• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳು ನಂದಿನಿ ಉತ್ಪನ್ನಗಳ ವಿರೋಧಿಗಳು

Any Mind by Any Mind
April 9, 2023
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳು ನಂದಿನಿ ಉತ್ಪನ್ನಗಳ ವಿರೋಧಿಗಳು
Share on WhatsAppShare on FacebookShare on Telegram

ಬೆಂಗಳೂರು :ಏ.೦೯: ಮೋದಿ ಅವರ ಸರ್ಕಾರ ಪ್ರತಿ ರಾಜ್ಯಗಳಲ್ಲಿ ಅದರದೇ ಆದ ಹೆಮ್ಮೆಯ ಸಂಸ್ಥೆಗಳನ್ನು ನಾಶ ಮಾಡಲು ಮುಂದಾಗುತ್ತಿದೆ. ಇದಕ್ಕೆ ಸೂಕ್ತ ಉದಾಹರಣೆ ಕರ್ನಾಟಕದ ಹೆಮ್ಮೆಯ ನಂದಿನಿ ಸಂಸ್ಥೆ ವಿರುದ್ಧದ ದಾಳಿ. ನಂದಿನಿ ಬ್ರ್ಯಾಂಡ್ ನಲ್ಲಿ ಯಾವ ಲೋಪದೋಷವಿದೆ ಎಂದು ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಹಾಗೂ ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿ ಸಂಸದರು ನಂದಿನಿ ವಿರುದ್ಧ ನಿಂತಿದ್ದಾರೆ. ನಂದಿನಿ ಉತ್ಪನ್ನಗಳಲ್ಲಿ ಯಾವ ದೋಷವಿದೆ? ಈ ಉತ್ಪನ್ನಗಳ ಮೇಲೆ ಕನ್ನಡ ಭಾಷೆ ಬಳಸಲಾಗಿದೆ ಎಂಬುದು ನಿಮ್ಮ ಸಮಸ್ಯೆಯೇ? ಎಂದು ಎಐಸಿಸಿ ವಕ್ತಾರರಾದ ಗೌರವ್ ವಲ್ಲಭ್ ಪ್ರಶ್ನಿಸಿದರು.

ADVERTISEMENT

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರು ನಂದಿನ ಉತ್ಪನ್ನಗಳ ರುಚಿ ನೋಡಬೇಕು. ಇದು ಕರ್ನಾಟಕದ ಹೆಮ್ಮೆ. ಆರೂವರೆ ಕೋಟಿ ಜನರ ಈ ಹೆಮ್ಮೆಯನ್ನು ಯಾಕೆ ತುಳಿಯಲು ಹೊರಟಿದ್ದೀರಿ? ಇದರಿಂದ ಏನು ಸಾಧಿಸಲು ಹೊರಟಿದ್ದೀರಿ? ಅಮಿತ್ ಶಾ ಅವರೇ ಸಹಕಾರಿ ಸಚಿವಾಲಯದ ಮೂಲ ಉದ್ದೇಶವೇನು? ನೀವು ಸಹಕಾರ ಕ್ಷೇತ್ರದಲ್ಲೂ ಸ್ಪರ್ಧೆ ತರಲು ಹೊರಟಿದ್ದೀರಿ. ಉದ್ದೇಶಪೂರ್ವಕವಾಗಿ ಇದನ್ನು ಯಾಕೆ ಮಾಡುತ್ತಿದ್ದೀರಿ. ನಂದಿನಿ ಆಶ್ರಯದಲ್ಲಿ ಸುಮಾರು 2 ಕೋಟಿ ಜನರು ಆಶ್ರಯ ಪಡೆದಿದ್ದಾರೆ.

ಮೋದಿ ಅವರೇ ಇನ್ನು ಒಂದು ತಿಂಗಳು ಮೂರು ದಿನಗಳು ಮಾತ್ರ ಬಾಕಿ ಇವೆ. ನಂತರ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು, ನಂತರ ಕರ್ನಾಟಕದ ಹೆಮ್ಮೆಯ ಸಂಸ್ಥೆಗಳನ್ನು ಯಾರೂ ಕೂಡ ಮುಟ್ಟಲು ಸಾಧ್ಯವಿಲ್ಲ. ದೆಹಲಿಯಲ್ಲಿ ಕೂತು ಕರ್ನಾಟಕದ ಹೆಮ್ಮೆಯ ಸಂಸ್ಥೆಗಳ ಭವಿಷ್ಯ ನಿರ್ಧರಿಸಲು ಬಿಡುವುದಿಲ್ಲ. ನಂದಿನಿ ಬ್ರ್ಯಾಂಡ್ ರೈತರು, ಕಾರ್ಮಿಕರ ಪರಿಶ್ರಮದ ಫಲವಾಗಿದೆ. ಪ್ರತಿಯೊಬ್ಬ ಕನ್ನಡಿಗನೂ ಈ ಬ್ರ್ಯಾಂಡ್ ಬಗ್ಗೆ ಹೆಮ್ಮೆ ಹೊಂದಿದ್ದಾನೆ. ಮೋದಿ ಅವರು ಒಮ್ಮೆ ಇದರ ರುಚಿ ನೋಡಲಿ, ಅವರು ತಮ್ಮ ನಿಲುವು ಬದಲಿಸಬಹುದು. ರಾಜ್ಯದಿಂದ ಆಯ್ಕೆಯಾಗಿರುವ ಸಂಸದರೂ ಇದಕ್ಕೆ ಉತ್ತೇಜನ ನೀಡುತ್ತಿರುವುದು ಆಘಾತಕಾರಿ ಬೆಳವಣಿಗೆಯಾಗಿದೆ ಎಂದು ಹೇಳಿದರು.

ಕರ್ನಾಟಕದ ʼನಂದಿನಿʼ ವಿನಾಶಕ್ಕೆ ಬಿಜೆಪಿ ಮುಂದಾಗಿದೆ :

ನಂದಿನಿ ವಿನಾಶಕ್ಕೆ ಬಿಜೆಪಿ ಯಾಕೆ ಮುಂದಾಗಿದೆ ಎಂದು ಕೇಳಿದಾಗ, ‘ಈ ನಂದಿನಿ ಉತ್ಪನ್ನಗಳಲ್ಲಿ ಯಾವ ದೋಷವಿದೆ? ಎಂಬುದು ನನ್ನ ಮೂಲಭೂತ ಪ್ರಶ್ನೆ. ಇದು ರುಚಿ ಇಲ್ಲವೇ? ತಾಜವಾಗಿಲ್ಲವೇ? ಮಾರುಕಟ್ಟಿಯಲ್ಲಿ ಮಾರಾಟವಾಗುತ್ತಿಲ್ಲವೇ? ಇದನ್ನು ಸೇವಿಸುತ್ತಿರುವ ಜನರು ಇದನ್ನು ಆಸ್ವಾದಿಸುತ್ತಿಲ್ಲವೇ? ಆಗಾದರೆ ಯಾವ ಕಾರಣಕ್ಕೆ ನಂದಿನಿಗೆ ಜತೆ ಸ್ಪರ್ಧೆ ಮಾಡಲು ಅವಕಾಶ ಮಾಡಿಕೊಡುತ್ತಿದ್ದಾರೆ. ಸಹಕಾರ ಇಲಾಖೆ ಮೂಲ ಉದ್ದೇಶವೇನು? ನಾವು ಯಾವುದೇ ಇತರೆ ಸಂಸ್ಥೆಗಳ ವಿರುದ್ಧವಿಲ್ಲ. ಬಿಜೆಪಿಯವರಿಗೆ ಇರುವ ಸಮಸ್ಯೆ ಎಂದರೆ ಈ ಉತ್ಪನ್ನಗಳ ಮೇಲೆ ಕನ್ನಡವನ್ನು ಬಳಸಲಾಗಿದೆ. ಅದರ ಹೊರತಾಗಿ ಬಿಜೆಪಿಗರು ಆಕ್ಷೇಪಿಸುವಂತಹ ಯಾವುದೇ ಅಂಶಗಳು ಇಲ್ಲ. ಮೋದಿ ಹಾಗೂ ಅಮಿತ್ ಶಾ ಅವರಿಗೆ ಅಜೆಂಡಾ ಇರಬಹುದು. ಆದರೆ ರಾಜ್ಯದ ಸಂಸದರಿಗೆ ಏನಾಗಿದೆ? ರಾಜ್ಯದ ಜನರ ಪಾಲಿಗೆ ನಂದಿನಿ ಯಾವ ಸ್ಥಾನದಲ್ಲಿದ್ದಾಳೆ ಎಂಬುದನ್ನು ಪ್ರತಿಯೊಬ್ಬ ಕನ್ನಡಿಗರು 2024ರಲ್ಲಿ ಬಿಜೆಪಿಯವರಿಗೆ ಉತ್ತರ ನೀಡುತ್ತಾರೆ. ಮುಂದಿನ ತಿಂಗಳು ಕರ್ನಾಟಕದ ಹೆಮ್ಮೆಯನ್ನು ಸಂರಕ್ಷಣೆ ಮಾಡಲಾಗುವುದು’ ಎಂದು ತಿಳಿಸಿದರು.

Tags: 2023 election2023 Election ResultAICCamulassembly electionBJPBOMMAIBSYCMCmIbrahimctraviDKShivakumarElection Commissionelection resultGaurav VallabhHDDHDKJanasankalpa YatreJDSKannadaKarnataka ElectionKPCCkumaraswamyMallikarjun KhargeModiNalin Kumar KateelNandininandinivsamulNewsPancharatna YatrePMModiPratidhvanisiddaramaiahState ElectionVijayasankalpa
Previous Post

ಬಂಡಿಪುರದಲ್ಲಿ ಪ್ರಧಾನಿ ಮೋದಿ ಕ್ಯಾಮರಾ ಕಣ್ಣಿಗೆ ಸೆರೆ ಸಿಕ್ಕ ಪ್ರಾಣಿಗಳ ಫೋಟೋ ಇಲ್ಲಿದೆ ನೋಡಿ

Next Post

ಅಂದು ಸಂವಿಧಾನ ವಿರೋಧಿಸಿದ್ದ RSS ಇಂದು ಅದನ್ನೇ ಗುರಾಣಿಯನ್ನಾಗಿಸಿಕೊಂಡಿದೆ : ಸಿದ್ದರಾಮಯ್ಯ ಕಿಡಿ

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
Next Post
ಅಂದು ಸಂವಿಧಾನ ವಿರೋಧಿಸಿದ್ದ RSS ಇಂದು ಅದನ್ನೇ ಗುರಾಣಿಯನ್ನಾಗಿಸಿಕೊಂಡಿದೆ : ಸಿದ್ದರಾಮಯ್ಯ ಕಿಡಿ

ಅಂದು ಸಂವಿಧಾನ ವಿರೋಧಿಸಿದ್ದ RSS ಇಂದು ಅದನ್ನೇ ಗುರಾಣಿಯನ್ನಾಗಿಸಿಕೊಂಡಿದೆ : ಸಿದ್ದರಾಮಯ್ಯ ಕಿಡಿ

Please login to join discussion

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada