• Home
  • About Us
  • ಕರ್ನಾಟಕ
Saturday, December 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಿಜೆಪಿಯಲ್ಲಿ ಭುಗಿಲೆದ್ದ ಬಂಡಾಯ.. ಶನಿವಾರದ ಮುಹೂರ್ತ ಮಿಸ್​..!

Any Mind by Any Mind
April 9, 2023
in Top Story, ಇದೀಗ, ಕರ್ನಾಟಕ
0
ಬಿಜೆಪಿಯಲ್ಲಿ ಭುಗಿಲೆದ್ದ ಬಂಡಾಯ.. ಶನಿವಾರದ ಮುಹೂರ್ತ ಮಿಸ್​..!
Share on WhatsAppShare on FacebookShare on Telegram

ADVERTISEMENT

ಬೆಂಗಳೂರು:ಏ.೦9: ದೆಹಲಿಯಲ್ಲಿ ಬಿಜೆಪಿ ಅಭ್ಯರ್ಥಿ ಆಯ್ಕೆ ಕಸರತ್ತು ನಡೆಯುತ್ತಿದೆ. ಏಪ್ರಿಲ್​ 7 ಮತ್ತು 8ರಂದು ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಸಿ, ಅಂತಿಮವಾಗಿ ಪಟ್ಟಿ ಬಿಡುಗಡೆ ಮಾಡಲಿದೆ ಎನ್ನುವ ಮಾಹಿತಿ ಸಿಕ್ಕಿತ್ತು. ಒಂದು ಕ್ಷೇತ್ರಕ್ಕೆ ಮೂವರಂತೆ ಅಭ್ಯರ್ಥಿಗಳನ್ನು ರಾಜ್ಯ ಸಮಿತಿ ಆಯ್ಕೆ ಮಾಡಿದ್ದು, ಅಂತಿಮ ಆಯ್ಕೆ ನಿರ್ಧಾರವನ್ನು ಹೈಕಮಾಂಡ್​ಗೆ ಬಿಡಲಾಗಿತ್ತು. ಆದರೆ ಇದೀಗ ದಿಲ್ಲಿಯಲ್ಲೂ ಬಿಜೆಪಿ ಅಭ್ಯರ್ಥಿ ಆಯ್ಕೆ ಕಬ್ಬಿಣದ ಕಡಲೆ ಎನ್ನುವಂತಾಗಿದೆ. ಅಭ್ಯರ್ಥಿಗಳ ಪಟ್ಟಿಯನ್ನು ಏಪ್ರಿಲ್​ 8ರಂದು ಬಿಡುಗಡೆ ಮಾಡುವುದಾಗಿ ತಿಳಿಸಿದ್ದ ಬಿಜೆಪಿ ನಾಯಕರು ಬಿಡುಗಡೆ ಮಾಡಲು ವಿಫಲರಾಗಿದ್ದಾರೆ. ಇದಕ್ಕೆ ಕಾರಣ ಬಿಜೆಪಿಯಲ್ಲಿ ಬಂಡಾಯ ಭುಗಿಲೇಳುವ ಮುನ್ಸೂಚನೆ ಹಾಗು ಸಂತೋಷ್​ ಹಾಗು ಬಿ.ಎಸ್​ ಯಡಿಯೂರಪ್ಪ ಸಂಸದೀಯ ಮಂಡಳಿ ಸಭೆಯಲ್ಲಿ ಹಗ್ಗಾಜಗ್ಗಾಟ ಮಾಡುತ್ತಿರುವುದು.

ಆಪ್ತರಿಗೆ ಟಿಕೆಟ್​ ಕೊಡಿಸಲು ನಾಯಕರ ಪಟ್ಟು..!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್​ ಸಂತೋಷ್​ ಹಾಗು ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ ನಡುವೆ ಟಿಕೆಟ್​ಗಾಗಿ ಪೈಪೋಟಿ ಏರ್ಪಟ್ಟಿತ್ತು ಎನ್ನಲಾಗಿದೆ. ಸಂಸದೀಯ ಮಂಡಳಿ ಸಭೆಯಲ್ಲಿ ಟಿಕೆಟ್​ಗಾಗಿ ಜಟಾಪಟಿ ನಡೆದಿದೆ ಎನ್ನಲಾಗಿದೆ. ತಮ್ಮ ಆಪ್ತರಿಗೆ ಟಿಕೆಟ್​ ಕೊಡಬೇಕು ಎನ್ನುವ ಪಟ್ಟಿಯನ್ನು ಹೈಕಮಾಂಡ್​ ಎದುರು ಇಟ್ಟಿದ್ದು, ಇಬ್ಬರನ್ನೂ ಸಮಾಧಾನ ಮಾಡುವ ಜೊತೆಗೆ ಮೂವರಲ್ಲಿ ಒಬ್ಬರನ್ನು ಆಯ್ಕೆ ಮಾಡುವುದು ಸವಾಲಿನ ಕೆಲಸವಾಗಿ ಏರ್ಪಟ್ಟಿದೆ. ಇಂದು ಭಾನುವಾರ ಕೂಡ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಸಿ ಇಂದು ಅಥವಾ ನಾಳೆ (ಏಪ್ರಿಲ್​ 10) ಟಿಕೆಟ್​ ಘೋಷಣೆ ಮಾಡಲು ಬಿಜೆಪಿ ಹೈಕಮಾಂಡ್​ ನಿರ್ಧಾರ ಮಾಡಿದೆ ಎನ್ನಲಾಗಿದೆ. ಆದರೂ ಬಂಡಾಯ ಸ್ಫೋಟ ಆಗುವ ಮುನ್ಸೂಚನೆ ಈಗಾಗಲೇ ಹಲವಾರು ಕ್ಷೇತ್ರಗಳಲ್ಲಿ ಸಿಕ್ಕಿದ್ದು ಬಂಡಾಯ ಶಮನಕ್ಕೆ ಯೋಜನೆ ರೂಪಿಸಲಾಗಿದೆ.

ಟಿಕೆಟ್​ ಘೋಷಣೆಗೂ ಮುನ್ನವೇ ಸಂಧಾನಕ್ಕೆ ಚಾಲನೆ..!

ಬಿಜೆಪಿ ಪಟ್ಟಿಯಲ್ಲಿ ಯಾರ ಹೆಸರು ಇರುವುದಿಲ್ಲವೋ ಅಂತಹ ನಾಯಕರಿಗೆ ಕರೆ ಮಾಡಿ, ಪಕ್ಷದ ನಿರ್ಧಾರ ಹೇಳುವ ಜೊತೆಗೆ ಮುಂದಿನ ದಿನಗಳಲ್ಲಿ ಪಕ್ಷ ನಿಮ್ಮ ಜೊತೆಗೆ ಇರಲಿದೆ. ಯಾವ ಕಾರಣಕ್ಕ ಟಿಕೆಟ್ ಸಿಕ್ಕಿಲ್ಲ ಎಂದು ಮನವರಿಕೆ ಮಾಡುವ ಜೊತೆಗೆ ರಾಜ್ಯ ಹಾಗು ಕೇಂದ್ರ ನಾಯಕರು ಮಾಡಿಸಿರುವ ಸರ್ವೆ ರಿಪೋರ್ಟ್ ಏನು ಹೇಳುತ್ತಿದೆ, ಪಕ್ಷದ ಪಧಾಧಿಕಾರಿಗಳ ಮತದಾನದಲ್ಲಿ ಏನಾಗಿದೆ..? ಎನ್ನುವುದನ್ನು ಮನವರಿಕೆ ಮಾಡಿಕೊಡಬೇಕು. ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆಸಿದ ವಿಚಾರಗಳ ಬಗ್ಗೆಯೂ ತಿಳಿಸಲು ಸೂಚನೆ ಕೊಡಲಾಗಿದೆ. ಟಿಕೆಟ್ ಘೋಷಣೆ ಆದ ಬಳಿಕ ಬಂಡಾಯವೆದ್ದು ಪ್ರತಿಭಟನೆ ಆಕ್ರೋಶ ಹೊರಬಿದ್ದರೆ ಪಕ್ಷಕ್ಕೆ ಹಾನಿಯಾಗುವ ಸಾಧ್ಯತೆ ಇದ್ದು, ಟಿಕೆಟ್​ ಘೋಷಣೆಗೂ ಮುನ್ನವೇ ಕರೆ ಮಾಡಿ ಮಾತನಾಡಿ, ಟಿಕೆಟ್ ವಂಚಿತರನ್ನು ಸಮಾಧಾನ ಮಾಡಿ ಎಂದು ಹೈಕಮಾಂಡ್​ ಸಲಹೆ ನೀಡಿದೆ. ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಹಾಲಿ ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಟಿ ರವಿಗೆ ಜವಾಬ್ದಾರಿ ನೀಡಲಾಗಿದೆ ಎನ್ನಲಾಗಿದೆ.

ಹೈಕಮಾಂಡ್​ ಅಂಗಳದಲ್ಲಿ 150 ಕ್ಷೇತ್ರಗಳಲ್ಲಿ ಬಿಕ್ಕಟ್ಟು..!

ಒಟ್ಟು 224 ಕ್ಷೇತ್ರಗಳ ಪೈಕಿ ಬರೋಬ್ಬರಿ 150 ಕ್ಷೇತ್ರದಲ್ಲಿ ಇಬ್ಬರು ಆಕಾಂಕ್ಷಿಗಳಿದ್ದಾರೆ. ಆ ಇಬ್ಬರಲ್ಲಿ ಒಬ್ಬರಿಗೆ ಟಿಕೆಟ್​ ಕೊಟ್ಟಾಗ ಮತ್ತೋರ್ವ ಟಿಕೆಟ್​ ತಪ್ಪಿದ ಬೇಸರಲ್ಲಿ ಬಂಡಾಯ ಮಾಡುವುದು ಸಹಜ. ಇಬ್ಬರಲ್ಲಿ ಯಾರಿಗೇ ಟಿಕೆಟ್​ ಕೊಟ್ಟರು ಬಂಡಾಯ ಸಹಜ. ಚುನಾವಣೆಗೂ ಮುನ್ನ ಬಂಡಾಯ ಹೆಚ್ಚಾದ್ರೆ ಕಾಂಗ್ರೆಸ್​, ಜೆಡಿಎಸ್ ಅದರ ಲಾಭ ಪಡೆಯುತ್ತವೆ. ಅಧಿಕಾರದಲ್ಲಿರುವ ಬಿಜೆಪಿ ಸುಳಬವಾಗಿ ಅಧಿಕಾರ ಬಿಟ್ಟುಕೊಡಬೇಕಾಗುತ್ತದೆ. ಸಂಧಾನ ಯಶಸ್ವಿಯಾದರೆ ಬಿಜೆಪಿ ಸರಳ ಬಹುಮತ ತಲುಪಬಹುದು ಎಂದು ನಾಯಕರು ಮಾತುಕತೆ ನಡೆಸಿದ್ದಾರೆ. ಬಹುಮುಖ್ಯವಾಗಿ ಬೆಳಗಾವಿಯಲ್ಲಿ ಸೃಷ್ಟಿಯಾಗಿರುವ ರಮೇಶ್​ ಜಾರಕಿಹೊಳಿ ಹಾಗು ಲಕ್ಷ್ಮಣ ಸವದಿ ನಡುವಿನ ಸಮರದ ಬಗ್ಗೆ ಚರ್ಚೆ ಮಾಡಲಾಗಿದೆ. ಆದಷ್ಟು ಎಲ್ಲರನ್ನೂ ಸಮಾಧಾನ ಮಾಡಿ, ಮುಂದೆ ಪಕ್ಷದಲ್ಲಿ ಸ್ಥಾನಮಾನ ಸಿಗುವ ಭರವಸೆ ನೀಡುವುದಕ್ಕೂ ಹೈಕಮಾಂಡ್​ ಹುಕ್ಕುಂ ಕೊಟ್ಟಿದೆಯಂತೆ. ಆದರೂ ಟಿಕೆಟ್​ ಹಂಚಿಕೆಗೂ ಮುನ್ನವೇ ಬಂಡಾಯದ ಬಿಸಿ ತಟ್ಟಿರೋದು ಚುನಾವಣೆಯನ್ನು ಹಿನ್ನಡೆ ಉಂಟು ಮಾಡುವ ಭೀತಿ ಸೃಷ್ಟಿಸಿದೆ.

ಕೃಷ್ಣಮಣಿ

Tags: 2023 election2023 Election ResultAmith ShaAraga Jnanendraassembly electionBJPBJP ticketbjp ticket announcementbjpcandidate listblsantoshBOMMAIbsriramuluBSYbsyediyurappaCMcmbommaiCmIbrahimctraviDKShivakumarDr AshwathnarayanadrsudhakarElection Commissionelection resultHDDHDKJanasankalpa YatreJDSJP NaddaK GopalaiahKannadaKarnataka ElectionkumaraswamyModiNalin Kumar KateelNewsPancharatna YatrePC Mohanprahald joshiPratidhvaniRAshoksiddaramaiahState ElectiontejswisuryaVijayasankalpavsomanna
Previous Post

ನಂದಿನಿ ಹಾಲು ಇನ್ನು ಇತಿಹಾಸ ಮಾತ್ರ..! ಬಿಜೆಪಿ ಮುಂದಿನ ಪ್ಲ್ಯಾನ್​ ಏನು..?

Next Post

ನರೇಂದ್ರ ಮೋದಿ ಅವರೇ ಗೋಭಕ್ತಿ ಎಂದರೆ ಗೋಮಾಂಸ ಮಾರಾಟಕ್ಕೆ ಲೈಸನ್ಸ್ ಕೊಡುವುದಲ್ಲ : ಸಿದ್ದರಾಮಯ್ಯ

Related Posts

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ
ಕರ್ನಾಟಕ

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

by ಪ್ರತಿಧ್ವನಿ
December 13, 2025
0

ಮೈಸೂರಿನಲ್ಲಿ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವಿಶ್ಮಾಮಿತ್ರ ಪ್ರತಿಭಾ ಪುರಸ್ಕಾರ ಮತ್ತು ಸಹಾಯಧನ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ದಿನೇಶ್ ಗುಂಡೂರಾವ್ ಬ್ರಾಹ್ಮಣರಿಗೆ ಕಾಂಗ್ರೆಸ್ ಸರ್ಕಾರ ಸ್ಪಂದಿಸುವುದಿಲ್ಲ ಎನ್ನುವ...

Read moreDetails
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

December 13, 2025
Next Post
ನರೇಂದ್ರ ಮೋದಿ ಅವರೇ ಗೋಭಕ್ತಿ ಎಂದರೆ ಗೋಮಾಂಸ ಮಾರಾಟಕ್ಕೆ ಲೈಸನ್ಸ್ ಕೊಡುವುದಲ್ಲ :  ಸಿದ್ದರಾಮಯ್ಯ

ನರೇಂದ್ರ ಮೋದಿ ಅವರೇ ಗೋಭಕ್ತಿ ಎಂದರೆ ಗೋಮಾಂಸ ಮಾರಾಟಕ್ಕೆ ಲೈಸನ್ಸ್ ಕೊಡುವುದಲ್ಲ : ಸಿದ್ದರಾಮಯ್ಯ

Please login to join discussion

Recent News

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’
Top Story

ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada