• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜೆಡಿಎಸ್​​ನಲ್ಲಿ ಸಂಕಷ್ಟದ ಜೊತೆಗೆ ಇನ್ನೊಂದು ಧರ್ಮ ಸಂಕಷ್ಟ..!

ಕೃಷ್ಣ ಮಣಿ by ಕೃಷ್ಣ ಮಣಿ
April 14, 2023
in Top Story, ಕರ್ನಾಟಕ
0
ಜೆಡಿಎಸ್​​ನಲ್ಲಿ ಸಂಕಷ್ಟದ ಜೊತೆಗೆ ಇನ್ನೊಂದು ಧರ್ಮ ಸಂಕಷ್ಟ..!
Share on WhatsAppShare on FacebookShare on Telegram

ಹಾಸನ ಕ್ಷೇತ್ರದಲ್ಲಿ ಭವಾನಿ ರೇವಣ್ಣ ಅಖಾಡಕ್ಕೆ ಇಳೀತಾರೆ ಅನ್ನೋ ವಿಚಾರದಲ್ಲಿ ಕುಮಾರಸ್ವಾಮಿ ಹಾಗು ಹೆಚ್​.ಡಿ ರೇವಣ್ಣ ಜೊತೆಗೆ ಆಂತರಿಕ ಯುದ್ಧವೇ ಶುರುವಾಗಿದೆ. ಭವಾನಿ ರೇವಣ್ಣಗೆ ಟಿಕೆಟ್​ ಕೊಡದಿದ್ದರೆ ನನಗೂ ಟಿಕೆಟ್​ ಬೇಡ ಎಂದಿದ್ದಾರೆ ಎನ್ನಲಾಗ್ತಿದೆ. ಇನ್ನು ಮೈಸೂರಿನ ಚಾಮರಾಜ ಕ್ಷೇತ್ರದಲ್ಲಿ ಭವಾನಿ ಅದೃಷ್ಟ ಪರೀಕ್ಷೆಗೆ ಇಳಿಯುತ್ತಾರೆ ಎನ್ನುವ ಮಾತುಗಳೂ ಕೇಳಿ ಬರುತ್ತಿವೆ. ಹಾಸನದಲ್ಲಿ ಪ್ರೀತಂಗೌಡ ವಿರುದ್ಧ ಸ್ವರೂಪ್​ ಪ್ರಕಾಶ್​ ಅವರನ್ನು ಕಣಕ್ಕೆ ಇಳಿಸುವ ಬಗ್ಗೆ ಕುಮಾರಸ್ವಾಮಿ ಪಟ್ಟು ಹಿಡಿದಿದ್ದಾರೆ. ಇದರ ನಡುವೆ ಕಡೂರು ಕ್ಷೇತ್ರದ ಸಂಕಷ್ಟ ಎದುರಾಗಿದೆ. ಜನವರಿ 15ರಂದು ಕಾಂಗ್ರೆಸ್​​ ಪಕ್ಷಕ್ಕೆ ಸೇರ್ಪಡೆ ಆಗಿದ್ದ ಮಾಜಿ ಶಾಸಕ ವೈಎಸ್​ವಿ ದತ್ತಾ ಕಾಂಗ್ರೆಸ್​​ನಲ್ಲಿ ಟಿಕೆಟ್​ ಸಿಗದೆ ಮತ್ತೆ ಜೆಡಿಎಸ್​ಗೆ ವಾಪಸ್​ ಆಗಿದ್ದಾರೆ. ಇದು ಮತ್ತೊಂದು ರೀತಿಯ ಬಿರುಕು ಬಿಡುವಂತೆ ಮಾಡಿದೆ.

ADVERTISEMENT

YSV ದತ್ತಾ ಸೇರ್ಪಡೆ ಬಗ್ಗೆ ಕುಮಾರಸ್ವಾಮಿಗೇ ಗೊತ್ತಿಲ್ವಾ..?

YSV ದತ್ತಾ ಕಡೂರಿನ ಯಗಟಿ ಮನೆಯಲ್ಲಿ ಬಹಿರಂಗ ಸಭೆ ಮಾಡಿ ಜೆಡಿಎಸ್​​ ಸೇರ್ಪಡೆ ಬಗ್ಗೆ ಘೋಷಣೆ ಮಾಡಿದ್ದಾರೆ. ಇದಕ್ಕೂ ಮೊದಲು ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರನ್ನು ಭೇಟಿ ಮಾಡಿದ್ದ YSV ದತ್ತಾ, ಮಾಜಿ ಸಚಿವ ಹೆಚ್​.ಡಿ ರೇವಣ್ಣ ಹಾಗು ಹಾಸನ ಸಂಸದ ಪ್ರಜ್ವಲ್​ ರೇವಣ್ಣ ಸಮ್ಮುಖದಲ್ಲಿ ಜೆಡಿಎಸ್​ಗೆ ವಾಪಸ್​ ಆಗುವ ಬಗ್ಗೆ ಘೋಷಣೆ ಮಾಡಿದ್ದಾರೆ. ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರನ್ನು ಭೇಟಿ ಮಾಡಿದ್ದ ವೇಳೆ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧೆ ಮಾಡುವ ವಿಚಾರವನ್ನು ತಿಳಿಸಿದ್ದೆ, ಆದರೆ ನಾನಿನ್ನೂ ಸತ್ತಿಲ್ಲ, ಪಕ್ಷೇತರ ಅಭ್ಯರ್ಥಿ ಆಗಿ ಅಖಾಡಕ್ಕೆ ಇಳಿಯಬೇಡ, ಜೆಡಿಎಸ್​​ನಿಂದಲೇ ಸ್ಪರ್ಧೆ ಮಾಡು, ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ನಾನೇ ಬರುತ್ತೇನೆ ಎಂದು ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಆದರೆ ಕುಮಾರಸ್ವಾಮಿ ಮಾತ್ರ YSV ದತ್ತಾ ಸೇರ್ಪಡೆ ವಿಚಾರ ನನಗೆ ಗೊತ್ತಿಲ್ಲ ಎಂದಿದ್ದಾರೆ.

ಹಾಸನ ಬಳಿಕ ಕಡೂರು ಕೂಡ ಜೆಡಿಎಸ್​​ಗೆ ಸಂಕಷ್ಟ..!

JDS​ ಬಿಟ್ಟು ಕಾಂಗ್ರೆಸ್​​ ಸೇರಿದ್ದ ದತ್ತಾ ಮತ್ತೆ JDS ಮನೆಗೆ​ ವಾಪಸ್​ ಆಗಿದ್ದಾರೆ ಎಂದು ರೇವಣ್ಣ ಹೇಳಿಕೆ ನೀಡಿದ್ದಾರೆ. ಇದು ಸಹೋದರರ ನಡುವೆ ಸವಾಲ್ ಆಗಿದೆ. ವೈಎಸ್​ವಿ ದತ್ತಾ ಸೇರ್ಪಡೆ ಬಗ್ಗೆ ಕಲಬುರಗಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ನಾನು ಕಳೆದ ನಾಲ್ಕು ದಿನಗಳಿಂದ ನಿರಂತರ ಪ್ರವಾಸದಲ್ಲಿ ಇದ್ದೇನೆ. ನನಗೆ ಯಾವುದೇ ಮಾಹಿತಿ ಇಲ್ಲ ಎಂದಿದ್ದರು. ಆ ಬಳಿಕ ಹಾವೇರಿಯಲ್ಲಿ ಹಾವೇರಿಯಲ್ಲಿ ವ್ಯಂಗ್ಯಭರಿತವಾಗಿ ಮಾತನಾಡಿರುವ ಹೆಚ್​.ಡಿ ಕುಮಾರಸ್ವಾಮಿ, ಅವರು ದೊಡ್ಡವರು, ಅವರಷ್ಟು ದೊಡ್ಡ ವ್ಯಕ್ತಿ ನಾನಲ್ಲ ಎಂದು ವ್ಯಂಗ್ಯ ಮಾಡಿದ್ದಾರೆ. ಈ ವಿಚಾರದಲ್ಲಿ ಈಗಾಗಲೇ ಜೆಡಿಎಸ್​​ ಟಿಕೆಟ್​ ಘೋಷಣೆ ಆಗಿರುವ ಧನಂಜಯ್​​ ಎಂಬುವರು ಮಾತನಾಡಿದ್ದು, ದತ್ತಾ ಅವರು ವಾಪಸ್​ ಬಂದಿದ್ದಾರೆ. ನಾಲ್ಕೈದು ದಿನಗಳಲ್ಲಿ ಎಲ್ಲವೂ ಬಹಿರಂಗ ಆಗಲಿದೆ ಎಂದಿದ್ದಾರೆ. ಹಾಸನದ ಸ್ವರೂಪ್​ ಬಳಿಕ ಕಡೂರಿನ ಧನಂಜಯ್​​ ಜೆಡಿಎಸ್​​ ಬಿಕ್ಕಟ್ಟಿಗೆ ಸಾಕ್ಷಿಗಳಾಗಿದ್ದಾರೆ.

ರೇವಣ್ಣ ಹಠವೋ..? ಮಗನ ಆಯ್ಕೆ ಹಿಂದಿನ ಗುಟ್ಟೋ..?

ಜೆಡಿಎಸ್​ನಲ್ಲಿ ಸಂಪೂರ್ಣ ಅಧಿಕಾರ ಕುಮಾರಸ್ವಾಮಿ ಕೇಂದ್ರಿತವಾಗಿದೆ ಎನ್ನುವುದು ಜಗಜ್ಜಾಹೀರು. ಆದರೆ ಹಾಸನ ವಿಚಾರ ಎಂದಾಗ ಹೆಚ್​.ಡಿ ರೇವಣ್ಣ ಅವರ ನಿರ್ಧಾರವೇ ಅಂತಿಮ ಎನ್ನುವುದು ಅಲಿಖಿತ ನಿಯಮ. ಇದೀಗ ಹಾಸನ ವಿಚಾರದಲ್ಲಿ ಕುಮಾರಸ್ವಾಮಿ ಮೂಗು ತೂರಿಸಿದ್ದಾರೆ. ಇದೀಗ ರೇವಣ್ಣ ಕೂಡ ಜೆಡಿಎಸ್​​ ಪಕ್ಷದಲ್ಲಿ ತನ್ನದೂ ಹಿಡಿತ ಇದೆ ಎಂಬ ಸಂದೇಶ ರವಾನೆ ಮಾಡಲು ಕಡೂರಿನ ವೈಎಸ್​ವಿ ದತ್ತಾ ಅವರನ್ನು ಪಕ್ಷಕ್ಕೆ ವಾಪಸ್​ ಕರೆತರುವ ಮೂಲಕ ಕುಮಾರಸ್ವಾಮಿಗೆ ಟಾಂಗ್​ ಕೊಟ್ಟಿದ್ದಾರೆ ಎನ್ನಲಾಗಿದೆ. ಇದೇ ಕಾರಣಕ್ಕೆ ಹೆಚ್.ಡಿ ಕುಮಾರಸ್ವಾಮಿ ಗಮನಕ್ಕೂ ತರದೆ ವೈಎಸ್​ವಿ ದತ್ತಾ ಅವರನ್ನು ಕರೆತಂದಿದ್ದಾರೆ ಎನ್ನಲಾಗಿದೆ. ಇನ್ನೊಂದು ಮೂಲಗಳ ಪ್ರಕಾರ ಚಿಕ್ಕಮಗಳೂರಿನ ಕಡೂರು ಕ್ಷೇತ್ರ ಹಾಸನ ಲೋಕಸಭಾ ವ್ಯಾಪ್ತಿಗೆ ಬರುವ ಕಾರಣಕ್ಕೆ ವೈಎಸ್​ವಿ ದತ್ತಾ ಅವರ ಅಗತ್ಯವಿದೆ. ಇದೇ ಕಾರಣಕ್ಕಾಗಿ ಮುತುವರ್ಜಿ ವಹಿಸಿ ದತ್ತಾ ಅವರನ್ನು ವಾಪಸ್​ ಕರೆತಂದಿದ್ದಾರೆ ಎನ್ನಲಾಗ್ತಿದೆ. ಆದರೆ ಈ ವಿಚಾರ ಕೂಡ ಮತ್ತೊಂದು ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆ ದಟ್ಟವಾಗಿದೆ.

ಕೃಷ್ಣಮಣಿ

Tags: HD Deve GowdaHD KumaraswamyHD RevannaJDSYSV Duttaಜೆಡಿಎಸ್​ವೈಎಸ್​ವಿ ದತ್ತಾಹೆಚ್​ಡಿ ಕುಮಾರಸ್ವಾಮಿಹೆಚ್​ಡಿ ದೇವೇಗೌಡಹೆಚ್​ಡಿ ರೇವಣ್ಣ
Previous Post

ಕರ್ನಾಟಕ ಸರ್ಕಾರದ ಮೀಸಲಾತಿಗೆ ತಡೆ ಕೊಟ್ಟ ಸುಪ್ರೀಂಕೋರ್ಟ್​..!

Next Post

ದೆಹಲಿಯಿಂದ ಜಗದೀಶ್​ ಶೆಟ್ಟರ್​ ವಾಪಸ್​ : ಮೂರನೇ ಪಟ್ಟಿಯಲ್ಲಿ ನನ್ನ ಹೆಸರು ಪಕ್ಕಾ ಎಂದ ಮಾಜಿ ಸಿಎಂ

Related Posts

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
0

ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ ಎಂಬ ಸಚಿವ ಕೆ‌. ಎನ್. ರಾಜಣ್ಣ (KN Rajanna) ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್ (Dcm Dk...

Read moreDetails
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
Next Post
ದೆಹಲಿಯಿಂದ ಜಗದೀಶ್​ ಶೆಟ್ಟರ್​ ವಾಪಸ್​ : ಮೂರನೇ ಪಟ್ಟಿಯಲ್ಲಿ ನನ್ನ ಹೆಸರು ಪಕ್ಕಾ ಎಂದ ಮಾಜಿ ಸಿಎಂ

ದೆಹಲಿಯಿಂದ ಜಗದೀಶ್​ ಶೆಟ್ಟರ್​ ವಾಪಸ್​ : ಮೂರನೇ ಪಟ್ಟಿಯಲ್ಲಿ ನನ್ನ ಹೆಸರು ಪಕ್ಕಾ ಎಂದ ಮಾಜಿ ಸಿಎಂ

Please login to join discussion

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada