಿಷ್ಯ ಹೇಳಿರುವ ಅವರು, ತಮ್ಮ ಬಿಜೆಪಿ ಪಕ್ಷ ಅದೆಷ್ಟು ಸೀಟು ಗೆಲ್ಲುತ್ತದೆ ಎನ್ನುವುದನ್ನು ಹೇಳಲು ಮರೆತಿದ್ದಾರೆ! ಮರೆತಿದ್ದಾರೆಯೋ ಅಥವಾ ಬೇಕೆಂದೇ ಹೇಳಲಿಲ್ಲವೋ..? ಅವರೇ ಹೇಳಬೇಕು. ಎಷ್ಟೇ ಆಗಲಿ, ಅವರ ಜಾಣತನ ಜಗಜ್ಜಾಹೀರು!! ಅಶೋಕ್ ಸಾಹೇಬರು ‘ವಿಜಯ ಸಂಕಲ್ಪ’ಕ್ಕೆ ಬದಲಾಗಿ ‘ಸುಳ್ಳುಸಂಕಲ್ಪ’ ಮಾಡಿಕೊಂಡೇ ರಾಜ್ಯವನ್ನು ಸುತ್ತುತ್ತಿದ್ದಾರೆ. ಅವರ ‘ಸುಳ್ಳುಸಂಕಲ್ಪ ಯಾತ್ರೆ’ಗೆ ನನ್ನ ಶುಭಾಶಯಗಳು ಹಾಗೂ ಗಾಢ ಸಾಂತ್ವನಗಳು. ಆದರೆ, ಅವರ ಕಾಮಾಲೆ ಮನಸ್ಸಿನ, ಅದರ ಅರೆಬೆಂದ ಲೆಕ್ಕದ ಬಗ್ಗೆ ನನ್ನ ಅನುಕಂಪವಿದೆ. ತಮ್ಮ ತಟ್ಟೆಯಲ್ಲಿ ಹೆಗ್ಗಣ ಸತ್ತು ಬಿದ್ದಿದ್ದರೂ ಕಂಡವರ ತಟ್ಟೆಯಲ್ಲಿ ನೊಣ ಹುಡುಕುವುದು ಬಿಜೆಪಿಗೆ ಅಂಟಿದ ಜಾಡ್ಯ ಮತ್ತು ಆಜನ್ಮಪರ್ಯಂತ ಬಂದಿರುವ ಚಾಳಿ. ನಮ್ಮ ಪಕ್ಷ ಬಿಡೋರ ಮಾತು ಹಾಗಿರಲಿ, ನಿಮ್ಮ ಪಕ್ಷದಲ್ಲಿ ವಾರದೊಪ್ಪತ್ತಿನಿಂದ ನಿರಂತರವಾಗಿ ಕೇಳಿಬರುತ್ತಿರುವ ಅರುಣರಾಗ, ವಿಜಯನಾದ ಕಥನಗಳ ಕಥೆ ಎನು ಅಶೋಕ್‌ ಅವರೇ?

ಅಶೋಕ್ ಸಾಹೇಬರು 'ವಿಜಯ ಸಂಕಲ್ಪ'ಕ್ಕೆ ಬದಲಾಗಿ 'ಸುಳ್ಳುಸಂಕಲ್ಪ' ಮಾಡಿಕೊಂಡೇ ರಾಜ್ಯವನ್ನು ಸುತ್ತುತ್ತಿದ್ದಾರೆ. ಅವರ 'ಸುಳ್ಳುಸಂಕಲ್ಪ ಯಾತ್ರೆ'ಗೆ ನನ್ನ ಶುಭಾಶಯಗಳು ಹಾಗೂ ಗಾಢ ಸಾಂತ್ವನಗಳು. ಆದರೆ, ಅವರ ಕಾಮಾಲೆ ಮನಸ್ಸಿನ, ಅದರ ಅರೆಬೆಂದ ಲೆಕ್ಕದ ಬಗ್ಗೆ ನನ್ನ ಅನುಕಂಪವಿದೆ. 3/7

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 16, 2023

ನಿನ್ನೆ ದಿನ ನಿಮ್ಮ ಕೇಂದ್ರ ಗೃಹ ಸಚಿವರು ಅಮಿತ್ ಶಾ ಅವರು ಮಾಡಿದ ಪಂಚಾಯಿತಿ ಕಟ್ಟೆ ಪುರಾಣದ ಅಸಲಿಯೆತ್ತೇನು? ಈ ಬಿಜೆಪಿಯ ಗೃಹಭಂಗದಿಂದ ಯಾರಿಗೆ ದುಃಖ? ಯಾರಿಗೆ ʼಸಂತೋಷʼ!? ಕೊಂಚ ಹೇಳಬಲ್ಲಿರಾ ಅಶೋಕ್‌ ಅವರೇ? ಇಷ್ಟೆಲ್ಲಾ ಅವಾಂತರ, ಹಗರಣಗಳ ಹೊಲಸು ಮೆತ್ತಿಕೊಂಡಿರುವ ನೀವು, ನಮ್ಮನ್ನು 20 ಸೀಟಿಗೇ ಕಟ್ಟಿ ಹಾಕಬಲ್ಲಿರಾ? ʼ40% ನಾಯಕʼರಾದ ನಿಮ್ಮಲ್ಲಿ ಆ ಧಮ್ಮುತಾಕತ್ತು ಇದೆಯಾ? ಹಾಗಿದ್ದರೆ, ವಿಶ್ವವಂದ್ಯ ಪ್ರಧಾನಿಗಳು ಅಷ್ಟು ಬಿಡುವಾಗಿ ಕರ್ನಾಟಕಕ್ಕೆ ಪದೇಪದೆ ಓಡೋಡಿ ಬರುತ್ತಾರೇಕೆ? ಅಮಿತ್ ಶಾರವರ ಅಪರಿಮಿತ ಭೇಟಿಗಳು ಯಾಕೋ?? ಪಾಪ.. ನಿಮ್ಮ ಫಜೀತಿ!! ಚುನಾವಣೆ ಆಗಲಿ, ಫಲಿತಾಂಶ ಬರಲಿ. ಓಡು ಮಗಾ, ಓಡು ಮಗಾ ಸರದಿ ಯಾರದ್ದೆನ್ನುವುದು ಜನಕ್ಕೇ ಗೊತ್ತಾಗುತ್ತದೆ. ಎಷ್ಟಾದರೂ ಓಡು ಮಗಾ ರೇಸ್ʼನಲ್ಲಿ ನಿಮ್ಮನ್ನು ಸರಿಗಟ್ಟುವ ವೀರರೂ ಶೂರರೂ ಕರ್ನಾಟಕದಲ್ಲಿ ಇದ್ದಾರೆಯೇ? ʼಆಪರೇಷನ್ ಕಮಲಕಾಂಡʼದಲ್ಲಿ ನಿಮ್ಮದೂ ಒಂದು ತುಕ್ಕುಹಿಡಿದ ಅಧ್ಯಾಯವಿದೆಯಲ್ಲಾ? ಸಾಮ್ರಾಟ್ ಅಶೋಕೂ ಮತ್ತು ಆಪರೇಷನ್ ಕಮಲವೂ.. ಎಂದು ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿ ಸಚಿವ ಆರ್.ಅಶೋಕ್ ಅವರನ್ನ ತರಾಟೆಗೆ ತೆಗೆದುಕೊಂಡಿದ್ದಾರೆ..

Tags: BJPbsbommaiBSYcmbommaiCongress PartyHdKumaraswamyJDS MLA Shivalinge Gowdalatestnewslivenewsr.ashokಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ತಾಯಿಯನ್ನು ಕೊಂದು 3 ತಿಂಗಳು ಮೃತದೇಹದೊಂದಿಗೆ ವಾಸ : ವಾಸನೆ ಮರೆಮಾಚಲು 200 ಪರ್ಫ್ಯೂಮ್​ ಬಳಕೆ..!

Next Post

Rahul Gandhi : ವಿದೇಶದಲ್ಲಿ ಭಾರತ ವಿರೋಧಿ ಹೇಳಿಕೆ ನೀಡಿಲ್ಲ : ರಾಹುಲ್ ಗಾಂಧಿ ಸ್ಪಷ್ಟನೆ..!

Related Posts

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!
Top Story

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

by ಪ್ರತಿಧ್ವನಿ
January 13, 2026
0

ಮೇಷ ರಾಶಿಯ ಇಂದಿನ ಭವಿಷ್ಯ ಕಠಿಣ ಶ್ರಮಕ್ಕೆ ಸೂಕ್ತ ಪ್ರತಿಫಲ ಪಡೆಯಲಿದ್ದೀರಿ. ಕೆಲಸದ ಸ್ಥಳದಲ್ಲಿ ನಿಮ್ಮ ಶ್ರಮವನ್ನು ಮೇಲಾಧಿಕಾರಿಗಳು ಗುರುತಿಸುವ ಸಾಧ್ಯತೆ ಇದೆ. ಇಂಜಿನಿಯರಿಂಗ್ ಕ್ಷೇತ್ರದಲ್ಲಿರುವವರಿಗೆ ಹೊಸ...

Read moreDetails
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

January 12, 2026
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

January 12, 2026
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

January 12, 2026
ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

January 12, 2026
Next Post
Rahul Gandhi : ವಿದೇಶದಲ್ಲಿ ಭಾರತ ವಿರೋಧಿ ಹೇಳಿಕೆ ನೀಡಿಲ್ಲ : ರಾಹುಲ್ ಗಾಂಧಿ ಸ್ಪಷ್ಟನೆ..!

Rahul Gandhi : ವಿದೇಶದಲ್ಲಿ ಭಾರತ ವಿರೋಧಿ ಹೇಳಿಕೆ ನೀಡಿಲ್ಲ : ರಾಹುಲ್ ಗಾಂಧಿ ಸ್ಪಷ್ಟನೆ..!

Please login to join discussion

Recent News

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!
Top Story

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

by ಪ್ರತಿಧ್ವನಿ
January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ
Top Story

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 12, 2026
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ
Top Story

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

by ಪ್ರತಿಧ್ವನಿ
January 12, 2026
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್
Top Story

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 12, 2026
ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ
Top Story

ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
January 12, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

January 12, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada