• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

KKR vs RCB IPL2023 :‌ ಶಾರ್ದೂಲ್‌ ಬ್ಯಾಟಿಂಗ್ ಅಬ್ಬರಕ್ಕೆ ಮಂಡಿಯೂರಿದ ಆರ್‌ ಸಿಬಿ

Any Mind by Any Mind
April 7, 2023
in Uncategorized
0
KKR vs RCB IPL2023 :‌ ಶಾರ್ದೂಲ್‌ ಬ್ಯಾಟಿಂಗ್ ಅಬ್ಬರಕ್ಕೆ ಮಂಡಿಯೂರಿದ ಆರ್‌ ಸಿಬಿ
Share on WhatsAppShare on FacebookShare on Telegram

ಕೋಲ್ಕತ್ತಾ :ಏ,೦7: ಐಪಿಎಲ್​ನ 9ನೇ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 81 ರನ್‌ಗಳಿಂದ ಸೋಲಿಸಿತು. ಟಾಸ್ ಗೆದ್ದ RCB ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಇದಾದ ಬಳಿಕ ಮೊದಲು ಬ್ಯಾಟ್ ಮಾಡಿದ ಕೆಕೆಆರ್​​ 204 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಆರ್‌ಸಿಬಿ, 123 ರನ್‌ಗಳಿಗೆ ಸರ್ವಪತನ ಕಂಡಿತು.

ADVERTISEMENT


ಆರ್​ಸಿಬಿಯನ್ನು ಸೋಲಿಸಿದ ಕೆಕೆಆರ್​​​, ಈ ಟೂರ್ನಿಯಲ್ಲಿ ಚೊಚ್ಚಲ ಗೆಲುವು ದಾಖಲಿಸಿತು. ಶ್ರೇಯಸ್​ ಅಯ್ಯರ್ ಅಲಭ್ಯತೆಯಲ್ಲಿ ನಾಯಕತ್ವ ಅಲಂಕರಿಸಿದ ನಿತೀಶ್​ ರಾಣಾ ಅವರಿಗೂ ಇದು ಮೊದಲ ಗೆಲುವು ಆಗಿದೆ. ಅಲ್ಲದೆ ಈ ಪಂದ್ಯದಲ್ಲಿ ಪ್ರಮುಖ ದಾಖಲೆಗಳು ನಿರ್ಮಾಣವಾಗಿವೆ. IPL​ನ 9ನೇ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಕೆಕೆಆರ್ ತಂಡದ ಸ್ಪಿನ್ನರ್ ಸುನಿಲ್ ನರೈನ್ ವಿಶೇಷ ದಾಖಲೆಯನ್ನು ತನ್ನದಾಗಿಸಿಕೊಂಡಿದ್ದಾರೆ. ಆರ್​ಸಿಬಿ ವಿರುದ್ಧದ ಕಣಕ್ಕಿಳಿಯುವ ಮೂಲಕ ಕೆಕೆಆರ್ ಪರ 150 ಪಂದ್ಯಗಳನ್ನಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಲ್ಲದೆ, ಈ ಪಂದ್ಯದಲ್ಲಿ 2 ವಿಕೆಟ್​ ಪಡೆದು ಮಿಂಚಿದರು.
ಆರ್​ಸಿಬಿ ವಿರುದ್ಧ ಕೆಕೆಆರ್ ಸ್ಪಿನ್ನರ್​​ಗಳು 9 ವಿಕೆಟ್​ ಕಬಳಿಸಿ ವಿಶೇಷ ದಾಖಲೆ ಬರೆದಿದ್ದಾರೆ. ಆ ಮೂಲಕ ಐಪಿಎಲ್​ನ ಇನ್ನಿಂಗ್ಸ್​ವೊಂದರಲ್ಲಿ ಸ್ಪಿನ್ನರ್​​ಗಳು ಹೆಚ್ಚು ವಿಕೆಟ್​ ಉರುಳಿಸಿದ ದಾಖಲೆ ನಿರ್ಮಾಣ ಮಾಡಿದ್ದಾರೆ. ಕೆಕೆಆರ್​ ಈ ವಿಶೇಷ ದಾಖಲೆಗೆ ಪಾತ್ರವಾದ ಮೊದಲ ತಂಡ ಎನಿಸಿದೆ. ಕೆಕೆಆರ್​​ ಪರ ವರುಣ್​ ಚಕ್ರವರ್ತಿ 4 ವಿಕೆಟ್​​, ಸುಯೇಶ್​ ಶರ್ಮಾ 3 ವಿಕೆಟ್​​​, ಸುನಿಲ್​ ನರೈನ್​​ 2 ವಿಕೆಟ್​, ಶಾರ್ದೂಲ್​ ಠಾಕೂರ್​ 1 ವಿಕೆಟ್​ ಪಡೆದು ಮಿಂಚಿದರು. ಈ ಹಿಂದೆ ಚೆನ್ನೈ ಸೂಪರ್​​ ಕಿಂಗ್ಸ್​ ತಂಡದ ಸ್ಪಿನ್ನರ್​ಗಳು ಇನ್ನಿಂಗ್ಸ್​​ವೊಂದರಲ್ಲಿ ಒಟ್ಟು 3 ಬಾರಿ 8 ವಿಕೆಟ್​ ಪಡೆದಿದ್ದು ಇದುವರೆಗಿನ ದಾಖಲೆಯಾಗಿತ್ತು.

7ನೇ ಕ್ರಮಾಂಕದಲ್ಲಿ ಕ್ರೀಸ್​​ಗಿಳಿದು ಅದ್ಭುತ ಸೃಷ್ಟಿಸಿದ ಶಾರ್ದೂಲ್​ ಠಾಕೂರ್​​​​, ಮಹತ್ವದ ದಾಖಲೆಯನ್ನು ಬರೆದರು. 2023ರ ಐಪಿಎಲ್​​​ನಲ್ಲಿ ವೇಗದ ಅರ್ಧಶತಕ ದಾಖಲಿಸಿದರು, 20 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ, ಜೋಸ್​ ಬಟ್ಲರ್​ ದಾಖಲೆಯನ್ನು ಸರಿಗಟ್ಟಿದರು. KKR ಪರ 7ನೇ ಕ್ರಮಾಂಕದಲ್ಲಿ ಅರ್ಧಶತಕ ಸಿಡಿಸಿದ 4ನೇ ಆಟಗಾರ​ ಎಂಬ ದಾಖಲೆಯನ್ನೂ ಬರೆದರು. ಅಲ್ಲದೆ, 68 ರನ್​ಗಳಿಸಿದ ಶಾರ್ದೂಲ್​​​ 7ನೇ ಕ್ರಮಾಂಕದಲ್ಲಿ 2ನೇ ಗರಿಷ್ಠ ಸ್ಕೋರರ್​ ಎನಿಸಿದರು. ಹಾಗೆಯೇ ರಿಂಕು ಸಿಂಗ್​ ಜೊತೆಗೆ 103 ರನ್​ ಜೊತೆಯಾಟ ಕಟ್ಟಿದ್ದು, ಐಪಿಎಲ್​ ಇತಿಹಾಸದಲ್ಲಿ 6 ವಿಕೆಟ್​​ಗೆ ಶತಕ ಜೊತೆಯಾಟವಾಡಿದ 4ನೇ ಜೋಡಿ ಎನಿಸಿದೆ.
ಈ ಪಂದ್ಯದಲ್ಲಿ ಮತ್ತೊಂದು ದಾಖಲೆಯೂ ನಿರ್ಮಾಣವಾಗಿದೆ. ಉಭಯ ತಂಡಗಳ ಹೆಚ್ಚಿನ ಬ್ಯಾಟ್ಸ್​​ಮನ್​ಗಳು ಸ್ಪಿನ್ನರ್​ಗಳಿಗೆ ವಿಕೆಟ್​ ಒಪ್ಪಿಸಿರುವುದು. ಒಟ್ಟು 12 ಆಟಗಾರರು ಸ್ಪಿನ್​​ ದಾಳಿಗೆ ಬಲಿಯಾಗಿದ್ದಾರೆ. ಪಂದ್ಯವೊಂದರಲ್ಲಿ 12 ಆಟಗಾರರು ಸ್ಪಿನ್ನರ್​​​​ಗಳಿಗೆ ಔಟಾಗಿರುವುದು ಐಪಿಎಲ್​ ಇತಿಹಾಸದಲ್ಲಿ ಇದೇ ಮೊದಲು. ಇದಕ್ಕೂ ಹಿಂದೆ ಕೆಕೆಆರ್​​ ಮತ್ತು ಸಿಎಸ್​ಕೆ ತಂಡಗಳ ಸ್ಪಿನ್ನರ್​ಗಳು ಪಂದ್ಯವೊಂದರಲ್ಲಿ 11 ವಿಕೆಟ್​ ಉರುಳಿಸಿದ್ದರು

Tags: Eden Garden in KolkataIndian Premier LeagueIPL 2023KKR vs RCBKolkataKolkata Knight RidersKolkata Knight Riders beat Royal Challengers Bangalore by 81 runsNitish RanaRahmanullah GurbazRCBRoyal Challengers bangaloreShah Rukh KhanShardul ThakurSunil NarineVirat Kohli
Previous Post

ರಾಷ್ಟ್ರೀಯ ಪಕ್ಷದ ಸ್ಥಾನಮಾನ ಕೋರಿ ಕರ್ನಾಟಕ ಹೈಕೋರ್ಟ್‌ ಮೊರೆ ಹೋದ ಎಎಪಿ

Next Post

ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯಗೆ ಹೊಸ ಕಾನೂನು ಸಂಕಷ್ಟ : ಎಫ್​ಐಆರ್​ ದಾಖಲು

Related Posts

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 
Uncategorized

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

by Chetan
July 3, 2025
0

ಇಂದಿನಿಂದ ಜಮ್ಮು ಕಾಶ್ಮೀರದಲ್ಲಿ (Jammu Kashmir) ಅಮರನಾಥ ಯಾತ್ರೆ (Amaranatha yatra) ಆರಂಭವಾಗಲಿದೆ. ಈ ಯಾತ್ರೆಯ ಯಾತ್ರಾರ್ಥಿಗಳು ಕಾಶ್ಮೀರದ ಪಹಲ್ಗಾಮ್ (Pahalgam) ಮೂಲಕವೇ ಸಾಗಿ ಹೋಗಬೇಕಿದೆ. ಹೀಗಾಗಿ...

Read moreDetails
ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

June 20, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025

ಮೈಷುಗರ್ ಪ್ರೌಢಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ನೇರಪ್ರಸಾರ

June 7, 2025
ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

June 4, 2025
Next Post
ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯಗೆ ಹೊಸ ಕಾನೂನು ಸಂಕಷ್ಟ : ಎಫ್​ಐಆರ್​ ದಾಖಲು

ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯಗೆ ಹೊಸ ಕಾನೂನು ಸಂಕಷ್ಟ : ಎಫ್​ಐಆರ್​ ದಾಖಲು

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada