2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದೆ. ರಾಜ್ಯದ 224 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಭವಿಷ್ಯ ಇನ್ನೊಂದು ತಿಂಗಳಲ್ಲಿ ನಿರ್ಧಾರವಾಗಲಿದೆ. ಮತದಾರರನ್ನ ಸೆಳೆಯೋಕೆ ರಾಜಕೀಯ ಪಕ್ಷಗಳು ಸರ್ಕಸ್ ಮಾಡ್ತಿವೆ. ಎಲೆಕ್ಷನ್ ಟೈಮ್ನಲ್ಲಿ ಸ್ಟಾರ್ ನಟರು ಚುನಾವಣಾ ಪ್ರಚಾರದಲ್ಲಿ ಭಾಗಿಯಾಗೋದು ಕಾಮನ್.
ಇತ್ತೀಚೆಗೆ ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ ಕೂಡ ಬಿಜೆಪಿ ಪರ ಪ್ರಚಾರ ಮಾಡುವುದಾಗಿ ಘೋಷಿಸಿದ್ದರು. ಇಂದಿಗೂ ಈ ಬಗ್ಗೆ ಪರ ವಿರೋಧದ ಚರ್ಚೆಗಳು ಆಗ್ತಾನೆ ಇವೆ. ಈ ಬೆನ್ನಲ್ಲೇ ಕನ್ನಡ ಚಿತ್ರರಂಗದ ಹಿರಿಯ ನಟ ಅಂಬರೀಶ್ ಅವರ ಪುತ್ ಅಭಿಶೇಕ್ ಅಂಬರೀಶ್ ಬಿಜೆಪಿ ಪರ ಪ್ರಚಾರ ಮಾಡಲು ಸಿದ್ಧರಾಗಿದ್ದಾರೆ.
ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನನ್ನ ಬೆಂಬಲ ಇದೆ ಅಂತ ಈ ಹಿಂದೆ ಸಂಸದೆ ಸುಮಲತಾ ಅಂಬರೀಶ್ ಘೋಷಿಸಿದ್ದರು. ಇದೀಗ ಅವರ ಮಗ ಅಭಿಷೇಕ್ ಅಂಬರೀಶ್ ಸಹ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ. ಏಪ್ರಿಲ್ 17ರಂದು ಅಭಿಷೇಕ್ ಅಂಬರೀಶ್ ಮಂಡ್ಯ ಭಾಗದಲ್ಲಿ ಬಿಜೆಪಿ ಪರ ಮತ ಯಾಚಿಸಲಿದ್ದಾರೆ ಎನ್ನಲಾಗ್ತಿದೆ.