ಹುಬ್ಬಳ್ಳಿ : ಬಿಜೆಪಿ ಮೊದಲ ಪಟ್ಟಿಯಲ್ಲಿ ತಮಗೆ ಟಿಕೆಟ್ ಮಿಸ್ ಆದ ಬಳಿಕ ಗರಂ ಆಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ದೆಹಲಿಗೆ ಪ್ರಯಾಣ ಬೆಳಸಿದ್ದರು. ದೆಹಲಿಯಲ್ಲಿ ಬಿಜೆಪಿ ವರಿಷ್ಠರ ಜೊತೆಯಲ್ಲಿ ಮಾತನಾಡಿಕೊಂಡು ಹುಬ್ಬಳ್ಳಿಗೆ ವಾಪಸ್ಸಾಗಿರುವ ಶೆಟ್ಟರ್ ಮೂರನೇ ಪಟ್ಟಿಯಲ್ಲಿ ನನಗೆ ಟಿಕೆಟ್ ಪಕ್ಕಾ ಎಂದು ಹೇಳಿದ್ದಾರೆ.

ದೆಹಲಿಗೆ ತೆರಳಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಜೊತೆ ನನ್ನ ಎಲ್ಲಾ ಪರಿಸ್ಥಿತಿಗಳನ್ನು ಹೇಳಿಕೊಂಡಿದ್ದೇನೆ. ಈ ವಿಚಾರವಾಗಿ ನಡ್ಡಾ ಬಿಜೆಪಿಯ ಇತರೆ ಹಿರಿಯ ನಾಯಕರ ಜೊತೆಯಲ್ಲಿ ಚರ್ಚೆ ನಡೆಸುತ್ತೇನೆ ಎಂದು ಹೇಳಿದ್ದಾರೆ. ಹೀಗಾಗಿ ಮೂರನೇ ಪಟ್ಟಿಯಲ್ಲಿ ನನ್ನ ಹೆಸರು ಇರಲಿದೆ ಎಂಬ ವಿಶ್ವಾಸ ನನಗಿದೆ ಎಂದು ಶೆಟ್ಟರ್ ಹೇಳಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪ ಜೊತೆಯಲ್ಲಿಯೂ ಈ ವಿಚಾರವಾಗಿ ಮಾತನಾಡಿದ್ದೇನೆ. ಯಡಿಯೂರಪ್ಪ ಹೈಕಮಾಂಡ್ ಬಳಿಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಶೆಟ್ಟರ್ ಪ್ರಭಾವ ಎಂತದ್ದು ಎಂಬುದನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ಶೆಟ್ಟರ್ ಹೇಳಿದರು.