ಮೈಸೂರು : ವರುಣ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಎನಿಸಿರುವ ಅಭಿಷೇಕ್ ಕಳೆದ ಒಂದೂವರೆ ತಿಂಗಳಿನಿಂದ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಕ್ಷೇತ್ರದಲ್ಲಿ ಈಗಾಗಲೇ ಪ್ರಚಾರ ಆರಂಭಿಸಬೇಕಿದ್ದ ಅಭಿಷೇಕ್ ಬೆಂಬಲಿಗರ ಜೊತೆ ಒಂದೂ ಸಭೆಯನ್ನೂ ಕರೆಯದೇ ನಾಪತ್ತೆಯಾಗಿದ್ದಾರೆ ಎನ್ನಲಾಗ್ತಿದೆ. ಈ ಸಂಬಂಧ ಈಗಾಗಲೇ ವರುಣ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರು ಪಕ್ಷದ ವರಿಷ್ಠರಿಗೆ ದೂರು ನೀಡಿದ್ದಾರೆ .
ಈ ವಿಚಾರವಾಗಿ ಇಂದು ಹುಣಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ಜಿ,ಟಿ ದೇವೇಗೌಡ, ವರುಣ ಕ್ಷೇತ್ರದಲ್ಲಿ ಶೀಘ್ರದಲ್ಲಿಯೇ ಅಭ್ಯರ್ಥಿ ಬದಲಾವಣೆ ಮಾಡುತ್ತೇವೆ. ಕಳೆದ ಒಂದೂವರೆ ತಿಂಗಳಿನಿಂದ ವರುಣ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಭಿಷೇಕ್ ನಮ್ಮ ಸಂಪರ್ಕಕ್ಕೆ ಸಿಕ್ಕಿಲ್ಲ. ದಳದ ಪದಾಧಿಕಾರಿಗಳು ಈ ಸಂಬಂಧ ಪಕ್ಷದ ಹೈಕಮಾಂಡ್ಗೆ ದೂರು ನೀಡಿದ್ದಾರೆ . ಹೀಗಾಗಿ ಶೀಘ್ರದಲ್ಲಿಯೇ ವರುಣ ಕ್ಷೇತ್ರಕ್ಕೆ ಹೊಸ ಜೆಡಿಎಸ್ ಅಭ್ಯರ್ಥಿಯ ಘೋಷಣೆಯಾಗಲಿದೆ ಎಂದು ಹೇಳಿದರು.
ವರುಣದಲ್ಲಿ ಸಿದ್ದರಾಮಯ್ಯ ಗೆಲುವಿಗೆ ಜೆಡಿಎಸ್ ಅನುಕೂಲಕರ ವಾತಾವರಣ ಸೃಷ್ಟಿಸಿಕೊಡ್ತಿದೆ ಎಂಬ ವದಂತಿಗಳ ವಿಚಾರವಾಗಿಯೂ ಇದೇ ವೇಳೆ ಪ್ರತಿಕ್ರಿಯಿಸಿದ ಅವರು. ಟಿಕೆಟ್ ಘೋಷಣೆಯಾದ ಬಳಿಕ ಯಾರು ಯಾರಿಗೆ ಬೆಂಬಲ ನೀಡ್ತಿದ್ದಾರೆ ಅನ್ನೋದು ತಿಳಿಯುತ್ತೆ ಎಂದು ಹೇಳಿದರು.