• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಡಾ.ಪುನೀತ್‌ ರಾಜ್‌ಕುಮಾರ್‌ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ

Any Mind by Any Mind
March 23, 2023
in ಸಿನಿಮಾ
0
ಡಾ.ಪುನೀತ್‌ ರಾಜ್‌ಕುಮಾರ್‌ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ
Share on WhatsAppShare on FacebookShare on Telegram

ಸ್ಯಾಂಡಲ್‌ವುಡ್‌ ಪರಮಾತ್ಮ, ಅಭಿಮಾನಿಗಳ ಆರಾಧ್ಯ ದೈವ, ಪವರ್‌ ಸ್ಟಾರ್‌ ಪುನೀತ್‌ರಾಜ್‌ಕುಮಾರ್‌ರವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನ‌ ಬೆಂಗಳೂರಿನಲ್ಲಿ ನಿರ್ಮಿಸಲಾಗಿದೆ. ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದ ಪಂತರಪಾಳ್ಯದಲ್ಲಿ ನಿರ್ಮಿಸಿರುವ “ಡಾ. ಪುನೀತ್ ರಾಜ್ ಕುಮಾರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ” ಹಾಗೂ ಅಭಿವೃದ್ಧಿಪಡಿಸಲಾಗಿರೋ “ನಾಯಂಡಹಳ್ಳಿ ಕೆರೆ” ಲೋಕಾರ್ಪಣೆಯನ್ನು ಸಿಎಂ ಬೊಮ್ಮಾಯಿ, ಹಾಗೂ ಮಾನ್ಯ ವಸತಿ ಸಚಿವರಾದ ವಿ.ಸೋಮಣ್ಣ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಚಲನಚಿತ್ರ ನಟ,ನಿರ್ಮಾಪಕ ಡಾ.ರಾಘವೇಂದ್ರ ರಾಜ್ ಕುಮಾರ್, ಶ್ರೀಮತಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಮತ್ತು ವಿಧಾನಪರಿಷತ್ ಸದಸ್ಯರಾದ ಅ.ದೇವೇಗೌಡ, ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಎನ್.ಆರ್.ರಮೇಶ್ ರವರು  ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರಾದ ಟಿ.ಎ.ನಾರಾಯಣಗೌಡರವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟನೆ ಮಾಡಿದ್ರು. ಆಸ್ಪತ್ರೆ ಮತ್ತು ನಾಯಂಡಹಳ್ಳಿ ಕೆರೆಯನ್ನು ಮುಖ್ಯಮಂತ್ರಿಗಳು ವೀಕ್ಷಣೆ ಮಾಡಿದ್ರು.

ADVERTISEMENT

ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ, ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಜನರು ಅದೃಷ್ಟವಂತರು.ನಂಬಿದ ಜನರಿಗೆ, ವಿಶ್ವಾಸಕ್ಕೆ ನಿಷ್ಠೆಯಿಂದ 24 ಗಂಟೆಗಳ ಕಾಲ ಜನಸೇವೆ ಮಾಡುವ ಸೋಮಣ್ಣರವರು ನಿಜವಾದ ಜನನಾಯಕ. ಬೆಂಗಳೂರು ನಗರ ಬ್ರಾಂಡ್ ಬೆಂಗಳೂರು ಆಗಿದೆ, ವಿದೇಶದಲ್ಲಿಯೂ ಸಹ ನಗರ ಖ್ಯಾತಿ ಇದೆ. 7000 ಸಾವಿರ ಸಿಸಿ ಕ್ಯಾಮೆರಾಗಳನ್ನ ಮಹಿಳೆಯರಿಗೆ ಸುರಕ್ಷತೆಗಾಗಿ ನಗರದಾದ್ಯಂತ ಅಳವಡಿಸಲಾಗಿದೆ. ರಾಜಾಕಾಲುವೆ 1000ಕೋಟಿ ಅನುದಾನ ಬೆಂಗಳೂರುನಗರ ಅಭಿವೃದ್ದಿಗೆ 6500ಕೋಟಿ ಅನುದಾನ ನೀಡಿದೆ. ನಾಡಪ್ರಭು ಕೆಂಪೇಗೌಡರ ಬೆಂಗಳೂರು ಸುಂದರವಾಗಿದೆ. ಬ್ರಾಂಡ್ ಬೆಂಗಳೂರಿನ ಹೆಸರು ಉಳಿಸುವುದು ಬಹಳ ಕಷ್ಟ, ಹಾಳು ಮಾಡುವುದು ಸುಲಭ. ಆದ್ದರಿಂದ ನಾವೆಲ್ಲ ಬ್ರಾಂಡ್ ಬೆಂಗಳೂರಿನ ಹೆಸರನ್ನು ಉಳಿಸೋಣ. ಎಲ್ಲರ ಸಹಕಾರದಿಂದ ಬೆಂಗಳೂರಿಗೆ ಉತ್ತಮ ಹೆಸರು ಬರಲಿದೆ ಎಂದು ಹೇಳಿದರು. ಬಳಿಕ ಮಾತನಾಡಿದ ಸಚಿವ ವಿ.ಸೋಮಣ್ಣ, ಕರ್ನಾಟಕ ರತ್ನ ಪವರ್ ಸ್ಚಾರ್ ಪುನೀತ್ ರಾಜ್ ಕುಮಾರ್ ರವರ ಸ್ಮರಣೆಯಲ್ಲಿ ಪಂತರಪಾಳ್ಯ ಸುತ್ತಮುತ್ತಲ ನಿವಾಸಿಗಳಿಗೆ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಮಾಡಲಾಗಿದೆ.

ಸ್ಲಂ ಪ್ರದೇಶ, ಕಳ್ಳಕಾರರು ಪ್ರದೇಶವಾಗಿದ್ದ ಸ್ಥಳೀಯರ ಜನರ ಆಶೀರ್ವಾದದಿಂದ ಡಾ.ಪುನೀತ್ ರಾಜ್ ಕುಮಾರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲಾಗಿದೆ. ದಾಸರಹಳ್ಳಿಯಲ್ಲಿ ಡಾ.ಬಾಲಗಂಗಾಧರ ನಾಥ ಸ್ವಾಮೀಜಿಗಳ ಜೆಸರಿನಲ್ಲಿ 300ಹಾಸಿಗೆ ಮತ್ತು ಪಂತರಪಾಳ್ಯದಲ್ಲಿ 205 ಹಾಸಿಗೆಗಳ ಆಸ್ಪತ್ರೆ ಮತ್ತು 10ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಶಾಲಾ ಕಾಲೇಜುಗಳು, ದೇವಸ್ಥಾನಗಳು, ಉದ್ಯಾನಗಳು, 10೦ ಕ್ಕೂ ಅಧಿಕ ಶುದ್ದ ಕುಡಿಯುವ ನೀರಿನ ಘಟಕ, ನೂತನ ಪೊಲೀಸ್ ಠಾಣೆ ಹಾಗೂ 60ಕ್ಕೂ ಉದ್ಯಾನವನಗಳ ನವೀಕರಿಸಲಾಗಿದೆ. ಕೊಳಚೆ ನೀರು ಶುದ್ದೀಕರಿಸಿ ಘಟಕ ಸ್ಥಾಪನೆ ಮಾಡಲಾಗಿದೆ. ಏಳು ಐ.ಎ.ಎಸ್.ತರಬೇತಿ ಕೇಂದ್ರವಿದೆ. ಸಾಮಾನ್ಯ ಜನರ ಒಡನಾಡಿಯಾಗಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಕೆಲಸ ಮಾಡಿದ್ದೇನೆ ಎಂದು ಹೇಳಿದರು.ರಾಘವೇಂದ್ರ ರಾಜ್ ಕುಮಾರ್ ಅವರು ಮಾತನಾಡಿ ಅಭಿಮಾನಿಗಳು ದೇವರುಗಳಿಗೆ ಸ್ಟಾಷ್ಟಂಗ ನಮಸ್ಕಾರ. ಪುನೀತ್ ಅವರ ಹೆಸರಿನಲ್ಲಿ ಇಂಥ ಆಸ್ಪತ್ರೆಯನ್ನು ನಿರ್ಮಿಸಿದ ಸಚಿವ ಸೋಮಣ್ಣ ಅವರಿಗೆ ಧನ್ಯವಾದಗಳು. ನೂತನವಾಗಿ ಲೋಕಾರ್ಪಣೆಯಾದ ಈ ಆಸ್ಪತ್ರೆಯನ್ನು ದೇವಸ್ಥಾನ ಎಂದು ಭಾವಿಸಿ. ಈ ಆಸ್ಪತ್ರೆಯನ್ನು ಶುಚಿಯಾಗಿಟ್ಟುಕೊಂಡು ಸದ್ಬಳಕೆ ಮಾಡಿಕೊಳ್ಳುವಂತೆ ಸಾರ್ವಜನಿಕರಿಗೆ ಕರೆ ನೀಡಿದ ಅವರು, ಪುನೀತ್ ರಾಜ್ ಕುಮಾರ್ ಅವರಿಗೆ ಅಣ್ಣನಾಗಿ ಇದ್ದೆ ಎಂಬುದೇ ಸಂತೋಷ. ಪುನೀತ್ ಡೊಡ್ಡತನ ಅದರಿಂದ ಅವನ ಮೇಲಿನ‌ ಗೌರವ ಹೆಚ್ಚಾಗಿದೆ ಎಂದರು. ಈ ಸಂದರ್ಭದಲ್ಲಿ ಬಿಬಿಎಂಪಿ ಮಾಜಿ ಸದಸ್ಯರು, ಅಧಿಕಾರಿಗಳು, ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Tags: #puneethrajkumar #hospital #bangalore #powerstar #sandalwood #cm #basavarajbommai #ashvinipuneethrajkumar #raghavendrarajkumar #pratidhvani #pratidhvanidigital #pratidhvaninews
Previous Post

K. S. Eshwarappa | ಬಿಜೆಪಿ ಮಹಾಸಂಗಮ ಐತಿಹಾಸಿಕ ಸಮಾವೇಶಕ್ಕೆ ಚಾಲನೆ

Next Post

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸುವ ಮೊದಲು ಪ್ರಧಾನಿ ಮೋದಿ ಬಳಿ ತೆರಳಿ ಭಾವುಕರಾದ ಸಿದ್ದಿ ಮಹಿಳೆ ಹೀರಾಬಾಯಿ .. !

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

ಗೋಲ್ಡನ್ ಸ್ಟಾರ್ ಗಣೇಶ್ ಅವರಿಂದ ಅನಾವರಣವಾಯಿತು “ನಿದ್ರಾದೇವಿ Next Door” ಚಿತ್ರದ “ನೀ ನನ್ನ” ಎಂಬ ರೊಮ್ಯಾಂಟಿಕ್ ಸಾಂಗ್.

July 8, 2025

Eltu Mutta: ಅದ್ದೂರಿಯಾಗಿ ಅನಾವರಣವಾಯಿತು “ಎಲ್ಟು ಮುತ್ತಾ” ಚಿತ್ರದ ಹಾಡುಗಳು .

July 8, 2025

Katanpete Gate: ಈ ವಾರ ತೆರೆಗೆ ಆರ್ ಶ್ರೀನಿವಾಸ್ ನಿರ್ಮಾಣದ “ಕಾಟನ್ ಪೇಟೆ ಗೇಟ್” .

July 8, 2025

Ragini Dwivedi: ಗೀತ ಗುಚ್ಛದ 3ನೇ ಹಾಡು ಬಿಡುಗಡೆ ಮಾಡಿದ ನಟಿ ರಾಗಿಣಿ ದ್ವಿವೇದಿ..

July 8, 2025
Next Post
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸುವ ಮೊದಲು ಪ್ರಧಾನಿ ಮೋದಿ ಬಳಿ ತೆರಳಿ ಭಾವುಕರಾದ ಸಿದ್ದಿ ಮಹಿಳೆ ಹೀರಾಬಾಯಿ .. !

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸುವ ಮೊದಲು ಪ್ರಧಾನಿ ಮೋದಿ ಬಳಿ ತೆರಳಿ ಭಾವುಕರಾದ ಸಿದ್ದಿ ಮಹಿಳೆ ಹೀರಾಬಾಯಿ .. !

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada